inmudalgi
ಸೆಪ್ಟೆಂಬರ್ 26, 2023 Recent Posts, ತಾಲ್ಲೂಕು, ಬೆಳಗಾವಿ
ಸತೀಶ ಶುಗರ್ಸ ಕಾರ್ಖಾನೆಯ ಬಾಯ್ಲರ್ ಪ್ರದೀಪನ ಪೂಜೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ ಮಂಗಳವಾರ ಪ್ರಸಕ್ತ 2023-24 ಹಂಗಾಮಿನ ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮ ಕಾರ್ಖಾನೆಯ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಅವರು ಮಹಾಲಕ್ಷೀ ಮತ್ತು ಅಗ್ನಿಪೂಜೆ ಮಾಡುವ ಮೂಲಕ ಬಾಯ್ಲರ್ ಪ್ರದೀಪನ ಕಾರ್ಯಕ್ರಮವನ್ನು ನೆರವೇರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರುಗಳಾದ ಎಲ್.ಆರ್.ಕಾರಗಿ, ಪಿ.ಡಿ.ಹಿರೇಮಠ ಉಪಾಧ್ಯಕ್ಷರುಗಳಾದ ವೀರು ತಳವಾರ, …
Read More »
inmudalgi
ಸೆಪ್ಟೆಂಬರ್ 26, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರ ಡಾ. ಮೋಹನ ಕಮತ ಅವರು ಮಂಗಳವಾರ ಹಸುವಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕೆ ನೀಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನಕ್ಕೆ ಚಾಲನೆ ಮೂಡಲಗಿ: ಇಲ್ಲಿಯ ಪಶು ಆಸ್ಪತ್ರೆಯಲ್ಲಿ ಮಂಗಳವಾರ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣದ ಯೋಜನೆ ಅಡಿಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗ ರೋಗ ಲಸಿಕೆ ನೀಡುವುದರ ಮೂಲಕ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಮೋಹನ …
Read More »
inmudalgi
ಸೆಪ್ಟೆಂಬರ್ 25, 2023 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಪಿಕೆಪಿಎಸ್ಗೆ 13.86ಲಕ್ಷ ರೂಪಾಯಿ ಲಾಭ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2022-23ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.25ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2022-23ನೇ ಸಾಲಿನಲ್ಲಿ ಸಂಘವು ಒಟ್ಟು 13,86,281 ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ5ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು. …
Read More »
inmudalgi
ಸೆಪ್ಟೆಂಬರ್ 25, 2023 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿಯ ಶ್ರೀ ಬಸವೇಶ್ವರ ಸೊಸಾಯಿ”ಟಿಗೆ ರೂ.3.16 ಕೋಟಿ ಲಾಭ ಮೂಡಲಗಿ: ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಹಣಕಾಸಿ ವರ್ಷದ ಕೊನೆಯಲ್ಲಿ ರೂ. 3.16 ಕೋಟಿ ಲಾಭವನ್ನ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸೊಸಾಯಿಟಿಯ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪ್ರತಿ ವರ್ಷವೂ ಶೇ.25ರಷ್ಟು ಲಾಭಾಂಶವನ್ನು ಸದಸ್ಯರಿಗೆ …
Read More »
inmudalgi
ಸೆಪ್ಟೆಂಬರ್ 24, 2023 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಪೂರ್ವಭಾವಿ ಸಭೆ ಷಷ್ಠಬ್ಧಿ ಸಂಭ್ರಮ ಯಶಸ್ವಿಗೆ ಎಲ್ಲ ಭಕ್ತ ಸಮೂಹದ ಸಹಾಯ ಸಹಕಾರ ಮುಖ್ಯವಾಗಿದೆ- ಹುಕ್ಕೇರಿ ಶ್ರೀಗಳು ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಕಾರಿಗಳಾದ ಶ್ರೀ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಭಕ್ತ ಸಮೂಹದ ಸಹಾಯ ಸಹಕಾರ ಮುಖ್ಯವಾಗಿದೆ ಎಂದು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಹಿರೇಮಠದ ಪರಮ ಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ …
Read More »
inmudalgi
ಸೆಪ್ಟೆಂಬರ್ 24, 2023 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಗ್ರಾಮ ಬೇಗ ಮಾದರಿ ಗ್ರಾಮವಾಗಲಿ: ಈರಯ್ಯ ಹಿರೇಮಠ ಬೆಟಗೇರಿ:ಸ್ಥಳೀಯ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಬೆಟಗೇರಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಇಲ್ಲಿಯ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಮತ್ತು ಸಿಬ್ಬಂದಿಯವರ ಜೋತೆಗೆ ಸ್ಥಳೀಯರ ಸಹಕಾರ ಅತ್ಯಂತ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸೆ.22 ರಂದು ನಡೆದ ಬೆಟಗೇರಿ ಗ್ರಾಮ ಪಂಚಾಯತಿ ಕಛೇರಿ ಕಟ್ಟಡದ …
Read More »
inmudalgi
ಸೆಪ್ಟೆಂಬರ್ 24, 2023 Recent Posts, ತಾಲ್ಲೂಕು, ಬೆಳಗಾವಿ
*ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಘದ ಶೇರುದಾರಿಗೆ ಶೇ.5 ರಷ್ಟು ಲಾಭಾಂಶ ಘೋಷಿಸಿದ ಸಂಘದ ಅಧ್ಯಕ್ಷ ಮಲ್ಲಪ್ಪ ಕಡಾಡಿ* ಮೂಡಲಗಿ: ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಗ್ರಾಹಕರಿಗೆ ಕೃಷಿಗೆ ಪೂರಕವಾದ ವಿವಿಧ ತೇರನಾದ ಸಾಲ ಸೌಲಭ್ಯ ನೀಡುವದರ ಜೊತೆಗೆ ಸಾಮಾಜಿಕ, ಶೈಕ್ಷಣಿಕವಾಗಿ ಕಾರ್ಯಮಾಡುತ್ತಾ ಹಾಗೂ ಗ್ರಾಹಕರಿಗೆ ವಿವಿಧ ಸೌಲಭ್ಯವನ್ನು ನೀಡಿ ಕಳೆದ ಮಾರ್ಚ ಅಂತ್ಯಕ್ಕೆ 43.98 ಲಕ್ಷ ರೂ ಲಾಭಗಳಿಸಿ ಪ್ರಗತಿ ಪಥದತ್ತ ಸಾಗಿದೆ. …
Read More »
inmudalgi
ಸೆಪ್ಟೆಂಬರ್ 24, 2023 Recent Posts, ತಾಲ್ಲೂಕು, ಬೆಳಗಾವಿ
ವಿದ್ಯಾರ್ಥಿಗಳಲ್ಲಿ ಎನ್.ಎಸ್.ಎಸ್.ನಿಂದ ಸಾಮಾಜಿಕ ಸೇವಾ ಪ್ರಜ್ಞೆ ಬೆಳೆಯುತ್ತದೆ : ಎಸ್.ಡಿ. ವಾಲಿ ಮೂಡಲಗಿ : ವಿದ್ಯಾರ್ಥಿಗಳಲ್ಲಿ ಎನ್.ಎಸ್.ಎಸ್.ನಿಂದ ಸಾಮಾಜಿಕ ಸೇವಾ ಪ್ರಜ್ಞೆ ಬೆಳೆಯುತ್ತದೆ ನಮ್ಮ ರಾಷ್ಟ್ರ ಅಭಿವೃದ್ಧಿ ಹೊಂದ ಬೇಕಾದರೆ ನಮ್ಮ ಯುವ ಜನಾಂಗ ಮತ್ತು ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಬದುಕಿನೊಡನೆ ನೇರ ಸಂಪರ್ಕ ಇಟ್ಟು ಕೊಳ್ಳಬೇಕು ಎಂಬ ಕನಸ್ಸು ಮಹಾತ್ಮಾ ಗಾಂಧೀಜಿಯವರದಾಗಿತ್ತು. ಅದರಂತೆ ಯುವಕರು ಶಿಕ್ಷಣದ ಜೊತೆಗೆ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗುವಂತೆ ಮಾಡುವ ಅಂಶಗಳನ್ನು ಎನ್.ಎಸ್.ಎಸ್.ಬೆಳಸುತ್ತದೆ …
Read More »
inmudalgi
ಸೆಪ್ಟೆಂಬರ್ 23, 2023 Recent Posts, ತಾಲ್ಲೂಕು, ಬೆಳಗಾವಿ
‘ಪೌರ ಕಾರ್ಮಿಕರನ್ನು ಸಮಾಜವು ಗೌರವಿಸಬೇಕು’ ಮೂಡಲಗಿ: ‘ಜನರ ಆರೋಗ್ಯ ಕಾಯುವಲ್ಲಿ ಪೌರ ಕಾರ್ಮಿಕರ ಸೇವೆಯು ಅಮೂಲ್ಯವಾಗಿದ್ದು, ಸಮಾಜವು ಪೌರ ಕಾರ್ಮಿಕರವನ್ನು ಗೌರವಿಸಬೇಕು’ ಎಂದು ಪುರಸಭೆ ಸದಸ್ಯ ಈರಣ್ಣ ಕೊಣ್ಣೂರ ಹೇಳಿದರು. ಇಲ್ಲಿಯ ಪುರಸಭೆಯಲ್ಲಿ ಶನಿವಾರ ಆಚರಿಸಿದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಹಿರಿಯ ಪೌರ ಕಾರ್ಮಿಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪೌರ ಕಾರ್ಮಿಕರನ್ನು ನಿರ್ಲಕ್ಷ ಮಾಡಬಾರದು ಎಂದರು. ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಮಾತನಾಡಿ ಕೋವಿಡ್ …
Read More »
inmudalgi
ಸೆಪ್ಟೆಂಬರ್ 23, 2023 Recent Posts, ತಾಲ್ಲೂಕು, ಬೆಳಗಾವಿ
*ಸೆ. ೨೪ರಂದು ನಿಜಗುಣ ದೇವರ ಷಷ್ಠಬ್ದಿ ಪೂರ್ವಭಾವಿ ಸಭೆ * ಮೂಡಲಗಿ: ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠಬ್ದಿ ಸಂಭ್ರಮ ಕಾರ್ಯಕ್ರಮದ ಸಂಘಟನೆಯ ಕುರಿತು ಚರ್ಚಿಸಲು ಸೆ. ೨೪ರಂದು ಬೆಳಿಗ್ಗೆ ೧೧ಕ್ಕೆ ಆಶ್ರಮದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಹಲವು ಮಹಾತ್ಮರ ಸಾನ್ನಿಧ್ಯದಲ್ಲಿ ಜರುಗಲಿರುವ ಸಭೆಯಲ್ಲಿ ಶಾಸಕರು, ಸಂಸದರು, ಗಣ್ಯಮಾನ್ಯರು ಭಾಗವಹಿಸಲಿದ್ದಾರೆ. ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟಕರು ತಿಳಿಸಿದ್ದಾರೆ.
Read More »