inmudalgi
ಜೂನ್ 28, 2023 Recent Posts, ತಾಲ್ಲೂಕು, ಬೆಳಗಾವಿ
ಇಟನಾಳದಲ್ಲಿ ಶಿವಭಜನೆ, ಸಂಗೀತ ಸಂಭ್ರಮ ಮೂಡಲಗಿ: ಸಮೀಪದ ಇಟನಾಳ ಗ್ರಾಮದ ಶಿವಶರಣ ಶಾಬುಜಿ ಇವರ 36ನೇ ಪುಣ್ಯಸ್ಮರಣೆ ಹಾಗೂ ಮಾತೋಶ್ರೀ ಅವಬಾಯಿ ಶಾಬುಜಿ ಐಹೊಳೆ ಅವರ 19ನೇ ಪುಣ್ಯಸ್ಮರಣೆ ಅಂಗವಾಗಿ ಜೂ. 29ರಂದು ಬೆಳಿಗ್ಗೆ 9ಕ್ಕೆ ಇಟನಾಳದಲ್ಲಿ ಶಿವಭಜನೆ ಹಾಗೂ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಸಮಾರಂಭದ ಸಾನ್ನಿಧ್ಯವನ್ನು ಇಟನಾಳದ ಗ್ರಾಮದ ಮಾರ್ತಾಂಡ ಮಲ್ಲಯ್ಯ ಆರಾಧಾಕರಾದ ಸಿದ್ದೇಶ್ವರ ಶರಣರು ವಹಿಸುವರು. ಅಧ್ಯಕ್ಷತೆಯನ್ನು ಎಸ್.ಕೆ. ಕೊಪ್ಪದ ಹಿರಿಯ ಕಲಾವಿದ ರಾಮನಗೌಡ ವಜ್ರಮಟ್ಟಿ …
Read More »
inmudalgi
ಜೂನ್ 28, 2023 Recent Posts, ತಾಲ್ಲೂಕು, ಬೆಳಗಾವಿ
ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ …
Read More »
inmudalgi
ಜೂನ್ 28, 2023 Recent Posts, ತಾಲ್ಲೂಕು, ಬೆಳಗಾವಿ
ಯಾದವಾಡದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ಶಾಂತಿ ಸಭೆ. ಮೂಡಲಗಿ: ಶಾಂತಿ ಸುವ್ಯವಸ್ಥೆ ಹಾಳಾಗುವ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಶಾಂತಿಯುತವಾಗಿ ಬಕ್ರೀದ ಹಬ್ಬ ಆಚರಿಸಬೇಕೆಂದು ಕುಲಗೋಡ ಪೊಲೀಸ್ ಠಾಣೆ ಪಿ.ಎಸ್. ಐ ಗೋವಿಂದಗೌಡ ಪಾಟೀಲ ಪಾಟೀಲ ಹೇಳಿದರು. ಅವರು ಮೂಡಲಗಿ ತಾಲೂಕಿನ ಯಾದವಾಡ-ಕಾಮನಕಟ್ಟಿ ಗ್ರಾಮದಲ್ಲಿ ನಡೆದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿ, ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ನಿಯಮ ಬದ್ದವಾಗಿ ಅನುಮತಿಸಿದ ಜಾನುವಾರು ಮತ್ತು ವಯಸ್ಸಿನ ದೃಢಿಕರಣ …
Read More »
inmudalgi
ಜೂನ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಬಕ್ರೀದ್ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು: ಡಿವೈಎಸ್ಪಿ ಡಿ.ಎಚ್.ಮುಲ್ಲಾ ಬೆಟಗೇರಿ:ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಜೂ.26ರಂದು ನಡೆದ ಸ್ಥಳೀಯ ಮುಸ್ಲಿಂ ಸಮಾಜ ಮುಖಂಡರ ಶಾಂತಿಪಾಲನಾ ಸಭೆ ನಡೆಯಿತು. ಗೋಕಾಕ ಡಿವೈಎಸ್ಪಿ ಡಿ.ಎಚ್.ಮುಲ್ಲಾ ಮುಖ್ಯ ಅತಿಥಿಗಳಾಗಿ ಮಾತನಾಡಿ, ಬಕ್ರೀದ್ ಹಬ್ಬವನ್ನು ಸೌಹಾರ್ದತೆಯಿಂದ, ಯಾವುದೇ ಅಹಿತಕರ ಘಟನೆ ನಡೆಯದಂತೆÀ ಮುಸ್ಲಿಂ ಸಮಾಜದ ಮುಖಂಡರು ಮುತುವರ್ಜಿವಹಿಸಿ ಶಾಂತತೆಯಿಂದ ಹಬ್ಬಗಳನ್ನು ಆಚರಣೆ ಮಾಡಬೇಕೆಂದರು. ಸ್ಥಳೀಯ ಮುಸ್ಲಿಂ …
Read More »
inmudalgi
ಜೂನ್ 27, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ 2023-24ನೇ ಸಾಲಿನ ಸದಸ್ಯತ್ವದ ಗುರುತಿನ ಪತ್ರಗಳನ್ನು ಸಂಘದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಅವರು ವಿತರಿಸಿದರು. ‘ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ”- ಸರ್ವೋತ್ತಮ ಜಾರಕಿಹೊಳಿ ಮೂಡಲಗಿ: ‘ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ’ ಎಂದು ಯುವ ನಾಯಕ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿತರ ಪತ್ರಕರ್ತರ ಸಂಘದ ಮೂಡಲಗಿ ಘಟಕದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಅವರು …
Read More »
inmudalgi
ಜೂನ್ 24, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯು …
Read More »
inmudalgi
ಜೂನ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಮನುಷ್ಯ ಬದುಕಲು ಅನಿವಾರ್ಯವಾಗಿರುವ ಮೂಲ ಅವಶ್ಯಕಗಳು ಸಿಗುವುದೇ ಪರಿಸರದಿಂದ ಹೀಗಾಗಿ ಸುಸ್ಥಿರ ಬದುಕಿಗೆ ಪರಿಸರವನ್ನು ಸಂಕ್ಷಿಸುವುದು ಅಗತ್ಯ. ಪರಿಸರ ಸಂರಕ್ಷಣೆ ಎನ್ನುವುದು ಸಾಮೂಹಿಕ ಜವಾಬ್ದಾರಿ ಮಾತ್ರವಲ್ಲದದೇ ಪ್ರತಿಯೋರ್ವರ ಹೊಣೆಗಾರಿಕೆಯೂ ಆಗಿದೆ ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಶುಕ್ರವಾರದಂದು ಪಟ್ಟಣದ ಗಂಗಾನಗರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಸ್ಟೆಲ್ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ನಿರ್ಮಿಸಲಾದ ಕಾವೇರಿ ಉದ್ಯಾನವ ಹಾಗೂ …
Read More »
inmudalgi
ಜೂನ್ 22, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಬಸವ ರಂಗ ಮಂಟಪದಲ್ಲಿ ವಿಶ್ವ ಸಂಗೀತ ದಿನಾಚರಣೆ ಕಾರ್ಯಕ್ರಮವನ್ನು ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ‘ಸಂಗೀತಕ್ಕೆ ಬಾಷೆ, ಜಾತಿಯ, ಗಡಿಗಳ ಸೀಮೆ ಇಲ್ಲ’ ಮೂಡಲಗಿ: ‘ಸಂಗೀತಕ್ಕೆ ಯಾವುದೇ ಭಾಷೆ, ಜಾತಿ, ಧರ್ಮ ಮತ್ತು ಗಡಿಗಳ ಸೀಮೆ ಇಲ್ಲ, ಸಂಗೀತವು ಜನರ ಮನಸ್ಸುಗಳನ್ನು ಕೂಡಿಸುತ್ತದೆ, ಬಾಂಧವ್ಯವನ್ನು ಬೆಳೆಸುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ಹೇಳಿದರು. ಇಲ್ಲಿಯ …
Read More »
inmudalgi
ಜೂನ್ 21, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಯೋಗಾಸನದಿಂದ ಶಾರೀರಿಕ ಮಾನಸಿಕ ಸಮತೋಲನದ ಜೊತೆಗೆ ಬೌದ್ಧಿಕವಾಗಿ ಮನುಷ್ಯನ ಸರ್ವೋತೋಮುಖ ಬೆಳವಣಿಗೆಗೆ ಸಹಾಯಕವಾಗಿ ಉಲ್ಲಾಸಮಯ ಜೀವನ ನಮ್ಮದಾಗಿರುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಶಿವರಾಜ ಕಾಂಬಳೆ ಹೇಳಿದರು. ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರುಗಿದ ೯ನೇ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಇಂದಿನ ಮಾನಸಿಕ ದೈಹಿಕ ಒತ್ತಡಗಳಿಂದಾಗಿ ಅನೇಕ ರೋಗ ರುಜನುಗಳಿಗೆ ಆಹ್ವಾನ ನೀಡುವಂತಾಗಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಸರಳ …
Read More »
inmudalgi
ಜೂನ್ 21, 2023 Recent Posts, ತಾಲ್ಲೂಕು, ಬೆಳಗಾವಿ
*ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ವಿಶ್ವ ಯೋಗ ದಿನಾಚರಣೆ * ಮೂಡಲಗಿ: ಯೋಗವು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿದಿನ ಮಾಡಲು ಕಾರ್ಖಾನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಹೇಳಿದರು. ಬುಧವಾರದಂದು ತಾಲೂಕಿನ ಯಾದವಾಡದಲ್ಲಿ ದಾಲ್ಮಿಯಾ ಸಿಮೆಂಟ ಕಾರ್ಖಾನೆಯ ಆವರಣದಲ್ಲಿ ಏರ್ಪಡಿಸಿದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ …
Read More »