inmudalgi
ಫೆಬ್ರವರಿ 5, 2023 Recent Posts, ತಾಲ್ಲೂಕು, ಬೆಳಗಾವಿ
ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ 72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …
Read More »
inmudalgi
ಫೆಬ್ರವರಿ 4, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ (ಹೊಸಟ್ಟಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ದಿಗಾಗಿ ಸದಾ ಬದ್ಧನಿರುವೆ. ಜೊತೆಗೆ ಜನರು ನೀಡುತ್ತಿರುವ …
Read More »
inmudalgi
ಫೆಬ್ರವರಿ 4, 2023 Recent Posts, ತಾಲ್ಲೂಕು, ಬೆಳಗಾವಿ
ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ಮೂಡಲಗಿ : ವೀರ ರಾಣಿ ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಪಟ್ಟಣದಲ್ಲಿ ಚನ್ನಮ್ಮ ಭಾವ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಚನ್ನಮ್ಮ ಯುವಕ ಸಂಘ ಮೂಡಲಗಿ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ಬುಕ್ ಹಾಗೂ ಪೆನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಗಜಾನನನ ಯುವಕ ಮಂಡಳಿ ಹಾಗೂ ಚನ್ನಮ್ಮ ಯುವಕ ಸಂಘದ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಗುರುಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
Read More »
inmudalgi
ಫೆಬ್ರವರಿ 3, 2023 Recent Posts, ತಾಲ್ಲೂಕು, ಬೆಳಗಾವಿ
ಫೆ. 4 ಮತ್ತು 5 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗ್ರಾಮದ ಶ್ರೀರೇಣುಕಾದೇವಿ ದೇವಾಲಯದಲ್ಲಿ ಫೆ.4 ಮತ್ತು ಫೆ.5ರಂದು ಶ್ರೀ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಮತ್ತು ಶ್ರೀಯಲ್ಲಮ್ಮದೇವಿ ಬಾನೆ ನೂತನ ಕಟ್ಟೆ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಫೆ.4ರಂದು ಮುಂಜಾನೆ ಮತ್ತು ಸಂಜೆ 7 ಗಂಟೆಗೆ ಸ್ಥಳೀಯ ಶ್ರೀ ರೇಣುಕಾದೇವಿ ದೇವಾಲಯದ ಶ್ರೀ ಯಲ್ಲಮ್ಮದೇವಿಯ ಗದ್ಗುಗೆ ಮಹಾಪೂಜೆ, ನೈವೇಧ್ಯ ಸಮರ್ಪನೆ, ಸಾಯಂಕಾಲ 5 ಗಂಟೆಗೆ ಪುರದೇವರ ಪಲ್ಲಕ್ಕಿಗಳನ್ನು …
Read More »
inmudalgi
ಫೆಬ್ರವರಿ 3, 2023 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ 300ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಕಾರ್ಯಕ್ರಮ ರವಿವಾರ ಫೆ.5ರಂದು ಸಂಜೆ 7 ಗಂಟೆಗೆ ನಡೆಯಲಿದೆ. ಇಲ್ಲಿಯ ಮೌನ ಮಲ್ಲಿಕಾರ್ಜುನ ಮಠದ ಮೌನ ಮಲ್ಲಿಕಾರ್ಜುನ ಮಹಾಶಿವಯೋಗಿಗಳು ಕಾರ್ಯಕ್ರಮದ ಅಧ್ಯಕ್ಷತೆ, ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಅವರು ದಿವ್ಯ ಸಾನಿಧ್ಯ, ಕೂಡಲಸಂಗಮದ ಮಾತೋಶ್ರೀ ಬಸವರತ್ನಾದೇವಿ ಮಾತಾಜಿ, ಚುಳಕಿಯ ಶೇಖರಯ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ಮೂಡಲಗಿಯ ಸದಾಶಿವ ತಬಲಟ್ಟಿ ಉಪನ್ಯಾಸ ನೀಡಲಿದ್ದಾರೆ. ಆಗಮಿತ …
Read More »
inmudalgi
ಫೆಬ್ರವರಿ 3, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ತಾಲೂಕಿನ ಧರ್ಮಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆ 74ನೇ ಗಣರಾಜ್ಯೋತ್ಸವನ್ನು ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಚೆನ್ನಬಸವರಾಜ ಬಡ್ಡಿಯವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆಯೋ, ಅಷ್ಟೇ ಸಂಭ್ರಮದಿಂದ ದೇಶದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಹಾಗೂ …
Read More »
inmudalgi
ಫೆಬ್ರವರಿ 3, 2023 Recent Posts, ತಾಲ್ಲೂಕು, ಬೆಳಗಾವಿ
*ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ : ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು …
Read More »
inmudalgi
ಫೆಬ್ರವರಿ 3, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ರಾಯಬಾಗ ತಾಲೂಕಿನ ಮಲ್ಟಿ ಸ್ಟೇಟ್ ಕೃಷ್ಣಾ ಗೋದಾವರಿ ಸೊಸಾಯಿಟಿ ಹಾಗೂ ಘಟಪ್ರಭಾ ಫರ್ಟಿಲೈಜರ್ಸ್ ಪ್ರೈ ಲಿಮಿಟೆಡ್ ಮತ್ತು ಹೋಲ್ ಸೇಲ್ ಫರ್ಟಿಲೈಜರ್ಸ್ ಡೀಲರಗಳಾದ ರಾಯಬಾಗ ತಾಲೂಕಿನ ನಂದಿಕುರಳಿ, ಹುಬ್ಬರವಾಡಿದಲ್ಲಿ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಂಡು ರೈತರ ಬಿತ್ತನೆ ವೇಳೆಯಲ್ಲಿ ರಸಗೊಬ್ಬರಗಳ ಅಭಾವ ಸೃಷ್ಠಿ ಮಾಡಿ ರೈತರಲ್ಲಿ ಗೊಂದಲ್ಲ ಸೃಷ್ಠಿಸಿ ಹೆಚ್ಚಿನ ದರದಲ್ಲಿ ಮಾರಾಟ ದಂಧೆಯಲ್ಲಿ ಡೀಲರಗಳು ತೊಡಗಿಕೊಂಡಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಲಖನ್ ಸವಸುದ್ದಿ ಆರೋಪಿಸಿದರು. ಶುಕ್ರವಾರದಂದು ಪಟ್ಟಣದ …
Read More »
inmudalgi
ಫೆಬ್ರವರಿ 1, 2023 Recent Posts, ತಾಲ್ಲೂಕು, ಬೆಳಗಾವಿ
ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್ ಇಲಾಖೆಯಿಂದ 3.37 ಕೋಟಿ ರೂಪಾಯಿ ವೆಚ್ಚದ …
Read More »
inmudalgi
ಫೆಬ್ರವರಿ 1, 2023 Recent Posts, ತಾಲ್ಲೂಕು, ಬೆಳಗಾವಿ
ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ಸಾವಯವ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ ಮೂಡಲಗಿ: ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ 5,300 ಕೋಟಿ ರೂ.ಗಳ …
Read More »