inmudalgi
ಜನವರಿ 16, 2023 Recent Posts, ತಾಲ್ಲೂಕು, ಬೆಳಗಾವಿ
ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ಕೊಟ್ಟು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿ ಅರಭಾವಿ ಮಂಡಲದಿಂದ ಜರುಗಿದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ಮುಖಂಡರ ಮನವಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು. ಇಲ್ಲಿಯ ಅರಭಾವಿ ಮಂಡಲ …
Read More »
inmudalgi
ಜನವರಿ 16, 2023 Recent Posts, ತಾಲ್ಲೂಕು, ಬೆಳಗಾವಿ
‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ’ ಮೂಡಲಗಿ: ‘ಮಕ್ಕಳಲ್ಲಿ ಸೃಜಶೀಲತೆಯನ್ನು ಬೆಳೆಸುವಲ್ಲಿ ಚಿತ್ರಕಲೆಯು ಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇಲ್ಲಿಯ ಮೇಘಾ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಶಾಲಾ ಪಠ್ಯಗಳೊಂದಿಗೆ ಚಿತ್ರಕಲೆಯು ಸಹ ಮಕ್ಕಳ ಬೆಳವಣಿಗೆಗೆ ಪೂರಕವಾಗಿದೆ ಎಂದರು. ಮುಖ್ಯ ಅತಿಥಿ ಸಾಹಿತಿ ಬಾಲಶೇಖರ ಬಂದಿ ಮಾತನಾಡಿ ಚಿತ್ರಕಲೆಯು …
Read More »
inmudalgi
ಜನವರಿ 15, 2023 Recent Posts, ತಾಲ್ಲೂಕು, ಬೆಳಗಾವಿ
ಸುಣಧೋಳಿಯ ಪಿಯು ಕಾಲೇಜಿನಲ್ಲಿ ಹಳ್ಳಿಹಬ್ಬ ಆಚರಣೆ ಮೂಡಲಗಿ: ತಾಲೂಕಿನ ಸುಣಧೋಳಿ ಪಿಯು ಕಾಲೇಜಿನಲ್ಲಿ ರವಿವಾರ ಮಕರ ಸಂಕ್ರಾಂತಿಯ ದಿನದಂದು ಹಳ್ಳಿ ಹಬ್ಬವನ್ನು ಸುಣದೋಳಿಯ ಜಡಿಸಿದ್ಧೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಜೀಗಳ ಸಾನಿಧ್ಯದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನೀಯರು ಸಾಂಪ್ರದಾಯಿಕ ಹಳೆಯ ಕಾಲದ ಉಡುಗೆ ಧರಿಸಿ ಆಚರಿಸಿದರು. ಕಾಲೇಜಿನ ಪ್ರಾಚಾರ್ಯ ಸುರೇಶ ಲಂಕೆಪ್ಪನವರ ಮಾತನಾಡಿ, ಕುರಿತು ಸಾಂಪ್ರದಾಯಿಕ ಉಡುಗೆ ತೊಡುಗೆಗಳಲ್ಲಿ ಭಾರತ ದೇಶವು ಮುಂಚೂಣಿಯಲ್ಲಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಹಳ್ಳಿ ಹಬ್ಬವನ್ನು ಆಚರಿಸುತ್ತಿರುವುದಕ್ಕೆ …
Read More »
inmudalgi
ಜನವರಿ 15, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಬಡತನ, ದೈಹಿಕ ಅಂಗವೈಕಲ್ಯತೆ, ಸುತ್ತಲಿನ ಪರಿಸರ, ಮಾನಸಿಕ ಸ್ಥಿತಿ ಇವುಗಳನ್ನು ಲೆಕ್ಕಿಸದೆ ನಿರಂತರ ಪ್ರಯತ್ನ, ನಿರ್ದಿಷ್ಟ ಗುರಿಯನ್ನು ಹೊಂದಿ, ಛಲ ಬಿಡದೆ ನಿಯಮಿತವಾಗಿ ಅಭ್ಯಾಸ ಮಾಡಿದ್ದೆ ಆದರೆ ಜೀವನದಲ್ಲಿ ಎಂತಹ ದೊಡ್ಡ ಸಾಧನೆಯನ್ನಾದರೂ ಮಾಡಬಹುದು ಹಾಗೂ ನೀವು ಕೂಡ ನನ್ನ ಹಾಗೆ ಜಿಲ್ಲಾಧಿಕಾರಿಯಾಗ ಬಹುದು ಎಂದು ಬೆಂಗಲೂರ ನಗರದ ಆದಾಯ ತೆರಿಗೆ ಇಲಾಖೆಯ ಜಿಲ್ಲಾಧಿಕಾರಿ ಲಕ್ಕಪ್ಪ ಹಣಮಣ್ಣವರ್ ಅವರು ಅಭಿಪ್ರಾಯ ಪಟ್ಟರು. ಅವರು ಶನಿವಾರ ಸಂಜೆ ತಾಲೂಕಿನ …
Read More »
inmudalgi
ಜನವರಿ 13, 2023 Recent Posts, ತಾಲ್ಲೂಕು, ಬೆಳಗಾವಿ
‘ಮನುಷ್ಯ ಮನುಷ್ಯರಂತೆ ಬದುಕುವುದನ್ನು ಕಲಿಯಬೇಕು’ ಮೂಡಲಗಿ: ‘ವಿದ್ಯೆ, ದಾನ, ಧರ್ಮ, ಧ್ಯಾನ, ಉತ್ತಮ ಆಚಾಚರಗಳಿಲ್ಲದ ಮನುಷ್ಯನ ಬದುಕು ವ್ಯರ್ಥವಾದದ್ದು’ ಎಂದು ಬೀದರದ ಚಿದಂಬರಾಶ್ರಮದ ಸಿದ್ಧಾರೂಢ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ಹೇಳಿದರು. ಇಲ್ಲಿಯ ವಿ.ಬಿ. ಸೋನವಾಲಕರ ಶಾಲೆಯ ಆವರಣದಲ್ಲಿ ವಿಶ್ವಶಾಂತಿಗಾಗಿ ಜರುಗುತ್ತಿರುವ 14ನೇ ಸತ್ಸಂಗ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಕರ್ಮ ಮತ್ತು ಧರ್ಮದ ದಾರಿಯಲ್ಲಿ ನಡೆದು ಮನುಷ್ಯ ತನ್ನ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು. ಯಾವ ಮನುಷ್ಯನು ಧರ್ಮ, …
Read More »
inmudalgi
ಜನವರಿ 13, 2023 Recent Posts, ತಾಲ್ಲೂಕು, ಬೆಳಗಾವಿ
ಆರ್.ಡಿ.ಎಸ್. ಸಮೂಹ ಸಂಸ್ಥೆಗಳಿಂದ ಬೃಹತ್ ಮ್ಯಾರಾಥಾನ್ ಓಟ ಮೂಡಲಗಿ : ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಇಂದು ಆರ್.ಡಿ.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಮ್ಯಾರಾಥಾನ್ ಓಟವನ್ನು ನಡೆಸಲಾಯಿತು ಆರ್.ಡಿ.ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸಂತೋಷ ಪಾರ್ಶಿಯವರಿಂದ ಸ್ವಾಮಿವಿವೇಕಾನಂದರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮ್ಯಾರಾಥಾನ್ ರ್ಯಾಲಿಯನ್ನು ಉದ್ಘಾಟಿಸಲಾಯಿತು. ಮ್ಯಾರಾಥಾನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷರಾದ ಹಣಮಂತ ಗುಡ್ಲಮನಿ ಮತ್ತು ಪುರಸಭೆ ಸದಸ್ಯರು ಹಾಜರಿದ್ದರು ಇದೇ ಸಂದರ್ಭದಲ್ಲಿ ಮೂಡಲಗಿಯ ಕ್ಷೇತ್ರಶಿಕ್ಷಣಾಧಿಕಾರಿ …
Read More »
inmudalgi
ಜನವರಿ 12, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಲಯನ್ಸ್ಗೆ ಕ್ರಿಕೆಟ್ ಟೂರ್ನಿಯಲ್ಲಿ ರನ್ನರ್ಸ್ ಪ್ರಶಸ್ತಿ ಮೂಡಲಗಿ: ಬಾಗಲಕೋಟ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ 2022-23ನೇ ಸಾಲಿನ ರೀಜನ್ ಲೀಗ್ ಕ್ರೀಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ತಂಡವು ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮೂಡಲಗಿ ತಂಡವು ಮೊದಲ ಮೂರು ಸುತ್ತಿನಲ್ಲಿ ಮುದ್ದೇಬಿಹಾಳ, ಜಮಖಂಡಿ ಮತ್ತು ಮಹಾಲಿಂಗಪೂರದೊಂದಿಗೆ ಆಡಿ ಗೆಲವು ಸಾಧಿಸಿತ್ತು. ಅಂತಿಮ ಪಂದ್ಯವನ್ನು ಇಲಕಲ್ ತಂಡದೊಂದಿಗೆ ಆಡಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಮೂಡಲಗಿ ಲಯನ್ಸ್ ಕ್ಲಬ್ದ ಅಪ್ಪಣ್ಣ …
Read More »
inmudalgi
ಜನವರಿ 12, 2023 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ-ಮಣುಗೂರ ಎಕ್ಸ್ಪ್ರೆಸ್ ರೈಲು ಜ.17ರಿಂದ ಪ್ರಾರಂಭ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ ಮೂಡಲಗಿ: ಬೆಳಗಾವಿ-ಮಣುಗೂರ ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು (07335/07336) ಸೇವೆಯನ್ನು ಜ.17 ಮಂಗಳವಾರ ಬೆಳಗಾವಿಯಿಂದ ರೈಲು ಸಂಚಾರ ಪ್ರಾರಂಭವಾಲಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ಗುರುವಾರ ಜ.12 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯಸಭೆಯ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ …
Read More »
inmudalgi
ಜನವರಿ 11, 2023 Recent Posts, ತಾಲ್ಲೂಕು, ಬೆಳಗಾವಿ
*ಮನ್ನಿಕೇರಿಯಲ್ಲಿ 1.40 ಕೋಟಿ ರೂ. ಮೊತ್ತದ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ* *ಸುಂದರ ನಿಸರ್ಗವನ್ನು ಹೊಂದಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ* ಗೋಕಾಕ : ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. ಅಷ್ಟೊಂದು ಅತ್ಯುತ್ತಮವಾದ ಶಾಲೆಯನ್ನು ಹೊಂದಿರುವುದು ಈ ಭಾಗದ ವಿದ್ಯಾರ್ಥಿಗಳ ಸೌಭಾಗ್ಯವೆಂದು ಕೆಎಂಎಫ್ …
Read More »
inmudalgi
ಜನವರಿ 11, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಹೆಮ್ಮೆಯ ಚಿತ್ರ ಕಲಾವಿದ ಹಣಮಂತ ಗುಬಚಿ ಮೂಡಲಗಿ : ಕೆಲವರಿರುತ್ತಾರೆ, ಡ್ರಾಯಿಂಗ್ ಮಾಡಿದ್ದೋ ಅಥವಾ ಕ್ಯಾಮೆರಾದಲ್ಲಿ ತೆಗೆದ ಫೋಟೋವೋ ಎಂದು ಅಚ್ಚರಿ ಪಡುವಷ್ಟರ ಮಟ್ಟಿಗೆ ಚಿತ್ರಕಲೆಯನ್ನು ಕರಗತ ಮಾಡಿಕೊಂಡಿರುತ್ತಾರೆ. ಅಂಥ ಕಲಾವಿದರೊಬ್ಬರು ಮೂಡಲಗಿಯಲ್ಲಿ ಇದ್ದಾರೆ. ಅವರೇ ಹಣಮಂತ ಗುಬಚಿ. ಬ್ಯಾನರ್ ಗಳ ಈ ಕಾಲದಲ್ಲಿಯೂ ತಮ್ಮ ಕೈಯಿಂದ ಅದ್ಭುತ ಚಿತ್ರ ಬಿಡಿಸುವ ಹಣಮಂತ ಗುಬಚಿಯವರ ಕಲೆ ಸುಂದರವಾದದ್ದು ಬಹಳಷ್ಟು ಮಂದಿ ಕ್ಯಾಮೆರಾದಲ್ಲಿ ಫೋಟೋಗಳನ್ನು ತೆಗೆಯುತ್ತಾರೆ. ಆದರೆ ಅವರಲ್ಲಿ ಕೆಲವೇ …
Read More »