inmudalgi
ಅಕ್ಟೋಬರ್ 17, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರೈತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ದತೆಯ ಪ್ರತಿಬಿಂಬವಾಗಿ ‘ಒಂದು ದೇಶ ಒಂದು ಗೊಬ್ಬರ’ ಯೋಜನೆಯಡಿ ಭಾರತವು ರಸಗೊಬ್ಬರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವತ್ತ ಮುನ್ನಗ್ಗಲಿದೆ. ರೈತರಿಗೆ ಅಗ್ಗದ ಮತ್ತು ಗುಣಮಟ್ಟದ ಪೋಷಕಾಂಶಗಳ ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ ರೈತರ ಆದಾಯ ದ್ವಿಗುಣಗೊಳಿಸಲು ಸಹಾಯಕಾರಿಯಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು …
Read More »
inmudalgi
ಅಕ್ಟೋಬರ್ 17, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವಿದ್ಯಾರ್ಥಿಗಳು ದಿನನಿತ್ಯದ ಅಭ್ಯಾಸದೊಂದಿಗೆ ಪ್ರಾರ್ಥನೆ ಪೂಜೆ ಪುನಸ್ಕಾರಗಳನ್ನು ತಮ್ಮ ದಿನಚರಿಯಲ್ಲಿ ಬಳಸಿಕೊಂಡಾಗ ಶುದ್ದವಾದ ಭಕ್ತಿ ಮನಸ್ಸು ಅಭ್ಯಾಸದಲ್ಲಿ ಏಕಾಗ್ರತೆ ತರುತ್ತವೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ ಹೇಳಿದರು. ಅವರು ಸೋಮವಾರದಂದು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸರಸ್ವತಿ ಪೂಜೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ, ಭಯ, ಭಕ್ತಿ, ಗುರುಹಿರಿಯರಿಗೆ ಗೌರವ, ನಮ್ಮ ನಾಡಿನ …
Read More »
inmudalgi
ಅಕ್ಟೋಬರ್ 17, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರಿಗೆ ಪ್ರತಿಶತ 50 ರಷ್ಟು ಅವಕಾಶಗಳಿದ್ದು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಮಾಜಿಕ ಸೇವೆ ಮತ್ತು ಸಂಘಟನೆ ಮಾಡಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ಶ್ರೀ ಭಗೀರಥ ಯುವತಿ ಮಂಡಲ ನೋಂದಣಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ ಶ್ರೀ ಭಗೀರಥ ಯುವತಿ ಮಂಡಳಿ ಇವತ್ತು ಉದ್ಘಾಟನೆಯಾಗಿದ್ದು ಇದರ ಮುಖಾಂತರ ಹೊಲಿಗೆ ತರಬೇತಿ ಇನ್ನಿತರ …
Read More »
inmudalgi
ಅಕ್ಟೋಬರ್ 16, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಗುರುವಿನ ಸೇವೆ ಸ್ಮರಿಸಿ ಗುರುಗಳನ್ನು ಗೌರವಿಸುವುದು ಶ್ರೇಷ್ಠ ಕೆಲಸ ಎಂದು ಧಾರವಾಡದ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ತಾಲೂಕಿನ ಕುಲಗೋಡ ಕೇಳಕರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿರುವ ಸನ್ 2002-03 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ತಂದೆ-ತಾಯಿ ಹಾಗೂ ಗುರುವಿನ ಸ್ಮರಣೆ ಮಾಡುವುದರಿಂದ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಹೊರಹೊಮ್ಮುತ್ತಾರೆ. ಹೀಗಾಗಿ ಗುರುವಿನ ಸ್ಮರಣೆ ಮಾಡುವುದು …
Read More »
inmudalgi
ಅಕ್ಟೋಬರ್ 16, 2022 Recent Posts, ತಾಲ್ಲೂಕು, ಬೆಳಗಾವಿ
ಢವಳೇಶ್ವರದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಯ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ ಸುಣಧೋಳಿಯ ಶ್ರೀ ಶಿವಾನಂದ ಸ್ವಾಮೀಜಿಗಳು ಮತ್ತು ಕಕಮರಿಯ ಶ್ರೀ ಗುರುಲಿಂಗ ಜಂಗಮ ಸ್ವಾಮೀಜಿಗಳ ಸಾನಿದ್ಯದಲ್ಲಿ ಜರುಗಿತು. ಗ್ರಂಥಾಲಯ ಉದ್ಘಾಟಿಸಿದ ಯುವ ನಾಯಕ ಸರ್ವೋತಮ ಜಾರಕಿಹೊಳಿ ಮಾತನಾಡಿ, ಪುಸ್ತಕ ಸ್ನೇಹ ಬೆಳೆಸುವುದದರಿಂದ ಮೆದುಳಿನ ಬೆಳವಣಿಗೆ ವೇಗ ಪಡೆಯುವುದಷ್ಟೆ ಅಲ್ಲದೆ ಬುದ್ದಿಮತ್ತೆಯೂ …
Read More »
inmudalgi
ಅಕ್ಟೋಬರ್ 15, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಹಕಾರಿ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಚಟುವಟಿಕೆಗಳ ಕೇಂದ್ರಗಳಾಗಿವೆ ಹಾಗೂ ಸಹಕಾರಿ ಸಂಘಗಳು ಗ್ರಾಹಕರಿಗೆ ನೀಡುತ್ತಿರುವ ಸೇವೆ ಮತ್ತು ಕಾರ್ಯದಕ್ಷತೆ ಪ್ರಶಂಸನೀಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಸೆ.14 ರಂದು ಮೂಡಲಗಿ ನಗರದ ಶ್ರೀ ಅನ್ನಪೂರ್ಣೇಶ್ವರಿ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸಹಕಾರ ಕ್ಷೇತ್ರ ಗ್ರಾಮೀಣ ಭಾಗದ ಜನರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸುವ ಕೇಂದ್ರಗಳಾಗಿವೆ ಆ ಮೂಲಕ …
Read More »
inmudalgi
ಅಕ್ಟೋಬರ್ 15, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಇಂದಿನ ತಂತ್ರಾoಶಯುಕ್ತ ಆಡಳಿತದಲ್ಲಿ ಪ್ರಮುಖವಾಗಿ ಗಣಕಯಂತ್ರದ ಜ್ಞಾನ ಅತ್ಯಾವಶ್ಯಕವಾಗಿದೆ. ಶಿಕ್ಷಣ ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಲಿಪಿಕ ನೌಕರರ ಕೊಡುಗೆ ಅಪಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕಾ ಲಿಪಿಕ ನೌಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಎಫ್.ಡಿ.ಎ ಮತ್ತು ಎಸ್.ಡಿ.ಎ ಸಿಬ್ಬಂದಿಗಳಿಗೆ ತಂತ್ರಜ್ಞಾನ ಆಧಾರಿತ ಆಡಳಿತಾತ್ಮಕ ತರಬೇತಿಯ ಒಂದು ದಿನದ …
Read More »
inmudalgi
ಅಕ್ಟೋಬರ್ 15, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಉಪ್ಪಾರ ಸಮಾಜವನ್ನು ಎಸಿ-ಎಸ್ಟಿಗೆ ಸೇರಿಸಬೇಕೆಂಬ ಉದ್ದೇಶದಿಂದ ಅನೇಕ ವರ್ಷಗಳ ಕಾಲದಿಂದಲೂ ಹೋರಾಟ ಮಾಡುತ್ತಾ ಬಂದಿದ್ದು, ಸರ್ಕಾರ ನಮ್ಮ ಹೋರಾಟಕ್ಕೆ ಇಲ್ಲಿಯವರೆಗೂ ಸ್ಪಂದಿಸಿಲ್ಲ ಆದರಿಂದ ತಾಲೂಕಿನ ಉಪ್ಪಾರ ಸಮಾಜದಿಂದ ಅ.21ರಂದು ಸಾಂಕೇತಿಕವಾಗಿ ಸುಮಾರು ಹತ್ತು ಸಾವಿರ ಜನ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸೇರಿ ತಹಶೀಲ್ದಾರ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಲಾಗುವುದೆಂದು ಎಂದು ಸಮಾಜ ಹಿರಿಯ ಮುಖಂಡ ಬಿ ಬಿ ಹಂದಿಗುಂದ ಹೇಳಿದರು. ಶನಿವಾರದಂದು ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ …
Read More »
inmudalgi
ಅಕ್ಟೋಬರ್ 13, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಉಪ್ಪಾರ ಸಮಾಜ ನಡೆಸುತ್ತಿರುವ ಹೋರಾಟದ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಸೆ.13 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರಾಜ್ಯದಾದ್ಯಂತ ಸುಮಾರು 52 ಲಕ್ಷಕ್ಕೂ ಅಧಿಕ ಜನ ಉಪ್ಪಾರ ಜನಾಂಗದವರಿದ್ದು, ಇವರೆಲ್ಲ ಹಿಂದುಳಿದ ವರ್ಗದವರಾಗಿರುತ್ತಾರೆ. ಭೂಮಂಡಲಕ್ಕೆ ಗಂಗೆಯನ್ನು ಹರಿಸಿ ತಂದಿರುವ …
Read More »
inmudalgi
ಅಕ್ಟೋಬರ್ 13, 2022 Recent Posts, ತಾಲ್ಲೂಕು, ಬೆಳಗಾವಿ
ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ ಸಧ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ, ಉಪ್ಪಾರಗಳ ಮೀಸಲಾತಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಮನವಿ ಮಾಡಿಕೊಳ್ಳುವೆ ಗೋಕಾಕ : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ …
Read More »