inmudalgi
ಜೂನ್ 17, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …
Read More »
inmudalgi
ಜೂನ್ 14, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಗ್ರಾಮದಲ್ಲಿ ಕಳೆದ ಶತ, ಶತಮಾನಗಳಿಂದಲೂ ಸಂಪ್ರದಾಯದಂತೆ ಆಚರಿಸಿಕೊಂಡು ಬರಲಾಗುತ್ತಿರುವ ಕಾರ ಹುಣ್ಣಿಮೆ ಪ್ರಯುಕ್ತ ಜೂನ.14ರಂದು ಜೋಡೆತ್ತುಗಳನ್ನು ವಿವಿಧ ಬಗೆಯ ಬಣ್ಣ ಹಚ್ಚಿ ಕೊಡುಗಳಿಗೆ ರಿಬ್ಬನ್, ಹಣೆಪಟ್ಟಿ, ಗೆಜ್ಜೆ ಕಟ್ಟಿ ಶೃಂಗರಿಸಿ ಜೋಡೆತ್ತುಗಳನ್ನು ಓಡಿಸಿದ ಬಳಿಕ ಗ್ರಾಮದ ಅಗಸಿಯ ಹೆಬ್ಬಾಗಿಲಿಗೆ ಕಟ್ಟಿರುವ ಕರಿ ಹರೆದು ಸಂಭ್ರಮದಿಂದ ಸ್ಥಳೀಯರು ಕಾರಹುಣ್ಣಿಮೆಯನ್ನು ಆಚರಿಸಿದರು. ಗ್ರಾಮದ ಎಲ್ಲ ರೈತರ ಮನೆಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜಿಸಿ, ಪುರದೇವರ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರ, ನೈವೇದ್ಯ ಸಮರ್ಪನೆ …
Read More »
inmudalgi
ಜೂನ್ 11, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಪರಿಸರವಿಲ್ಲದೆ ಮಾನವನ ಬದುಕು ಅಸಾಧ್ಯ, ಅರಣ್ಯವನ್ನು ಉಳಿಸಿ, ಬೆಳೆಸಿ ಪರಿಸರ ರಕ್ಷಣೆ ಮಾಡುವಂತೆ ಧಾರವಾಡದ ಅಪರ ಆಯುಕ್ತರ ಕಾರ್ಯಾಲಯದ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಅವರು ಶನಿವಾರದಂದು ಅರಣ್ಯ ಇಲಾಖೆಯ ನರ್ಸರಿಯಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಶಿಕ್ಷಣ ಇಲಾಖೆಯವರು ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಬೀಜ ಉಂಡೆ ತಯಾರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ನಿಸರ್ಗ ಎಲ್ಲಾ ಜೀವಿಗಳಿಗೆ ರಕ್ಷಣೆ ನೀಡುತ್ತಿದೆ. ಜೀವಿಗಳು ಬದುಕಲು ಆಮ್ಲಜನಕ ನೀರು ಆಹಾರ …
Read More »
inmudalgi
ಜೂನ್ 10, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವಾಯುವ್ಯ ಪದವಿಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನಮಂತ ನಿರಾಣಿ ಅವರಿಗೆ ರಾಜ್ಯ ವಿಧಾನ್ ಪರಿಷತ್ ಸಭಾಪತಿಯಾಗುವ ಅವಕಾಶವಿದೆ. ಸಭಾಪತಿ ಸ್ಥಾನಕ್ಕೆ ಭೂಷಣವಾಗುವ ಸರಳ ವ್ಯಕ್ತತ್ವವನ್ನು ಅವರು ಹೊಂದಿದ್ದಾರೆ. ಅವರೊಬ್ಬ ಅಜಾತಶತ್ರು ಅವರು ಕ್ರಿಯಾಶೀಲ ಸಜ್ಜನ ರಾಜಕಾರಣಿ ಎಂದು ಹೆಸರು ಮಾಡಿದ್ದಾರೆ. ಅವರಿಗೆ ಇದೇ 13 ರಂದು ನಡೆಯುವ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯ ಮತ ನೀಡಬೇಕು ಎಂದು ಕರ್ನಾಟಕ ಸರಕಾರದ ಪ್ರತಿಷ್ಠಿತ ಗಡಿನಾಡ ಕನ್ನಡಿಗ ಡಾ. ಕೆ.ಜಿ ಕುಂದಣಗಾರ …
Read More »
inmudalgi
ಜೂನ್ 10, 2022 Recent Posts, ತಾಲ್ಲೂಕು, ಬೆಳಗಾವಿ
ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ. ಮೂಡಲಗಿ: 10 ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಸಂಸ್ಕøತಿ ಕಲಿಸುವಲ್ಲಿ ತಾಯಿಯ ಪಾತ್ರ ಬಹಳÀ ಮುಖ್ಯವಾಗಿದೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲುಕಿನ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ ಒಂದನೆಯ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಅಕ್ಷರ ಸಂಸ್ಕಾರ ಹಾಗೂ ತಾಯಂದಿರ ಸಭೆಯಲ್ಲಿ ಮಾತನಾಡಿ, ಇಂದಿನ ಅಧುನಿಕ ಯುಗದಲ್ಲಿ ಹಾಗೂ ತಂತ್ರಜ್ಞಾನ ಮುಂದುವರೆದ ನೆಪದಲ್ಲಿ …
Read More »
inmudalgi
ಜೂನ್ 10, 2022 Recent Posts, ತಾಲ್ಲೂಕು, ಬೆಳಗಾವಿ
ಘಟಪ್ರಭಾ: ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದು ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಿದ್ದಾರೆ. ನರೇಂದ್ರ ಮೋದಿ ಅವರ ಆಡಳಿತ, ಕೇಂದ್ರ, ರಾಜ್ಯ ಸರ್ಕಾರದ ಸಾಧನೆ, ಬಿಜೆಪಿ ತತ್ವ ಸಿದ್ದಾಂತ ಅವಲೋಕಿಸಿ, ಶಿಕ್ಷಕರು ಮತ ನೀಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ವಿನಂತಿಸಿದರು. ಶುಕ್ರವಾರ ಜೂ.10 ರಂದು ಅರಭಾವಿ ಪಟ್ಟಣದಲ್ಲಿ ನಡೆದ ವಿಧಾನ ಪರಿಷತ್ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ …
Read More »
inmudalgi
ಜೂನ್ 9, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಭತ್ತ-ರಾಗಿ ಸೇರಿದಂತೆ ದೇಶದ ಪ್ರಮುಖ 17 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದಲ್ಲಿ ನಡೆದ ಸಂಪುಟ ಸಮಿತಿ ಸಭೆಯು ಅನ್ನದಾತರ ಆದಾಯ ವೃದ್ಧಿಗೆ ಕ್ರಮಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಶುಕ್ರವಾರ ಜೂನ್ 9 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸಾಮಾನ್ಯವಾಗಿ …
Read More »
inmudalgi
ಜೂನ್ 9, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವ್ಯವಸ್ಥಿತ ಸಂಘಟನೆಯಿಂದಾಗಿ ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳಲ್ಲಿ ಬಿಜೆಪಿಗೆ ಅತ್ಯಧಿಕ ಮತಗಳ ಮುನ್ನಡೆ ದೊರಕಲಿದ್ದು, ಪದವೀಧರ ಕ್ಷೇತ್ರದ ಅಭ್ಯರ್ಥಿ ಹನಮಂತ ನಿರಾಣಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಆಯ್ಕೆಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ …
Read More »
inmudalgi
ಜೂನ್ 9, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಕಳೆದ ಮಾರ್ಚ, ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಕೌಜಲಗಿಯ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಅವರನ್ನು ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸತ್ಕರಿಸಲಾಯಿತು. ಮರು ಮೌಲ್ಯಮಾಪನದಲ್ಲಿ 625 ರ ಪೈಕಿ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಅರಭಾವಿ ಕ್ಷೇತ್ರದ ಕೀರ್ತಿ ಪತಾಕೆಯನ್ನು ಹಾರಿಸಿರುವ ಮಹಾಲಕ್ಷ್ಮೀ ತಳವಾರ ಅವರನ್ನು ಶಾಸಕರ ಆಪ್ತ …
Read More »
inmudalgi
ಜೂನ್ 8, 2022 Recent Posts, ತಾಲ್ಲೂಕು, ಬೆಳಗಾವಿ
ಘಟಪ್ರಭಾ: ಸಮಾಜ ಸುಧಾರಣೆಗೆ ಮಠ ಮಾನ್ಯಗಳ ಪಾತ್ರ ಮುಖ್ಯ, ಮಠಾಧೀಶರ ನಡೆ-ನುಡಿ, ಮಾರ್ಗದರ್ಶನ ನಮ್ಮೆರಿಗೂ ದಾರಿದೀಪ ಅವರ ಮಾರ್ಗದರ್ಶನದಲ್ಲಿ ಸಮಾಜದ ಮುಖ್ಯವಾಹಿನಿಗೆ ಬರಲು ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ವಿರಕ್ತ ಮಠಕ್ಕೆ ಭೇಟಿ ನೀಡಿ, ಮ.ನಿ.ಪ್ರ.ಕಾಶಿನಾಥ ಮಹಾಸ್ವಾಮೀಜಿಗಳ ಹಾಗೂ ಪರಮಪೂಜ್ಯ ಶ್ರೀ ಪ್ರಭುಲಿಂಗ ಸ್ವಾಮೀಜಿಗಳ ದಿವ್ಯಾಶೀರ್ವಾದ ಪಡೆದು, ಅವರು ನೀಡಿದ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ …
Read More »