inmudalgi
ಜೂನ್ 9, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಕಳೆದ ಮಾರ್ಚ, ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಕೌಜಲಗಿಯ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಅವರನ್ನು ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸತ್ಕರಿಸಲಾಯಿತು. ಮರು ಮೌಲ್ಯಮಾಪನದಲ್ಲಿ 625 ರ ಪೈಕಿ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಅರಭಾವಿ ಕ್ಷೇತ್ರದ ಕೀರ್ತಿ ಪತಾಕೆಯನ್ನು ಹಾರಿಸಿರುವ ಮಹಾಲಕ್ಷ್ಮೀ ತಳವಾರ ಅವರನ್ನು ಶಾಸಕರ ಆಪ್ತ …
Read More »
inmudalgi
ಜೂನ್ 8, 2022 Recent Posts, ತಾಲ್ಲೂಕು, ಬೆಳಗಾವಿ
ಘಟಪ್ರಭಾ: ಸಮಾಜ ಸುಧಾರಣೆಗೆ ಮಠ ಮಾನ್ಯಗಳ ಪಾತ್ರ ಮುಖ್ಯ, ಮಠಾಧೀಶರ ನಡೆ-ನುಡಿ, ಮಾರ್ಗದರ್ಶನ ನಮ್ಮೆರಿಗೂ ದಾರಿದೀಪ ಅವರ ಮಾರ್ಗದರ್ಶನದಲ್ಲಿ ಸಮಾಜದ ಮುಖ್ಯವಾಹಿನಿಗೆ ಬರಲು ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ವಿರಕ್ತ ಮಠಕ್ಕೆ ಭೇಟಿ ನೀಡಿ, ಮ.ನಿ.ಪ್ರ.ಕಾಶಿನಾಥ ಮಹಾಸ್ವಾಮೀಜಿಗಳ ಹಾಗೂ ಪರಮಪೂಜ್ಯ ಶ್ರೀ ಪ್ರಭುಲಿಂಗ ಸ್ವಾಮೀಜಿಗಳ ದಿವ್ಯಾಶೀರ್ವಾದ ಪಡೆದು, ಅವರು ನೀಡಿದ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ …
Read More »
inmudalgi
ಜೂನ್ 8, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಳೆದ ಎಪ್ರೀ¯ನಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಮೂಡಲಗಿ ಶೈಕ್ಷಣಿಕ ವಲಯದ ಕೌಜಲಗಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಮರು ಮೌಲ್ಯ ಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿರುವದಾಗಿ ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಸಂದರ್ಭದಲ್ಲಿ ಇಂಗ್ಲೀಷ ಮತ್ತು ವಿಜ್ಞಾನ ವಿಷಯಗಳಿಗೆ ತಲಾ 99 ಅಂಕ ಪಡೆದಿದ್ದಳು, …
Read More »
inmudalgi
ಜೂನ್ 8, 2022 Recent Posts, ತಾಲ್ಲೂಕು, ಬೆಳಗಾವಿ
ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ ಮೂಡಲಗಿ: ಜೂ.27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾದ ಹಾವೇರಿ ಜಿಲ್ಲೆಯ ಸಿಗ್ಗಾವಿ ಪಟ್ಟಣದಲ್ಲಿರುವ ಅವರ ನಿವಾಸದ ಮುಂದೆ ಲಿಂಗಾಯತ ಪಂಚಮಸಾಲಿ 2A ಮೀಸಲಾತಿ ಗೋಸ್ಕರ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾದ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಬೆಳಗಾವಿ ನಗರದ ಸಂಕಮ ಹೋಟೆಲ್ ಸಭಾಂಗಣದಲ್ಲಿ ಜೂ.10 ಬೆಳಗ್ಗೆ 11ಗಂಟೆಗೆ ಸಭೆಯನ್ನು ಕರೆಯಲಾಗಿದೆ ಎಂದು ಪಂಚಮಸಾಲಿ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಮೂಡಲಗಿಯ ನಿಂಗಪ್ಪ ಪಿರೋಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. …
Read More »
inmudalgi
ಜೂನ್ 7, 2022 Recent Posts, ತಾಲ್ಲೂಕು, ಬೆಳಗಾವಿ
ಸತತ ಪ್ರಯತ್ನದಿಂದ ಏನೇಲ್ಲಾ ಯಶಸ್ಸು ಸಾಧ್ಯ: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜೂನ್.6ರಂದು ನಡೆದ ಪ್ರತಿಭಾ ಪುರಸ್ಕಾರ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಧನೆ ಸಾಧಕನ ಸ್ವತ್ತು ಹೊರತು …
Read More »
inmudalgi
ಜೂನ್ 5, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ ಎಂದು ರಾಜ್ಯ ಯುವ ಪ್ರಶಸ್ತಿ ವಿಜೇತ ಹಾಗೂ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರ ಗ್ರಾಮದ ಡಿ ದೇವರಾಜ ಅರಸು ವಸತಿ ನಿಲಯದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮನ್ನು ಗಿಡಗಳನ್ನು …
Read More »
inmudalgi
ಜೂನ್ 5, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪರಿಸರ ರಕ್ಷಿಸುವ ಜವಾಬ್ದಾರಿ ಮಾನವರದ್ದಾಗಿದೆ ಆದರೆ ಬಹುಪಾಲು ಜನರು ಇದನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಪರಿಸರ ದಿನಾಚರಣೆಗೆ ಮಾತ್ರ ಸೀಮಿತವಾಗದೆ ಪರಿಸರ ದಿನಾಚಾರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದು ಸ್ಥಳೀಯ ಪಿಎಸ್ಐ ಎಚ್ ವೈ ಬಾಲದಂಡಿ ಹೇಳಿದರು. ರವಿವಾರದಂದು ಪಟ್ಟಣದ ಗಂಗಾನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಆವರಣದಲ್ಲಿ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರು ನಿರ್ಮಿಸಿದ ಉದ್ಯಾವನದ ಸಸಿಗೆ ನೀರುಣಿಸಿ ಮಾತನಾಡಿದ ಅವರು, ಈರಪ್ಪ …
Read More »
inmudalgi
ಜೂನ್ 5, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ವಿಶ್ವ ಪರಿಸರ ದಿನವನ್ನು ಪರಿಸರದ ಕಾಳಜಿ ಜೊತೆಗೆ ಜನರಿಗೆ ಪರಿಸರದ ಮಹತ್ವ ಸಾರುವ ಉದ್ದೇಶದಿಂದ ವಿಶ್ವಸಂಸ್ಥೆಯು ಇದನ್ನು ಸ್ಥಾಪಿಸಿತು ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನೂತನ ಕಟ್ಟಡದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿ ಮಾತನಾಡುತ್ತಾ, ಪ್ರಕೃತಿಮಾತೆ ಈ ಸುಂದರವಾದ ವಾತಾವರಣವನ್ನು ನಮಗೆ ನೀಡಿದ್ದು ಇದು ನಮ್ಮ …
Read More »
inmudalgi
ಜೂನ್ 5, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು, ಪಕ್ಷಿ ಸಂಕುಲ ಹಾಗೂ ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಗೋಕಾಕ ಅರಣ್ಯ ಇಲಾಖೆ ಉಪ ವಲಯ ಅರಣ್ಯಾಧಿಕಾರಿ ಜಾಫರಸಾಧಿಕ್ ಮುಜಾವರ ಹೇಳಿದರು. ಘಟಪ್ರಭಾ ಅರಣ್ಯ ವಿಭಾಗ, ಗೋಕಾಕ, ಗೋಕಾಕ ಪ್ರಾದೇಶಿಕ ಅರಣ್ಯ ವಲಯದ ಸಹಯೋಗದಲ್ಲಿ ಜೂನ್.5 ರಂದು ಬೆಟಗೇರಿ ಗ್ರಾಮದ ಹೊರವಲಯದ ಗೈರಾಣ ಪ್ರದೇಶದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸನ್2022-23ನೇ ಸಾಲಿನ ಬೀಜ ಬಿತ್ತನೆ ಅಭಿಯಾನ …
Read More »
inmudalgi
ಜೂನ್ 4, 2022 Recent Posts, ತಾಲ್ಲೂಕು, ಬೆಳಗಾವಿ
ಆಧ್ಯಾತ್ಮಿಕ ಚಿಂತನವು ಬದುಕಿನಲ್ಲಿ ಶಾಂತಿ, ನೆಮ್ಮದಿ ನೀಡುತ್ತದೆ ಮೂಡಲಗಿ: ಮೂಡಲಗಿಯ ಕೆಇಬಿ ಪ್ಲಾಟ್ದಲ್ಲಿಯ ಶ್ರೀ ಮಾರ್ತಂಡ ಮಲ್ಲಯ್ಯ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ 11ನೇ ಶಿವಾನುಭವ ಗೋಷ್ಠಿ ಜರುಗಿತು. ಬೀಳಗಿ ತಾಲ್ಲೂಕಿನ ಚಿಕ್ಕ ಹಂಚಿನಾಳದ ಶಾಂತಾನಂದ ಸ್ವಾಮೀಜಿ ಶಿವಾನುಭವ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿ ‘ಆಧ್ಯಾತ್ಮಿಕ ಚಿಂತನೆಯು ಮನುಷ್ಯನಿಗೆ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ನೀಡುವುದು’ ಎಂದರು. ಇಟ್ನಾಳದ ಸಿದ್ಧೇಶ್ವರ ಶರಣರು ಮಾತನಾಡಿ ಬಡತನ, ಸಿರಿತನ, ಅಧಿಕಾರ ಇವು ಶಾಶ್ವತ …
Read More »