inmudalgi
ಮಾರ್ಚ್ 22, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ ರಾಯಬಾಗ ತಾಲೂಕಿನ …
Read More »
inmudalgi
ಮಾರ್ಚ್ 22, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ ಪುರಸಭೆಯಿಂದ ಮಂಗಳವಾರ ಇಲ್ಲಿಯ ಸರ್ಕಾರಿ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ 75ನೇ ಆಜಾದಿ ಕಿ ಅಮೃತಮಹೋತ್ಸವ ಅಂಗವಾಗಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಮಾತನಾಡಿ ‘ಸ್ವಚ್ಚತೆಯ ಬಗ್ಗೆ ಸಮುದಾಯದ ಜನರು ಕಾಳಜಿವಹಿಸಬೇಕು. ಸ್ವಚ್ಚತೆ ಇದ್ದರೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ಇರುತ್ತದೆ’ ಎಂದರು. ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು …
Read More »
inmudalgi
ಮಾರ್ಚ್ 22, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಾಗೂ ಬಗರನಾಳ ಗ್ರಾಮದಲ್ಲಿ ಶನಿವಾರದಂದು ಸಂಜೆ ಗಾಳಿ ಮಿಶ್ರಿತ ಸುರಿದ ಅಕಾಲಿಕ ಮಳೆಯ ಪರಿಣಾಮ ಸದಕ ಮತ್ತು ಗೋಧಿ ಬೆಳೆಗಳು ನೆಲಕ್ಕೆರುಳಿದ್ದರಿಂದ ಈ ಭಾಗದ ರೈತರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಸಾಲ-ಶೂಲ ಮಾಡಿ ಬೀಜ ಗೊಬ್ಬರ ಹಾಕಿ ಕಷ್ಟಪಟ್ಟು ಸದಕ ಮತ್ತು ಗೋಧಿ ಬೆಳೆಗಳು ಬೆಳೆದು ಇನ್ನೇನು ಕಟಾವು ಹಂತಕ್ಕೆ ಬಂದಿದ್ದ ಅಪಾರ ಪ್ರಮಾಣದ ಬೆಳೆಗಳು ಅಕಾಲಿಕವಾಗಿ ಸುರಿದ ಈ ಮಳೆಯಿಂದ ನೆಲಕಚ್ಚಿ ಮಣ್ಣು ಪಾಲಾಗಿ …
Read More »
inmudalgi
ಮಾರ್ಚ್ 22, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪ್ರಸಕ್ತ ಸಾಲಿನ ೨೦೨೨ ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಲಗಿ ವಲಯದಲ್ಲಿ ೭೦೪೧ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು, ರಾಜ್ಯದಲ್ಲಿಯೇ ವಿನೂತನ ಕಾರ್ಯಚಟುವಟಿಕೆಗಳಿಂದ ಹೆಸರುವಾಸಿಯಾಗಿರುವದು ಸಂತಸದ ವಿಷಯವಾಗಿದೆ ಎಂದು ಬೆಳಗಾವಿ ಸಿಟಿಇ ಪ್ರಾಚಾರ್ಯರು ಹಾಗೂ ಸಹ ನಿರ್ದೇಶಕ ರಾಜೀಯ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ೮೧ ಪ್ರೌಢ ಶಾಲೆಗಳ ಮೇಲ್ವಿಚಾರಣೆ ಹಾಗೂ ೨೬ ಪರೀಕ್ಷಾ ಕೇಂದ್ರಗಳ ತಯಾರಿ ಕುರಿತು ಮಾತನಾಡಿ, ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ …
Read More »
inmudalgi
ಮಾರ್ಚ್ 21, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣದ ಎಮ್ಇಎಸ್ ಕಾಲೇಜಿನ ಬಿಎ ಪದವಿ ವಿದ್ಯಾರ್ಥಿಗಳ ಮಾ.22ರಿಂದ ನಡೆಯುವ ಪರೀಕ್ಷಾ ಕೇಂದ್ರವನ್ನು ರದ್ದು ಮಾಡಿ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಕ್ಕೆ ವರ್ಗಾವಣೆ ಮಾಡಿದ ಹಿನ್ನೆಲೆ ವಿದ್ಯಾರ್ಥಿಗಳು ಸೋಮವಾರ ಸಂಜೆ ನಾಲ್ಕು ಗಂಟೆಯಿಂದ ತಹಶೀಲ್ದಾರ ಕಚೇರಿಯ ಮುಂದೆ ನಡೆಸುತ್ತಿದ್ದ ಪ್ರತಿಭಟನೆಯೂ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಮಧ್ಯ ಪ್ರವೇಶಿಸಿದರಿಂದ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಮೋಟಕುಗೊಳಿಸಿದ ಪ್ರಸಂಗ ರಾತ್ರಿ 9 ಗಂಟೆಗೆ ಜರುಗಿತು. ಸೋಮವಾರದಂದು ರಾಣಿ ಚೆನ್ನಮ್ಮ …
Read More »
inmudalgi
ಮಾರ್ಚ್ 21, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸುಪ್ರಸಿದ್ಧ ಬಡಕುಂದ್ರಿ ಹೊಳೆಮ್ಮಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಿನ್ನೆ ಭಾನುವಾರ ಸಂಜೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸತ್ಕರಿಸಿದರು.
Read More »
inmudalgi
ಮಾರ್ಚ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಶೀಘ್ರದಲ್ಲೇ ನಾಮದೇವ ಶಿಂಪಿ ಯುವಕ ಸಂಘ. ಮೂಡಲಗಿಯಲಿ ಮೂಡಲಗಿ ಇತ್ತೀಚಿಗೆ ಮೂಡಲಗಿಯ ಶ್ರೀ ವಿಠ್ಠಲ ಮಂದಿರದಲ್ಲಿ ನಾಮದೇವ ಶಿಂಪಿ ಸಮಾಜವು ನಡೆಸಿದ ಸಭೆಯಲ್ಲಿ ಬೆಳೆಯುತ್ತಿರುವ ಈ ಯುಗದಲ್ಲಿ ಎಲ್ಲಾ ಸಮಾಜದಲ್ಲಿ ಇರುವಂತೆ ನಾಮದೇವ ಶಿಂಪಿ ಸಮಾಜದಲ್ಲೂ ಕೂಡ ಯುವಕರ ಸಂಘಟನೆ ಅವಶ್ಯವಾಗಿದ್ದು ಸಮಾಜದ ಕಾರ್ಯಗಳ ಜೊತೆಯಲ್ಲಿ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸಲು ಯುವಕರು ಮುಂದಾಗಬೇಕಾಗಿದೆ. ಅದಕ್ಕಾಗಿ ಸ್ಥಳೀಯ ನಾಮದೇವ ಶಿಂಪಿ ಯುವಕರನ್ನು ಸೇರಿಸಿ ಸಭೆಯಲ್ಲಿ ಚರ್ಚೆ ಮಾಡಿ ಸಮಾಜದ ಹಿರಿಯರೆಲ್ಲರೂ ಶೀಘ್ರದಲ್ಲೇ …
Read More »
inmudalgi
ಮಾರ್ಚ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಪ್ರತಿಭಾವಂತ ಗಾಯಕರಿಂದ ಸಂಗೀತ ಸುಧೆ ಮೂಡಲಗಿ: ಮಾ. 23ರಂದು ‘ಭಾವದೀವಿಗೆ’ ಸುಗಮ ಸಂಗೀತೋತ್ಸವ ಮೂಡಲಗಿ: ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅಸೋಸಿಯೇಶನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಇವರ ಸಂಯುಕ್ತ ಆಶ್ರಯದಲ್ಲಿ ಮಾ. 23ರಂದು ಮೂಡಲಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂಜೆ 5 ಗಂಟೆಗೆ ಖ್ಯಾತ ಗಾಯಕರಿಂದ ‘ಭಾವದೀವಿಗೆ: ಸುಗಮ ಸಂಗೀತೋತ್ಸವ ಮತ್ತು ಕವಿ ಗೀತ ನಮನ’ ಕಾರ್ಯಕ್ರಮವನ್ನು ಏರ್ಪಡಿಸಿವರು. …
Read More »
inmudalgi
ಮಾರ್ಚ್ 20, 2022 Recent Posts, ತಾಲ್ಲೂಕು, ಬೆಳಗಾವಿ
*ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* ೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ …
Read More »
inmudalgi
ಮಾರ್ಚ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಭಗವಂತನ ಸೃಷ್ಠಿಯಲ್ಲಿ ವಿಕಲಚೇತನರಿಗೂ ಒಂದು ವಿಶಿಷ್ಠ ಶಕ್ತಿ ಇದ್ದೂ ಅವರು ಕೂಡಾ ಸ್ವಾವಲಂಬಿ ಜೀವನ ನಡೆಸುವಂತಾಗಲು ಸರ್ಕಾರ ಹಲವಾರು ಯೊಜನೆಗಳನ್ನು ಜಾರಿಗೆ ತಂದಿದೆ. ಯಾರು ವಿಕಲಚೇತನರಲ್ಲವೋ ಅಂತವರು ವಿಕಲಚೇತನರಿಗೆ ಆ ಯೋಜನೆಗಳ ಸದುಪಯೋಗವಾಗುವಂತೆ ಸಹಾಯ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಮಾ-20 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ …
Read More »