inmudalgi
ಅಕ್ಟೋಬರ್ 9, 2021 Recent Posts, ತಾಲ್ಲೂಕು, ಬೆಳಗಾವಿ
ಶ್ರದ್ಧೆ, ಪರಿಶ್ರಮದಿಂದ ಯಶಸ್ಸು ಸಾಧ್ಯ ಮೂಡಲಗಿ: ‘ಶ್ರದ್ದೆ ಮತ್ತು ಪರಿಶ್ರಮಪಟ್ಟರೆ ಖಂಡಿತ ಯಶಸ್ಸು ದೊರೆಯುತ್ತದೆ’ ಎಂದು ಜಮಖಂಡಿಯ ಉಪವಿಭಾಗಾಧಿಕಾರಿ ಡಾ. ಸಿದ್ದು ಹುಲ್ಲೋಳಿ ಹೇಳಿದರು. ಇಲ್ಲಿಯ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ 2021-22ನೇ ಸಾಲಿನ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿದ್ಯಾರ್ಥಿಯ ಅಧ್ಯಯನದ ಅವಧಿಯನ್ನು …
Read More »
inmudalgi
ಅಕ್ಟೋಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಅ. 9ರಂದು ಉಚಿತ ಕಣ್ಣಿನ ಸಪಾಸಣೆ ಶಿಬಿರ ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಮೂಡಲಗಿ ಕಣ್ಣಿನ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ದೃಷ್ಟಿ ದಿನಾಚರಣೆ-2021’ರ ಅಂಗವಾಗಿ ಶನಿವಾರ ಅ. 9ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ (ಎಸ್ಎಸ್ಆರ್ ಕಾಲೇಜು ಎದುರಿಗೆ) ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಏರ್ಪಡಿಸಿರುವರು. ಖ್ಯಾತ ಕಣ್ಣಿನ ತಜ್ಞರಾದ ಡಾ. ಸಚಿನ ಟಿ. ಶಿಬಿರದಲ್ಲಿ ಕಣ್ಣಿನ …
Read More »
inmudalgi
ಅಕ್ಟೋಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಕರೋನಾ ಸಂದರ್ಭದಲ್ಲಿಯ ಆಕ್ಸಿಜನ್ ಕೊರತೆಯನ್ನು ಗಮನಿಸಿ ಭಾರತದ ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಸಾಮಥ್ರ್ಯ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ಪಿಎಂ ಕೇರ್ಸ್ ಅಡಿ ಸಾರ್ವಜನಿಕ ಉದ್ಯಮಿಗಳ ಮುಖಾಂತರ ಮೊದಲ ಹಂತದಲ್ಲಿ 1230 ಆಕ್ಸಿಜನ್ ಘಟಕಗಳನ್ನು ಇಂದು ಲೋರ್ಕಾಪಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಅ.07 ರಂದು ನಗರದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮಂಗಳೂರಿನ …
Read More »
inmudalgi
ಅಕ್ಟೋಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಮಾದಕ ವಸ್ತುಗಳದಂಥ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಮನವಿ ಮೂಡಲಗಿ: ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಸಾಗಾಣಿಕೆ ಮತ್ತು ಪೂರೈಕೆಯ ನೂರಾರು ಪ್ರಕರಣಗಳು ವರದಿಯಾಗುತ್ತಿದ್ದು ದೊಡ್ಡ ಪ್ರಮಾಣದಲ್ಲಿಯೇ ಸಮಾಜಕ್ಕೆ ಡ್ರಗ್ಸ್ ಪೂರೈಕೆಯಾಗುತ್ತಿರುವುದು ಕಳವಳಕಾರಿ ವಿಚಾರವಾಗಿದೆ. ಮಾದಕ ವಸ್ತುಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳು ಗಂಭೀರವಾಗಿ ಪರಿಗಣಿಸಿ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಾಖಲಾಗುವ ಎಲ್ಲಾ ಪ್ರಕರಣಗಳಲ್ಲೂ ನಿಷ್ಪಕ್ಷಪಾತ ತನಿಖೆ ಮತ್ತು ಡ್ರಗ್ಸ್ ಜಾಲದಿಂದ ಸಮಾಜವನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಮೂಡಲಗಿ ತಹಶಿಲ್ದಾರ ಡಿ.ಜಿ.ಮಾಹಾತ …
Read More »
inmudalgi
ಅಕ್ಟೋಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಮಂಜುನಾಥ ಸೊಗಲದಗೆ ಪಿಎಚ್ಡಿ ಪದವಿ ಗೌರವ ಬೆಟಗೇರಿ:ಸಮೀಪದ ಕೌಜಲಗಿ ಗ್ರಾಮದ ಮಂಜುನಾಥ ಮಹಾದೇವಪ್ಪ ಸೊಗಲದ ಅವರು ವಯಸ್ಕರರಲ್ಲಿ ನಿದ್ರಾಹೀನತೆ ಮತ್ತು ಪರಿಣಾಮ ಹಾಗೂ ಗುಣಮಟ್ಟದ ಜೀವನ ಕುರಿತು ವಿಷಯ ಮಂಡಿಸಿದ್ದಕ್ಕೆ ರಾಜಸ್ಥಾನ ಜೆಜೆಟಿ ವಿಶ್ವವಿದ್ಯಾಲಯ ಇತ್ತೀಚೆಗೆ ಅವರಿಗೆ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಬೆಳಗಾವಿ ನೆಹರು ನಗರದ ಕೆಎಲ್ಇ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದ ವಿದ್ಯಾರ್ಥಿ ಮಂಜುನಾಥ ಸೊಗಲದ ಅವರಿಗೆ ಉಪನ್ಯಾಸಕಿ ಡಾ.ಸುಧಾ ರಡ್ಡಿ …
Read More »
inmudalgi
ಅಕ್ಟೋಬರ್ 5, 2021 Recent Posts, ತಾಲ್ಲೂಕು, ಬೆಳಗಾವಿ
ಗಣೇಶವಾಡಿಯಲ್ಲಿ ಕರವೇ ಘಟಕ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಕನ್ನಡ ನಾಡಿನಲ್ಲಿ ಜನಿಸಿರುವುದೇ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ – ರಾಹುಲ್ ಜಾರಕಿಹೊಳಿ ಮೂಡಲಗಿ: ಅರಭಾಂವಿ ಮತ ಕ್ಷೇತ್ರದ ಗಣೇಶವಾಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕನ್ನಡ ಭಾμÉಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಮ್ಮ ನಾಡಿನ ಮಹಾನ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಕಲಾವಿದರು, …
Read More »
inmudalgi
ಅಕ್ಟೋಬರ್ 5, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವಾಹನಗಳಲ್ಲಿ ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಮೂಡಲಗಿ ಪಿಎಸ್ಐ ಎಚ್.ವೈ.ಬಾಲದಂಡಿ ನೇತೃತ್ವದ ತಂಡ ತಾಲೂಕಿನ ಮುನ್ಯಾಳ ಹಾಗೂ ಖಾನಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ವಾಹನಗಳನ್ನು ಜಪ್ತು ಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿದ ಬಗ್ಗೆ ತಿಳಿದು ಬಂದಿದೆ. ಖಚಿತ ಮಾಹಿತಿ ಮೇರಿಗೆ ಸೋಮವಾರದಂದು ಪಿಎಸ್ಐ ಎಚ್.ವೈ.ಬಾಲದಂಡಿ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ಮಾಡಲು ಮೂಲಕ ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಮನೆ ಮನೆಗೆ ತೆರಳಿ ಖರೀಸಿ, ಅದನ್ನು …
Read More »
inmudalgi
ಅಕ್ಟೋಬರ್ 4, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿಜಿ ಅವರ ಜನ್ಮದಿನದ ಪ್ರಯುಕ್ತ ಇಲ್ಲಿನ ಯುವ ಜೀವನ ಸೇವಾ ಸಂಸ್ಥೆಯ ಖಜಾಂಚಿ ಮಂಜುನಾಥ ಹೆಳವರ ಅವರು ತಮ್ಮ ಪುತ್ರಿ ಆರಾಧ್ಯಳ ಜನ್ಮದಿನದ ಸವಿ ನೆನಪಿಗಾಗಿ ಕನ್ನಡ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ ಉದ್ಯಾನವನ ನಿರ್ಮಿಸಲು 100 ಗಿಡಗಳನ್ನು ಸಮಾಜ ಸೇವಕ ಮತ್ತು ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರಿಗೆ ಹಸ್ತಾಂತರಿಸಿದರು. ಈ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ …
Read More »
inmudalgi
ಅಕ್ಟೋಬರ್ 3, 2021 Recent Posts, ತಾಲ್ಲೂಕು, ಬೆಳಗಾವಿ
ಸಂಜಯ ಪಾಟೀಲ ಹೇಳಿಕೆಗೆ ಆಕ್ರೋಶ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮೂಡಲಗಿ: ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷೀ ಹೆಬ್ಬಾಳಕರ ವಿರುದ್ಧ ಹೇಳಿದ ವಿವಾದ್ಮಾತಕ ಹೇಳಿಕೆ ಖಂಡಿಸಿ ಅವರ ಪ್ರತಿಕೃತಿ ದಹಿಸಿ ಕೂಡಲೆ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾನುವಾರ ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಕಾರ್ಯಕರ್ತರು ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡ …
Read More »
inmudalgi
ಅಕ್ಟೋಬರ್ 3, 2021 Recent Posts, ತಾಲ್ಲೂಕು, ಬೆಳಗಾವಿ
ಅ.5 ರಂದು ಗೋಕಾಕ-ಮೂಡಲಗಿ ತಾಲೂಕಿನಾದ್ಯಂತ ಮತ್ತೊಮ್ಮೆ ಕೋವಿಡ್ ಲಸಿಕಾ ಕಾರ್ಯಕ್ರಮ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ತಡೆಗಟ್ಟಲಿಕ್ಕೆ ಬರುವ ಮಂಗಳವಾರದಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಮತ್ತೊಮ್ಮೆ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದನ್ನು ಯಶಸ್ವಿಯಾಗಿ ಜಾರಿಗೊಳಿಸುವಂತೆ ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾನುವಾರ ಸಂಜೆ ಮಾಧ್ಯಮಗಳಿಗೆ ಈ ಹೇಳಿಕೆ ನೀಡಿರುವ ಅವರು, …
Read More »