inmudalgi
ಏಪ್ರಿಲ್ 30, 2021 Recent Posts, ತಾಲ್ಲೂಕು, ಬೆಳಗಾವಿ
ಕುರುಹಿನಶೆಟ್ಟಿ ಸೊಸಾಯಿಟಿಗೆ 2.72 ಕೋಟಿ ಲಾಭ. ಮೂಡಲಗಿ: ಇಲ್ಲಿಯ ಪ್ರತಿಷ್ಟಿತ ಕುರಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿಯು ಪ್ರಸಕ್ತ ಸಾಲಿನಲ್ಲಿ 31-03-2021 ಕ್ಕೆ ರೂ 2.72 ಕೋಟಿ ರೂ ನಿವ್ಹಳ ಲಾಭ ಗಳಿಸಿದ್ದು ಪ್ರಗತಿಪಥದತ್ತ ಮುನ್ನುಗ್ಗುತ್ತಿದೆ. ಸಂಸ್ಥೆಯು 1995 ರಲ್ಲಿ ಸ್ಥಾಪನೆಯಾಗಿ ಪ್ರಧಾನಕಛೇರಿ ಹಾಗೂ 9 ಶಾಖೆಗಳನ್ನು ಹೊಂದಿದ್ದು ಪ್ರಧಾನಕಛೇರಿ ಹಾಗೂ ಮಹಾಲಿಂಗಪೂರ ಶಾಖೆಯು ಸ್ವಂತ ಭವ್ಯವಾದ ಕಟ್ಟಡಗಳನ್ನು ಹೊಂದಿರುತ್ತದೆ. ದಿನಾಂಕ 31-3-2021 ಕ್ಕೆ ಸಂಸ್ಥೆಯು ಶೇರು ಬಂಡವಾಳ …
Read More »
inmudalgi
ಏಪ್ರಿಲ್ 30, 2021 Recent Posts, ತಾಲ್ಲೂಕು, ಬೆಳಗಾವಿ
ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ : ಎಸಿ ಬಗಲಿ ಮಲ್ಲಾಪೂರ ಪಿಜಿ, ಮೂಡಲಗಿ ಕೋವಿಡ್ ಕೇರ್ ಸೆಂಟರ್ ಜಿಲ್ಲೆಗೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಪ್ರಶಂಸೆ – ಬೈಲಹೊಂಗಲ ಉಪವಿಭಾಗಾಧಿಕಾರಿ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ …
Read More »
inmudalgi
ಏಪ್ರಿಲ್ 29, 2021 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಗೆ ರೂ 60 ಲಕ್ಷ ಲಾಭ – ಸಂಸದ ಈರಣ್ಣ ಕಡಾಡಿ ಮೂಡಲಗಿ : ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ, ಇದರ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ 60 ಲಕ್ಷ ಲಾಭಗಳಿಸಿ ಸಹಕಾರಿಯು ಪ್ರಗತಿಯಲ್ಲಿ ಸಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಏ-29 ರಂದು ಸಹಕಾರಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಡಾಡಿ ಅವರು …
Read More »
inmudalgi
ಏಪ್ರಿಲ್ 28, 2021 Recent Posts, ತಾಲ್ಲೂಕು, ಬೆಳಗಾವಿ
ರಾಜ್ಯದಲ್ಲಿ ಬುಧವಾರ 39,047 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 229 ಜನರು ಕಳೆದ 24 ಗಂಟೆಯಲ್ಲಿ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು ತಗುಲಿದ್ದು, ಬೆಳಗಾವಿ ನಗರದಲ್ಲೇ 291 ಜನರಿಗೆ ಕೊರೋನಾ ದೃಢಪಟ್ಟಿದೆ. ಅಥಣಿ 4, ಬೈಲಹೊಂಗಲ 15, ಚಿಕ್ಕೋಡಿ 2, ಗೋಕಾಕ 9, ಹುಕ್ಕೋೇರಿ 2, ಖಾನಾಪುರ 4, ರಾಮದುರ್ಗ 3, ರಾಯಬಾಗ 4, ಸವದತ್ತಿ 23, ಇತರೆ 3 ಜನರಿಗೆ ಸೋಂಕು ಪತ್ತೆಯಾಗಿದೆ.
Read More »
inmudalgi
ಏಪ್ರಿಲ್ 28, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಕೋವಿಡ್-19 ಎರಡನೇಯ ಅಲೆ ವ್ಯಾಪಕವಾಗಿ ಹರಡುತ್ತಿದೆ. 24 ಗಂಟೆಗಳು ಸತತವಾಗಿ ಆಕ್ಸಿಜೇನ್ ಪೂರೈಕೆಯಾಗುವಂತೆ ಸ್ಥಳೀಯವಾಗಿ ಸೋಂಕಿತರಿಗೆ ಪುನರಾರಂಭಿಸಲಾಗಿದೆ. ಮೂಡಲಗಿ ಹಾಗೂ ಸುತ್ತಮುತ್ತಲಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚಿಸಿದರು. ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುನರಾರಂಭಿಸಿರುವ ಕೋವಿಡ್ ಕಾಳಜಿ ಕೇಂದ್ರದಲ್ಲಿ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿ ಮುಖಾಂತರ ಮಾತನಾಡಿದರು. ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾರಂಭಿಸಿರುವ …
Read More »
inmudalgi
ಏಪ್ರಿಲ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ ಮಾದರಿ …
Read More »
inmudalgi
ಏಪ್ರಿಲ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ಹನಮಂತ ದೇವರ ದೇವದಸ್ಥಾನದಲ್ಲಿ ಮಂಗಳವಾರ ಸರಳವಾಗಿ ಆಚರಿಸಿದ ಹನುಮ ಜಯಂತಿಯ ಅಂಗವಾಗಿ ವಿಶೇಷವಾಗಿ ಅಲಂಕರಿಸಿದ್ದರು. ಕಲ್ಲೋಳಿ: ಸರಳವಾಗಿ ಹನುಮ ಜಯಂತಿ ಆಚರಣೆ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಸಿದ್ಧ ಹನಮಂತ ದೇವರ ದೇವಸ್ಥಾನದಲ್ಲಿ ಮಂಗಳವಾರ ಕೊವಿಡ್ ಎರಡನೇ ಅಲೆಯ ಅತಂಕದ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಹನುಮ ಜಯಂತಿಯನ್ನು ಆಚರಿಸಿದರು. ಬೆಳಿಗ್ಗೆ ಹನಮಂತ ದೇವರ ಸನ್ನಿಧಿಗೆ ಅಭಿಷೇಕ, ವಿಶೇಷ ಪೂಜೆಯನ್ನು ಸಲ್ಲಿಸಿ, ವಿಶೇಷ ಅಲಂಕಾರದೊಂದಿಗೆ ಪೂಜೆಯನ್ನು ಮಾಡಿದರು. ಸಂಪ್ರದಾಯದಂತೆ …
Read More »
inmudalgi
ಏಪ್ರಿಲ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಎಸ್.ಬಿ.ಸಿದ್ನಾಳ ನಿಧನ : ಲಖನ ಸವಸುದ್ದಿ ಸಂತಾಪ ಸೂಚನೆ ಮೂಡಲಗಿ : ಸತತ ನಾಲ್ಕು ಬಾರಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸಂಸದರಾಗಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೇಸ್ನ ರಾಜಕೀಯ ಹಿರಿಯ ಜೀವ ಎಸ್.ವಿ.ಸಿದ್ನಾಳ ಅವರು ಮಂಗಳವಾರದಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಖನ ಸವಸುದ್ದಿ ಸಂತಾಪ ಸೂಚಿಸಿದ್ದಾರೆ. ಅವರ ನಿಧನದಿಂದ ಜಿಲ್ಲೆಯಲ್ಲಿ ಒಳ್ಳೆಯ ರಾಜಕೀಯ ನಾಯಕನ್ನು ಕಳೆದುಕೊಂಡಿದು ನಮ್ಮಲ್ಲರಿಗೂ ನೋವು ಉಂಟು ಮಾಡಿದೆ. ಅವರ ಕುಟುಂಬ …
Read More »
inmudalgi
ಏಪ್ರಿಲ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ದನಕರುಗಳಿಗೆ ಅಗತ್ಯ ಬೇಕಾಗುವ ಮೇವನ್ನು ಪೂರೈಸಿಕೊಂಡು ಉತ್ಪಾದನೆಯ ಜೊತೆ ಆರ್ಥಿಕವಾಗಿ ಸಬಲರಾಗಬೇಕು. ಕೆ.ಎಮ್.ಎಫ್ದಿಂದ ಕೊಡಲ್ಪಡುವ ಬೀಜಗಳು ಸುಧಾರಿತವಾದ್ದು, ಕೃಷಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಪ್ಪ ಪಾಟೀಲ ಹೇಳಿದರು. ಅವರು ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಎನ್.ಎಸ್.ಎಫ್ ಅತಿಥಿ ಕಛೇರಿಯಲ್ಲಿ ಜರುಗಿದ ಕೆ.ಮ್.ಎಫ್ ದಿಂದ ಹಾಲು ಉತ್ಪಾದಕ ಸಹಕಾರಿ ಸಂಘಗಳ ಮೂಲಕ ಹಾಲು ಪೂರೈಸುತ್ತಿರುವ ರೈತರಿಗೆ ಉಚಿತ ಮೇವಿನ ಬೀಜಗಳ ವಿತರಣಾ ಕಾರ್ಯಕ್ರಮದಲ್ಲಿ …
Read More »
inmudalgi
ಏಪ್ರಿಲ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಕೋಮು ಸೌಹಾರ್ದತೆಗೆ ಮಾದರಿಯಾದ ಮೂಡಲಗಿ ಹಿಂದು ಶವಗಳಿಗೆ ಮುಸ್ಲಿಂ ಯುವಕರಿಂದ ಶವ ಸಂಸ್ಕಾರ ಮೂಡಲಗಿ ಪಟ್ಟಣದ ಮಣ್ಣಿನಲ್ಲಿ ಮೊದಲಿನಿಂದಲೂ ವಿಶೇಷತೆ ಪ್ರಾಮುಖ್ಯತೆಗೆ ಹೆಸರುವಾಸಿಯಾಗಿದ್ದು ಅದರಲ್ಲೂ ಸೌಹಾರ್ಧತೆಗೆ ಮಾದರಿ ಪಟ್ಟಣವಾಗಿ ಪ್ರಖ್ಯಾತಿ ಪಡೆದಿದೆ ಎಂದರೆ ತಪ್ಪೇನಿಲ್ಲ. ದಿನದಿಂದ ದಿನಕ್ಕೆ ಎರಡನೇ ಅಲೆಯ ಕೊರೋನಾ ಪ್ರಕರಣಗಳ ಹೆಚ್ಚಳ ಮತ್ತು ಸಾವುಗಳಿಂದ ಜನತೆ ತಲ್ಲನಗೊಂಡಿರುವ ಇಂತಹ ಸಮಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವ ಸಂಸ್ಕಾರಕ್ಕೆ ಸ್ವತ:ಕುಟುಂಬಸ್ಥರು,ಸಂಬಂದಿಕರು,ಬಂಧು,ಮಿತ್ರರು ಹಿಂಜರಿಯುತ್ತಿರುವ ಮಾನವೀಯತೆ ಮರೆಯುತ್ತಿರುವ ಇಂತಹ ಸಮಯದಲ್ಲಿ …
Read More »