inmudalgi
ಫೆಬ್ರವರಿ 15, 2021 Recent Posts, ತಾಲ್ಲೂಕು, ಬೆಳಗಾವಿ
ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ, ಬಡಿಗವಾಡ ಸಾರ್ವಜನಿಕರಿಗೆ ಮನೆ ಮನೆಗೆ ಕುಡಿಯುವ ನೀರಿನ ನಳಗಳ ವ್ಯವಸ್ಥೆ ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ …
Read More »
inmudalgi
ಫೆಬ್ರವರಿ 14, 2021 Recent Posts, ತಾಲ್ಲೂಕು, ಬೆಳಗಾವಿ
‘ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಾರಕಿಹೊಳಿ ಸಹೋದರರು ಮನಸ್ಸು ಮಾಡಬೇಕು’ ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯ ಮೂಡಲಗಿ: ‘ಜಾರಕಿಹೊಳಿ ಸಹೋದರರು ಮನಸ್ಸು ಮಾಡಿದರೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಜಂಟಿಯಲ್ಲಿ ಕಂಡಿತ ಯಶಸ್ಸುವಾಗುತ್ತದೆ’ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ ಅಭಿಪ್ರಾಯಪಟ್ಟರು. ಮೂಡಲಗಿಯಲ್ಲಿ ಶನಿವಾರ ಜರುಗಿದ ತಾಲ್ಲೂಕಿನ ಪ್ರಥಮ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಸಾಹಿತಿ ಮತ್ತು ಕಲಾವಿದರನ್ನು ಬೆಳೆಸಿದ …
Read More »
inmudalgi
ಫೆಬ್ರವರಿ 14, 2021 Recent Posts, ತಾಲ್ಲೂಕು, ಬೆಳಗಾವಿ
ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೂತನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್ಎಸ್ಎಫ್ …
Read More »
inmudalgi
ಫೆಬ್ರವರಿ 14, 2021 Recent Posts, ತಾಲ್ಲೂಕು, ಬೆಳಗಾವಿ
ಶೈಕ್ಷಣಿಕ ಅಭಿವೃದ್ದಿಯಿಂದ ಗ್ರಾಮಾಭಿವೃದ್ಧಿ ಸಾದ್ಯ ಮೂಡಲಗಿ: ನಾವೆಲ್ಲರೂ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡುವದರಿಂದ ಪ್ರತಿಯೊಬ್ಬರ ಏಳಿಗೆಯ ಜೊತೆಗೆ ಗ್ರಾಮಾಭಿವೃದ್ದಿಯೂ ಸಾದ್ಯ ಎಂದು ತುಕ್ಕಾನಟ್ಟಿ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಎ.ವ್ಹಿ.ಗಿರೆಣ್ಣವರ ಹೇಳಿದರು. ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಕ್ಕಾನಟ್ಟಿ ನೂತನ ಗ್ರಾಮ ಪಂಚಾಯತಿ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಮದ್ಯಮವರ್ಗದ ಹಾಗೂ ಕೆಳವರ್ಗದ ಮಕ್ಕಳು ನಮ್ಮ ಸರಕಾರಿ ಶಾಲೆಯಲ್ಲಿ. ಕಲಿಯುತ್ತಿರುವದರಿಂದ, ಸರಕಾರದ ಸೌಲಭ್ಯಗಳ ಜೊತೆಗೆ ಗ್ರಮ …
Read More »
inmudalgi
ಫೆಬ್ರವರಿ 14, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: “ದೇಶ ಕಂಡ ಮಹಾನ್ ವ್ಯಕ್ತಿತ್ವದ ಅಂಬೇಡ್ಕರ್ ಅವರ ಬದುಕು ಬರಹಗಳನ್ನು ನಾವೆಲ್ಲಾ ನಿಜವಾಗಿ ಓದಿ ಅರ್ಥೈಸಿಕೊಳ್ಳಬೇಕಿದೆ ಈ ನಿಟ್ಟಿನಲ್ಲಿ ನಡೆದ ಅಂಬೇಡ್ಕರ್ ಓದು ಕಾರ್ಯಕ್ರಮ ಅರ್ಥಪೂರ್ಣವಾಗಿದೆ” ಎಂದು ಬೆಳಗಾವಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹೇಳಿದರು. ಅವರು ತಾಲೂಕಿನ ವಡೆರಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಬೆಳಗಾವಿಯ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ರ ಆಶ್ರಯದಲ್ಲಿ ನಡೆದ ಡಾ.ಬಿ.ಆರ್. …
Read More »
inmudalgi
ಫೆಬ್ರವರಿ 13, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಮನುಷ್ಯನು ಪಂಚಯಿಂದ್ರಿಗಳನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಂಡು ಧೃಢ ನಿರ್ಧಾರದ ಮನಸ್ಸು ಮಾಡಿದರೆ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಹಾಮಾರಿ ಕರೊನಾಗೆ ಭಾರತ ದೇಶ ಲಸಿಕೆ ತಯಾರಿಸಿ ವಿಶ್ವಕ್ಕೆ ನೀಡುತ್ತಿರುವುದು ದೇಶದ ಹೆಮ್ಮೆಯ ಸಂಗತಿಯಾಗಿದೆ ಎಂದು ಖ್ಯಾತ ವಾಗ್ಮಿ, ಚಿಂತಕ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆ ಮತ್ತು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಯುವ ಬ್ರಿಗೇಡ್ …
Read More »
inmudalgi
ಫೆಬ್ರವರಿ 13, 2021 Recent Posts, ತಾಲ್ಲೂಕು, ಬೆಳಗಾವಿ
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಲೂ ಸಾಧ್ಯ- ದ್ಯಾಮಣ್ಣ ದೊಡ್ಮನಿ ಬನವಾಸಿ: ಮನುಷ್ಯನಿಗೆ ದೈಹಿಕ ಸಾರ್ಮಥ್ರ್ಯವನ್ನು ನೀಡುವ ಅಪೂರ್ವ ಶಕ್ತಿಯು ಕ್ರೀಡೆಯಲ್ಲಿದೆ ಎಂದು ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಹೇಳಿದರು. ಅವರು ಬದನಗೋಡ ಪಂಚಾಯಿತಿಯ ರಂಗಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕ್ರಿಕೆಟ್ ಟೂರ್ನಮೆಂಟ್ಗೆ ಚಾಲನೆ ನೀಡಿ ಮಾತನಾಡುತ್ತ, ಪ್ರತಿಯೊಬ್ಬರು ಕ್ರೀಡೆಯನ್ನು ಪ್ರೋತ್ಸಹಿಸಬೇಕು. ಕ್ರೀಡೆಗಳು ಸಂಬಂಧಗಳನ್ನು ಉತ್ತಮಪಡಿಸಿಕೊಳ್ಳಲು ಅನುಕೂಲವಾಗಿದೆ. ಇಂದಿನ ವೇಗದ ವ್ಯವಸ್ಥೆಯಲ್ಲಿ ಮನುಷ್ಯನ ದೇಹ ಮತ್ತು ಮನಸ್ಸಿನ ಮೇಲೆ ಸಾಕಷ್ಟು ಒತ್ತಡ …
Read More »
inmudalgi
ಫೆಬ್ರವರಿ 13, 2021 Recent Posts, ತಾಲ್ಲೂಕು, ಬೆಳಗಾವಿ
ಎಂದೆಂದಿಗೂ ಬೆಳಗಾವಿ ನಮ್ಮದೇ. ಗಡಿವಿಚಾರದಲ್ಲಿ ಮಹಾಜನ ವರದಿಯೇ ಅಂತಿಮ -ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ (ಕವಿ ಪಾಶ್ರ್ವಪಂಡಿತ ಪ್ರಧಾನ ವೇದಿಕೆ) ಮೂಡಲಗಿ: ಯಾರು ಎಷ್ಟೇ ಹೇಳಿಕೊಳ್ಳಲಿ.ಮಾತನಾಡಲಿ. ಬೆಳಗಾವಿ ಎಂದೆಂದಿಗೂ ನಮ್ಮದೇ. ಈ ವಿಚಾರದಲ್ಲಿ ನಾವು ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಇಲ್ಲಿಯ …
Read More »
inmudalgi
ಫೆಬ್ರವರಿ 13, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೋವಿಡ್-19 ನ ಕಾಲಘಟ್ಟದಲ್ಲಿ ಭಾರತೀಯ ವೈದ್ಯರ ಕಾರ್ಯಕ್ಷಮತೆ ಜಗತ್ತಿಗೆ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಕಾರ್ಯಸೂಚಿಗಳ ಅನ್ವಯ ನಮ್ಮ ದೇಶದ ಜನರ ಸೇವೆಗಾಗಿ ಅವಿರತವಾಗಿ ಶ್ರಮಿಸಿ ಯೋಧರಂತೆ ನಮ್ಮೆಲ್ಲರನ್ನು ರಕ್ಷಿಸಿ ವೈದ್ಯೋನಾರಾಯಣ ಹರಿ ಎಂಬ ಯುಕ್ತಿಯನ್ನು ನಮ್ಮ ದೇಶದ ವೈಧ್ಯರು ನಿಜಗೊಳಿಸಿದ್ದಾರೆ ಎಂದು ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಶನಿವಾರ (ಫೆ-13) ರಂದು ಸೇವಾ ಸಾಮಾಜಿಕ, ಆರ್ಥಿಕ ಮತ್ತು ಕಲ್ಯಾಣ …
Read More »
inmudalgi
ಫೆಬ್ರವರಿ 13, 2021 Recent Posts, ಬೆಳಗಾವಿ
ಮೂಡಲಗಿ:ದೇಶದ ಪ್ರತಿಷ್ಠಿತ ರಾಜ್ಯಸಭೆಯಲ್ಲಿ ನಡೆದ ಸಂಸದೀಯ ಅನುಭವಗಳನ್ನು ವಿಶ್ವ ಮಾನ್ಯ ನಾಯಕ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಂಚಿಕೊಂಡದ್ದು ನೂತನ ರಾಜ್ಯಸಭಾ ಸದಸ್ಯರಾದ ನಮ್ಮೆಲ್ಲರಿಗೂ ಅವಿಸ್ಮರಣೀಯ ಘಳಿಗೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ದೆಹಲಿಯ ಪಾರ್ಲಿಮೆಂಟ್ ಹೌಸ್ ಪ್ರಧಾನಿ ಕಛೇರಿಯಲ್ಲಿ ಶುಕ್ರವಾರ ಫೆ.12 ರಂದು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಸಂಸದರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯದ 25 ಜಿಲ್ಲೆಗಳಿಗೆ …
Read More »