inmudalgi
ಜನವರಿ 22, 2021 Recent Posts, ತಾಲ್ಲೂಕು, ಬೆಳಗಾವಿ
15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಸಬಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ …
Read More »
inmudalgi
ಜನವರಿ 21, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಬದಾಮಿ ತಾಲೂಕಿನ ಕೆರಕಲಮಟ್ಟಿ ಕೇದರನಾಥ ಶುಗರ್ಸ್ ಲಿ. ಆವರಣದಲ್ಲಿ ಜ.17 ರಂದು ನಡೆದ ನೂತನ ಕಾರ್ಖಾನೆ ಉದ್ಘಾಟನೆ ಸಮಾರಂಭದಲ್ಲಿ ಮುಧೋಳ ಎಂ.ಆರ್.ಎನ್ (ನಿರಾಣಿ) ಉದ್ಯಮ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಕೃಷಿ ವಿಕಾಸ ಹಿತದೃಷ್ಠಿಯಿಂದ ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ರೈತರಿಗೆ ನೀಡುವ ರೈತ ಬಂಧು ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಗತಿಪರ ರೈತ ಅಶೋಕ ಪರಮಾನಂದ ಕೋಣಿ ಅವರಿಗೆ ನೀಡಿ ಗೌರವಿಲಾಗಿದೆ. ಸಚಿವ ಮುರುಗೇಶ ನಿರಾಣಿ, ಎಂಎಲ್ಸಿ …
Read More »
inmudalgi
ಜನವರಿ 21, 2021 Recent Posts, ತಾಲ್ಲೂಕು, ಬೆಳಗಾವಿ
ಎಪಿಎಂಸಿ ಆವರಣದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಭೂಮಿ ಪೂಜೆ ಮೂಡಲಗಿ: ಇಲ್ಲಿಯ ಕೃಷಿ ಉತ್ಪನ ಮಾರುಕಟ್ಟೆ ಆವರಣದಲ್ಲಿ 2020-21ನೇ ಸಾಲಿನ ವಾರ್ಷಿಕ ಕ್ರೀಯಾ ಯೋಜನೆಯಲ್ಲಿ ಸೂಮಾರು 40 ಲಕ್ಷ ರೂಗಳ ಅನುದಾನದಲ್ಲಿ ಅಥಿತಿ ಗೃಹ ನಿರ್ಮಾಣಕ್ಕೆ ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಮತ್ತು ಎಪಿಎಂಸಿ ಉಪಾಧ್ಯಕ್ಷ ಕೆ.ಕೆ.ಸಂಕ್ರೆಪ್ಪಗೋಳ ಭೂಮಿ ಪೂಜೆ ನೆರೆವೇರಿಸಿದರು. ಭೂಮಿ ಪೂಜೆ ನೆರವೇರಿಸಿದ ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಮಾತನಾಡಿ, ಕೆಎಂಎಫ್ ಅಧ್ಯಕ್ಷ ಮತ್ತು …
Read More »
inmudalgi
ಜನವರಿ 21, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲ್ಲೂಕು ಅಸೋಸಿಯೇಶನ್ದ ನೂತನ ಪದಾಧಿಕಾರಿಗಳನ್ನು ಕಲಾವಿದರು ಸನ್ಮಾನಿಸಿದರು ಪ್ರೆಸ್ ಅಸೋಸಿಯೇಶನ್ ಪದಾಧಿಕಾರಿಗಳ ಸನ್ಮಾನ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು’ ಮೂಡಲಗಿ: ‘ಕಲಾವಿದರು ಆರ್ಥಿಕವಾಗಿ ಬಡವರಾಗಿದ್ದರೂ ಸಹ ಅವರು ನಂಬಿರುವ ಕಲೆ ಮತ್ತು ಹೃದಯವು ಶ್ರೀಮಂತವಾಗಿರುತ್ತದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮೂಡಲಗಿ ತಾಲ್ಲೂಕು ಪ್ರೆಸ್ ಅಸೋಸಿಯೇಶನ್ಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಸ್ಥಳೀಯ ಕಲಾವಿದರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದ ಅವರು ಕಲೆ, …
Read More »
inmudalgi
ಜನವರಿ 20, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಈಗ ಗಣನೀಯ ಪ್ರಮಾಣದಲ್ಲಿ …
Read More »
inmudalgi
ಜನವರಿ 20, 2021 Recent Posts, ತಾಲ್ಲೂಕು, ಬೆಳಗಾವಿ
ಪಾಲಕರು ಕರೊನಾ ಭಯದಿಂದ ಹೊರಬನ್ನಿ-ಕಡಾಡಿ ಮೂಡಲಗಿ: ಕರೊನಾ ಭಯದಿಂದ ಹೊರಬಂದು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವ ಮೂಲಕ ಶಿಕ್ಷಣ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಸಮೀಪದ ನಾಗನೂರ ಪಟ್ಟಣದ ಶತಮಾನ ಕಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಜ.18 ಭೇಟಿ ನೀಡಿ ವಿದ್ಯಾಗಮ ಕಾರ್ಯಕ್ರಮ ವೀಕ್ಷಣೆ, ಮಕ್ಕಳೊಂದಿಗೆ ಸಂವಾದ ಹಾಗೂ ವಿದ್ಯಾರ್ಥಿಗಳಿಗೆ …
Read More »
inmudalgi
ಜನವರಿ 19, 2021 Recent Posts, ತಾಲ್ಲೂಕು, ಬೆಳಗಾವಿ
ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿಯಲ್ಲಿ ಶ್ರೀರಾಮ ಮಂದಿರದ ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ …
Read More »
inmudalgi
ಜನವರಿ 19, 2021 Recent Posts, ತಾಲ್ಲೂಕು, ಬೆಳಗಾವಿ
ಇದು ಎಂಥಾ ಸ್ನೇಹಾ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿಂಗಯ್ಯ ರಾಮಯ್ಯ ಮಠದ ಅವರ ಮನೆಯಲ್ಲಿ ಸಾಕಿದ ನಾಯಿ ಮತ್ತು ಬೆಕ್ಕಿನ ಮರಿ ಒಟ್ಟೂಟ್ಟಿಗೆ ಆಹಾರ ತಿನ್ನುವದು, ಮಲಗಿಕೊಳ್ಳುವದು, ಆಟವಾಡುವ ದೃಶ್ಯವು ನೋಡುಗರಿಗೆ ಇದು ಎಂಥಾ ಸ್ನೇಹಾ…ಅಂಬುವುದಕ್ಕೆ ಈ ಪ್ರಾಣಿಗಳೆರಡು ಸ್ನೇಹ ಜೀವಿಗಳ ಲೋಕಕ್ಕೆ ಮಾದರಿಯಾಗಿವೆ.
Read More »
inmudalgi
ಜನವರಿ 19, 2021 Recent Posts
ಬನವಾಸಿ: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪೋಷಣ ಅಭಿಯಾನ ಮಾಸಚರಣೆ ಹಮ್ಮಿಕೊಂಡಿದೆ. ಅಪೌಷ್ಠಿಕತೆ ನಿವಾರಣೆ ಮಾಡಲು ನಾವೆಲ್ಲರೂ ಕೈಜೋಡಿಸಬೇಕಾಗಿದೆ ಎಂದು ಅಂಗನವಾಡಿ ಮೇಲ್ವಿಚಾರಕಿ ನಿರ್ಮಲ ಸಂತಿಮಠ ಹೇಳಿದರು. ಅವರು ಪಟ್ಟಣದ ಕೇಂದ್ರ ಸಂಖ್ಯೆ 2ರ ಅಂಗನವಾಡಿಯಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, …
Read More »
inmudalgi
ಜನವರಿ 18, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಶ್ರೀರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾನ ಜಾತೀಯ ಎಲ್ಲೆ ಮೀರಿ ಹಿಂದೂ ಸಮಾಜವನ್ನು ಒಂದುಗೂಡಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಸೋಮವಾರ ಜ.18 ರಂದು ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿ, ಶ್ರೀರಾಮ ಮಂದಿರ ಟ್ರಸ್ಟ್ ಕಮೀಟಿ ಕಲ್ಲೋಳಿಯಿಂದ ನಿಧಿ ಸಮರ್ಪಣೆ ಪಡೆಯುವ ಮೂಲಕ ಮಹಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇಂದು ಇಡಿ ದೇಶವೇ ಭಾವಪರವಶಕ್ಕೆ ಒಳಗಾಗಿದೆ ಮತ್ತು ಪ್ರತಿಯೊಬ್ಬರು ಭವ್ಯ …
Read More »