Breaking News

Classic Layout

ಗಟ್ಟಿ ಬಸವಣ್ಣ ಕುಡಿಯುವ ನೀರು ಮತ್ತು ಜಲವಿದ್ಯುತ್ ಯೋಜನೆ ಅನುಷ್ಠಾನ ಕುರಿತು ಚರ್ಚೆ

ಬೆಳಗಾವಿ: ಗೋಕಾಕ ನಗರ ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು ಗೋಕಾಕ ನಗರದ ಬಳಿ ಗಟ್ಟಿ ಬಸವಣ್ಣ ಜಲಾಶಯ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ. ಆದಷ್ಟು ಬೇಗನೇ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾದಿಂದ ಎಲ್ಲ ರೀತಿಯ ಅನುಮತಿ ಮತ್ತು ನೆರವು ನೀಡಲಾಗುವುದು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ …

Read More »

ಲಾಕ್​ಡೌನ್ 4.0; ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು

ಬೆಂಗಳೂರು: ನಿನ್ನೆ ತಾನೆ ಲಾಕ್​ಡೌನ್ 4.0ಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಅದಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಕ್ಯಾಬಿನೇಟ್​ ಸಚಿವರೊಂದಿಗೆ ಚರ್ಚೆ ನಡೆಸಿದ ಸಿಎಂ ಬಿ.ಎಸ್​ ಯಡಿಯೂರಪ್ಪ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಸಿಎಂ ತೆಗೆದುಕೊಂಡು ನಿರ್ಧಾರಗಳು ಹೀಗಿವೆ: ಕಂಟೈನ್​ಮೆಂಟ್​​ ಝೋನ್​ನಲ್ಲಿ ಬಿಗಿ ಭದ್ರತೆ. ಕಾನೂನು ಮೀರಿದರೆ ಕ್ರಿಮಿನಲ್​ ಮೊಕದ್ದಮೆ ಜನರ ಓಡಾಟಕ್ಕಾಗಿ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿದಂತೆ ಎಲ್ಲ ಬಸ್​​ಗಳ ಓಡಾಟಕ್ಕೆ ಅನುಮತಿ ಒಂದು ಬಸ್​ನಲ್ಲಿ ಕೇವಲ …

Read More »

ಕರ್ನಾಟಕದಲ್ಲಿ ಇವತ್ತು ಒಂದೇ ದಿನ 84ಕೇಸು

ಬೆಳಗಾವಿ:ಸೋಮವಾರದ ಕೊರೋನಾ ಬುಲೆಟಿನ್ ಬಿಡುಗಡೆಗೊಂಡಿದೆ. ಬೆಳಗಾವಿಯಲ್ಲಿ ಇಂದು ಓರ್ವ ಮಹಿಳೆ ಹಾಗೂ ಪುರುಷನಿಗೆ ಕೊರೋನಾ  ಕಂಡು ಬಂದಿದೆ.ಒಟ್ಟು ಇಬ್ಬರಿಗೆ ಕೊರೋನಾ ಇಂದು ಕಂಡು ಬಂದಿದೆ. ಕೊರೋನ ಪಾಸಿಟಿವ್ ಕೇಸುಗಳು ಇಂದು 1231 ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಇವತ್ತು ಒಂದೇ ದಿನ 84ಕೇಸು ಬಂದಿದೆ. ಚಿಕ್ಕ ಮಕ್ಕಳಲ್ಲಿ ಕೊರೊನಾ ಸೋಂಕು ಹರಡುತ್ತಿದ್ದು, ಇಂದು 10 ವರ್ಷದ ಒಳಗಿನ 10 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಆತಂಕ ಹೆಚ್ಚಿಸಿದೆ

Read More »

ಕರ್ನಾಟಕದಲ್ಲಿ ಎರಡು ದಿನ ಯಥಾಸ್ಥಿತಿ ಲಾಕ್‍ಡೌನ್ ಮುಂದುವರಿಕೆ

ಕರ್ನಾಟಕದಲ್ಲಿ ಎರಡು ದಿನ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 19ರವರರೆಗೆ ರಾಜ್ಯದಲ್ಲಿ ಯಥಾ ಸ್ಥಿತಿ ಮುಂದುವರಿಯಲಿದೆ. ಮೇ 19ರವರೆಗೂ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿಲ್ಲಾಡಳಿತಗಳಿಗೆ ಆದೇಶ ಜಾರಿ ಮಾಡಿದ್ದಾರೆ. ರಾಜ್ಯದಲ್ಲಿ ಮೇ 2ರಂದು ಹೊರಡಿಸಿದ್ದ ಮಾರ್ಗಸೂಚಿಗಳೇ ಮುಂದುವರಿಯಲಿವೆ. ಅಂತರ್ ರಾಜ್ಯ, ಅಂತರ್ ಜಿಲ್ಲಾ ಸಂಚಾರ ನಿರ್ಬಂಧಗಳು ಮುಂದುವರಿಯಲಿವೆ. ಈ ಕುರಿತು ಪೊಲೀಸ್, ಜಿಲ್ಲಾಡಳಿತಕ್ಕೆ ನಿಯಮ …

Read More »

ಭಾರತ ಲಾಕ್‍ಡೌನ್ ಅವಧಿ ಮೇ 31ರವರೆಗೆ ವಿಸ್ತರಣೆ

ಭಾರತ ಲಾಕ್‍ಡೌನ್ ಅನ್ನು ಮೇ 18ರಿಂದ 31ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಹೌದು, ಭಾರತ ಲಾಕ್‍ಡೌನ್ ಮೂರನೇ ಅವಧಿ ಸೋಮವಾರ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್‍ಡೌನ್ ಅವಧಿ ವಿಸ್ತರಿಸಿದ್ದು, ಮೇ 31ರವರೆಗೂ ನಾಲ್ಕನೇ ಲಾಕ್‍ಡೌನ್ ಅವಧಿ ಮುಂದುವರಿಯಲಿದೆ. ಸದ್ಯ ದೇಶದಲ್ಲಿ 30 ನಗರಗಳನ್ನು ರೆಡ್ ಝೋನ್ ಎಂದು ಗುರುತಿಸಲಾಗಿದೆ. ಈ ನಗರಗಳನ್ನು ಕಂಪ್ಲೀಟ್ ಲಾಕ್‍ಡೌನ್ ಮಾಡಬೇಕೆಂಬ ಒತ್ತಾಯ ಕೇಳಿ …

Read More »

ಸಂಜೆ ಬುಲೆಟನಲ್ಲಿ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ

ಸಂಜೆ ಬುಲೆಟನಲ್ಲಿ ಉತ್ತರ ಕನ್ನಡದ ಓರ್ವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಮಂಡ್ಯ 22, ಕಲಬುರ್ಗಿ 10, ಧಾರವಾಡ 4, ಹಾಸನ 6, ಕೋಲಾರ 3, ದಕ್ಷಿಣ ಕನ್ನಡ 2, ಯಾದಗಿರಿ 3, ಉಡುಪಿ 1, ಶಿವಮೊಗ್ಗ 2, ವಿಜಯಪುರ ಒಂದು ಕೇಸ್​​ ಪತ್ತೆಯಾಗಿದೆ. ಒಟ್ಟು 54 ಕೇಸುಗಳ ಪೈಕಿ 36 ಪುರುಷರು, 18 ಮಹಿಳೆಯರು ಇದ್ದಾರೆ.

Read More »

ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ. ಮಂಡ್ಯ 22, ಕಲಬುರಗಿ 11, ಹಾಸನ 6, ಧಾರವಾಡ 4, ಯಾದಗಿರಿ 3, ದಕ್ಷಿಣ ಕನ್ನಡ 2, ಕೋಲಾರ 2, ವಿಜಯಪುರ 2, ಶಿವಮೊಗ್ಗ 1, ಉಡುಪಿ 1 ಪ್ರಕರಣ ದಾಖಲಾಗಿದೆ. ಇಂದು ಪತ್ತೆಯಾದ 54 ಪ್ರಕರಣದಲ್ಲಿ 40 ಜನರಿಗೆ ಮಹಾರಾಷ್ಟ್ರದ ನಂಟಿದೆ. ಅಲ್ಲದೇ 10 …

Read More »

ಬಡ ಕೂಲಿ ಕಾರ್ಮಿಕರ ನೇರವಿಗೆ ದಾಲ್ಮೀಯಾ ಸಿಮೆಂಟ ಕಾರ್ಖಾನೆ

ಬಡ ಕೂಲಿ ಕಾರ್ಮಿಕರ ನೇರವಿಗೆ ದಾಲ್ಮೀಯಾ ಸಿಮೆಂಟ ಕಾರ್ಖಾನೆ ಮೂಡಲಗಿ: ಲಾಕ್ ಡೌನ್‍ದಂತಹ ಸಂಕಷ್ಟದ ಕಾಲದಲ್ಲಿ ದಿನಗೂಲಿ ಕಾರ್ಮಿಕರುಕೂಲಿ ಕೆಲಸ ಇರದೆ ಸಂಕಷ್ಟದಲ್ಲಿರುವ ಅತೀ ಬಡ ಕೂಲಿ ಕಾರ್ಮಿಕರನ್ನು ಗುರುತಿಸಿ ಯಾದವಾಡ ದಾಲ್ಮೀಯಾ ಸಿಮೆಂಟ ಕಾರ್ಖಾನೆಯಿಂದ ದಿನ ನಿತ್ಯದ ಆಹಾರ ಧಾನ್ಯಗಳನ್ನು ಕಿಟ್‍ಗಳನ್ನು ಯಾದವಾಡದಲ್ಲಿ ವಿತರಿಸಿಲ್ಲಾಯಿತು. ದಾಲ್ಮೀಯಾ ಕಾರ್ಖಾನೆಯ ಕಾರ್ಯಕ್ರಮ ಸಂಯೋಜಕ ಚೇತನ ವಾಘಮೋರೆ ಮಾತನಾಡಿ, ಲಾಕ್ ಡೌನ್ ವೇಳೆಯಲ್ಲಿ ಸರಕಾರದ ನಿಯಮಗಳನ್ನು ಚಾಚುತಪ್ಪದೇ ಪಾಲಿಸಬೇಕು. ಮನೆಯಿಂದ ಯಾರು ಅನಾವಶ್ಯಕವಾಗಿ …

Read More »

ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆಯನ್ನು ನಡೆಸಿದ-ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೇ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಬೇಕೆಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ …

Read More »

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಆರಂಭ-ನದಾಫ್

ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಆರಂಭ-ನದಾಫ್ ಮೂಡಲಗಿ: ಕೃಷಿ ಇಲಾಖೆಯು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಹಾಯ ಧನದಲ್ಲಿ ಗೋಕಾಕ-ಮೂಡಲಗಿ ತಾಲೂಕಿನಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳನ್ನು ಸೂಕ್ತ ಪ್ರಮಾಣದಲ್ಲಿ ಸಂಗ್ರಹಿಸುವ ನಿಟ್ಟಿನಲ್ಲಿ ಕ್ರೀಯಾಶಿಲವಾಗಿವೆ. ಕೋರೊನಾ ವೈರಸ್ ಲಾಕ್ ಡೌನ ಹಿನ್ನೆಲೆಯಲ್ಲಿ ಒಂದು ಸ್ಥಳದಲ್ಲಿ ಅಧಿಕ ರೈತರು ಸೇರಬಾರದು ಎಂಬ ಉದ್ದೇಶದಿಂದ ರೈತರಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಬೀಜ ವಿತರಣಾ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಕೃಷಿ …

Read More »