inmudalgi
ಜುಲೈ 30, 2025 ಬೆಳಗಾವಿ, ರಾಜ್ಯ
ಮೂಡಲಗಿ: ಕೇರಳದ ಪವಿತ್ರ ಕ್ಷೇತ್ರ ಶಬರಿಮಲೆಯಲ್ಲಿ ಆಯೋಜಿಸಲಾದ ನೀರಪುತ್ರಿ ಮಹೋತ್ಸವದಲ್ಲಿ ರಾಜ್ಯದ ಬೆಳಗಾವಿ ಮತ್ತು ಬಾಗಲಕೋಟ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಗುರುಸ್ವಾಮಿಗಳು ಅತಿಥಿಗಳಾಗಿ ಬಾಗಿಯಾಗಿದರು. ಕಾರ್ಯಕ್ರಮದಲ್ಲಿ ಅತಿಥಿಗಲಾಗಿ ಭಾವಹಿಸಿದ್ದ ಭಾರತಿಯ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಜ್ಯ ಧರ್ಮ ಪ್ರಚಾರಕರಾದ ಬೆಳಗಾವಿಯ ಮಾರುತಿ ಕೋಳಿ ಅವರು ಶಬರಿಮಲೆಯಲ್ಲಿ ನೀರಪುತ್ರಿ ಮಹೋತ್ಸವ ಈ ವರ್ಷ ಬಹಳ ವೈಭವದಿಂದ, ಆಧ್ಯಾತ್ಮಿಕ ಉತ್ಕರ್ಷದಿಂದ ಹಾಗೂ ವಿವಿಧ ರಾಜ್ಯಗಳಿಂದ ಆಗಮಿಸಿದ ಭಕ್ತಮಂಡಳಿಯಿಂದ ಯಶಸ್ವಿಯಾಗಿ ನಡೆಯಿತು. ಯಾತ್ರೆಯು …
Read More »
inmudalgi
ಜುಲೈ 30, 2025 ಬೆಳಗಾವಿ, ರಾಜ್ಯ
ಗೋಕಾಕ: ಆರ್ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ೧.೨೦ ಕೋಟಿ ರೂಪಾಯಿ ವೆಚ್ಚದ ತಾಲ್ಲೂಕಿನ ಕೌಜಲಗಿ- ಹೊನಕುಪ್ಪಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಯಾದವಾಡ ಮುಖ್ಯ ರಸ್ತೆಯಿಂದ ಕುಲಗೋಡ ಹಣಮಂತ ದೇವಸ್ಥಾನ ಹೊಸಟ್ಟಿ ಕೂಡು ರಸ್ತೆಗೆ ೬೦ ಲಕ್ಷ ರೂಪಾಯಿ, ಮುನ್ಯಾಳ ಲಕ್ಷ್ಮೀದೇವಿ ಗುಡಿಯಿಂದ ರಂಗಾಪೂರ …
Read More »
inmudalgi
ಜುಲೈ 30, 2025 ಬೆಳಗಾವಿ, ರಾಜ್ಯ
ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್ಗೆ ಸ್ಪರ್ಧೆ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿಯೂ ನಾನು ಅಧ್ಯಕ್ಷ ಸ್ಥಾನ ಆಕಾಂಕ್ಷಿಯೂ ಅಲ್ಲ. ಮುಂದೆ ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಬುಧವಾರ ನಡೆದ ಬಿಡಿಸಿಸಿ ಬ್ಯಾಂಕ್ನ ಸಾಮಾನ್ಯ ಸಭೆಯ ನಂತರ ಸುದ್ದಿಗಾರರೊಂದಿಗೆ …
Read More »
inmudalgi
ಜುಲೈ 29, 2025 ಬೆಳಗಾವಿ, ರಾಜ್ಯ
inmudalgi
ಜುಲೈ 29, 2025 ಬೆಳಗಾವಿ, ರಾಜ್ಯ
ಕೌಜಲಗಿ: ಕೌಜಲಗಿ ಭಾಗದಲ್ಲಿ ಬಡ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದು, ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ೧೨ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ೩೦ ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಹೊಸ ಆಸ್ಪತ್ರೆಯನ್ನು ನೋಡುತ್ತಿದ್ದರೆ ದೂರದ ಬೆಳಗಾವಿ, ಬೆಂಗಳೂರು ಆಸ್ಪತ್ರೆಗಳನ್ನು …
Read More »
inmudalgi
ಜುಲೈ 29, 2025 ಬೆಳಗಾವಿ, ರಾಜ್ಯ
ಮೂಡಲಗಿ: ‘ಬಸವಣ್ಣನವರ ತತ್ವ, ವ್ಯಕ್ತತ್ವದಿಂದ ಪ್ರಭಾವಿತರಾದ ಮೋಳಿಗೆ ಮಾರಯ್ಯ ತಮ್ಮ ವಚನಗಳಲ್ಲಿ ಡಂಭಾಚಾರವನ್ನು ಕಟುವಾಗಿ ಟೀಕಿಸಿದ ಕಾಯಕನಿಷ್ಠ ಶರಣ ಎಂದು ಗುರುತಿಸಿಕೊಂಡಿದ್ದರು’ ಎಂದು ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 19ನೇ ಮಾಸಿಕ ಶಿವಾನುಭವ ಗೋಷ್ಠಿಲ್ಲಿ ಮೋಳಿಗೆ ಮಾರಯ್ಯ ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದ ಅವರು ಮಾರಯ್ಯನವರು ಅಂತರಂಗ, ಬಹಿರಂಗದ ಶುದ್ಧತೆಯೇ ಭಕ್ತಿಯ ನಿಜವಾದ ಮಾರ್ಗವೆಂದು ಪ್ರತಿಪಾದಿಸಿದ್ದರು ಎಂದರು. …
Read More »
inmudalgi
ಜುಲೈ 29, 2025 ಬೆಳಗಾವಿ, ರಾಜ್ಯ
ಮೂಡಲಗಿ: ‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯು ಮುಖ್ಯವಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ನರ್ಸರಿ ಶಾಲೆ ಉದ್ಘಾಟನೆ ಮತ್ತು ಪಾಲಕರ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ದೇಶದ ಭವಿಷ್ಯದ ರೂವಾರಿಗಳಾಗುವ ಮಕ್ಕಳನ್ನು ನಿರ್ಲಕ್ಷಿಸಬಾರದು ಎಂದರು. ಪ್ರಾಥಮಿಕ ಶಾಲಾ ಹಂತದಲ್ಲಿರುವ ಮಕ್ಕಳ ಮೇಲೆ ಹೆಚ್ಚು ಪ್ರೀತಿ ಇರಬೇಕು. ಬೆಳೆಯುತ್ತಾ …
Read More »
inmudalgi
ಜುಲೈ 28, 2025 ಬೆಳಗಾವಿ, ರಾಜ್ಯ
ಮೂಡಲಗಿ: ರಾಜ್ಯದಲ್ಲಿರುವ ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಒಂದರಂತೆ ಮಂಜೂರಾಗಿರುವ ದೇವರಾಜ ಅರಸು ವಸತಿ ಶಾಲೆಯು ನನ್ನ ಕ್ಷೇತ್ರಕ್ಕೆ ಬಂದಿರುವುದು ಅತೀವ ಸಂತಸವಾಗಿದೆ. ಇದರಿಂದ 14 ವಿವಿಧ ವಸತಿ ಶಾಲೆಗಳನ್ನು ಹೊಂದಿರುವ ಅವಿಭಜಿತ ಗೋಕಾಕ ತಾಲ್ಲೂಕು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿರುವುದು ಇತಿಹಾಸಕ್ಕೆ ಸಾಕ್ಷಿಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಶನಿವಾರದಂದು ಕಲ್ಲೊಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಿಂದುಳಿದ ವರ್ಗಗಳ …
Read More »
inmudalgi
ಜುಲೈ 27, 2025 ಬೆಳಗಾವಿ, ರಾಜ್ಯ
ಮೂಡಲಗಿ: ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಪಟ್ಟಣದ ಗುರ್ಲಾಪೂರ( ಕ್ರಾಸ್) ಬಳಿ ನೀರಾವರಿ ಇಲಾಖೆಯಿಂದ ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿ ಮಂದಿರ ನಿರ್ಮಾಣದಿಂದ ಗಣ್ಯರು, ಅಧಿಕಾರಿಗಳು …
Read More »
inmudalgi
ಜುಲೈ 27, 2025 Uncategorized
ಮೂಡಲಗಿ: ನಮ್ಮ ಭಾರತ ದೇಶವನ್ನು ಮತ್ತು ದೇಶದ ಗಡಿಯನ್ನು ರಕ್ಷಣೆ ಮಾಡುವ ಕಾಯಕದೊಂದಿಗೆ ತಮ್ಮ ಪ್ರಾಣವನ್ನು ಲೆಕ್ಕಸದೇ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಸೇವೆ ಅವಿಸ್ಮರಣಿಯವಾಗಿದ್ದು ಸೈನಿಕರ ಸೇವೆ ದೇಶಪ್ರೇಮ, ದೇಶಭಕ್ತಿ ನಮ್ಮೆಲ್ಲರಿಗೆ ಹೆಮ್ಮೆ ತರುವಂತಹ ಸಂಗತಿಯಾಗಿದೆ. ನಾವುಗಳು ಸೈನಿಕರಿಗೆ ಗೌರವ ಕೊಡುವುದರೊಂದಿಗೆ ಅವರ ತ್ಯಾಗ ಮತ್ತು ಬಲಿದಾನವನ್ನು ಪ್ರತಿನಿತ್ಯ ಸ್ಮರಿಸಿಕೊಳ್ಳುವುದು ಅಗತ್ಯವಿದ್ದು ದೇಶಕ್ಕಾಗಿ ವೀರಮರಣ ಹೊಂದಿದ ಸೈನಿಕರನ್ನು ಗೌರವಿಸೋಣ ಎಂದು ಮೂಡಲಗಿಯ ಆರ್ಡಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ …
Read More »