inmudalgi
ಜೂನ್ 26, 2025 ಬೆಳಗಾವಿ, ರಾಜ್ಯ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2025-26ನೇ ಸಾಲಿನ ಅಧ್ಯಕ್ರರಾಗಿ ವಿಶಾಲ ಶೀಲವಂತ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಗಿರೀಶ ಆಸಂಗಿ ಹಾಗೂ ಖಜಾಂಚಿಯಾಗಿ ಡಾ. ಪ್ರಶಾಂತ ಬಾಬಣ್ಣವರ ಅವರು ಅಯ್ಕೆಯಾಗಿರುವರು. ಪದಗ್ರಹಣ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2025-26 ಸಾಲಿನ ಪದಗ್ರಹಣ ಕಾರ್ಯಕ್ರಮವು ಜೂ.28ರಂದು ಸಂಜೆ 5 ಗಂಟೆಗೆ ಸ್ಥಳೀಯ ಎಸ್ಎಸ್ಆರ್ ಕಾಲೇಜದ ಕಲ್ಮೇಶ್ವರಬೋಧ ಸ್ವಾಮಿ ಸಭಾಭವನದಲ್ಲಿ ಜರುಗಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಫಸ್ಟ್ ಡಿಸ್ಟ್ರೀಕ್ಟ ಗವರ್ನರ್ ಬೆಳಗಾವಿಯ ರಾಜಶೇಖರ …
Read More »
inmudalgi
ಜೂನ್ 25, 2025 ಬೆಳಗಾವಿ, ರಾಜ್ಯ
ರಾಮದುರ್ಗ: ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಮಂಗಳವಾರದಂದು ಪಟ್ಟಣದ ನಂದಿನಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಗೆ ಸೌಹಾರ್ದಯುತವಾಗಿ ಭೇಟಿ ನೀಡಿ ಮಾತನಾಡಿದ ಅವರು, ರೈತರ ಏಳ್ಗೆಗಾಗಿಯೇ ಹುಟ್ಟುಕೊಂಡಿರುವ ನಂದಿನಿ …
Read More »
inmudalgi
ಜೂನ್ 24, 2025 ಬೆಳಗಾವಿ, ರಾಜ್ಯ
ಮೂಡಲಗಿ: ಗ್ರಾಮ ಪಂಚಾಯತ ನೌಕರರಿಗೆ ಸೇವಾ ಹಿರಿತನ ಆಧಾರದಲ್ಲಿ ವೇತನ ನಿಗದಿಗೊಳಿಸಬೇಕು, ಕನಿಷ್ಠ ವೇತನ 31,000 ಸಾವಿರ ರೂಪಾಯಿ ನಿಗದಿಯಾಗಬೇಕು, ಪ್ರತಿ ಗ್ರಾಮ ಪಂಚಾಯತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ನೇಮಕ, ಪಿಂಚಣಿ ಸೌಲಭ್ಯ ಜಾರಿಯಾಗಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮಂಗಳವಾರ ಗ್ರಾಮ ಪಂಚಾಯತ ನೌಕರರ ಸಂಘ ಮೂಡಲಗಿ ಘಟಕದ ಪದಾಧಿಕಾರಿಗಳು ಮೂಡಲಗಿ ತಾಲ್ಲೂಕು ಪಂಚಾಯತ ಕಚೇರಿ ಮುಂದೆ ಮಂಗಳವಾರ ಪ್ರತಿಭಟಿಸಿ ಮನವಿ ಸಲ್ಲಿಸಿದರು ಮಾಡಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ …
Read More »
inmudalgi
ಜೂನ್ 24, 2025 ಬೆಳಗಾವಿ, ರಾಜ್ಯ
ಗೋಕಾಕ- ರೈತರಿಗಾಗಿಯೇ ಕೆಎಂಎಫ್ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಸದ್ಭಳಕೆ ಮಾಡಿಕೊಂಡು ತಮ್ಮ ಆರ್ಥಿಕ ಬಲವರ್ಧನೆ ಮಾಡಿಕೊಳ್ಳುವಂತೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಎಂಎಫ್ ರೈತರ ಜೀವನಾಡಿಯಾಗಿದೆ ಎಂದು ಹೇಳಿದರು. ಮಳೆರಾಯನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ. ಮಳೆಯು ಉತ್ತಮವಾಗಿ ಆಗುತ್ತಿದ್ದು, ರೈತರಿಂದ ಕೃಷಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ ಎಂದು ತಿಳಿಸಿದರು. ಹೈನುಗಾರಿಕೆಯನ್ನು ಉತ್ತೇಜಿಸಲು ಕೆಎಂಎಫ್ …
Read More »
inmudalgi
ಜೂನ್ 23, 2025 ಬೆಳಗಾವಿ, ರಾಜ್ಯ
ಮೂಡಲಗಿ: ‘ಕವಿ ತಾನು ಬರೆಯುವ ಕಾವ್ಯವು ಜನರ ಹೃದಯವನ್ನು ಮುಟ್ಟವಂತಿರಬೇಕು’ ಎಂದು ಜಾನಪದ ಗಾಯಕ ಗುರುರಾಜ ಹೊಸಕೋಟಿ ಅವರು ಹೇಳಿದರು. ಇಲ್ಲಿಯ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಮಹಾರಾಜ ಸಿದ್ದು ಹಳ್ಳೂರ ಇವರ ‘ಎಷ್ಟ ಚಂದಿತ್ತ ಆವಾಗ’ ಕವನ ಸಂಕಲವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಕವಿತೆಗಳು ಸಾಮಾಜಿಕ ಕಳಕಳಿ ಹಾಗೂ ಸಮಾಜವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದಾಗ ಕವಿತೆಗಳು ಸಾರ್ಥಕವನ್ನು ಪಡೆಯುತ್ತವೆ ಎಂದರು. ಮಹಾರಾಜ ಸಿದ್ದು ಅವರು ಬರೆದಿರುವ ಕವನಗಳು …
Read More »
inmudalgi
ಜೂನ್ 23, 2025 ಬೆಳಗಾವಿ, ರಾಜ್ಯ
ಬೆಳಗಾವಿ: ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಮವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಹಾಲು ಒಕ್ಕೂಟದಿಂದ ಕರ್ನಾಟಕ ಹಾಲು ಮಹಾ ಮಂಡಳಿಗೆ ನಿರ್ದೇಶಕನಾಗಿ ಆಯ್ಕೆಯಾಗುತ್ತೇನೆ. ಆದರೆ ಖಂಡಿತವಾಗಿಯೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂದು …
Read More »
inmudalgi
ಜೂನ್ 22, 2025 ಬೆಳಗಾವಿ, ರಾಜ್ಯ
ಮೂಡಲಗಿ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ಇಲ್ಲಿನ ಸಂಗಪ್ಪಣ್ಣ ವೃತ್ತದ ಬಳಿ ಪುರಸಭೆಯಿಂದ ನಿರ್ಮಿಸಲು ಉದ್ದೇಶಿಸಿರುವ ಒಟ್ಟು 7.68 ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ಸರ್ವತೋಮುಖ ಏಳ್ಗೆಯೇ ನನ್ನ ಗುರಿಯಾಗಿದೆ ಎಂದು ಹೇಳಿದರು. ಮೂಡಲಗಿ ತಾಲ್ಲೂಕು ಕೇಂದ್ರಕ್ಕೆ …
Read More »
inmudalgi
ಜೂನ್ 22, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮೂರು ವರ್ಷದ ಬಾಲಕಿ ಕುಮಾರಿ ತನುಶ್ರೀ ಡಾ.ಶಿವಾನಂದ ಫಿರೋಜಿ ಅವಳು ವಿವಿಧ ಭಂಗಿಗಳಲ್ಲಿ ಯೋಗ ಮಾಡಿ ಗಮನಸೆಳೆದಳು.
Read More »
inmudalgi
ಜೂನ್ 22, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಯೋಗ ಭಾರತೀಯ ಪ್ರಾಚೀನ ಪರಂಪರೆಯ ಅತ್ಯಮೂಲ್ಯ ಕೊಡುಗೆಯಾಗಿದೆ. ಪ್ರತಿ ದಿನ ಪ್ರತಿಯೊಬ್ಬರೂ ಯೋಗ ಮಾಡಿ ಆರೋಗ್ಯವಾಗಿರಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಜೂ.21ರಂದು ಆಯೋಜಿಸಿದ 11ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವಕ್ಕೆ ಭಾರತ ದೇಶ ಯೋಗದ ಕೊಡುಗೆ …
Read More »
inmudalgi
ಜೂನ್ 22, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಮನುಷ್ಯ ಪ್ರತಿದಿನ ಯೋಗ ಮಾಡುವುದರಿಂದ ರೋಗ ಬರುವುದಿಲ್ಲಾ. ಯೋಗ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ವರದಾನವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಚೈತನ್ಯ ಗ್ರುಪ್ಸ್ನ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ರವಿ ಭರಮನಾಯ್ಕ ಹೇಳಿದರು. ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.21ರಂದು ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕ್ಕೆ ಯೋಗದ ಅನನ್ಯ …
Read More »