inmudalgi
ಡಿಸೆಂಬರ್ 5, 2024 ಬೆಳಗಾವಿ, ರಾಜ್ಯ
‘ಮನುಷ್ಯನನ್ನು ಗುಣದಿಂದ ಅಳೆಯಬೇಕು’ ಮೂಡಲಗಿ: ‘ಮನುಷ್ಯನನ್ನು ಗುಣದಿಂದ ಅಳೆಯಬೇಕು ಹೊರತು ದುಡ್ಡು, ಅಧಿಕಾರ, ಅಂತಸ್ತಿನಿಂದಲ್ಲ’ ಎಂದು ಅರಭಾವಿಯ ದುರದುಂಡೀಶ್ವರ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳು ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಪ್ರಸ್ತುತ ಸಮಾಜವು ಗುಣವಂತರನ್ನು ಮರೆತು ಅಧಿಕಾರ ಮತ್ತು ಹಣವಂತರಿಗೆ ಬೆಲೆ ಕೊಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದರು. ಇಂದು ಅವಿಭಕ್ತ ಕುಟುಂಬಗಳು ಒಡೆದು ವಿಭಕ್ತ ಕುಟುಂಬಗಳಾಗುತ್ತಿದ್ದು ಇದರಿಂದ …
Read More »
inmudalgi
ಡಿಸೆಂಬರ್ 5, 2024 ಬೆಳಗಾವಿ, ರಾಜ್ಯ
ಮೂಡಲಗಿ : ಯುವ ಜನತೆಗೆ ಏಯ್ಡ್ಸ್ ಮತ್ತು ಕ್ಷಯ ರೋಗದ ಬಗ್ಗೆ ಇಂದಿನ ಜನರ ಸಾಮಾಜಿಕ ಜೀವನದಲ್ಲಿ ಎಚ್ಚರವಹಿಸುವುದು ಅವಶ್ಯಕವಾಗಿದೆ ಎಚ್.ಐ.ವಿ. ರೋಗವು ಅಸುರಕ್ಷಿತ ಲೈಂಗಿಕತೆ ಮತ್ತು ರಕ್ತ ನೀಡುವಲ್ಲಿ-ಪಡೆದು ಕೊಳ್ಳುವಲ್ಲಿ ಮುಂಜಾಗ್ರತೆ ವಹಿಸದೆ ಇರುವುದು ಹಾಗೂ ನಮ್ಮ ಇನ್ನಿತರ ನಿಷ್ಕಾಳಜಿಯಿಂದ ರೋಗ ಉಲ್ಬಣಗೊಳ್ಳುತ್ತದೆ ಮತ್ತು ಕ್ಷಯ ರೋಗವು ಚಳಿಗಾಲದಲ್ಲಿ ಉಲ್ಬಣಗೊಳ್ಳುತ್ತಿದ್ದು ಇಂದಿನ ಆಹಾರ ಪದ್ದತಿ ಜೀವನ ಕ್ರಮಗಳು ಟಿಬಿ ರೋಗದ ಮೇಲೆ ಮಾರಣಾಂತಿಕ ಪರಿಣಾಮ ಬೀರುತ್ತಿದ್ದು ಸಾಂಕ್ರಾಮಿಕ ರೋಗಗಳಿಂದಲ್ಲೂ …
Read More »
inmudalgi
ಡಿಸೆಂಬರ್ 2, 2024 ಬೆಳಗಾವಿ, ರಾಜ್ಯ
ಮೂಡಲಗಿ: ಕರ್ನಾಟಕದಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಆರ್ಥಿಕ ವರ್ಷ 2024-25 ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯಕ್ಕೆ 326.02 ಕೋಟಿ ರೂಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ …
Read More »
inmudalgi
ಡಿಸೆಂಬರ್ 2, 2024 ಬೆಳಗಾವಿ, ರಾಜ್ಯ
ಮೂಡಲಗಿ : ಸಂಪನ್ಮೂಲ ವಿದ್ಯಾರ್ಥಿಗಳು ನವಸಮಾಜದ ಕಣ್ಣುಗಳು ಇದ್ದಂತೆ ಮತ್ತು ವಿದ್ಯಾರ್ಥಿಗಳು ಸೃಜನಶೀಲ ಸಂಪನ್ಮೂಲ ಕೌಶಲ್ಯಗಳನ್ನು ಹೊಂದುವದರ ಜೊತೆಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ತಮ್ಮ ಕುಟುಂಬಗಳ ಸಂರ್ವಾಂಗೀಣ ಬೆಳವಣಿಗೆ ಮಾಡಿಕೊಳ್ಳುವದರೊಂದಿಗೆ ದೇಶದ ಆರ್ಥಿಕತೆಯನ್ನು ಸುಧಾರಿಸುತ್ತಾರೆ ಎಂದು ಮೂಡಲಗಿಯ ಆರ್.ಡಿ.ಎಸ್. ಪಿಯು ಕಾಲೇಜಿನ ಉಪನ್ಯಾಸಕರಾದ ಸಂಗಪ್ಪ ಕುಂಬಾರ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಸಮಾಜಕಾರ್ಯ ಪದವಿ ಮಹಾವಿದ್ಯಾಲಯದ ಆಯ್.ಕ್ಯೂ.ಎ.ಸಿ. ಘಟಕದಡಿಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳು ಎಂಬ …
Read More »
inmudalgi
ಡಿಸೆಂಬರ್ 2, 2024 ಬೆಳಗಾವಿ, ರಾಜ್ಯ
ಮೂಡಲಗಿ : ಬಡತನ, ಅನಕ್ಷರತೆ ನಿರ್ಮೂಲನೆಗೆ ಶಿಕ್ಷಣವೊಂದೇ ಅಸ್ತ್ರ ಎಂದು ದಿವಾಣಿ ಹಾಗೂ ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಅಭಿಪ್ರಾಯಪಟ್ಟರು. ಪಟ್ಟಣದ ಹೊರವಲಯದಲ್ಲಿರುವ ಮಡ್ಡಿ ಈರಣ್ಣ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ,ತಾಲೂಕಾ ಮಟ್ಟದ ಎನ್.ಎಮ್.ಎಮ್.ಎಸ್ ಶಿಷ್ಯವೇತನ ಅರ್ಹತಾ ಪರೀಕ್ಷೆಯ ಪೂರ್ವಭಾವಿ ತಯಾರಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದವರು, ನಾವು ಹಳ್ಳಿಯ ಮಕ್ಕಳು ಪಟ್ಟಣದ ಮಕ್ಕಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂಬ ಭಾವನೆ ಯಾರಲ್ಲಿಯೂ ಬರಬಾರದು. ಜಗತ್ತಿನಲ್ಲಿ ಹಲವಾರು ಮಹಾನ್ …
Read More »
inmudalgi
ಡಿಸೆಂಬರ್ 2, 2024 Uncategorized, ಬೆಳಗಾವಿ, ರಾಜ್ಯ
ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ ಮೂಡಲಗಿ: ಪಟ್ಟಣದ ಆರ್.ಡಿ.ಸಂಸ್ಥೆಯ ಆವರಣದಲ್ಲಿ ಮಂಗಳವಾರ ಡಿ.3 ರಿಂದ ಡಿ.9 ರವರಿಗೆ ಏಳು ದಿನಗಳ ಕಾಲ ಬೀದರ ಚಿದಂಬರಾಶ್ರಮ ಸಿದ್ಧಾರೂಢ ಮಠದ ಸದ್ಗುರು ಶ್ರೀ ಡಾ|| ಶಿವಕುಮಾರ ಸ್ವಾಮೀಜಿಗಳಿಂದ 15ನೇ ಸತ್ಸಂಗ ಸಮ್ಮೇಳನ ಜರುಗಲಿದೆ ವೇದಮೂರ್ತಿ ಶ್ರೀ ಶಂಕರಯ್ಯಾ ಹಿರೇಮಠ ಸ್ವಾಮೀಜಿ ತಿಳಿಸಿದರು. ಅವರು ಪಟ್ಟಣದಲ್ಲಿ ಗುರು ಮಠದಲ್ಲಿ 15ನೇ ಸತ್ಸಂಗ ಸಮ್ಮೇಳನದ ಪ್ರಚಾರ ಪತ್ರಿಕೆಯನ್ನು …
Read More »
inmudalgi
ನವೆಂಬರ್ 27, 2024 ಬೆಳಗಾವಿ, ರಾಜ್ಯ
*ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ* *ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 28 ರಿಂದ 15 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅರಭಾವಿ ಶಾಸಕ …
Read More »
inmudalgi
ನವೆಂಬರ್ 26, 2024 ಬೆಳಗಾವಿ, ರಾಜ್ಯ
“ಕಲ್ಕಿ ಕಾಲದ ಮಕ್ಕಳನ್ನು ಪಾಲಕರು ಹೀಗೆ ಬೆಳೆಸಿ” “ಮನೆಯೇ ಮೊದಲ ಪಾಠಶಾಲೆ ,ಜನನಿಯೇ ಮೊದಲ ಗುರು “ ಎಂಬ ಮಾತಿನಂತೆ,ಮಕ್ಕಳ ಭವಿಷ್ಯ ಹೇಗಿರುತ್ತದೆ ಎನ್ನುವುದು ಮನೆಯಲ್ಲಿಯೇ ನಿರ್ಧಾರವಾಗುವುದು. ಏಕೆಂದರೆ,ಮಕ್ಕಳು ತಮ್ಮ ಪೆÇೀಷಕರಿಂದಲೇ ಎಲ್ಲವನ್ನು ಕಲಿಯುವರು. ಹೀಗಾಗಿ ಮಕ್ಕಳಿಗೆ ಜೀವನದ ಕೆಲವೊಂದು ಪಾಠಗಳನ್ನು ಕಲಿಸಿಕೊಡುವುದು ಅಗತ್ಯ. “ಬೆಳೆಯುವ ಸಿರಿ, ಮೊಳಕೆಯಲ್ಲಿ “ ಎನ್ನುವಂತೆ ಸಣ್ಣ ವಯಸ್ಸಿನಲ್ಲಿಯೇ ತಮ್ಮ ಮಕ್ಕಳಿಗೆ ಇತರರಿಗೆ ಗೌರವ ಕೊಡುವುದನ್ನು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದನ್ನು , ಸಂಯಮದಿಂದ ನಡೆದುಕೊ …
Read More »
inmudalgi
ನವೆಂಬರ್ 26, 2024 ಬೆಳಗಾವಿ, ರಾಜ್ಯ
ಮೂಡಲಗಿ: ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಭಾರತದ ಭಾವಿ ಪ್ರಜೆಗಳಾದ ನೀವುಗಳು ಭವ್ಯ ಭಾರತದ ಕನಸನ್ನು ಕಟ್ಟಿ ಸಂವಿಧಾನದ ಚೌಕಟ್ಟಿನಲ್ಲಿ ನಿಮ್ಮದೇ ಆದಂತಹ ಸಾಧನೆಯನ್ನು ಮಾಡಿ ಸಂವಿಧಾನದಲ್ಲಿ ಅಳವಡಿಸಿರುವಂತಹ ಭ್ರಾತೃತ್ವ ಸಹೋದರತೆ ಸಮಾನತೆ ಈ ಎಲ್ಲಾ ಅಂಶಗಳನ್ನು ಅಳವಡಿಸಿಕೊಂಡು ಸದೃಢ ಭಾರತವನ್ನು ನಿರ್ಮಿಸುವುದರ ಜೊತೆಗೆ ದೃಢ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ ಎಂದು ಎಸ್.ಎಸ್.ಆರ್ ಪ್ರೌಢ ಶಾಲೆಯ ಉಪರಾಚಾರ್ಯ ಬಿ.ಕೆ ಕಾಡಪ್ಪಗೋಳ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ …
Read More »
inmudalgi
ನವೆಂಬರ್ 25, 2024 ಬೆಳಗಾವಿ, ರಾಜ್ಯ
ಬೆಳಗಾವಿ: ಜಿಲ್ಲೆಯ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆಗೆ ತೆರಳಲು ಅನುಕೂಲವಾಗುವಂತೆ ಡಿಸೆಂಬರ್ 09 ರಿಂದ ಬೆಳಗಾವಿ- ಕೊಲ್ಲಂ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ವೇಳಾಪಟ್ಟಿ ಬಿಡುಗಡೆ ಮಾಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ನೈರುತ್ಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ನ-25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ನವೆಂಬರನಿAದ ಜನವರಿವರೆಗೆ …
Read More »