Breaking News

TimeLine Layout

ಫೆಬ್ರವರಿ, 2026

  • 4 ಫೆಬ್ರವರಿ

    ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ರೈಲು ನಿಲ್ದಾಣಕ್ಕೆ ನಿಲುಗಡೆ ಮಾಡುವಂತೆ ಮನವಿ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

    ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ ತಮ್ಮ ಗ್ರಾಮಕ್ಕೆ ಬರಲು ಮತ್ತು ಮರಳಿ ಹೋಗಲು ಅನುಕೂಲವಾಗುವಂತೆ ಹಲವು ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ರೈಲು ನಿಲ್ದಾಣಕ್ಕೆ ನಿಲುಗಡೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ನೀಡಿ, ವಿನಂತಿಸಿದರು. …

    Read More »
  • 4 ಫೆಬ್ರವರಿ

    ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

    ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ ಅಸ್ಮೀತೆ, ಜಾನಪದ ಕಲೆ ನಿತ್ಯ ನೂತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯುವ ಸಾಹಿತಿ, ರಂಗಭೂಮಿ ಕಲಾವಿದ ಶಿವಪುತ್ರ ಪರಮಾನಟ್ಟಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ-ಬಗರನಾಳ ಗ್ರಾಮದ ಗಡಿಭಾಗದಲ್ಲಿರುವ ಜಗನ್ಮಾತೆ ಬಾಕುಬಾಯಿ ಜಾತ್ರಾ ಮಹೋತ್ಸವ ಪ್ರಯುಕ್ತ ಫೆ.1 ರಂದು ನಡೆದ ಸತ್ಯವಾನ ಸಾವಿತ್ರಿ ಸಣ್ಣಾಟ ಪ್ರದರ್ಶನ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸ್ಥಳೀಯ …

    Read More »
  • 3 ಫೆಬ್ರವರಿ

    ಶಿಕ್ಷಕ ಶಿವರಾಜ ಕಾಂಬಳೆ ಅವರಿಗೆ ಜ್ಞಾನಭಾರತಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ

    ಮೂಡಲಗಿ: ತಾಲ್ಲೂಕಿನ ಧರ್ಮಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕ ಶಿವರಾಜ ಕಾಂಬಳೆ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಧಾರವಾಡ ಕೊಡಮಾಡುವ ಜ್ಞಾನಭಾರತಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಭವನದಲ್ಲಿ ನಡೆದ ಜನಗಣಮನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಶಿಕ್ಷಕ ಶಿವರಾಜ ಪ್ರತಿ ಬೇಸಿಗೆ ರಜೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಆಯೋಜನೆ ಮಾಡುತ್ತಾರೆ. ಕವಿಯೂ ಆಗಿರುವ ಶಿಕ್ಷಕ …

    Read More »
  • 3 ಫೆಬ್ರವರಿ

    ಬೆಳಗಾವಿ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ಒಟ್ಟು 237 ಆಸ್ಪತ್ರೆಗಳು ಪಟ್ಟಿ ಮಾಡಲಾಗಿದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

    ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ  ಆಯುಷ್ಮಾನ್   ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಟ್ಟು 452.26 ಕೋಟಿ ರೂ.ಗಳ ಮೊತ್ತದ 6.67 ಲಕ್ಷ ಕ್ಲೈಮ್‍ಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಬೆಳಗಾವಿ …

    Read More »
  • 2 ಫೆಬ್ರವರಿ

    ನಿಸ್ವಾರ್ಥತೆಯಿಂದ ಗ್ರಾಮದ ಅಭಿವೃದ್ಧಿ, ಜನಸೇವೆ ಸಲ್ಲಿಸಿದ ನೀವು ಪುಣ್ಯವಂತರು -ಸರ್ವೋತ್ತಮ ಜಾರಕಿಹೊಳಿ

    ಕುಲಗೋಡ: ಐದು ವರ್ಷ ನಿಸ್ವಾರ್ಥದಿಂದ ಗ್ರಾಮದ ಜನಸೇವೆ, ರಸ್ತೆ, ನೀರು, ನೈರ್ಮಲ್ಯ ಅಭಿವೃದ್ಧಿ ಕಾರ್ಯಗಳ ಮಾಡಿದ ನೀವೆ ಪುಣ್ಯವಂತರು. ಈ ಸೌಭಾಗ್ಯ ಎಲ್ಲರಿಗೂ ದೊರೆಯಲಿ ನೀವು ಜನರಿಂದ ಆಯ್ಕೆಯಾಗಿ ಜನರಿಗೋಸ್ಕರ ಮಾಡಿದ್ದು ಸೇವೆ ದೇವರ ಸೇವೆಗಿಂತಲೂ ಮಿಗಿಲು ಎಂದು ಯುವ ನಾಯಕ ಸವೋತ್ತಮ ಜಾರಕಿಹೊಳಿ ಮಾತನಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಗ್ರಾಪಂ ಆವರಣದಲ್ಲಿ ಸೋಮವಾರ ನಡೆದ ಗ್ರಾಪಂ ಸದಸ್ಯರ ಬಿಳ್ಕೋಡುಗೆ ಸಮಾರಂಭ ಉದ್ದೇಶಿಸಿ ಮಾತನಾಡಿ ಕುಲಗೋಡ ತಾಲೂಕಿನಲ್ಲಿ …

    Read More »
  • 2 ಫೆಬ್ರವರಿ

    ‘ಭಾರತದ ಸನಾತನ ಹಿಂದೂ ಧರ್ಮವು  ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶೀಸಿ ಹೋಗುವಂತದಲ್ಲ’ – ಮಂಜುನಾಥ ಸ್ವಾಮೀಜಿ

    ಮೂಡಲಗಿ: ‘ಭಾರತದ ಸನಾತನ ಹಿಂದೂ ಧರ್ಮವು  ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶೀಸಿ ಹೋಗುವಂತದಲ್ಲ’ ಎಂದು ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಲಭೀಮ ರಂಗಮಂಟಪದಲ್ಲಿ ಆಯೋಜಿಸಿದ್ದ ಹಿಂದೂ ಬೃಹತ್ ಸಮಾವೇಶದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ದೇಶದ ಜನರ  ಮನಸ್ಸು ಒಡೆಯದೇ ಮಾನವರೆಲ್ಲೂರ ಒಂದೇ ಎನ್ನುವ ಸಂದೇಶವನ್ನು ಹಿಂದೂ ಧರ್ಮ ನೀಡುತ್ತದೆ. ಪ್ರತಿ ಭಾರತೀಯನು ಹಿಂದೂ ಧರ್ಮದ ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಂಡು ಹೋಗುವುದು  ಇಂದಿನ ಅವಶ್ಯಕತೆ …

    Read More »
  • 2 ಫೆಬ್ರವರಿ

    ‘ದ್ವಿ-ಚಕ್ರ ವಾಹನಗಳ ದುರಸ್ತಿಯು ಶ್ರದ್ಧೆ ಮತ್ತು ಕೌಶಲ್ಯತೆಯಿಂದ ಕೂಡಿರುವ ಕಾಯಕವಾಗಿದೆ’ – ಸರ್ವೋತ್ತಮ ಜಾರಕಿಹೊಳಿ

    ಮೂಡಲಗಿ: ‘ದ್ವಿ-ಚಕ್ರ ವಾಹನಗಳ ದುರಸ್ತಿಯು ಶ್ರದ್ಧೆ ಮತ್ತು ಕೌಶಲ್ಯತೆಯಿಂದ ಕೂಡಿರುವ ಕಾಯಕವಾಗಿದೆ’ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.  ಪಟ್ಟಣದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ದ್ವಿ-ಚಕ್ರ ವಾಹನಗಳ ದುರಸ್ತಿದಾರರ ತಾಲ್ಲೂಕು ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂಘವನ್ನು ಒಗ್ಗಟಿನಿಂದ ಬೆಳಸಬೇಕು ಎಂದರು. ಸಂಘಕ್ಕೆ ಸರ್ಕಾರ ಮತ್ತು ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ತಮ್ಮ ಸಂಘದ ಬೆಳವಣಿಗೆಗೆ ಜಾರಕಿಹೊಳಿ ಕುಟುಂಬವು ಯಾವತ್ತೂ ಸಹಾಯ, ಸಹಕಾರ ನೀಡಲು ಸಿದ್ಧವಾಗಿರತ್ತದೆ. ವಾಹನಗಳ …

    Read More »
  • 1 ಫೆಬ್ರವರಿ

    ಮೂಡಲಗಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

    ಮೂಡಲಗಿ :  ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ಆಗುತ್ತಿದ್ದ ದುರ್ಬಲರ ಶೋಷಣೆ, ಜಾತೀಯತೆ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ವಿರುದ್ಧ ಸಾಮಾಜಿಕ ಕ್ರಾಂತಿ ಕೈಗೊಂಡ ಮಹಾನ್ ಪುರುಷ ಎಂದು ಮೂಡಲಗಿ ತಹಶೀಲ್ದಾರರಾದ ಶ್ರೀಶೈಲ ಗುಡುಮೆ ಹೇಳಿದರು. ರವಿವಾರದಂದು ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾ ಭವನದಲ್ಲಿ ತಾಲೂಕು ಆಡಳಿತ ಮತ್ತು ಮೂಡಲಗಿ ತಾಲೂಕಾ ಮಡಿವಾಳ ಸಮಾಜದ ಸಂಯುಕ್ತಾಶ್ರಯದಲ್ಲಿ ಜರುಗಿದ 916ನೇ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ  ಮಾಚಿದೇವರ ಭಾವಚಿತ್ರಕ್ಕೆ ಪೂಜೆ …

    Read More »
  • 1 ಫೆಬ್ರವರಿ

    ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು: ಸುಣಧೋಳಿ ಶ್ರೀಗಳು

      ಬೆಟಗೇರಿ: ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು. ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಬದುಕಿನ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಭಕ್ತ ಕನಕದಾಸ ಮತ್ತು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಹಯೋಗದಲ್ಲಿ ಫೆ.1 ರಂದು ನಡೆದ ನೂತನ ಭಕ್ತ ಕನಕದಾಸ ಮತ್ತು ಕ್ರಾಂತಿವೀರ …

    Read More »
  • 1 ಫೆಬ್ರವರಿ

    *ವಿಕಸಿತ ಭಾರತ* *ಪರಿಕಲ್ಪನೆಯ ಕೇಂದ್ರದ ಬಜೆಟ್:* *ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ*

    ಬೆಳಗಾವಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿತ್ವ, ವಿಕಸಿತ ಭಾರತದ ಕಲ್ಪನೆ ಮತ್ತಷ್ಟು ಅರಳಿದೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೇಂದ್ರದ ಬಜೆಟ್ ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ದೇಶದ ಜಿಡಿಪಿಯ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡಿರುವುದು ಇದರಲ್ಲಿ ಕಂಡುಬರುತ್ತದೆ. ಕೃಷಿ, ಶಿಕ್ಷಣ, ಆರೋಗ್ಯ, ಹೂಡಿಕೆ, ಮೂಲಭೂತ ಸೌಕರ್ಯ, ಜವಳಿ ಉದ್ಯಮ, ಐಟಿ ಬಿಟಿಗಳಿಗೆ …

    Read More »