ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಎನ್ಎಸ್ಎಫ್ ಆವರಣದಲ್ಲಿ ಮೂಡಲಗಿ ಪುರಸಭೆಗೆ ನೂತನವಾಗಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಖುರ್ಷಾದಾ ನದಾಫ ಮತ್ತು ಭೀಮವ್ವ ಪೂಜೇರಿ ಅವರು ಸತ್ಕರಿಸಿ ಗೌರವಿಸಿದರು. ಮೂಡಲಗಿ: ಮೂಡಲಗಿ ಪುರಸಭೆಯ ನೂತನ ಅಧ್ಯಕ್ಷೆಯನ್ನಾಗಿ ಮುಸ್ಲಿಂ ಮಹಿಳೆಗೆ ಅಧಿಕಾರ ನೀಡಲು ಕಾರಣಿಕರ್ತರಾದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪಟ್ಟಣದ ವಿವಿಧ ಸಮಾಜಗಳ ಮುಖಂಡರು ಅಭಿನಂದನೆ ಸಲ್ಲಿಸಿದರು. ಮೂಡಲಗಿ ಪುರಸಭೆಗೆ ಬುಧವಾರದಂದು ನಡೆದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಿದ್ದ …
Read More »TimeLine Layout
ಆಗಷ್ಟ್, 2024
-
30 ಆಗಷ್ಟ್
‘ಆಧುನಿಕ ಕಾಲಘಟದಲ್ಲಿ ವಚನಾಧ್ಯಯನದ ಅವಶ್ಯವಿದೆ’
ಮೂಡಲಗಿ: ‘ಅಂತರಂಗವನ್ನು ಶುದ್ಧಗೊಳಿಸುವ ವಚನಾಧ್ಯನವನ್ನು ಆಧುನಿಕ ಕಾಲಘಟ್ಟದಲ್ಲಿ ಹೆಚ್ಚು ಪ್ರಚುರಪಡಿಸಬೇಕಾಗಿದೆ’ ಎಂದು ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಜಾನಪದ ಪರಿಷತ್ದಿಂದ ನೀಲಕಂಠೇಶ್ವರ ಮಠದಲ್ಲಿ ಏರ್ಪಡಿಸಿದ್ದ ಡಾ. ಮಹಾದೇವ ಪೋತರಾಜರಿಂದ ರಚಿತವಾದ ಸುವರ್ಣದೀಪ ವಚನ ಸಂಕಲನ ಬಿಡುಗಡೆ ಮತ್ತು ವಿಶ್ವ ಜಾನಪದ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಕೃತಿಯ ಕುರಿತು ಮಾತನಾಡಿದ ಅವರು 12ನೇ ಶತಮಾನದ ಶರಣ ವಚನಗಳಿಂದ ಪ್ರಭಾವಿತರಾಗಿರುವ ಡಾ. ಮಹಾದೇವ …
Read More » -
29 ಆಗಷ್ಟ್
‘ಮಕ್ಕಳು ಒಲಿಂಪಿಕ್ಸ್ ಕ್ರೀಡಾಕೂಟದ ಕನಸು ಕಾಣುವಂತಾಗಬೇಕು’
ಮೂಡಲಗಿ: ‘ಮಕ್ಕಳು ಪಠ್ಯದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಸದೃಢತೆ ಮತ್ತು ದೈಹಿಕ ಸದೃಢತೆಯಿಂದೆ ಬೆಳೆಯುತ್ತಾರೆ’ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ. ಲೋಕನ್ನವರ ಹೇಳಿದರು. ತಾಲ್ಲೂಕಿನ ಖಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ಶಿವಾಪುರ ಸಿಆರ್ಸಿ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಪ್ರಾಥಮಿಕ ಹಂತದಲ್ಲೆಯೇ ಒಲಿಂಪಿಕ್ಸ್ ಕ್ರೀಡೆಯಲ್ಲಿ ಭಾಗವಹಿಸುವ ಕನಸು ಕಾಣಬೇಕು ಮತ್ತು ಸಾಧನೆಗೆ ಪರಿಶ್ರಮಪಡಬೇಕು ಎಂದರು. ಅತಿಥಿ ಸಾಹಿತಿ, …
Read More » -
29 ಆಗಷ್ಟ್
ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರ
ಗೋಕಾಕ: ಬರುವ ಸೆಪ್ಟಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳತನಕ ನಡೆಯುವ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ನಮ್ಮ ಅರಭಾವಿ ಕ್ಷೇತ್ರದಿಂದಲೇ ಅತೀ ಹೆಚ್ಚಿನ ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆಯಲು ಅಗತ್ಯವಿರುವ ಸಿದ್ಧತೆಗಳನ್ನು ನಡೆಸುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ನಗರದ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರವನ್ನು …
Read More » -
28 ಆಗಷ್ಟ್
ಶಾಂತವ್ವಾ ಮುತ್ತಪ್ಪ ಸಂಕನ್ನವರ ನಿಧನ
*ನಿಧನ ವಾರ್ತೆ* ಮೂಡಲಗಿ : ತಾಲೂಕಿನ ಕಮಲದಿನ್ನಿ ಗ್ರಾಮದ ನಿವಾಸಿ ಶಾಂತವ್ವಾ ಮುತ್ತಪ್ಪ ಸಂಕನ್ನವರ (46 )ಮಾಜಿ ಉಪಾಧ್ಯಕ್ಷರು ತಾಲೂಕ ಪಂಚಾಯತ್ ಗೋಕಾಕ, ಬುಧವಾರ ನಿಧನರಾದರು. ಮೃತರು ಪತಿ , ಓರ್ವ ಪುತ್ರ , ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More » -
28 ಆಗಷ್ಟ್
ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ- ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ …
Read More » -
28 ಆಗಷ್ಟ್
ಇಂದು ‘ಸುವರ್ಣದೀಪ’ ಕೃತಿ ಬಿಡುಗಡೆ
ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ ಆಶ್ರಯದಲ್ಲಿ ಆ. 28ರಂದು ಸಂಜೆ 5ಕ್ಕೆ ಡಾ. ಮಹಾದೇವ ಪೋತರಾಜ ರಚಿಸಿರುವ ‘ಸುವರ್ಣದೀಪ’ ವಚನ ಸಂಕಲನ ಬಿಡುಗಡೆ ಮತ್ತು ವಿಶ್ವ ಜಾನಪದ ಸಂಸ್ಥಾಪನಾ ದಿನಾಚರಣೆಯನ್ನು ಮೂಡಲಗಿ ನೀಲಕಂಠೇಶ್ವರ ಮಠದಲ್ಲಿ ಏರ್ಪಡಿಸಿರುವರು. ಶಿವಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸುವರು, ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ವಹಿಸುವರು. ಉದ್ಘಾಟನೆಯನ್ನು ಡಾ. ರವಿ ಕೊಟನೂರ, ಗ್ರಂಥ ಪಬಿಡುಗಡೆಯನ್ನು ಡಾ. ಚೇತನ ಡಾಗಾ, ಗ್ರಂಥ …
Read More » -
28 ಆಗಷ್ಟ್
ಸತೀಶ ಶುಗರ್ಸ್ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’
ಸತೀಶ ಶುಗರ್ಸ್ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’ ಮೂಡಲಗಿ: ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿಜಿಯ ಬಳಿಯ ಸತೀಶ ಶುಗರ್ಸ್ ಸಕ್ಕರೆ ಕಾರ್ಖಾನೆಯು 2024ನೇ ಸಾಲಿನ ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಾರ್ಖಾನೆಯ ಸಕ್ಕರೆ ಘಟಕ, ಸಹ-ವಿದ್ಯುತ್ ಮತ್ತು ಡಿಸ್ಟಿಲರಿ ಘಟಕಗಳ ಉತ್ತಮ ಕಾರ್ಯನಿರ್ವಹಣೆ, ಪೂರ್ಣ ಪ್ರಮಾಣದ ಸಾಮರ್ಥ್ಯದ ಬಳಕೆ, ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಪರಿಗಣಿಸಿ ಪುಣೆಯ ದಿ. ಡೆಕ್ಕನ್ ಶುಗರ್ ಟೆಲ್ನೋಲೊಜಿಸ್ಟ್ ಅಸೋಸಿಯೇಶನ್ ಸಂಸ್ಥೆಯ 69 ನೇ …
Read More » -
27 ಆಗಷ್ಟ್
ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ.
ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …
Read More »
IN MUDALGI Latest Kannada News