Breaking News

TimeLine Layout

ಆಗಷ್ಟ್, 2024

  • 27 ಆಗಷ್ಟ್

    ಭಗವಂತಪ್ಪ ಪಾಂಡಪ್ಪ ಅಂಗಡಿ (96) ನಿಧನ

    ನಿಧನ ವಾರ್ತೆ ಮೂಡಲಗಿ: ತಾಲೂಕಿನ ವೆಂಕಟಾಪುರ ಗ್ರಾಮದ ಭಗವಂತಪ್ಪ ಪಾಂಡಪ್ಪ ಅಂಗಡಿ (96) ಮಂಗಳವಾರ ರಂದು ನಿಧನರಾಗಿದ್ದಾರೆ.ಮೃತರ ಅಂತಿಮ ಇಚ್ಛೆಯಂತೆ ಅವರ ದೇಹವನ್ನು ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳಗಾವಿ ಕೆಎಲ್ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ದೇಹದಾನ ನೀಡಿ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ಮೃತರಿಗೆ ನಾಲ್ವರು ಪುತ್ರರರು, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

    Read More »
  • 27 ಆಗಷ್ಟ್

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ

    ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಕಾಂಗ್ರೇಸ್ ಮುಖಂಡ ಬಾಳಪ್ಪ ಬೆಳಕೂಡ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸುತ್ತಿರುವುದು.ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ,ಸತೀಶ ಜಾರಕಿಹೊಳಿ,ಬಾಳಪ್ಪ ಬೆಳಕೂಡ,ಬಸವರಾಜ ಕಡಾಡಿ,ರಾವಸಾಹೇಬ ಬೆಳಕೂಡ,ಬಸವರಾಜ ಬೆಳಕೂಡ,ಮಹಾಂತೇಶ ಕಡಾಡಿ,ಪ್ರಭು ಕಡಾಡಿ ಸೇರಿದಂತೆ ಅನೇಕರಿದ್ದರು.

    Read More »
  • 26 ಆಗಷ್ಟ್

    ಕಲ್ಲೋಳಿ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆ

    ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಮಾಯವ್ವ ಬಸವಂತ ದಾಸನವರ ಮತ್ತು ಉಪಾಧ್ಯಕ್ಷರಾಗಿ ಮೇಘಾ ಬಸವರಾಜ ಖಾನಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಜರುಗಿದ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ. ಹಿಂದುಳಿದ “ಅ”ವರ್ಗ ಮಹಿಳೆಗೆ ಅಧ್ಯಕ್ಷ ಸ್ಥಾನವು ಮೀಸಲಿದ್ದರೇ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನೇತೃತ್ವದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು …

    Read More »
  • 26 ಆಗಷ್ಟ್

    ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ- ಸಿಎಂ ಸಿದ್ಧರಾಮಯ್ಯ

    *ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿ* *ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೇ ಹುಟ್ಟಬೇಕಿದೆ*- *ಸಿಎಂ ಸಿದ್ಧರಾಮಯ್ಯ* *ಯಾವ ತಪ್ಪು ಮಾಡಿಲ್ಲ. ಅಧಿಕಾರದಿಂದ ಕೆಳಗಿಳಿಸುವ ವಿರೋಧಿಗಳ ಹುನ್ನಾರ ನಡೆಯಲ್ಲ* *ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ* *ಬಾಲಚಂದ್ರರತ್ತ* *ಮುಖ ನೋಡಿ ಮುಗುಳ್ನಗೆ ಬೀರಿದ ಸಿದ್ಧರಾಮಯ್ಯ*  ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ …

    Read More »
  • 26 ಆಗಷ್ಟ್

    ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ  54.89 ಲಕ್ಷ ರೂ ಲಾಭ- ಮಲ್ಲಪ್ಪ ಕಡಾಡಿ

    ಮೂಡಲಗಿ: ಕಳೆದ 111 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುಸುತ್ತ ಬಂದಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘವು  2023-24 ನೇ ಸಾಲಿನಲ್ಲಿ 54.89  ಲಕ್ಷ ರೂ ಲಾಭ ಹೊಂದಿ ಪ್ರಗತಿ ಪಥತ ದತ್ತ ಸಾಗಿದೆ. ಸಂಘದ ಶೇರುದಾರರಿಗೆ ಶೇ.೫ ರಷ್ಟು ಲಾಭವಂಶ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಲ್ಲಪ್ಪ ಪರಪ್ಪ ಕಡಾಡಿ ಹೇಳಿದರು. ಅವರು ತಾಲೂಕಿನ ಕಲ್ಲೋಳಿ ಪಟ್ಟಣದ ಶತಮಾನ ಪೂರೈಸಿದ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನಸಹಕಾರಿ …

    Read More »
  • 25 ಆಗಷ್ಟ್

    ಮೂಡಲಗಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ

    ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿಯವರನ್ನು ಸತ್ಕರಿಸಿ ಗೌರವಿಸಲಾಯಿತು. ಮೂಡಲಗಿ: ಇಂದಿನ ಯುವಜನತೆ ಹೆಚ್ಚಾಗಿ ಪೋನ್‍ಗಳಲ್ಲಿ ಪೋಟೋಗಳನ್ನು ಕ್ಲಿಕಿಸುತ್ತಿರುವುದರಿಂದ ಛಾಯಾಗ್ರಾಹಕರ ಬದುಕಿಗೆ ಬರೆ ಎಳೆದಂತಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿ ಬೆಸರ ವ್ಯಕ್ತಡಿಸಿದರು. ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ …

    Read More »
  • 25 ಆಗಷ್ಟ್

    ಶ್ರೀಕೃಷ್ಣಪರಮಾತ್ಮನನ್ನು ಪ್ರತಿಯೊಬ್ಬರು ಭಕ್ತಿಯಿಂದ ಪೂಜಿಸಿದರೆ ಮುಕ್ತಿ ಪಡೆಯಲು ಸಾಧ್ಯ – ಪೂಜಾ ಪಾರ್ಶಿ

    ಮೂಡಲಗಿ : ದುಷ್ಟರನ್ನು ಸಂಹರಿಸಿ ಶಿಷ್ಟರನ್ನು ಕಾಪಾಡಲು ಹಾಗೂ ಧರ್ಮ ಅವನತಿಯ ಅಂಚಿನಲ್ಲಿದ್ದಾಗ ಧರ್ಮವನ್ನು ಕಾಪಾಡಲು ಮತ್ತೆ ಮತ್ತೆ ಭಗವಂತನ ರೂಪದಲ್ಲಿ ಅವತರಿಸಿ ಧರ್ಮ ಮಾರ್ಗದಿಂದ ನಡೆದರೆ ಮಾತ್ರ ಬದುಕಿಗೆ ಬೆಲೆ ಬರುತ್ತದೆ ಎಂದು ಶ್ರೀಕೃಷ್ಣಪರಮಾತ್ಮನು ತಿಳಿಸಿಕೊಟ್ಟಿದ್ದಾನೆ ಪ್ರಸ್ತುತ ಕಾಲದಲ್ಲಿ ಧರ್ಮ, ಸಂಸ್ಕೃತಿ ಮತ್ತು ಸಂಪ್ರದಾಯಿಗಳು ಮಾಯವಾಗುವಾಗ ಅವುಗಳ ಕಲ್ಪನೆ ಮಕ್ಕಳ ಹಂತಗಳಿAದಲೇ ಬೆಳಸುವುದು ಅಗತ್ಯವಿದೆ ಎಂದು ಮಾಡಲಗಿಯ ಆರ್.ಡಿ.ಸಂಸ್ಥೆಯ ಉಪಾಧ್ಯಕ್ಷರಾದ ಪೂಜಾ ಪಾರ್ಶಿ ಹೇಳಿದರು. ಪಟ್ಟಣದ ಆರ್.ಡಿ. ಸಂಸ್ಥೆಯ …

    Read More »
  • 25 ಆಗಷ್ಟ್

    ಸರಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಳ್ಳಿ- ಗಿರೆಣ್ಣವರ

    ಸರಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಳ್ಳಿ- ಗಿರೆಣ್ಣವರ ಮೂಡಲಗಿ: ಸರಕಾರಿ ಶಾಲೆಯಲ್ಲಿಯ ಶಿಕ್ಷಣ ಇಲಾಖೆಯ ಸೌಲಭ್ಯಗಳನ್ನು ಹಾಗೂ ಅನುಕೂಲತೆಗಳನ್ನು ಉಪಯೋಗಿಸಿಕೊಂಡು ಪಾಲಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮುಖ್ಯಾದ್ಯಾಪಕ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ಬೆಳಗಾವಿ ಜಿ.ಪಂ. ಕಾರ್ಯನಿರ್ವಾಹಕರ ಆದೇಶದಂತೆ ನಡೆದ ತುಕ್ಕಾನಟ್ಟಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆ ಸಂಘಟಿಸಿ ಮಾತನಾಡಿ, ಸರಕಾರ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳ ಕೌಟುಂಬಿಕ ಸಮಸ್ಯೆಗಳಿಗೆ …

    Read More »
  • 24 ಆಗಷ್ಟ್

    ಓದುವ ಹವ್ಯಾಸ ರೂಡಿಸಿಕೊಳ್ಳಬೇಕು-ಡಾ.ಶಂಕರ ತೇರದಾಳ

    ಓದುವ ಹವ್ಯಾಸ ರೂಡಿಸಿಕೊಳ್ಳಬೇಕು-ಡಾ.ಶಂಕರ ತೇರದಾಳ ಮೂಡಲಗಿ: ವಿದ್ಯಾರ್ಥಿಗಳು ಓದುವ ಹವ್ಯಾಸ, ಕೇಳುವ ಮನೋಭಾವ, ಬರೆಯುವ ಅಭಿಲಾಸೆ, ಮಾತನಾಡುವ ಕಲೆಯನ್ನು ರೂಡಿಸಿಕೊಂಡು ಸಮಾಝಕ್ಕೆ ಪೂರಕವಾದ ವ್ಯಕ್ತಿತ್ವನ್ನು ರೂಪಿಸಿಕೊಳ್ಳ ಬೇಕು ಎಂದು ಬೆಳಗಾವಿ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ.ಶಂಕರ ತೇರದಾಳ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2023-24ನೇ ಸಾಲಿನ ವಾರ್ಷಿಕೋತ್ಸ ಸಮಾರಂಭದ ಮುಖ್ಯ ಅತಿಥಿಸ್ಥಾನದಿಂದ ಮಾತನಾಡಿದರು. ಕರ್ನಾಟಕ …

    Read More »
  • 24 ಆಗಷ್ಟ್

    ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.

    *ಸಿಎಂ ಭೇಟಿ ಫಿಕ್ಸ್* *ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ* *ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.* *ಸಿಎಂ ಸಿದ್ಧರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಕೌಜಲಗಿಯಲ್ಲಿ ಭರದ ಸಿದ್ಧತೆ.* ಗೋಕಾಕ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಸೋಮವಾರದಂದು ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಪ್ರವಾಸ ಕೈಗೊಂಡಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರದಂದು ಬೆಂಗಳೂರಿನಿದ ವಿಶೇಷ ವಿಮಾಣದ ಮೂಲಕ …

    Read More »