Breaking News

TimeLine Layout

ಜನವರಿ, 2026

  • 20 ಜನವರಿ

    ಮೂಡಲಗಿಯಲ್ಲಿ ಜ.24 ರಂದು ಹಿಂದೂ ಸಮ್ಮೇಳನ

    ಮೂಡಲಗಿಯಲ್ಲಿ ಜ.24ರಂದು ಜರುಗಲಿರುವ ಹಿಂದೂ ಸಮೇಳನದ ಪ್ರಚಾರ ಪತ್ರಿಕೆಯನ್ನು ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಬಿಡುಗಡೆ ಮಾಡಿದರು. ವಿವಿಧ ಸಮಾಜಗಳ ಮುಖಂಡರು ಚಿತ್ರದಲ್ಲಿರುವರು. ಮೂಡಲಗಿಯಲ್ಲಿ ಜ.24ರಂದು ಹಿಂದೂ ಸಮ್ಮೇಳನ ಮೂಡಲಗಿ: ‘ಮೂಡಲಗಿಯ ಹಿಂದೂ ಸಮ್ಮೇಳನ ಸಂಚಾಲನಾ ಸಮತಿಯಿಂದ ಜ.24 (ಶನಿವಾರ)ರಂದು ಸಂಜೆ 4ಕ್ಕೆ ಬಸವ ರಂಗ ಮಂಟಪದ ಬಳಿಯಲ್ಲಿ ಬೃಹತ್ ಹಿಂದೂ ಸಮ್ಮೇಳನ ಜರುಗಲಿದೆ’ ಎಂದು ಸಮ್ಮೇಳನದ ನೇತೃತ್ವವಹಿಸಿರುವ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು. ಇಲ್ಲಿಯ …

    Read More »
  • 20 ಜನವರಿ

    ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಸಾರಾಯಿಯನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರು ಪ್ರತಿಭಟಿಸುವ ಮುನ್ನವೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆಯನ್ನು ನೀಡಿದರು. ಮತಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಅಕ್ರಮ …

    Read More »
  • 19 ಜನವರಿ

    ಯುವ ಸಾಧಕ ಹಣಮಂತ ಮದಣ್ಣವರ ಗೆ ರಾಜ್ಯ ಯುವ ಪ್ರಶಸ್ತಿ ಪ್ರಧಾನ

    ಮೂಡಲಗಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಅಮೆಚೂರ್ ಕಬಡ್ಡಿ ಅಸೋಸಿಷನ್ ಮೂಡಲಗಿ ತಾಲೂಕ ಅಧ್ಯಕ್ಷ ಹಣಮಂತ ಮದಣ್ಣವರ ಅವರಿಗೆ ನೀಡಿ ಗೌರವಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಪಂಜು ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಹಣಮಂತ ಮದಣ್ಣವರ ಅವರಿಗೆ ಪ್ರಶಸ್ತಿಯನ್ನು ಪುತ್ತೂರು ಶಾಸಕಿ …

    Read More »
  • 18 ಜನವರಿ

    ಜ.24ರಂದು ಮೂಡಲಗಿಯಲ್ಲಿ ಬೃಹತ್ ಹಿಂದೂ ಸಮ್ಮೇಳನ

      ಮೂಡಲಗಿ: ಪಟ್ಟಣದ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯಿಂದ ಜ.24ರಂದು ಹಿಂದೂ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಮದ್ಯಾಹ್ನ 2ಗಂಟೆಗೆ ಶ್ರೀ ಶಿವಬೋಧರಂಗ ಮಠದಿಂದ ಶ್ರೀ ಬಸವ ಮಂಟಪದವರೆಗೆ ಶೋಭಾ ಯಾತ್ರೆ ನಡೆಯುವದು. ಸಂಜೆ 4ಗಂಟೆಗೆ ಬಸವ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವದು ಎಂದು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ಹೇಳಿದರು. ಅವರು ಶನಿವಾರ ಸಂಜೆ ಶ್ರೀ ಶಿವಬೋಧರಂಗ ಮಠದಲ್ಲಿ ಹಿಂದೂ ಸಮ್ಮೇಳನದ ಕುರಿತು ನಡೆದ ಪೂರ್ವಬಾವಿ …

    Read More »
  • 18 ಜನವರಿ

    ಆರ್.ಡಿ.ಎಸ್. ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ

      ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭವು ಮುಂಜಾನೆ 9 ಘಂಟೆಗೆ ಮಹಾವಿದ್ಯಾಲಯದ ಆವರಣದಲ್ಲಿ ಜರಗಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಅತಿಥಿಗಳಾಗಿ ಅಂಕಲಿಯ ಕೆಎಲ್‍ಇ ಪಿಯು ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಪ್ರಖ್ಯಾತ ಸಾಹಿತಿಗಳಾದ ಡಾ. ಸುಬ್ರಾವ ಎಂಟೆತ್ತಿನವರ, ಯಮಕನಮರಡಿಯ ಸಿಇಎಸ್ ಪಿಯು ಕಾಲೇಜಿನ …

    Read More »
  • 17 ಜನವರಿ

    11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

      ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ನೂತನವಾಗಿ ನೇಮಕಾತಿಯನ್ನು ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಲಹೆ ಮಾಡಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಶಿಶು ಅಭಿವೃದ್ಧಿ ಯೋಜನೆಯಿಂದ ಜರುಗಿದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದ ಅವರು, ಶಿಸ್ತು, ಸಂಯಮದಿಂದ ಕೆಲಸ ಮಾಡಿ ಮಕ್ಕಳ …

    Read More »
  • 15 ಜನವರಿ

    .

    Read More »
  • 14 ಜನವರಿ

    ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿಂದ ಎಳ್ಳು ಬೆಲ್ಲ ವಿನಿಮಯ

    ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಕ್ರಾತಿ ಹಬ್ಬದ ಪ್ರಯುಕ್ತ ಪುರ ಜನರಿಂದ ಎಳ್ಳು ಬೆಲ್ಲ (ಸಿಹಿ) ವಿನಿಮಯ ಕಾರ್ಯಕ್ರಮ ಬುಧವಾರ ಜ.14ರಂದು ಸಂಭ್ರಮದಿಂದ ನಡೆಯಿತು. ಸ್ಥಳೀಯ ಎಲ್ಲಾ ದೇವರ ದೇವಾಲಯಗಳಲ್ಲ್ಲಿ ಪುರ ಜನರಿಂದ ಪೂಜೆ, ನೈವೇದ್ಯ ಸಮರ್ಪಪನೆ ನಡೆದ ಬಳಿಕ ಸಂಜೆ ಹೊತ್ತು ಬೆಟಗೇರಿ ಗ್ರಾಮದ ಪ್ರತಿ ಮನೆಗಳಲ್ಲಿ ಹಾಗೂ ಅಕ್ಕ-ಪಕ್ಕದ ಮನೆಯಲ್ಲಿರುವ ವೃದ್ಧರಿಗೆ, ಹಿರಿಯರಿಗೆ ಮಕ್ಕಳು, ಮಹಿಳೆಯರು, ವೃದ್ದರು ಜಾತಿ, ಮತ, ಪಂಥ ಎನ್ನದೇ ಒಬ್ಬರಿಗೊಬ್ಬರೂ ನಾನು …

    Read More »
  • 13 ಜನವರಿ

    ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ- ವೀರೇಶ ಪಾಟೀಲ

    ಬೆಳಗಾವಿ : ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಭ್ರಾತೃತ್ವದ ಸಂದೇಶ ಸಾರಿದ ಸಂತ. ಅವರೂಬ್ಬರು ಪರಿಪೂರ್ಣ ವ್ಯಕ್ತಿ . ಯುವಜನರಿಗೆ ಚೇತನ್ಯೆ ಸ್ವರೂಪಿ . ಉಪನ್ಯಾಸಕರಾದ ವಿರೇಶ ಪಾಟೀಲ ಅಭಿಪ್ರಾಯ ಪಟ್ಟರು. ಎಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸಂದೇಶ ಭಾರತಿಯರಲ್ಲಿ ಎಂದಿಗೂ ನವಚೈತನ್ಯೆ ತುಂಬುವ ಮಾತು ತಮ್ಮ ಬದುಕಿನ ರೀತಿಯಿಂದಲೇ ಯುವಕರ ಪಾಲಿನ ಸ್ಪೂರ್ತಿಯ ಚಲುಮೆಯಾದ ಸ್ವಾಮಿ ವಿವೇಕಾನಂದರು ಎಂದು ಉಪನ್ಯಾಸಕರಾದ ವಿರೇಶ ಪಾಟೀಲ ಜನರಿಗೆ ಕರೆ …

    Read More »
  • 13 ಜನವರಿ

    ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮ

    ಮೂಡಲಗಿ: “ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ ಜ್ಞಾನ ಗಂಗೋತ್ರಿಯ ಶಾಲೆಯ ಸಾಧನೆ ಶ್ಲಾಘನೀಯ. ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾವಂತ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಈ ಸಂಸ್ಥೆಯ ಕೊಡುಗೆ ಅಪಾರವಾಗಿದೆ”ಎಂದು ಮೂಡಲಗಿ ಬಿಇಒ ಪ್ರಕಾಶ ಹಿರೇಮಠ ಹೇಳಿದರು. ಅವರು ತಾಲೂಕಿನ ರಾಜಾಪೂರ ಗ್ರಾಮದ ಪ್ರತಿಷ್ಠಿತ ಜ್ಞಾನಗಂಗೋತ್ರಿ ಪ್ರೌಢಶಾಲೆಯಲ್ಲಿ ೧೩ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಹುಮಾನ ವಿತರಣಾ ಸಮಾರಂಭ …

    Read More »