ಕೆಲವೇ ದಿನಗಳಲ್ಲಿ ಅವರಾದಿಯಿಂದ ತಿಮ್ಮಾಪೂರವರೆಗಿನ 18 ಕೋಟಿ ರೂಗಳ ವೆಚ್ಚದ ರಸ್ತೆ ಕಾಮಗಾರಿ ಪೂರ್ಣ-ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್ಎಚ್ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ …
Read More »TimeLine Layout
ಫೆಬ್ರವರಿ, 2023
-
19 ಫೆಬ್ರವರಿ
ಶಿವನ ಧ್ಯಾನವು ಜೀವನದಲ್ಲಿ ಶಾಂತಿ, ನೆಮ್ಮದಿ ತರುತ್ತದೆ
ಶಿವನ ಧ್ಯಾನವು ಜೀವನದಲ್ಲಿ ಶಾಂತಿ, ನೆಮ್ಮದಿ ತರುತ್ತದೆ ಮೂಡಲಗಿ: ಶಿವರಾತ್ರಿ ದಿನದಂದು ಮಾಡುವ ಉಪವಾಸ, ಧ್ಯಾನ ಮತ್ತು ಪ್ರಾರ್ಥನೆ ಇವುಗಳಿಂದ ದೇವರ ಅನುಗ್ರಹವಾಗುವುದು’ ಎಂದು ವಿಜಯಪುರದ ಪ್ರಜಾಪಿತ ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಶೈಲಾ ಅಕ್ಕನವರು ಹೇಳಿದರು. ಇಲ್ಲಿಯ ಲಕ್ಷ್ಮೀನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದದಲ್ಲಿ 87ನೇ ಶಿವರಾತ್ರಿಯನ್ನು ಧ್ಜಜಾರೋಹಣವನ್ನು ನೇರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಶುದ್ಧ ಮನಸ್ಸು ಮತ್ತು ಸಾತ್ವಿಕ ಆಹಾರವು ಮನುಷ್ಯನಲ್ಲಿ ಶಾಂತಿ, …
Read More » -
19 ಫೆಬ್ರವರಿ
ಮೂಡಲಗಿ: ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ಉದ್ಘಾಟನೆ
ಮೂಡಲಗಿ: ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ಉದ್ಘಾಟನೆ ಮೂಡಲಗಿ: ಪಟ್ಟಣದ ನಾಗಲಿಂಗ ನಗರದ ಹತ್ತಿರ ಗುರ್ಲಾಪೂರ ರಸ್ತೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದ ಉದ್ಘಾಟನಾ ಸಮಾರಂಭ ರವಿವಾರದಂದು ಜರುಗಿತು. ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರರಕ್ಕೆ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಪೂಜೆಸಲ್ಲಿಸಿ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ನಾಡ ಕಂಡ ಅಪ್ರತಿಮ ಅರಸ. ಹಿಂದೂ ಸ್ವರಾಜ ನಿರ್ಮಾಣದ ಕನಸಾಗಿತ್ತು. ಶಿವಾಜಿ ಮಹಾರಾಜರ ಧೈರ್ಯ ಇಂದಿನ ಯುವಕರಿಗೆ …
Read More » -
19 ಫೆಬ್ರವರಿ
ಅರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ್- ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ ೨.೨೦ ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಈಚೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿಗಳನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮೆಳವಂಕಿ ಗೌಡನ ಕ್ರಾಸದಿಂದ …
Read More » -
18 ಫೆಬ್ರವರಿ
ಚಂದ್ರಮ್ಮದೇವಿ ಜಾತ್ರಾ ಮಹೋತ್ಸವ ಹೊನಕುಪ್ಪಿ
ಚಂದ್ರಮ್ಮದೇವಿ ಜಾತ್ರಾ ಮಹೋತ್ಸವ ಹೊನಕುಪ್ಪಿ ಕುಲಗೋಡ: ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಶ್ರೀ ಚಂದ್ರಮ್ಮದೇವಿ ಜಾತ್ರಾ ಮಹೋತ್ಸವ ರವಿವಾರ 19 ಸೋಮವಾರ 20 ರಂದು ಅದ್ಧೂರಿಯಾಗಿ ನಡೆಯುವದು. ಕಾಯಧಕ್ರಮಗಳ ವಿವರ ರವಿವಾರ ಮುಂಜಾನೆ 6 ದೇವಿಯ ಅಭಿಷೇಕ ಮತ್ತು ಮಹಾಮಂಗಳಾರುತಿ. ರಾತ್ರಿ 9 ಕ್ಕೆ ಹೊನಕುಪ್ಪಿ. ಹಾಲ ಶಿರಗೂರ. ವಡೇರಹಟ್ಟಿ ಗ್ರಾಮಗಳ ಭಜನ ಕಲಾವಿದರಿಂದ ಭಜನ ಕಾರ್ಯಕ್ರಮ. ಸೋಮವಾರ ಮುಂಜಾನೆ 6 ಕ್ಕೆ ಮುತ್ತೈದೆಯರ ಉಡಿ ತುಂಬುವ ಕಾರ್ಯಕ್ರಮ 7 …
Read More » -
18 ಫೆಬ್ರವರಿ
ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ , ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ
ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು …
Read More » -
17 ಫೆಬ್ರವರಿ
ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ.
ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಆರ್ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …
Read More » -
17 ಫೆಬ್ರವರಿ
“ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಪತ್ರಕರ್ತರನ್ನೇ ಮರೆತಂತಿದೆ,- ಲಕ್ಕಣ್ಣ ಸವಸುದ್ದಿ
(ರಾಜ್ಯ ಬಜೆಟ್ ಕುರಿತು ಲಕ್ಕಣ್ಣ ಸವಸುದ್ದಿ ಹೇಳಿಕೆ) ಮೂಡಲಗಿ : “ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಪತ್ರಕರ್ತರನ್ನೇ ಮರೆತಂತಿದೆ, ಪತ್ರಕರ್ತರ ಬಹು ದಿನಗಳ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇರಿದಂತೆ, ಹಿರಿಯ ಪತ್ರಕರ್ತರ ಮಾಶಾಸನ ಹೆಚ್ಚಿಗೆ ಮಾಡಬೇಕಾಗಿತ್ತು. ಜೊತೆಗೆ ಜನ ಸಾಮಾನ್ಯರಿಗೆ ಹೊರೆಯಾಗದಂತಹ ಬಜೆಟ್ ಮಂಡನೆಯಾಗದೆ, ಬಿಜೆಪಿ ಸರ್ಕಾರ ಬಡವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಳೆದ ಬಜೆಟ್ನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ 50ಕೋಟಿ ಅನುದಾನ …
Read More » -
17 ಫೆಬ್ರವರಿ
ಬೆಟಗೇರಿ ಗ್ರಾಮದಲ್ಲಿ ತೋಟಪಟ್ಟಿ ರಸ್ತೆ ಕಾಮಗಾರಿಗೆ ಚಾಲನೆ
ಬೆಟಗೇರಿ ಗ್ರಾಮದಲ್ಲಿ ತೋಟಪಟ್ಟಿ ರಸ್ತೆ ಕಾಮಗಾರಿಗೆ ಚಾಲನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 9 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ಮರಡಿಶಿವಾಪೂರ ಮುಖ್ಯ ರಸ್ತೆಯಿಂದ ಗುರಪ್ಪ ಮಾಕಾಳಿ ಹೊಲದವರೆಗೆ ಸುಮಾರು 3 ಕಿ.ಮೀ, ತೋಟಪಟ್ಟಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮ ಫೆ.16 ರಂದು ನಡೆಯಿತು. ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಮಾತನಾಡಿ, ಅರಭಾಂವಿ …
Read More » -
17 ಫೆಬ್ರವರಿ
ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಗೋಕಾಕ್- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಅನುದಾನದ ಮಹಾಪೂರವೇ ಹರಿದು ಬಂದಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದ್ದು, ಇದೊಂದು ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ೯ ಲಕ್ಷ ಹಾಲು ಉತ್ಪಾದಕರಿಗೆ ೧೦೬೭ …
Read More »
IN MUDALGI Latest Kannada News