Breaking News

TimeLine Layout

ಫೆಬ್ರವರಿ, 2023

  • 11 ಫೆಬ್ರವರಿ

    ಗ್ರಾಮ ಪಂಚಾಯತಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನಕ್ಕೆ ಒತ್ತಾಯ

    ಮೂಡಲಗಿ : ಗ್ರಾಮ ಪಂಚಾಯತಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿಪಡಿಸುವಂತೆ ಒತ್ತಾಯಿಸಿ ಫೆ.14ರಂದು ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ನಡೆಸುವ ಮೂಲಕ ರಾಜ್ಯದ ಗ್ರಾಮ ಪಂಚಾಯತ ನೌಕರರಿಂದ ಅನಿರ್ಧ್ಧಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ರಮೇಶ ಹೋಳಿ ಹಾಗೂ ಮೂಡಲಗಿ ತಾಲೂಕಾ ಉಪಾಧ್ಯಕ್ಷ ಬಸವರಾಜ ಮಿರ್ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾನೂನು ಬದ್ಧ ಕನಿಷ್ಠ …

    Read More »
  • 11 ಫೆಬ್ರವರಿ

    ಕಲ್ಲೋಳಿ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಮೂಡಲಗಿ: ಕೆ.ಎಲ್.ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕಾರ ಕೋರೆ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಲ್.ಇ ವಿಶ್ವವಿದ್ಯಾಲಯ, ಜವಾಹರಲಾಲ ನೇಹರು ವೈದ್ಯಕೀಯ ಹಾಗೂ ಪ್ರಭಾಕರ ಕೋರೆ ಆಸ್ಪತ್ರೆ, ವ್ಯದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ, ಬಸವೇಶ್ವರ ಶಿಕ್ಷಣ ಸಂಸ್ಥೆ ಮತ್ತು ಪ್ರಿಯದರ್ಶಿನಿ ಸಹಕಾರಿ ಪತ್ತಿನ ಸಂಘ ಕಲ್ಲೋಳಿ ಇವುಗಳ ಸಹಯೋಗದಲ್ಲಿ ಫೆ.14ರಂದು ಮುಂಜಾನೆ 10ಗಂಟೆಯಿಂದ ತಾಲೂಕಿನ ಕಲ್ಲೋಳಿ ಪಟ್ಟಣದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ …

    Read More »
  • 11 ಫೆಬ್ರವರಿ

    ವಿದ್ಯಾರ್ಥಿಗಳು ಬದುಕನ್ನು ಅರ್ಥಪೂರ್ಣಗೊಳಿಸಿಕೊಳ್ಳಬೇಕು : ಬಿ. ಪಿ. ಬಂದಿ.

    ವಿದ್ಯಾರ್ಥಿಗಳು ಬದುಕನ್ನು ಅರ್ಥಪೂರ್ಣಗೊಳಿಸಿಕೊಳ್ಳಬೇಕು : ಬಿ. ಪಿ. ಬಂದಿ. ಮೂಡಲಗಿ : ವಿದ್ಯಾರ್ಥಿಗಳು ಬದುಕನ್ನು ಅರ್ಥಪೂರ್ಣಗೊಳಿಸಿಕೊಳ್ಳಬೇಕು ಬದುಕು ರೂಪಿಸುವ ಅಮೂಲ್ಯವಾದ ಶಿಕ್ಷಣವು ಪಿಯು ಹಂತದ ಶಿಕ್ಷಣವಾಗಿದ್ದು ಪ್ರಯತ್ನ ಮತ್ತು ಶ್ರೇದ್ದೆ ಇದ್ದರೆ ಯಶಸ್ಸು ಖಂಡಿತ ಇಂದಿನ ಸ್ಪರ್ದೇಗಳಲ್ಲಿ ಅಧ್ಯಯನಕ್ಕೆ ಹೆಚ್ಚು ಮಹತ್ವ ಇದೆ ಬದುಕಿನ ಮಹತ್ವ ತಿಳಿದು ನಿಮಗಾಗಿ ತಂದೆ ತಾಯಿಗಳು ಗುರುಗಳು ಪಡುವ ಶ್ರಮವನ್ನು ಅರಿತು ಅಧ್ಯಯನದಲ್ಲಿ ವಿದ್ಯಾರ್ಥಿಗಳು ತೊಡಗುವುದು ಅವಶ್ಯಕ ಎಂದು ಮೂಡಲಗಿಯ ಕಲಾ ಹಾಗೂ ವಾಣಿಜ್ಯ …

    Read More »
  • 11 ಫೆಬ್ರವರಿ

    ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ

    ಗೋಕಾಕ : ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣವು ಪ್ರಮುಖ ಹೋಬಳಿಯಾಗಿದ್ದು, ಸುತ್ತಮುತ್ತಲಿನ 50ಕ್ಕೂ ಅಧಿಕ ಗ್ರಾಮಗಳಿಗೆ …

    Read More »
  • 11 ಫೆಬ್ರವರಿ

    ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಿ- ಭೀಮಪ್ಪ ಗಡಾದ

    ಮೂಡಲಗಿ : ಅರಭಾಂವಿ ಕ್ಷೇತ್ರದಲ್ಲಿ ಸರಕಾರಕ್ಕ ಸೇರಿದ ಆಸ್ತಿಗಳ ಮೇಲೆ ಬಿಎಲ್‍ಜಿ ಎಂದು ಹಾಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಹೆಸರು ಬರೆಯುತ್ತಿದ್ದು ಇದನ್ನು ನೋಡುತ್ತಿದ್ದರೂ ಕೂಡಾ ಯಾವುದೇ ಕ್ರಮ ಕೈಗೊಳ್ಳದೇ ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ದಾಖಲೆಗಳ ಸಮೇತವಾಗಿ ದೂರು ನೀಡಲಾಗಿದೆ ಎಂದು ಮಾಹಿತಿ ಹಕ್ಕು …

    Read More »
  • 11 ಫೆಬ್ರವರಿ

    ವಿಶ್ವಕರ್ಮ ಸಮಾಜದ ಜನರನ್ನು ಒಗ್ಗೂಡಿಸುವ ಸಲುವಾಗಿ ಫೆ.14ರಂದು ಬೃಹತ ಸಮಾವೇಶ

    ಮೂಡಲಗಿ : ವಿಶ್ವಕರ್ಮ ಸಮಾಜದ ಜನರಿಗೆ ಸ್ಥಳೀಯ ಗ್ರಾಪಂ, ಪುಸರಭೆ, ಜಿಪಂ ಗಳಲ್ಲಿ ಸ್ಥಾನಮಾನ ನೀಡಬೇಕು ಹಾಗೂ ನಮ್ಮ ಸಮಾಜಕ್ಕೆ ಸರ್ಕಾರದಿಂದ ಬರುವಂತ ಸೌಲಭ್ಯಗಳ ಕುರಿತು ಸಮಾಜದ ಜನರಿಗೆ ಮಾಹಿತಿ ನೀಡಿ ಸಮಾಜದ ಜನರನ್ನು ಒಗ್ಗೂಡಿಸುವ ಸಲುವಾಗಿ ಫೆ.14ರಂದು ಪಟ್ಟಣದ ಬಸವ ಮಂಟಪದಲ್ಲಿ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಹಿರಿಯ ಮುಖಂಡ ಗಜಾನನ ಪತ್ತಾರ ಹೇಳಿದರು. ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ …

    Read More »
  • 10 ಫೆಬ್ರವರಿ

    ಕೇಂದ್ರ ಸರ್ಕಾರದಿಂದ ಎಸ್ ಸಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ರೂ 1690.72 ಕೋಟಿ ಬಿಡುಗಡೆ – ಸಂಸದ ಈರಣ್ಣ ಕಡಾಡಿ

    ಕೇಂದ್ರ ಸರ್ಕಾರದಿಂದ ಎಸ್ ಸಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ರೂ 1690.72 ಕೋಟಿ ಬಿಡುಗಡೆ – ಸಂಸದ ಈರಣ್ಣ ಕಡಾಡಿ ಮೂಡಲಗಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಕರ್ನಾಟಕಕ್ಕೆ ಕಳೆದ 5 ವರ್ಷಗಳಲ್ಲಿ ಎಸ್.ಸಿ ಗಳ ಸಾಮಾಜಿಕ ಉನ್ನತಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ರೂ. 1690.72 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ …

    Read More »
  • 10 ಫೆಬ್ರವರಿ

    ಪೆ.18ರಂದು ದಲಿತ ವಚನಕಾರರ ಜಯಂತಿಯನ್ನು ತಾಲೂಕಾಡಳಿತದಿಂದ ಆಚರಿಸಲಾಗುವುದು- ತಹಶೀಲ್ದಾರ ಪ್ರಶಾಂತ ಚನಗೊಂಡ

    ಮೂಡಲಗಿ: ಪೆ.18ರಂದು ದಲಿತ ವಚನಕಾರರ ಜಯಂತಿಯನ್ನು ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡಬೇಕು ಹಾಗೂ ತಾಲೂಕಾಡಳಿತದಿಂದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜಯಂತಿಯನ್ನು ಆಚರಿಸಲಾಗುವುದು ಇದೇ ಸಂದರ್ಭದಲ್ಲಿ ದಲಿತ ಸಮಾಜದಲ್ಲಿ ಇರುವಂತ ಹಿರಿಯ ಜನಪದ ಕಲಾವಿದರನ್ನು ಸತ್ಕರಿಸಿ ಗೌರವಿಸಲಾಗುವುದು ಎಂದು ತಹಶೀಲ್ದಾರ ಪ್ರಶಾಂತ ಚನಗೊಂಡ ಹೇಳಿದರು. ಶುಕ್ರವಾರದಂದು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜರುಗಿದ ದಲಿತ ವಚನಕಾರರ ಜಯಂತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕಾಡಳಿತದಿಂದ ಜಯಂತಿಯನ್ನು …

    Read More »
  • 9 ಫೆಬ್ರವರಿ

    ಹೊಸ ಕಾನೂನು, ತಿದ್ದುಪಡಿಗಳನ್ನು ಸಹಕಾರ ಸಂಘಗಳು ಅನುಸರಿಸಬೇಕು- ವರ್ಧಮಾನ ಬೋಳಿ

    ಮೂಡಲಗಿಯ ಬಸವೇಶ್ವರ ಅರ್ಬನ್ ಸೊಸೈಟಿಯ ಸಭಾಭವನದಲ್ಲಿ ಗುರುವಾರ ಜರುಗಿದ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ತರಬೇತಿ ಶಿಬಿರವನ್ನು ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಉದ್ಘಾಟಿಸಿದರು. ‘ಹೊಸ ಕಾನೂನು, ತಿದ್ದುಪಡಿಗಳನ್ನು ಸಹಕಾರ ಸಂಘಗಳು ಅನುಸರಿಸಬೇಕು’ ಮೂಡಲಗಿ: ‘ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಾಹಕರು ಸಹಕಾರ ಇಲಾಖೆಯು ಮಾರ್ಪಡಿಸುವ ತಿದ್ದುಪಡಿಗಳು ಹಾಗೂ ಬದಲಾದ ಕಾನೂನು ಅನ್ವಯ ಸಂಘ, ಸಂಸ್ಥೆಗಳನ್ನು ನಿರ್ವಹಿಸಬೇಕು’ ಎಂದು ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ …

    Read More »
  • 9 ಫೆಬ್ರವರಿ

    ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ : ನ್ಯಾಯವಾಧಿ ಲಕ್ಷ್ಮಣ ಅಡಿಹುಡಿ

    ಮೂಡಲಗಿ: ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ. ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ನ್ಯಾಯವಾಧಿ ಲಕ್ಷ್ಮಣ ಅಡಿಹುಡಿ ಯುವಕರಿಗೆ ಕಿವಿಮಾತು ಹೇಳಿದರು. ಇತ್ತಿಚ್ಚೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ, ವಿಜಯಪುರ ಜಿಲ್ಲಾ ಹಾಗೂ ತಾಲೂಕಾ ಘಟಕ ಮುದ್ದೇಬಿಹಾಳ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯುಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ …

    Read More »