Breaking News

TimeLine Layout

ಫೆಬ್ರವರಿ, 2023

  • 10 ಫೆಬ್ರವರಿ

    ಪೆ.18ರಂದು ದಲಿತ ವಚನಕಾರರ ಜಯಂತಿಯನ್ನು ತಾಲೂಕಾಡಳಿತದಿಂದ ಆಚರಿಸಲಾಗುವುದು- ತಹಶೀಲ್ದಾರ ಪ್ರಶಾಂತ ಚನಗೊಂಡ

    ಮೂಡಲಗಿ: ಪೆ.18ರಂದು ದಲಿತ ವಚನಕಾರರ ಜಯಂತಿಯನ್ನು ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡಬೇಕು ಹಾಗೂ ತಾಲೂಕಾಡಳಿತದಿಂದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜಯಂತಿಯನ್ನು ಆಚರಿಸಲಾಗುವುದು ಇದೇ ಸಂದರ್ಭದಲ್ಲಿ ದಲಿತ ಸಮಾಜದಲ್ಲಿ ಇರುವಂತ ಹಿರಿಯ ಜನಪದ ಕಲಾವಿದರನ್ನು ಸತ್ಕರಿಸಿ ಗೌರವಿಸಲಾಗುವುದು ಎಂದು ತಹಶೀಲ್ದಾರ ಪ್ರಶಾಂತ ಚನಗೊಂಡ ಹೇಳಿದರು. ಶುಕ್ರವಾರದಂದು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜರುಗಿದ ದಲಿತ ವಚನಕಾರರ ಜಯಂತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕಾಡಳಿತದಿಂದ ಜಯಂತಿಯನ್ನು …

    Read More »
  • 9 ಫೆಬ್ರವರಿ

    ಹೊಸ ಕಾನೂನು, ತಿದ್ದುಪಡಿಗಳನ್ನು ಸಹಕಾರ ಸಂಘಗಳು ಅನುಸರಿಸಬೇಕು- ವರ್ಧಮಾನ ಬೋಳಿ

    ಮೂಡಲಗಿಯ ಬಸವೇಶ್ವರ ಅರ್ಬನ್ ಸೊಸೈಟಿಯ ಸಭಾಭವನದಲ್ಲಿ ಗುರುವಾರ ಜರುಗಿದ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ತರಬೇತಿ ಶಿಬಿರವನ್ನು ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಉದ್ಘಾಟಿಸಿದರು. ‘ಹೊಸ ಕಾನೂನು, ತಿದ್ದುಪಡಿಗಳನ್ನು ಸಹಕಾರ ಸಂಘಗಳು ಅನುಸರಿಸಬೇಕು’ ಮೂಡಲಗಿ: ‘ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಾಹಕರು ಸಹಕಾರ ಇಲಾಖೆಯು ಮಾರ್ಪಡಿಸುವ ತಿದ್ದುಪಡಿಗಳು ಹಾಗೂ ಬದಲಾದ ಕಾನೂನು ಅನ್ವಯ ಸಂಘ, ಸಂಸ್ಥೆಗಳನ್ನು ನಿರ್ವಹಿಸಬೇಕು’ ಎಂದು ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ …

    Read More »
  • 9 ಫೆಬ್ರವರಿ

    ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ : ನ್ಯಾಯವಾಧಿ ಲಕ್ಷ್ಮಣ ಅಡಿಹುಡಿ

    ಮೂಡಲಗಿ: ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ. ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ನ್ಯಾಯವಾಧಿ ಲಕ್ಷ್ಮಣ ಅಡಿಹುಡಿ ಯುವಕರಿಗೆ ಕಿವಿಮಾತು ಹೇಳಿದರು. ಇತ್ತಿಚ್ಚೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ, ವಿಜಯಪುರ ಜಿಲ್ಲಾ ಹಾಗೂ ತಾಲೂಕಾ ಘಟಕ ಮುದ್ದೇಬಿಹಾಳ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯುಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ …

    Read More »
  • 9 ಫೆಬ್ರವರಿ

    ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕಲಿಕಾ ಹಬ್ಬವು ಸಹಕಾರಿ : ಮೋಹಮನಕುಮಾರ ಹಂಚಾಟಿ

    ಮೂಡಲಗಿ: ‘ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕಲಿಕಾ ಹಬ್ಬವು ಸಹಕಾರಿಯಾಗಿದ್ದು, ಮಕ್ಕಳು ಕಲಿಕೆಯನ್ನು ಹಬ್ಬವನ್ನಾಗಿ ಸಂಭ್ರಮಿಸುವ ಅವಕಾಶವಾಗಿದೆ’ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಮೋಹಮನಕುಮಾರ ಹಂಚಾಟಿ ಹೇಳಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯ್ತಿ, ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷತಾ ಇಲಾಖೆ, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮೂರು ದಿನಗಲ ಚಿಕ್ಕೋಡಿ …

    Read More »
  • 9 ಫೆಬ್ರವರಿ

    ತಪಸಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

    ತಪಸಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಈಗಾಗಲೇ ತಪಸಿ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಗೋಕಾಕ ಉಪವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಯೋಗದಲ್ಲಿ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಫೆ.8ರಂದು ನಡೆದ ರಾಷ್ಟ್ರೀಯ ಜಲಜೀವನ ಮಿಷನ್ ಮತ್ತು ಎಲ್‍ಎಂಎಂ ಯೋಜನೆಯ ಅನುದಾನದಡಿಯಲ್ಲಿ …

    Read More »
  • 8 ಫೆಬ್ರವರಿ

    ಮೂಡಲಗಿ ತಾಲೂಕಾ ಗ್ರಾ.ಪಂ ನೌಕರರ ಸಂಘದ ವಿವೀಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮನವಿ

    ಮೂಡಲಗಿ ತಾಲೂಕಾ ಗ್ರಾ.ಪಂ ನೌಕರರ ಸಂಘದ ವಿವೀಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮನವಿ ಮೂಡಲಗಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ (ಸಿ ಐ ಟಿ ಯು ಸಂಯೋಜಿತ) ಮೂಡಲಗಿ ತಾಲೂಕಾ ಸಮಿತಿಯಿಂದ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿಸಲ್ಲಿಸಿದರು. ಹಲವಾರು ವರ್ಷಗಳಿಂದ ಗ್ರಾಮ ಪಂಚಾಯತಿಗಳಲ್ಲಿ ದುಡಿಯುತ್ತಿರುವ ಗ್ರಾಮ ಪಂಚಾಯತ ನೌಕರರು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳದೇ ಸಾಮಾಜಿಕವಾಗಿ, …

    Read More »
  • 7 ಫೆಬ್ರವರಿ

    7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ

    ಬೆಟಗೇರಿ:ಗ್ರಾಮದ ಚೈತನ್ಯ ಗ್ರುಪ್ಸ್‍ನ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಕನ್ನಡ ಮಾಧ್ಯಮ ಮತ್ತು ಶ್ರೀಮತಿ ಸತ್ತೆವ್ವ ದೇಯಣ್ಣವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಉಭಯ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬಿಳ್ಕೂಡುವ ಸಮಾರಂಭ ನಡೆಯಿತು. ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ, ಶಿಕ್ಷಣಪ್ರೇಮಿ ಬಸಪ್ಪ ಮೇಳೆಣ್ಣವರ ಜ್ಯೋತಿ ಬೆಳಗಿಸಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಉಭಯ ಮಾಧ್ಯಮ ಶಾಲೆಗಳ ಆಡಳಿತಾಧಿಕಾರಿ ರವಿ ಭರಮನಾಯ್ಕ …

    Read More »
  • 7 ಫೆಬ್ರವರಿ

    ಅವಶ್ಯಕ ಸೌಲಭ್ಯ ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ: ಲಕ್ಷ್ಮಣ ಚಂದರಗಿ

    ಅವಶ್ಯಕ ಸೌಲಭ್ಯ ಕಲ್ಪಿಸಿಕೊಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ: ಲಕ್ಷ್ಮಣ ಚಂದರಗಿ ವರದಿ: ಅಡಿವೇಶ ಮುಧೋಳ ಬೆಟಗೇರಿ:ಕೆಎಂಎಫ್ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾರ್ಗದರ್ಶನದಂತೆ ಈಗಾಗಲೇ ಬೆಟಗೇರಿ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಗೋಕಾಕ ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು …

    Read More »
  • 6 ಫೆಬ್ರವರಿ

    ಮೂಡಲಗಿ ತಹಸೀಲ್ದಾರರಾಗಿ ಚನಗೊಂಡ ಅಧಿಕಾರ ಸ್ವೀಕರಿಸಿದರು.

    ಮೂಡಲಗಿ ತಹಸೀಲ್ದಾರರಾಗಿ ಚನಗೊಂಡ ಅಧಿಕಾರ ಸ್ವೀಕರಿಸಿದರು. ಮೂಡಲಗಿ: ಮೂಡಲಗಿ ತಾಲೂಕಾ ತಹಸೀಲ್ದಾರರಾಗಿ ಪ್ರಶಾಂತ್ ಎಸ್ ಚನಗೊಂಡ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಮೂಡಲಗಿ ತಹಶೀಲ್ದಾರರಾಗಿ ಇಂದು ಅಧಿಕಾರ ಸ್ವೀಕರಿಸಿದ ಚನಗೊಂಡ ಅವರನ್ನು ಮೂಡಲಗಿ ಗ್ರೇಡ್ ಟು ತಹಸೀಲ್ದಾರ್ ಶಿವಾನಂದ ಬಬಲಿ ಮತ್ತು ಶಿರಸ್ತೇದಾರ ಪರಸಪ್ಪ ನಾಯ್ಕ ಸತ್ಕರಿಸಿ ಸ್ವಾಗತಿಸಿಕೊಂಡರು. ಪ್ರಶಾಂತ್ ಎಸ್ ಚನಗೊಂಡ ಅವರು ರಬಕವಿ, ಬನಹಟ್ಟಿ , ಹಾಗೂ ಜಮಖಂಡಿ ತಹಶೀಲ್ದಾರರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ತಿಕೋಟ ತಹಶೀಲ್ದಾರರಾಗಿ …

    Read More »
  • 6 ಫೆಬ್ರವರಿ

    ಲಕ್ಷ್ಮೀದೇವಿ ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ – ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ (ಧರ್ಮಟ್ಟಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ ಈ ದೇವಿಯ ದರ್ಶನ ಪಡೆಯುತ್ತ ನಾನು ಕೃತಾರ್ಥನಾಗಿದ್ದೇನೆ ಎಂದು ಅವರು ತಿಳಿಸಿದರು. ಗ್ರಾಮದ …

    Read More »