Breaking News

TimeLine Layout

ಆಗಷ್ಟ್, 2022

  • 22 ಆಗಷ್ಟ್

    ಸೋಬಾನ ಪದಗಳ ಹಾಡುಗಾರ್ತಿ ಕಾಶವ್ವ ಪೂಜೇರಿ ಇನ್ನಿಲ್ಲಾ

      ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನಡೆಯುವ ಮದುವೆ, ಮುಂಜೆ, ಮನೆಗಳಲ್ಲಿ ಜರುಗುವ ವಿವಿಧ ಸಭೆ, ಸಮಾರಂಭಗಳಲ್ಲಿ ತಪ್ಪದೇ ಹಾಜರಾಗಿ ಜನಪದ ಹಾಡುಗಳನ್ನು ಹಾಡುತ್ತಾ, ನಾಡಿನ ಜನಪದ, ಕಲೆ, ಸಂಸ್ಕøತಿ, ಸಂಪ್ರದಾಯಗಳನ್ನು ಉಳಿಸಿ, ಬೆಳೆಸಲು ಇಂದಿನ ಪೀಳಿಗೆಗಳಲ್ಲಿ ಜನಪದ ಹಾಡುಗಳನ್ನು ಪರಿಚಯಿಸುತ್ತಾ ಬಂದಿರುವ ಬೆಟಗೇರಿ ಗ್ರಾಮದ ಕ್ಷತ್ರೀಯ ಸಮಾಜದ ಹಿರಿಯ ಜೀವಿ, ಸೋಬಾನ ಪದಗಳ ಹಾಡುಗಾರ್ತಿ, ಸ್ಥಳೀಯ ಜನಪದ ಹಾಡುಗಳ ಗಾನಕೋಗಿಲೆ ಕಾಶವ್ವ ಭರಮಪ್ಪ ಪೂಜೇರಿ(90)ಅವರು ಆ.21ರಂದು ನಿಧನರಾದರು. ಮೃತರು …

    Read More »
  • 22 ಆಗಷ್ಟ್

    ಬೆಟಗೇರಿಯಲ್ಲಿ ಜರುಗಲಿರುವ 38ನೇ ಸತ್ಸಂಗ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ಆ.29 ರಿಂದ ಸೆ.2ರ ವರೆಗೆ ನಡೆಯಲಿರುವ 38ನೇ ಸತ್ಸಂಗ ಸಮ್ಮೇಳನದ ಆಯೋಜನೆಯ ಹಿನ್ನಲೆಯಲ್ಲಿ ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲಿ ಇಚೆಗೆ ಸತ್ಸಂಗ ಸಮ್ಮೇಳನ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಇದೇ ಆ.29ರಿಂದ ಸೆ.2ರವರೆಗೆ ನಡೆಯಲಿರುವ 38ನೇ ಸತ್ಸಂಗ ಸಮೇಳನದ ಸಮಗ್ರ ಯಶಸ್ವಿಗೆ ಇಲ್ಲಿಯ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, …

    Read More »
  • 22 ಆಗಷ್ಟ್

    ಬೆಟಗೇರಿ ಪ್ರೌಢ ಶಾಲೆಯಲ್ಲಿ ಸದ್ಭಾವನಾ ದಿನ ಆಚರಣೆ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಸದ್ಭಾವನಾ ದಿನ ಆಚರಣೆ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಸದ್ಭಾವನಾ ದಿ, ಪ್ರತಿಜ್ಞಾ ವಿಧಿ ಸ್ವೀಕಾರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರು, ಸಿಬ್ಬಂದಿಗೆ ಜಾತಿ, ಮತ, ಧರ್ಮ, ಪ್ರದೇಶ ಹಾಗೂ ಭಾಷೆಯಬೇಧ ಭಾವವಿಲ್ಲದೇ ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಮೋಹನ ತುಪ್ಪದ, …

    Read More »
  • 22 ಆಗಷ್ಟ್

    ‘ಶ್ರದ್ಧೆ, ಪರಿಶ್ರಮದಿಂದ ಕಾರ್ಯಮಾಡಿದರೆ ಯಶಸ್ಸು ಕಂಡಿತವಾಗಿ ದೊರೆಯುತ್ತದೆ’ – ಜಡಿಸಿದ್ಧೇಶ್ವರಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿ

    ಸಿಎ ಪಾಸು ಮಾಡಿರುವ ಬಾಹುಬಲಿಗೆ ಅಭಿನಂದನಾ ಸಮಾರಂಭ ಮೂಡಲಗಿ: ‘ಶ್ರದ್ಧೆ, ಪರಿಶ್ರಮದಿಂದ ಕಾರ್ಯಮಾಡಿದರೆ ಯಶಸ್ಸು ಕಂಡಿತವಾಗಿ ದೊರೆಯುತ್ತದೆ’ ಎಂದು ಸುಣಧೋಳಿಯ ಜಡಿಸಿದ್ಧೇಶ್ವರಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿ ಹೇಳಿದರು. ಸಮೀಪದ ಪಟಗುಂದಿ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಲೆಕ್ಕಪರಿಶೋಧನಾ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಬಾಹುಬಲಿ ಹೊಸಮನಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸಾಧನೆ ಮಾಡುವ ಛಲ ಇರಬೇಕು ಅದರೊಂದಿಗೆ ಪ್ರಯತ್ನ ಇರಬೇಕು ಎಂದರು. ಪಟಗುಂದಿ ಗ್ರಾಮದ ಬಾಹುಬಲಿ …

    Read More »
  • 21 ಆಗಷ್ಟ್

     ಮೋಬೈಲ ಯುಗದಲ್ಲಿ ಸಂಭಂದಗಳು ಮರೆತು ಹೋಗುತ್ತಿವೆ: ಶಿವಾನಂದ ಸ್ವಾಮಿಗಳು

    ಕುಲಗೋಡ: ಮೊಬೈಲ್ ಯುಗದಲ್ಲಿ ಗುರು ಹಿರಿಯರ ನಾಮಸ್ಮರಣೆ ಮಾಡುವದು ಮರೆಯಾಗಿ ಹೊಗಿದೆ. 20 ವರ್ಷಗಳ ಬಳಿಕ ಸ್ನೇಹಿತರು ಸೇರಿ ಗುರುವಂದನೆ ಮಾಡಿದ್ದು ಅಪರೂಪ ಎಂದು ಮ.ನಿ.ಪ್ರ.ಸ್ವ ಶಿವಾನಂದ ಮಹಾಸ್ವಾಮಿಗಳು ಶ್ರೀ ಜಡಿಸಿದ್ದೇಶ್ವರ ಮಠ ಸುಣಧೋಳಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲೆಯಲ್ಲಿ 2002-03 ನೇ ಸಾಲಿನ ಹಳೆಯ ವಿಧ್ಯಾರ್ಥಿಗಳಿಂದ ಇಂದು ನಡೆದ ಗುರುವಂದನಾ ಹಾಗೂ ಸ್ನೇಹ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಂತ್ರಜ್ಞಾನ ಬೆಳೆದು ಮಾನವನ …

    Read More »
  • 20 ಆಗಷ್ಟ್

    ಶಾಲಾ ವಾಹನ ಚಾಲಕರಿಗೆ ಎಚ್ಚರಿಸುವಂತೆ ಮೂಡಲಗಿ ಪುರಸಭೆ ಸದಸ್ಯರಿಂದ ಮನವಿ

      ಮೂಡಲಗಿ: ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು ವಾಹನ ಚಾಲಕರನ್ನು ಹಾಗೂ ಶಾಲಾ ಮುಖ್ಯಸ್ಥರನ್ನು ಕರೆಸಿ ವಾಹನ ನಿಧಾನವಾಗಿ ಚಲಿಸಲು ನಿರ್ದೇಶನ ನೀಡಬೇಕು, ಶಾಲಾ ಮಕ್ಕಳಿಗೆ ಹಾಗೂ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಯಾವುದೇ ರೀತಿಯ ಅನಾಹುತವಾಗುವುದನ್ನು ತಪ್ಪಿಸುವ ಸಲುವಾಗಿ ಮಕ್ಕಳ ಹಿತದೃಷ್ಟಿಯಿಂದ ಜನಸೇವಾ ಗೆಳೆಯರ ಬಳಗ ಸದಸ್ಯರು ಹಾಗೂ ಪುರಸಭೆ ಸದಸ್ಯರು ಪಿಎಸ್ಐ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹನುಮಂತ ಗುಡ್ಲಮನಿ,ಪುರಸಭೆ ಸದಸ್ಯರಾದ …

    Read More »
  • 20 ಆಗಷ್ಟ್

    ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದ ಭರವಸೆಯಂತೆ ಅ.22ರಂದು 2ಎ ಮೀಸಲಾತಿಯನ್ನು ಘೋಷಣೆ ಮಾಡದಿದ್ದರೆ ಉಪವಾಸ ಸತ್ಯಗ್ರಹ ಮಾಡಲಾಗುವುದು- ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ ಪಿರೋಜಿ

    ಮೂಡಲಗಿ: 2ಎ ಮೀಸಲಾತಿಯನ್ನು ಅ.22ರ ಒಳಗಾಗಿ ಘೋಷಣೆ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದ ಭರವಸೆಯಂತೆ ಅ.22ರಂದು 2ಎ ಮೀಸಲಾತಿಯನ್ನು ಘೋಷಣೆ ಮಾಡದಿದ್ದರೆ ಅ.23ರಂದು ಶಿಗ್ಗಾವ್ ಚೆನ್ನಮ್ಮ ವೃತ್ತದಲ್ಲಿ ಉಪವಾಸ ಸತ್ಯಗ್ರಹ ಮಾಡಲಾಗುವುದೆಂದು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ ಪಿರೋಜಿ ಹೇಳಿದರು. ಶನಿವಾರದಂದು ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲಸಂಗಮ ಮಹಾಪೀಠದ ಪಂಚಮಸಾಲಿ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೇತ್ಯಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿಯ …

    Read More »
  • 20 ಆಗಷ್ಟ್

    ಒಂದು ದೇಶ ಅಥವಾ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬಧುಕಿ ಬಾಳಬೇಕಾದರೆ, ಆ ದೇಶದ ಕನಿಷ್ಠ ಕಾನೂನು ಅರಿವು ಅತ್ಯಗತ್ಯ- ನ್ಯಾಯಾಧೀಶರಾದ ಜ್ಯೋತಿ ಪಾಟೀಲ

    ಮೂಡಲಗಿ: ಒಂದು ದೇಶ ಅಥವಾ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬಧುಕಿ ಬಾಳಬೇಕಾದರೆ, ಆ ದೇಶದ ಕನಿಷ್ಠ ಕಾನೂನು ಅರಿವು ಅತ್ಯಗತ್ಯ ಎಂದು ಮೂಡಲಗಿ ದಿವಾಣಿ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು. ಪಟ್ಟಣದಲ್ಲಿ ಗೋಕಾಕದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯ, ತಾಲೂಕಾ ಕಾನೂನು ಸೇವಾ ಸಮಿತಿ ಗೋಕಾಕ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಆಶ್ರಯದಲ್ಲಿ …

    Read More »
  • 19 ಆಗಷ್ಟ್

    ಆರ್ ಡಿ ಎಸ್ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

    ಮೂಡಲಗಿ: ಶ್ರೀ ಕೃಷ್ಣ ಜನ್ಮಾಷ್ಟಮಿ. ಶ್ರಾವಣ ಮಾಸದ ಅಷ್ಟಮಿಯ ಶುಭ ದಿನದಿಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದ್ದು, ನಾಡಿನ ಜನರು ಸಡಗರ ಸಂಭ್ರಮದಿಂದ ಶ್ರೀ ಕೃಷ್ಣನ ಸ್ಮರಣೆ ಮಾಡುತ್ತಿದ್ದಾರೆ.ಈ ಹಬ್ಬವನ್ನು ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀ ಜಯಂತಿ ಎಂದು ಕರೆಯಲಾಗುತ್ತದೆ. ವಿಷ್ಣುವಿನ ಎಂಟನೇ ಅವತಾರವಾದ ಕೃಷ್ಣನ ಜನ್ಮ ದಿನವನ್ನು ಇದು ಸೂಚಿಸುತ್ತದೆ. ಎಲ್ಲೆಡೆ ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಪುರಸಭೆ ಉಪಾಧ್ಯಕ್ಷ …

    Read More »
  • 19 ಆಗಷ್ಟ್

    ಬೆಟಗೇರಿ ಪ್ರೌಢ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆ.19ರಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸಂಭ್ರಮದಿಂದ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಭಗವದ್ಗೀತೆ ಮತ್ತು ಮಹಾಭಾರತ ಹಾಗೂ ಶ್ರೀಕೃಷ್ಣನ ತತ್ವ ಸಿದ್ಧಾಂತದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕೃಷ್ಣನ ಭಾವ ಚಿತ್ರಕ್ಕೆ ಪೂಜೆ ಪುಷ್ಪ ಸಮರ್ಪನೆ ನಡೆಯಿತು. ಪತ್ರಕರ್ತ ಅಡಿವೇಶ ಮುಧೋಳ, ಮೋಹನ ತುಪ್ಪದ, ರಾಕೇಶ ನಡೋಣಿ, ವಿ.ಬಿ.ಬಿರಾದಾರ, ಶುಭಾ.ಬಿ., ಎ.ಬಿ.ತಾಂವಶಿ, ಈಶ್ವರ ಮುನವಳ್ಳಿ, …

    Read More »