ಬೆಟಗೇರಿ:ಸಮೀಪದ ನಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲ್ಲಿ ನಬಾರ್ಡ ಆರ್ಐಡಿಎಫ್ 25ರ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಫೆ.23ರಂದು ನಡೆಯಿತು. ಮೂಡಲಗಿ ವಲಯದ ಬಿಇಒ ಅಜೀತ ಮನ್ನಿಕೇರಿ ಮುಖ್ಯಅತಿಥಿಗಳಾಗಿ ಮಾತನಾಡಿ, ನಿಂಗಾಪೂರ ಗ್ರಾಮಕ್ಕೆ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »TimeLine Layout
ಫೆಬ್ರವರಿ, 2022
-
23 ಫೆಬ್ರವರಿ
ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ
ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಬೆಟಗೇರಿ:ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.26 ರಂದು ಮುಂಜಾನೆ 9 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ 6ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಅಧ್ಯಕ್ಷತೆ, ಈರಯ್ಯ ಹಿರೇಮಠ, ಸಂಗಯ್ಯ …
Read More » -
23 ಫೆಬ್ರವರಿ
ಅತ್ಯಾಚಾರ ಪ್ರಕರಣ ಸೂಕ್ತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ಮಾರುತಿ ಮರ್ಡಿ ಮೌರ್ಯ ಒತ್ತಾಯಿ
ಮೂಡಲಗಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಮಹಿಳೆ ಲಕ್ಷ್ಮೀ ವಿಠ್ಠಲ ಕಳ್ಳಿಮನಿ ಇವರು ವಲಸೆ ಕುರಿಗಾರರ ಕುಂಟುಂಬವಾಗಿದೆ. ಫೇ. ೧೮ ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಕುರಿಹಟ್ಟಿಯಿಂದ ಕಟ್ಟಿಗೆ ತರಲು ಹೋದಾಗ ಮಹಮ್ಮದ ಕೋಲಕಾರ ಅಲಿಯಾಸ ಮುಕಬಲ್ ಎಂಬ ವ್ಯಕ್ತಿ ಅತ್ಯಾಚಾರ ವೆಸಗಿ ಕೋಲೆ ಮಾಡಿರುತ್ತಾರೆ.. ಈಗಾಗಲೇ ಆರೋಪಿಯನ್ನು ಬಂದಿಸಲಾಗಿದ್ದು, ಈ ಕೃತ್ಯೆದಲ್ಲಿ ಇನ್ನೂ ಹಲವಾರು ಜನ ಪಾಲ್ಗೋಂಡಿದ್ದಾರೆ ಎಂದು ಮೃತ ಲಕ್ಷ್ಮೀ ಕುಂಟುಂಬಸ್ಥರು …
Read More » -
22 ಫೆಬ್ರವರಿ
ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ್ಯಾಲಿ
ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಉನ್ನತ ವಿಚಾರ ಧಾರೆಗಳನ್ನಿಟ್ಟುಕೊಂಡು ಲಾರ್ಡ್ ಬೆಡನ್ ಪಾವೆಲ್ರ ಜನ್ಮದಿನಾಚರಣೆ ಪ್ರಯುಕ್ತ ರ್ಯಾಲಿ ಹಮ್ಮಿಕೊಂಡಿರುವದು …
Read More » -
22 ಫೆಬ್ರವರಿ
ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ – ಶ್ರೀಧರಬೋಧ ಸ್ವಾಮೀಜಿ
ಲಯನ್ಸ್ ಕ್ಲಬ್ದಿಂದ ಉಚಿತ ನೇತ್ರ ತಪಾಸಣೆ ಶಿಬಿರ ‘ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಮೂಡಲಗಿ: ‘ಮನುಷ್ಯನಿಗೆ ಕಣ್ಣುಗಳ ಅತ್ಯಂತ ಪ್ರಮುಖವಾದ ಅಂಗಗಳಾಗಿದ್ದು, ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಎಂದು ಶ್ರೀಧರಬೋಧ ಸ್ವಾಮೀಜಿ ಅವರು ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಬೆಳಗಾವಿ ಅಂಧತ್ವ ನಿಯಂತ್ರಣ ಕಚೇರಿ ಮತ್ತು ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯ ಸಹಕಾರದೊಂದಿಗೆ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಣ್ಣಿನ …
Read More » -
21 ಫೆಬ್ರವರಿ
ಅರಭಾವಿ ಮತ್ತು ಕೌಲಜಗಿ ಕಾಂಗ್ರೇಸ್ ಬ್ಲಾಕ್ ಕಮಿಟಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ
ಮೂಡಲಗಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಅರಭಾವಿ ಮತ್ತು ಕೌಲಜಗಿ ಕಾಂಗ್ರೇಸ್ ಬ್ಲಾಕ್ ಕಮಿಟಿಯಿಂದ ಸೋಮವಾರ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆಯಲ್ಲಿ ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ದೇಶದಲ್ಲಿ ರಾಷ್ಟ್ರ ಧ್ವಜವನ್ನು ತಾಯಿಗೆ ಸಮಾನವಾಗಿ …
Read More » -
21 ಫೆಬ್ರವರಿ
ನಬಾರ್ಡ ಆರ್ಐಡಿಎಫ್ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ಎರಡು ಶಾಲಾ ಕೊಠಡಿಗಳ ಉದ್ಘಾಟಿನೆ
ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಹೇಳಿದರು. ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲ್ಲಿ ನಬಾರ್ಡ ಆರ್ಐಡಿಎಫ್ 25ರ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳನ್ನು ಫೆ.21ರಂದು ಉದ್ಘಾಟಿಸಿ …
Read More » -
20 ಫೆಬ್ರವರಿ
ತಾಲ್ಲೂಕಿನಲ್ಲಿ ಸಾಂಸ್ಕøತಿಕ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು
ತಾಲ್ಲೂಕಿನಲ್ಲಿ ಸಾಂಸ್ಕøತಿಕ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ದಿಂದ ಪ್ರತಿ ತಾಲ್ಲೂಕಿಗೆ ಕನ್ನಡ ಸಾಂಸ್ಕøತಿಕ ಭವನ ನಿರ್ಮಿಸುವುದಕ್ಕೆ ಮೊದಲ ಅದ್ಯತೆ ನೀಡುವೆನು’ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ನೂತನ ಘಟಕದ ಕಾರ್ಯಕಾರಿಣಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಕ ಚಟುವಟಿಕೆಗಳನ್ನು …
Read More » -
20 ಫೆಬ್ರವರಿ
ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಗ್ರಾಮದ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ
ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಗ್ರಾಮದ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ ಬೆಟಗೇರಿ:ಗ್ರಾಮದ ಸವದತ್ತಿ ಯಲ್ಲಮ್ಮ ದೇವಿ ನೂರಾರು ಜನ ಭಕ್ತರು ಎತ್ತಿನ ಗಾಡಿ(ಚಕ್ಕಡಿ) ಹೊಡಿಕೊಂಡು ಪಾದಯಾತ್ರೆ ಮೂಲಕ ಸವದತ್ತಿಯ ದೇವಸ್ಥಾನದ ಯಲ್ಲಮ್ಮ ದೇವಿ ದರ್ಶನಕ್ಕಾಗಿ ತೆರಳುವ ಕಾರ್ಯಕ್ರಮ ಫೆ.20ರಂದು ಸಡಗರದಿಂದ ನಡೆಯಿತು. ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಕೂಡಾ ಊರಿನ ಹಲವು ಕುಟುಂಬಗಳು ಚಕ್ಕಡಿ, ಎತ್ತುಗಳನ್ನು ಶೃಂಗರಿಸಿ, ಯಲ್ಲಮ್ಮ ದೇವಿ ಕೃರ್ತ ಗದ್ಗುಗೆಯನ್ನು ಇಲ್ಲಿಯ …
Read More » -
20 ಫೆಬ್ರವರಿ
ಕಿಸಾನ್ ಡ್ರೋನ್ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆ-ಸಂಸದ ಈರಣ್ಣ ಕಡಾಡಿ
ಕಿಸಾನ್ ಡ್ರೋನ್ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕಿಸಾನ್ ಡ್ರೋನ್ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಠಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ …
Read More »
IN MUDALGI Latest Kannada News