Breaking News

TimeLine Layout

ಮಾರ್ಚ್, 2022

  • 1 ಮಾರ್ಚ್

    ಮೂಡಲಯಲ್ಲಿ ದಲಿತ ವಚನಕಾರರ ಜಯಂತಿ ಆಚರಣೆ ದಲಿತ ವಚನಕಾರ ಕುರಿತು ಚಿಂತನ, ಮಂಥನಗಳು ನಡೆಯಬೇಕು

      ಮೂಡಲಯಲ್ಲಿ ದಲಿತ ವಚನಕಾರರ ಜಯಂತಿ ಆಚರಣೆ ದಲಿತ ವಚನಕಾರ ಕುರಿತು ಚಿಂತನ, ಮಂಥನಗಳು ನಡೆಯಬೇಕು ಮೂಡಲಗಿ: ‘ದಲಿತ ವಚನಕಾರರ ಸಾಧನೆ, ಸಂದೇಶಗಳ ಬಗ್ಗೆ ಯುವ ಪೀಳಿಗೆಗೆ ಗೊತ್ತಾಗುವ ರೀತಿಯಲ್ಲಿ ನಿರಂತರವಾಗಿ ಚಿಂತನ, ಮಂಥನಗಳು ನಡೆಯಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಇಲ್ಲಿಯ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ಮಂಗಳವಾರ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು 12ನೇ ಶತಮಾನದ ಶರಣರಲ್ಲಿ ದಲಿತ ವಚನಕಾರರು ಮುಖ್ಯವಾಗಿ …

    Read More »
  • 1 ಮಾರ್ಚ್

    ಪರಿಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ

      ಮೂಡಲಗಿ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೋರ್ಡ್ ಪರಿಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಜವಾಬ್ದಾರಿಯು ಹೆಚ್ಚಿದೆ ಎಂದು ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಹೇಳಿದರು. ತಾಲೂಕಿನ ಮುನ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಶಿಕ್ಷಣ ಪ್ರೇಮಿ ಈರಪ್ಪ ಢವೇಶ್ವರ ಅವರ ಪುತ್ರಿಯ ಐದನೇ ವರ್ಷದ ಹುಟ್ಟುಹಬ್ಬದ ನಿಮಿತ್ಯವಾಗಿ ಸಸಿ ನೆಟ್ಟು, ಸಹಿ ಹಚ್ಚಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗಲು, ಪರಿಕ್ಷೆ …

    Read More »
  • 1 ಮಾರ್ಚ್

    ಈಶ್ವರಿ ವಿಶ್ವವಿದ್ಯಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ, ಅವಗುಣಗಳನ್ನು ತ್ಯಜಿಸಿ ಜೀವನ ಸುಂದರವಾಗಿಸಿಕೊಳ್ಳಿರಿ

    ಈಶ್ವರಿ ವಿಶ್ವವಿದ್ಯಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ ಅವಗುಣಗಳನ್ನು ತ್ಯಜಿಸಿ ಜೀವನ ಸುಂದರವಾಗಿಸಿಕೊಳ್ಳಿರಿ ಮೂಡಲಗಿ: ‘ಮನುಷ್ಯ ತನ್ನಲ್ಲಿಯ ಅವಗುಣಗಳನ್ನು ತ್ಯಜಿಸಿ ಉತ್ತಮ ಆಚಾರ, ವಿಚಾರಗಳ ಮೂಲಕ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಕೇಂದ್ರದಲ್ಲಿ ಮಂಗಳವಾರ ಆಚರಿಸಿದ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಭಕ್ತಿಯಿಂದ ಮಾಡುವ ಧ್ಯಾನವು ಪರಮಾತ್ಮನ ಕೃಪೆಗೆ ಪಾತ್ರವಾಗುತ್ತದೆ ಎಂದರು. ಭಕ್ತಿ ಮತ್ತು ಧ್ಯಾನವು …

    Read More »

ಫೆಬ್ರವರಿ, 2022

  • 28 ಫೆಬ್ರವರಿ

    *ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ* ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ.

    *ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ* ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ. ಗೋಕಾಕ್- ನನ್ನ ಪ್ರೀತಿಯ ಬದುಕಿನ ಪಯಣಿಗನೇ… ನಿನಗೆ ಗೆಳೆಯನೆನ್ನಲೇ, ಅಣ್ಣನೆನ್ನಲೇ,ತಂದೆಎನ್ನಲೇ ದೇವರೆನ್ನಲೇ .ನನ್ನನ್ನ ಮದುವೆಯಾಗಿ ಗಂಡನೆನ್ನುವ ಲೇಬಲ್ಲಿನೊಳಗೆ(ಹಣೆಪಟ್ಟಿಯೊಡನೆ)ಈ ಎಲ್ಲ ಪಾತ್ರ ನಿರ್ವಹಿಸಿದವನು ನೀ…. ಎಷ್ಟೋ ಬಾರಿ ನನ್ನಷ್ಟು ಅದೃಷ್ಟ ವಂತಳು ಈ ಜಗದಲಿ ಯಾರಿಲ್ಲ ಅನ್ನುವ ಭಾವನೆ ಮೂಡಿಸಿದವನು ನೀ.. ನಿನ್ನ …

    Read More »
  • 27 ಫೆಬ್ರವರಿ

    ಪೊಲಿಯೋ ಹಾಕಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸಿರಿ

    ಪೊಲಿಯೋ ಹಾಕಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸಿರಿ ಮೂಡಲಗಿ: ‘ಮಕ್ಕಳಿಗೆ ಪೊಲಿಯೋ ಹನಿ ಹಾಕಿಸಿಕೊಳ್ಳುವುದರ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ತಹಶೀಲ್ದಾರ್ ಡಿ.ಜಿ. ಮಹಾತ ಅವರು ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪಾಲಕರು …

    Read More »
  • 27 ಫೆಬ್ರವರಿ

    ಪಲ್ಸ್  ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ

    ಪಲ್ಸ್  ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ ಮೂಡಲಗಿ: ಚಿಕ್ಕ ಮಕ್ಕಳಲ್ಲಿ ಸಾಂಕ್ರಾಮಿಕವಾಗಿ ಹರಡುವ ಪೋಲಿಯೋ  ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಎರಡು ಹನಿ ಪೆÇೀಲಿಯೊ ಲಸಿಕೆ ಹಾಕಿಸುವುದರ ಮೂಲಕ ಭಾರತವನ್ನು ಪೋಲಿಯೋ  ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು. ರವಿವಾರ ಫೆ-27 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ …

    Read More »
  • 26 ಫೆಬ್ರವರಿ

    ಸದ್ಗುರು ಶ್ರೀ ಸಿದ್ಧಾರೂಢರ ಸದ್ಭಭಕ್ತರು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಪಾದಯಾತ್ರೆ

    ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ. ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ಪರಮಾತ್ಮನ ಕೃಪೆಗೆ ಪಾತ್ರರಾಗಬೇಕು ಎಂದು ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಹೇಳಿದರು. ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಸದ್ಭಭಕ್ತರು ಫೆ.26 ರಂದು ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಹಮ್ಮಿಕೊಂಡ ಪಾದಯಾತ್ರೆಗೆ ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲಿ ಚಾಲನೆ ನೀಡಿ ಮಾತನಾಡಿದ …

    Read More »
  • 26 ಫೆಬ್ರವರಿ

    ಇಂದಿನ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನಕ್ಕೆ ಪ್ರಾಮುಖ್ಯತೆಯಿದೆ: ರಮೇಶ ಅಳಗುಂಡಿ, ಬೆಟಗೇರಿ ಪ್ರೌಢ ಶಾಲೆಯಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್ ಉದ್ಘಾಟನೆ

    ಇಂದಿನ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನಕ್ಕೆ ಪ್ರಾಮುಖ್ಯತೆಯಿದೆ: ರಮೇಶ ಅಳಗುಂಡಿ *ಬೆಟಗೇರಿ ಪ್ರೌಢ ಶಾಲೆಯಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್ ಉದ್ಘಾಟನೆ * ಗಣ್ಯರಿಗೆ ಸತ್ಕಾರ ಬೆಟಗೇರಿ:ರಷ್ಯಾದಲ್ಲಿ ಶಾಲಾ ಮಕ್ಕಳಿಗೆ ನೀಡುವ ತಂತ್ರಜ್ಞಾನದ ಪ್ರಾಯೋಗಿಕ ಕಲಿಕೆಯನ್ನು ನಮ್ಮ ದೇಶದ ಮಕ್ಕಳಿಗೂ ಕಲ್ಪಿಸುವುದು ಪ್ರಧಾನಿ ಮೋದಿ ಅವರ ಕನಸಾಗಿತ್ತು. ರಾಷ್ಟ್ರದ ಅರ್ಹ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅಟಲ್ ಟಿಂಕ್‍ರಿಂಗ್ ಲ್ಯಾಬ್‍ಗಳನ್ನು ತೆರೆದು ಪ್ರೌಢ ಶಾಲೆಯ ಹಂತದಲ್ಲಿಯೇ ಮಕ್ಕಳಿಗೆ ತಂತ್ರಜ್ಞಾನ ಅಧ್ಯಯನದ ಸೌಲಭ್ಯ ಕಲ್ಪಿಸಿದ್ದಾರೆ ಎಂದು …

    Read More »
  • 26 ಫೆಬ್ರವರಿ

    ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ

    ಮೂಡಲಗಿ: ಕೃಷಿಯ ಜೊತೆಯಾಗಿ ರೈತರು ಅವಲಂಬಿತವಾಗಿರುವ ಕುರಿ, ಆಡು, ಕೋಳಿ, ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವದು ಎಂದು ಜೋಕಾನಟ್ಟಿಯ ಶ್ರೀ ಯೋಗಿಸಿದ್ದೇಶ್ವರ ಆಶ್ರಮದ ಬಿಳಿಯಾನಸಿದ್ಧ ಮಹಾಸ್ವಾಮೀಜಿ ನುಡಿದರು. ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಜರುಗಿದ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಕುರಿಗಾರರಿಗೆ ಸಿಗುವ ಸೌವಲತ್ತುಗಳನ್ನು ಪ್ರತಿಯೊಬ್ಬರಿಗೂ ದೊರೆಯುವಂತಾಗಬೇಕು. …

    Read More »
  • 26 ಫೆಬ್ರವರಿ

    *ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ*

    *ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ …

    Read More »