ಎಸ್.ಎಸ್.ಆರ್ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಹಾಲಿನ ಪುಡಿ ವಿತರಣೆ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಶ್ಥೆಯ ಎಸ್.ಎಸ್.ಆರ್ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಮಾಡುವ ಅಕ್ಷರ ದಾಸೋಹ ಯೋಜನೆಯ ಜೂನ ಮತ್ತು ಜುಲೈ ತಿಂಗಳ ಕೆನೆಭರಿತ ಹಾಲಿ ಪುಡಿಯನ್ನು ಶುಕ್ರವಾರ ವಿತರಿಸಲಾಯಿತು. ಸಂಸ್ಥೆಯ ಉಪಾಧ್ಯಕ್ಷ ಎಸ್.ಆರ್.ಸೋನವಾಲ್ಕರ ಮಾತನಾಡಿ, ಸರಕಾರದ ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂತÀಹ ಮಹಾತ್ವಾಕಾಂಕ್ಷೆ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ ಕಾರಣ ವಿದ್ಯಾರ್ಥಿಗಳು ಪಾಲಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. …
Read More »TimeLine Layout
ಆಗಷ್ಟ್, 2021
-
6 ಆಗಷ್ಟ್
ಯಾದವಾಡದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಪುಣ್ಯತಿಥಿ
ಯಾದವಾಡದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಪುಣ್ಯತಿಥಿ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ವಿಠ್ಠಲ ಮಂದಿರದಲ್ಲಿ ಗ್ರಾಮದ ನಾಮದೇವ ಸಿಂಪಿ ಸಮಾಜದ ಆಶ್ರಯದಲ್ಲಿ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 671ನೇ ಸಮಾಧಿ ಸಂಜೀವಿನಿ ಸೋಹಾಳ ಕಾರ್ಯಕ್ರಮ ಜರುಗಿತು. ಶ್ರೀ ನಾಮದೇವ ಮಹಾರಾಜರ ಪುಣ್ಯತಿಥಿ ಅಂಗವಾಗಿ ಚಿದಾನಂದ ಇನಾಮದಾರ ಹಾಗೂ ಸಿದ್ದಪ್ಪ ಗುಡಾಡಣ್ಣವರ ಪ್ರಚನ ನೀಡಿದರು. ಸಂತ ಶ್ರೀ ರಮೇಶ ಬಡಿಗೇರ ಅವರಿಂದ ಕೀರ್ತನೆ ನಡೆಯಿತು, ಈ …
Read More » -
6 ಆಗಷ್ಟ್
ದಿ. ಸಿದ್ದಣ್ಣ ಹೊರಟ್ಟಿಯವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ
ದಿ. ಸಿದ್ದಣ್ಣ ಹೊರಟ್ಟಿಯವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಮೂಡಲಗಿ: ಸ್ಥಳೀಯ ಚೈತನ್ಯ ಆಶ್ರಮ ವಸತಿ ಶಾಲೆ, ಮೂಡಲಗಿಯಲ್ಲಿ ಇಂದು ಚೈತನ್ಯ ಗ್ರುಪ್ನ ಸಂಸ್ಥಾಪಕರಾದ ಶ್ರೀ ಸಿದ್ದಣ್ಣ ಹೊರಟ್ಟಿಯವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಸರಕಾರಿ ನಿವೃತ್ತ ನೌಕರರ ಸಂಘ, ಹಿರಿಯ ನಾಗರಿಕರ ಸಂಘ, ಚೈತನ್ಯ ಅರ್ಬನ್ ಬ್ಯಾಂಕ್ ಹಾಗೂ ಚೈತನ್ಯ ಆಶ್ರಮ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ದಿ. ಸಿದ್ದಣ್ಣ ಹೊರಟ್ಟಿಯವರ ಭಾವಚಿತ್ರಕ್ಕೆ ಪೂಜಿಸಿ ಪುಷ್ಪಾರ್ಪಣೆ ಮಾಡಿ …
Read More » -
6 ಆಗಷ್ಟ್
ಪಂಚಮಸಾಲಿ ಹೋರಾಟದಲ್ಲಿ ಪಾಲ್ಗೊಂಡ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿರುವದು ಖಂಡನಾರ್ಹವಾಗಿದೆ – ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ
ಮೂಡಲಗಿ: ಮಾಜಿ ಸಿಎಂ ಯಡಿಯೂರಪ್ಪನವರ ಕುತಂತ್ರದಿಂದ ಪಂಚಮಸಾಲಿ ಹೋರಾಟದಲ್ಲಿ ಭಾಗವಹಿಸಿದ ಶಾಸಕರಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ಮಂತ್ರಿ ಸ್ಥಾನ ಕೈ ತಪ್ಪುವಂತಾಗಿದೆ. ಮಿಸಲಾತಿ ಸಲುವಾಗಿ ರಾಜ್ಯಾದ್ಯಂತ ಕಾಲ್ನಡಿಗೆ ಮೂಲಕ ಹೋರಾಟ ಕೈಗೊಳ್ಳಲಾಗಿತ್ತು ದುರ್ದೈವವಶಾತ ಹೋರಾಟದಲ್ಲಿ ಪಾಲ್ಗೊಂಡ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿರುವದು ಖಂಡನಾರ್ಹವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಆಕ್ರೋಶ ವ್ಯಕ್ತಪಸಿದ್ದಾರೆ. ಪಂಚಮಸಾಲಿ ಹೋರಾಟ ಸಂದರ್ಭದಲ್ಲಿ ಭಾಗವಹಿಸಿದ ಶಾಸಕರಿಗೆ ಯಾವುದೇ …
Read More » -
6 ಆಗಷ್ಟ್
ಶನಿವಾರ, ಭಾನುವಾರ ಲಾಕ್ಡೌನ್ ಹಾಗೂ ಇಂದಿನಿಂದ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ಇಂದು ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ಧಾರ ಆದೇಶಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕಲುಬುರಗಿ, ವಿಜಯಪುರದಲ್ಲಿ …
Read More » -
5 ಆಗಷ್ಟ್
ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ …
Read More » -
5 ಆಗಷ್ಟ್
ಶಾಸಕರ ಅನುದಾನದಡಿಯಲ್ಲಿ ಕೌಜಲಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೂತನ ಅಂಬ್ಯುಲೆನ್ಸ್
ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ, ಮಾರ್ಗದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಕೌಜಲಗಿ ಗ್ರಾಮದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾರ್ಯ ಮೆಚ್ಚುವಂತದ್ದಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅರಭಾಂವಿ ಮತಕ್ಷೇತ್ರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶಾಸಕರ ಅನುದಾನದಡಿಯಲ್ಲಿ ಕೌಜಲಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು 15 ಲಕ್ಷ ರೂ.ಗಳ ವೆಚ್ಚದಲ್ಲಿ …
Read More » -
4 ಆಗಷ್ಟ್
ಮೀರಜ್-ಮಂಗಳೂರ ವಾಯಾ ಅರಸೀಕೆರೆ ಮಾರ್ಗವಾಗಿ ರೈಲು ಓಡಾಟ ಶೀಘ್ರ ಆರಂಭಿಸಬೇಕು- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಮೀರಜ್-ಮಂಗಳೂರ ವಾಯಾ ಅರಸೀಕೆರೆ ಮಾರ್ಗವಾಗಿ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಬುಧವಾರ (ಆ.4) ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಈ ಭಾಗದ ಸಾರ್ವಜನಿಕರ ಪರವಾಗಿ ಮನವಿ …
Read More » -
3 ಆಗಷ್ಟ್
ಕೋವಿಡ್ದಿಂದ ರಕ್ಷಣೆಗಾಗಿ ಮಕ್ಕಳಿಗೆ ಲಸಿಕೆ ಅವಶ್ಯ
ಕೋವಿಡ್ದಿಂದ ರಕ್ಷಣೆಗಾಗಿ ಮಕ್ಕಳಿಗೆ ಲಸಿಕೆ ಅವಶ್ಯ ಮೂಡಲಗಿ: ‘ಕೋವಿಡ್ ಸೋಂಕು ಬಾಧಿಸದಂತೆ ಮಕ್ಕಳ ರಕ್ಷಣೆಗಾಗಿ ಲಸಿಕೆ ಹಾಕಿಸುವುದು ಅವಶ್ಯವಿದೆ’ ಎಂದು ಚಿಕ್ಕ ಮಕ್ಕಳ ತಜ್ಞ ಡಾ. ಮನೋಹರ ವಿ. ಹೇಳಿದರು. ಇಲ್ಲಿಯ ಶ್ರೀ ಶಿವಬೋಧರಂಗ ಚಿಕ್ಕಮಕ್ಕಳ ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಕೋವಿಡ್ದಿಂದ ರಕ್ಷಣೆಯ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನವನ್ನು ಮಗುವಿಗೆ ಲಸಿಕೆಯ ಚುಚ್ಚುಮದ್ದು ನೀಡುವ ಮೂಲಕ …
Read More » -
2 ಆಗಷ್ಟ್
ಮಾನವೀಯತೆ ಮೆರೆದ ಸಮಾಜ ಸೇವಕರಿಗೆ ಸತ್ಕಾರ
ಮೂಡಲಗಿ: ‘ಕೊರೋನಾ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ಸಾವನಪ್ಪಿದ್ದ ನೂರಾರು ಶವಗಳನ್ನು ತಮ್ಮ ಜೀವದ ಹಂಗು ತೊರೆದು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದು ಮಾದರಿಯಾಗಿರುವ ಸಮಾಜ ಸೇವಕರನ್ನು ಗೌರವಿಸುವುದು ಶ್ಲಾಘನೀಯ ಕಾರ್ಯವಾಗಿದೆ’ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕು ಪ್ರೆಸ್ ಅಸೋಸಿಯೇಶನ್ ಕಾರ್ಯಾಲಯದಲ್ಲಿ ಯುವ ಜೀವನ ಸೇವಾಸಂಸ್ಥೆ ಹಾಗೂ ಪ್ರೆಸ್ಕ್ಲಬ್ ವತಿಯಿಂದ ಹಮ್ಮಿಕೊಂಡ ಸಮಾಜ ಸೇವಕರಿಗೆ ಸತ್ಕಾರ ಹಾಗೂ …
Read More »
IN MUDALGI Latest Kannada News