ಫೆ. 10 ರಂದು ಶಂಕರ ಶಿವಾಚಾರ್ಯ ಶ್ರೀಗಳ ಜಾತ್ರೆ ತೊಂಡಿಕಟ್ಟಿ: ಸಮೀಪದ ಹೊಸಕೋಟಿ ಗ್ರಾಮದಲ್ಲಿ 1008 ಶ್ರೀ ಸೂರ್ಯ ಸಿ೦ಹಾಸನಾಧೀಶ ಶ್ರೀಮದ್ ಜಗದ್ಗುರು ಅಂಗೈಕ್ಯ ಶ್ರೀ ಶ್ರೀ ಶ್ರೀ ಶಂಕರ ಶಿವಾಚಾರ್ಯ ಮಹಾಸ್ವಾಮೀಜಿಗಳವರ ದ್ವಿತೀಯ ವರ್ಷದ ಜಾತ್ರಾ ಮಹೋತ್ಸವ ಫೆ. 10 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಮಂಗಳವಾರ ಮುಂಜಾನೆ 06-00 ಘಂಟೆಗೆ ಶ್ರೀಮದ್ ಜಗದ್ಗುರು ಅಂಗೈಕ್ಯ ಶ್ರೀ ಶ್ರೀ ಶ್ರೀ ಶಂಕರ ಶಿವಾಚಾರ್ಯ ದೇವರ ಮೂರ್ತಿಗೆ ರುದ್ರಾಭಿಷೇಕ …
Read More »TimeLine Layout
ಫೆಬ್ರವರಿ, 2026
-
9 ಫೆಬ್ರವರಿ
ಫೆ.೧೦ ರಂದು ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ
ಫೆ.೧೦ ರಂದು ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಮೂಡಲಗಿ: ಪಟ್ಟಣದ ಶಿಕ್ಷಣ ಪ್ರೇಮಿ ಹಾಗೂ ಸರಕಾರಿ ಪ್ರೌಢ ಶಾಲೆಯ ಭೂ ದಾನಿ ದಿ.ಶ್ರೀ ಕೃಷ್ಣಪ್ಪ ಹ.ಸೋನವಾಲಕರ ಅವರ ೮೨ನೇ ಜನ್ಮ ದಿನಾಚರಣೆ ಅಂಗವಾಗಿ ೧೦ನೇ ಬೃಹತ ಐಚ್ಚಿಕ ರಕ್ತದಾನ ಶಿಬಿರ ಮತ್ತು ಕೆ.ಎಚ್. ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಮಂಗಳವಾರ ಫೆ.೧೦ ರಂದು ಮುಂಜಾಣೆ …
Read More » -
8 ಫೆಬ್ರವರಿ
‘ರಾಮಚಂದ್ರಪ್ಪ ಮುಕ್ಕಣ್ಣವರ ಅಪ್ರತಿಮ ಭಜನಾ ಕಲಾವಿದ’- ಮಲ್ಲಯ್ಯ ಸ್ವಾಮೀಜಿ
‘ರಾಮಚಂದ್ರಪ್ಪ ಮುಕ್ಕಣ್ಣವರ ಅಪ್ರತಿಮ ಭಜನಾ ಕಲಾವಿದ’- ಮಲ್ಲಯ್ಯ ಸ್ವಾಮೀಜಿ ಮೂಡಲಗಿ: ‘ಭಜನಾ ಕಲಾವಿದ ರಾಮಚಂದ್ರಪ್ಪ ಮುಕ್ಕಣ್ಣವರ ಸಂಗೀತ, ಭಜನೆಯಲ್ಲಿ ತಮ್ಮ ಬದುಕನ್ನು ಕಂಡುಕೊಂಡಿದ್ದರು’ ಎಂದು ಘೋಡಗೇರಿಯ ಮಲ್ಲಯ್ಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಗುಜನಟ್ಟಿ ಗ್ರಾಮದಲ್ಲಿ ನಿಂಗಮ್ಮ ದೇವಸ್ಥಾನದ ಆವರಣದಲ್ಲಿ ಕಲಾವಿದರು ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಭಜನಾ ರತ್ನ ದಿ.ರಾಮಚಂದ್ರಪ್ಪ ಮುಕ್ಕಣ್ಣವರ ಅವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ ಗುಜನಟ್ಟಿ ಗಾಯನ ವೈಭವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ನಿಜಗುಣ ಶಿವಯೋಗಿಗಳು, …
Read More » -
7 ಫೆಬ್ರವರಿ
‘ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು’- ಭರಮಣ್ಣ ಉಪ್ಪಾರ
‘ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು’- ಭರಮಣ್ಣ ಉಪ್ಪಾರ ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.5 ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಿಕೆ ಮಾಡಿಕೊಂಡು ಸಾಧನೆ ಮಾಡಬೇಕು’ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಹೇಳಿದರು. ಶನಿವಾರ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಕರ್ನಾಟಕ ಸರ್ಕಾರವು ಸಚಿವ ಸ್ಥಾನಮಾನವನ್ನು ನೀಡಿ ಉನ್ನತಿಕರಣಗೊಳಿಸಿದ್ದರ ಹಿನ್ನೆಯಲ್ಲಿ ಅವರನ್ನು …
Read More » -
4 ಫೆಬ್ರವರಿ
ಬೆಳಗಾವಿಯ ಬಸವರಾಜ ಜಕ್ಕನವರ ಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರಧಾನ
*ಬೆಳಗಾವಿಯ ಬಸವರಾಜ ಜಕ್ಕನವರ ಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರಧಾನ* ಬೆಳಗಾವಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿಯನ್ನು ಬೆಳಗಾವಿಯ ಬಸವರಾಜ ಜಕ್ಕಣ್ಣವರ್ ಅವರಿಗೆ ನೀಡಿ ಗೌರವಿಸಲಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಶ್ರೀ ಸಿದ್ದೇಶ್ವರ ವೇದಿಕೆಯಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ರಾಷ್ಟ್ರೀಯ ಯುವ ವೈಭವ …
Read More » -
4 ಫೆಬ್ರವರಿ
ಬೆಟಗೇರಿ ಗ್ರಾಮದ ಯಲ್ಲಮ್ಮದೇವಿ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ
ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಗ್ರಾಮದ ಯಲ್ಲಮ್ಮದೇವಿ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ ವರದಿ: ಅಡಿವೇಶ ಮುಧೋಳ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸವದತ್ತಿ ಯಲ್ಲಮ್ಮ ದೇವಿ ನೂರಾರು ಜನ ಭಕ್ತರು ಎತ್ತಿನ ಗಾಡಿ(ಚಕ್ಕಡಿ) ಹೊಡಿಕೊಂಡು ಪಾದಯಾತ್ರೆ ಮೂಲಕ ಸವದತ್ತಿಯ ದೇವಸ್ಥಾನದ ಯಲ್ಲಮ್ಮ ದೇವಿ ದರ್ಶನಕ್ಕಾಗಿ ತೆರಳುವ ಕಾರ್ಯಕ್ರಮ ಫೆ.4ರಂದು ಸಡಗರದಿಂದ ನಡೆಯಿತು. ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಕೂಡಾ ಊರಿನ ಹಲವು ಕುಟುಂಬಗಳು ಚಕ್ಕಡಿ, …
Read More » -
4 ಫೆಬ್ರವರಿ
ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ರೈಲು ನಿಲ್ದಾಣಕ್ಕೆ ನಿಲುಗಡೆ ಮಾಡುವಂತೆ ಮನವಿ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ ತಮ್ಮ ಗ್ರಾಮಕ್ಕೆ ಬರಲು ಮತ್ತು ಮರಳಿ ಹೋಗಲು ಅನುಕೂಲವಾಗುವಂತೆ ಹಲವು ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ರೈಲು ನಿಲ್ದಾಣಕ್ಕೆ ನಿಲುಗಡೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ನೀಡಿ, ವಿನಂತಿಸಿದರು. …
Read More » -
4 ಫೆಬ್ರವರಿ
ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ
ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ ಅಸ್ಮೀತೆ, ಜಾನಪದ ಕಲೆ ನಿತ್ಯ ನೂತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಯುವ ಸಾಹಿತಿ, ರಂಗಭೂಮಿ ಕಲಾವಿದ ಶಿವಪುತ್ರ ಪರಮಾನಟ್ಟಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ-ಬಗರನಾಳ ಗ್ರಾಮದ ಗಡಿಭಾಗದಲ್ಲಿರುವ ಜಗನ್ಮಾತೆ ಬಾಕುಬಾಯಿ ಜಾತ್ರಾ ಮಹೋತ್ಸವ ಪ್ರಯುಕ್ತ ಫೆ.1 ರಂದು ನಡೆದ ಸತ್ಯವಾನ ಸಾವಿತ್ರಿ ಸಣ್ಣಾಟ ಪ್ರದರ್ಶನ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸ್ಥಳೀಯ …
Read More » -
3 ಫೆಬ್ರವರಿ
ಶಿಕ್ಷಕ ಶಿವರಾಜ ಕಾಂಬಳೆ ಅವರಿಗೆ ಜ್ಞಾನಭಾರತಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ
ಮೂಡಲಗಿ: ತಾಲ್ಲೂಕಿನ ಧರ್ಮಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕ ಶಿವರಾಜ ಕಾಂಬಳೆ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಧಾರವಾಡ ಕೊಡಮಾಡುವ ಜ್ಞಾನಭಾರತಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಭವನದಲ್ಲಿ ನಡೆದ ಜನಗಣಮನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಶಿಕ್ಷಕ ಶಿವರಾಜ ಪ್ರತಿ ಬೇಸಿಗೆ ರಜೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಆಯೋಜನೆ ಮಾಡುತ್ತಾರೆ. ಕವಿಯೂ ಆಗಿರುವ ಶಿಕ್ಷಕ …
Read More » -
3 ಫೆಬ್ರವರಿ
ಬೆಳಗಾವಿ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ಒಟ್ಟು 237 ಆಸ್ಪತ್ರೆಗಳು ಪಟ್ಟಿ ಮಾಡಲಾಗಿದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ಬೆಳಗಾವಿ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಒಟ್ಟು 452.26 ಕೋಟಿ ರೂ.ಗಳ ಮೊತ್ತದ 6.67 ಲಕ್ಷ ಕ್ಲೈಮ್ಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಬೆಳಗಾವಿ …
Read More »
IN MUDALGI Latest Kannada News