Breaking News

TimeLine Layout

ಫೆಬ್ರವರಿ, 2021

  • 21 ಫೆಬ್ರವರಿ

    ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ

    ಮೂಡಲಗಿಯಲ್ಲಿ ಅರಭಾವಿ ಶಾಸಕರ ಕಛೇರಿ ಉದ್ಘಾಟನೆ ಸಾರ್ವಜನಿಕರ ಅನುಕೂಲಕ್ಕಾಗಿ ಕಛೇರಿ ಕಾರ್ಯಾರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …

    Read More »
  • 21 ಫೆಬ್ರವರಿ

    ಮರು ವಿಂಗಡಣೆ ಮಾಡಿದ ಜಿ ಪಂ ಕ್ಷೇತ್ರ ದೋಷಪೂರಿತವಾಗಿದೆ

    ಮರು ವಿಂಗಡಣೆ ಮಾಡಿದ ಜಿ ಪಂ ಕ್ಷೇತ್ರ ದೋಷಪೂರಿತವಾಗಿದೆ  ಮೂಡಲಗಿ: ‘ತಾಲೂಕಿನಲ್ಲಿ ಮರು ವಿಂಗಡಣೆ ಮಾಡಿದ ಜಿಲ್ಲಾ ಪಂಚಾಯತ ಕ್ಷೇತ್ರ ದೋಷಪೂರಿತವಾಗಿದ್ದು ಇವುಗಳನ್ನು ರದ್ದುಪಡಿಸಿ ಸರಿಪಡಿಸುವಂತೆ ಕಾಂಗ್ರೇಸ ಮುಖಂಡ ಗುರು ಗಂಗನ್ನವರ ಒತ್ತಾಯಿಸಿದರು. ಭಾನುವಾರ ಪ್ರೆಸ್‍ಕ್ಲಬ್ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಮೂಡಲಗಿ ತಾಲೂಕಿನ ಜಿ.ಪಂ ಕ್ಷೇತ್ರಗಳು ದೋಷಪೂರಿತವಾಗಿವೆ. ಸಾರ್ವಜನಿಕರಿಗೆ ಜನಪ್ರತಿನಿಧಿ ಆಯ್ಕೆ ಮಾಡುವದರಿಂದ ಹಿಡಿದು ಕೆಲಸ ಕಾರ್ಯಗಳಿಗೆ ತೊಂದರೆ ಅನುಭವಿಸುವಂತಾಗುವದು. ರಾಜಕೀಯವಾಗಿ ಪ್ರಾತಿನಿಧ್ಯ, ಕ್ಷೇತ್ರದ …

    Read More »
  • 20 ಫೆಬ್ರವರಿ

    ಅಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ ಡಿ.ಜೆ ಮಹಾತ ಅವರು ತಾಲೂಕಿನ ಹಣಮಾಪೂರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ

    ಮೂಡಲಗಿ :- ಅಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ ಡಿ.ಜೆ ಮಹಾತ ಅವರು ತಾಲೂಕಿನ ಹಣಮಾಪೂರ ಗ್ರಾಮದ ಶ್ರೀ ಜಡಿಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಗ್ರಾಮ ವಾಸ್ತವ್ಯ ಹಾಗೂ ಸಾರ್ವಜನಿಕರ ಕುಂದು ಕೊರತೆ ಸಭೆ ಜರುಗಿತು ಕಾರ್ಯಕ್ರಮವನ್ನು ತಹಶೀಲ್ದಾರ ಡಿ.ಜಿ.ಮಾಹತ ಸಸಿಗಳಿಗೆ ನೀರು ಉಣಿಸುವ ಮೂಲಕ ಉದ್ಘಾಟಿಸಿ ಸರಕಾರದ ಆದೇಶದಂತೆ ಅಧಿಕಾರಿಗಳೇ ಹಳ್ಳಿಗೆ ಆಗಮಿಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಕೇಳಲು ಬಂದಿದ್ದು ಇದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕೆಂದು ಕರೆ …

    Read More »
  • 20 ಫೆಬ್ರವರಿ

    ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಭಜರಂಗದಳ ಘಟಕವನ್ನು ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಭಜರಂಗದಳ ಘಟಕವನ್ನು ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಈ ಭಾಗದಲ್ಲಿ ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನವು ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮಸಗುಪ್ಪಿ ಮಹಾಲಕ್ಷ್ಮೀದೇವಿ ಭಕ್ತರ …

    Read More »
  • 19 ಫೆಬ್ರವರಿ

    ಅಪಘಾತಗಳು ಹೆಚ್ಚುತ್ತಿದ್ದು ಸವಾರರು ಜಾಗರುಕತೆಯಿಂದ ವಾಹನಗಳನ್ನು ಚಲಾಯಿಸಬೇಕು -ಹಿರಿಯ ಮೋಟಾರ ವಾಹನ ನೀರಿಕ್ಷಕ ಎಸ್.ಆರ್. ಮರಲಿಂಗಣ್ಣವರ

    ಮೂಡಲಗಿ : ವಾಹನಗಳಿಂದ ಅಪಘಾತಗಳು ಹೆಚ್ಚುತ್ತಿದ್ದು ಸವಾರರು ಜಾಗರುಕತೆಯಿಂದ ವಾಹನಗಳನ್ನು ಚಲಾಯಿಸಬೇಕು. ಮಧ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂದು ಮನವಿ ಮಾಡುತ್ತಾ ಮೋಬೈಲ್‍ನಲ್ಲಿ ಮಾತನಾಡುತ್ತಾ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುವುದರಿಂದ ನಮ್ಮ ಸಾವಿಗೆ ನಾವೇ ಮಾರ್ಗ ತೋರಿಸಿದಂತೆ ಆಗುತ್ತದೆ ಎಂದು ಗೋಕಕಾದ ಹಿರಿಯ ಮೋಟಾರ ವಾಹನ ನೀರಿಕ್ಷಕ ಎಸ್.ಆರ್. ಮರಲಿಂಗಣ್ಣವರ ಹೇಳಿದರು. ಅವರು ಮೂಡಲಗಿ ಪೋಲಿಸ ಠಾಣೆ ಮತ್ತು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಮತ್ತು ಮಂಜುನಾಥ ಮೋಟಾರ ಡ್ರೈವ್ಹಿಂಗ್ …

    Read More »
  • 19 ಫೆಬ್ರವರಿ

    87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

    ಕೌಜಲಗಿಯಲ್ಲಿ 85 ಲಕ್ಷ ರೂ. ವೆಚ್ಚದ ಬಸ್ ನಿಲ್ದಾಣ ಉದ್ಘಾಟನೆ 87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ …

    Read More »
  • 19 ಫೆಬ್ರವರಿ

    ಸರಕಾರಿ ನೌಕರ ಯಶಸ್ವಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಇಲಾಖೆಗಳ ಆಶಯಗಳು ಪೂರ್ಣಗೊಳ್ಳುತ್ತವೆ -ಉಪನಿರ್ಧೇಶಕರು ಗಜಾನನ ಮನ್ನಿಕೇರಿ

    ಮೂಡಲಗಿ: ಸರಕಾರಿ ನೌಕರ ಯಶಸ್ವಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಇಲಾಖೆಗಳ ಆಶಯಗಳು ಪೂರ್ಣಗೊಳ್ಳುತ್ತವೆ. ಸೇವಾ ಸೌಲಭ್ಯಗಳನ್ನು ಕಛೇರಿಯ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗದವರು ತಕ್ಷಣ ಕಾರ್ಯ ಮಾಡಿಕೊಟ್ಟಾಗ ಮಾತ್ರ ನೌಕರರು ತಮ್ಮ ಸೇವೆಯಲ್ಲಿ ಯಶಸ್ವಿಯಾಗಿ ನಿರ್ವಹಿಸುವರು ಎಂದು ಚಿಕ್ಕೋಡಿ ಸಾರ್ವನಿಕ ಶಿಕ್ಷಣ ಇಲಾಖೆ ಉಪನಿರ್ಧೇಶಕ ಗಜಾನನ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ಶಿಕ್ಷಣ ಸ್ಪಂದನ ಕಾರ್ಯಕ್ರಮದ ತಾಲೂಕಿನ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. …

    Read More »
  • 19 ಫೆಬ್ರವರಿ

    ವಿನೂತನ ಪ್ರಯೋಗಗಳು ಆದಾಗ ಮಾತ್ರ ಮಕ್ಕಳ ಫಲಪ್ರದ ಕಲಿಕೆಯಾಗಲು ಸಾದ್ಯ – ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ

    ಮೂಡಲಗಿ: ಶಿಕ್ಷಕ ಸಮುದಾಯ ನಿರಂತರ ಹಾಗೂ ವ್ಯಾಪಕವಾದ ಜ್ಞಾನಾರ್ಜಯಿಂದ ಕೂಡಿದಾಗ ಮಾತ್ರ ಕಲಿಕೆಯಲ್ಲಿರುವ ಮಗುವಿನ ಸೂಕ್ತ ಬುದ್ದಿವಂತಿಗೆ ಬಲ ದೊರೆಯುತ್ತದೆ. ವಿನೂತನ ಪ್ರಯೋಗಗಳು ಆದಾಗ ಮಾತ್ರ ಮಕ್ಕಳ ಫಲಪ್ರದ ಕಲಿಕೆಯಾಗಲು ಸಾದ್ಯ ಎಂದು ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು. ಅವರು ಶುಕ್ರವಾರ ಮೇಘಾ ವಸತಿ ಶಾಲೆಯಲ್ಲಿ ಜರುಗಿದ ವಲಯದ ಪ್ರೌಢ ಶಾಲೆಗಳ ವಿಷಯ ಶಿಕ್ಷಕರ ವೇದಿಕೆಯ ತರಭೇತಿ ಕಾರ್ಯಾಗಾರದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಫಲಿತಾಂಶ ಹೆಚ್ಚಿಸುವ ದೃಷ್ಠಿಯಿಂದ ಇಂತಹ …

    Read More »
  • 18 ಫೆಬ್ರವರಿ

    ವೀರಶೈವ ಲಿಂಗಾಯತ ಸಮುದಾಯಕ್ಕೆ ಓಬಿಸಿ ಮಾನ್ಯತೆ ನೀಡುಬೇಕೆಂದು ಆಗ್ರಹಿಸಿ ಮನವಿ

    ವೀರಶೈವ ಲಿಂಗಾಯತ ಸಮುದಾಯಕ್ಕೆ ಓಬಿಸಿ ಮಾನ್ಯತೆ ನೀಡುಬೇಕೆಂದು ಆಗ್ರಹಿಸಿ ಮನವಿ ಮೂಡಲಗಿ: ವೀರಶೈವ ಲಿಂಗಾಯತ ಮೂಡಲಗಿ ತಾಲೂಕ ಘಟಕದಿಂದ ವೀರಶೈವ ಲಿಂಗಾಯತ ಎಲ್ಲ ಉಪಜಾತಿಗಳಿಗೆ ಹಿಂದುಳಿದ ವರ್ಗಗಳ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಮೂಡಲಗಿ ತಹಶಿಲ್ದಾರ ಮೂಲಕ ಕೇಂದ್ರ ಸರಕಾರಕ್ಕೆ ಗುರುವಾರದಂದು ಮನವಿ ಸಲ್ಲಿಸಿದರು. ಮನವಿಯಲ್ಲಿ ವೀರಶೈವ ಲಿಂಗಾಯತ ಸಮಸ್ತ ಉಪಪಂಗಡಗಳನ್ನು ಒಳಗೊಂಡ ಸಮುದಾಯವು ಸಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಸೂಕ್ಷ್ಮ ಮತ್ತು ಕ್ಲಿಷ್ಟಕರ, ಕಠಿನ ಪರಿಸ್ಥಿಯಲ್ಲಿದ್ದುವೀರಶೈವ ಲಿಂಗಾಯತ ಸಮುದಾಯವು …

    Read More »
  • 18 ಫೆಬ್ರವರಿ

    ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗಳನ್ನು ಶೀಘ್ರದಲ್ಲಿಯೇ ಭೇಟಿ ಮಾಡುವೆ : ಶಾಸಕ ಬಾಲಚಂದ್ರ ಜಾರಕಿಹೊಳಿ

    ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿಗಳನ್ನು ಶೀಘ್ರದಲ್ಲಿಯೇ ಭೇಟಿ ಮಾಡುವೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ …

    Read More »