ಮೂಡಲಗಿ: ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ವಿಜ್ಞಾನಿಗಳಾದ ಡಾ. ಕಾಂತರಾಜು.ವಿ. ಮತ್ತು ಡಾ. ಸುಹಾಸಿನಿ ಜಾಲವಾದಿ ಅವರು ಬಾಳೆ ಬೆಳೆಗೆ ಹೆಚ್ಚಾಗಿ ಕಂಡು ಬಂದಿರುವ ಎಲೆ ಚುಕ್ಕೆ ರೋಗವನ್ನು ಪರಿಸಿಲಿಸುತ್ತಿರುವದು. ಮಳೆಯಿಂದಾಗಿಬಾಳೆ ಬೆಳೆಯ ಎಲೆ ಚುಕ್ಕೆ ರೋಗದ ಬಾಧೆಗೆ ರೈತರಿಗೆ ಸಲಹೆ ಮೂಡಲಗಿ: ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಮತ್ತು ಭಾರತೀಯ ಕೃಷಿ ಅನುಸಂಧಾನ ಪರಿಷತ್ – ಅಖಿಲ …
Read More »TimeLine Layout
ಆಗಷ್ಟ್, 2020
-
21 ಆಗಷ್ಟ್
ಕೊರೋನಾ ವಾರಿಯರ್ಸ್ ಆಗಿ ತಮ್ಮ ಕುಟುಂಬವನ್ನು ಲೆಕ್ಕಿಸದೇ ಸಾರ್ವಜನಿಕರ ಉಳಿವಿಗಾಗಿ ಕರ್ತವ್ಯ ನಿರ್ವಹಿಸಿದವರಿಗೆ ಅಭಿನಂದನಾ ಪತ್ರ ನೀಡಿ ಗೌರವ
ಮೂಡಲಗಿ: ಮಹಾಮಾರಿ ಕೊರೋನಾ ಇಡೀ ದೇಶದ ತುಂಬಾ ತನ್ನ ರುದ್ರ ನರ್ತನ್ ತೋರಿಸುತ್ತಾ ಜನರ ಜೀವನದಲ್ಲಿ ತುಂಬಲಾದರ ನೋವುಗಳನ್ನು ನೀಡಿದ ಪರಿಣಾಮ ಬಡತನದಲ್ಲಿ ಇರುವ ಜನರಿಗೆ ಒಂದು ತುತ್ತಕ್ಕೂ ಪರದಾಡುವ ಪರಸ್ಥಿತಿ ನಿರ್ಮಾಣವಾಗಿತ್ತು. ಅಂತಹ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೊರೋನಾ ವಾರಿಯರ್ಸ್ ಆಗಿ ತಮ್ಮ ಕುಟುಂಬವನ್ನು ಲೆಕ್ಕಿಸದೇ ಸಾರ್ವಜನಿಕರ ಉಳಿವಿಗಾಗಿ ಕರ್ತವ್ಯ ನಿರ್ವಹಿಸಿದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಹಾಗೂ ಸ್ವಯಂಸೇವಕರು …
Read More » -
21 ಆಗಷ್ಟ್
ಪರಿಸರ ಸ್ನೇಹಿ ಗಣಪತಿಗಳನ್ನು ಪ್ರತಿಷ್ಠಾಪಿಸಿ. ನಾಡಿನ ಜನತೆಗೆ ಗಣೇಶ್ ಹಬ್ಬದ ಶುಭ ಕೋರಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ. ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ …
Read More » -
20 ಆಗಷ್ಟ್
‘ಬೆಳೆ ಸಮೀಕ್ಷೆ’ ಕುರಿತು ಆನ್ಲೈನ್ ತರಬೇತಿ
‘ಬೆಳೆ ಸಮೀಕ್ಷೆ’ ಕುರಿತು ಆನ್ಲೈನ್ ತರಬೇತಿ ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ದಿನಾಂಕ ಆ. 21ರಂದು ಬೆಳಿಗ್ಗೆ 11.30ಕ್ಕೆ ‘ಬೆಳೆ ಸಮೀಕ್ಷೆ ಮಹತ್ವ ಮತ್ತು ಆಪ್ ಬಳಕೆ’ ವಿಷಯ ಕುರಿತು ಆನ್ಲೈನ್ದಲ್ಲಿ ಗೂಗಲ್ ಮೂಲಕ ರೈತರಿಗೆ ಉಪನ್ಯಾಸ ಮತ್ತು ತರಬೇತಿ ಇರುವುದು. ಚಿಕ್ಕೋಡಿಯ ಕೃಷಿ ಉಪನಿರ್ದೇಶಕ ಎಲ್.ಐ. ರೂಢಗಿ ಅವರು ವಿಷಯ ಕುರಿತು ಉಪನ್ಯಾಸ ಮತ್ತು ತರಬೇತಿ ನೀಡುವರು. ರೈತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಲು ಕೃಷಿ …
Read More » -
19 ಆಗಷ್ಟ್
2020-21ನೇ ಸಾಲಿನ ಹಂಗಾಮಿನ ಕಬ್ಬಿಗೆ ಎಫ್.ಆರ್.ಪಿ (ಪೇರ್ ಆಂಡ್ಯ ರೆಮ್ಯುನೇಷನ್) ಬೆಲೆ ನಿಗದಿ ಮಾಡಿ – ಈರಣ್ಣ ಕಡಾಡಿ
ಮೂಡಲಗಿ: 2020-21ನೇ ಸಾಲಿನ ಹಂಗಾಮಿನ ಕಬ್ಬಿಗೆ ಎಫ್.ಆರ್.ಪಿ (ಪೇರ್ ಆಂಡ್ಯ ರೆಮ್ಯುನೇಷನ್) ಬೆಲೆ ನಿಗದಿ ಮಾಡುವ ಕುರಿತು ರಾಜ್ಯ ಸಕ್ಕರೆ ಸಚಿವರಾದ ಶಿವರಾಮ ಹೆಬ್ಬಾರ ಅವರನ್ನು ರಾಜ್ಯಸಭಾ ಸದಸ್ಯ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧುವಾರ ಅ-19 ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಸಕ್ಕರೆ ಸಚಿವರನ್ನು ಭೇಟಿಯಾಗಿ ಬಾಕಿ ಉಳಿದಿರುವ ರೈತರ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಈ …
Read More » -
19 ಆಗಷ್ಟ್
ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ನದಿಗೆ ಬಿಟ್ಟರೆ ಕಾನೂನು ಕ್ರಮ ರಾಕೇಟ್ ಕಾರ್ಖಾನೆಗೆ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಎಚ್ಚರಿಕೆ ನೀಡಿದ್ದಾರೆ. …
Read More » -
19 ಆಗಷ್ಟ್
ಮೂಡಲಗಿ ಪಟ್ಟಣದಲ್ಲಿ ಇಂದು ಮತ್ತೆ ಕೊರೋನಾ ಕೇಸ್ ಪತ್ತೆ .
ಮೂಡಲಗಿ ಪಟ್ಟಣದಲ್ಲಿ ಇಂದು 1 ಕೊರೋನಾ ಕೇಸ್ ಪತ್ತೆ . ಮೂಡಲಗಿ: ಪಟ್ಟಣದ 1 ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಪಟ್ಟಣದ ಮಹಿಳೆಗೆ ಸೋಂಕು ದೃಢಪಟ್ಟಿದ್ದುನ್ನು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು ಇದೇ ರೀತಿಯಾದರೆ ಇನ್ನೂ ಕೇಸುಗಳು ಹೆಚ್ಚಾಗುವ ಸಂಭವವಿದ್ದು ಜನರಲ್ಲಿ ಜಾಗೃತಿಯಾಗಬೇಕಾಗಿದೆ. ಇವತ್ತು ಪತ್ತೆಯಾದ ಸೋಂಕಿತರ ಮನೆಯ ಸುತ್ತಮುತ್ತ ಸೀಲ್ ಡೌನ್ …
Read More » -
18 ಆಗಷ್ಟ್
ಮೂಡಲಗಿ ಸ್ಮಶಾನದ ತುಂಬೆಲ್ಲ ಕೊರೋನಾ ಪಿಪಿ ಕಿಟ್, ಜನತೆ ಆತಂಕದಲ್ಲಿ !
ಮೂಡಲಗಿ: ಕೋವಿಡ್ 19 ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರದಲ್ಲಿ ಬಳಸಿದ ಪಿಪಿಇ ಕಿಟ್, ಹ್ಯಾಂಡಗ್ಲೌಜ ಮತ್ತು ಶವಕ್ಕೆ ಪ್ಯಾಕ್ ಮಾಡಿದ ಪ್ಲಾಸ್ಟಿಕ್ಗಳು ಸ್ಮಶಾನದಲ್ಲಿ ಕಂಡು ಬಂದಿವೆ ಎಂದು ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ತಿಳಿಸಿದ್ದಾರೆ. ಸ್ಮಶಾನದಲ್ಲಿ ಗಿಡಗಳನ್ನು ಹಚ್ಚಿ ಪೋಷಣೆ ಮಾಡುತ್ತಿರುವ ಈರಪ್ಪ ಢವಳೇಶ್ವರ ಪ್ರತಿದಿನದಂತೆ ನೆಟ್ಟ ಗಿಡಗಳ ವೀಕ್ಷಣೆಗೆ ಹೋದಾಗ ಶವಸಂಸ್ಕಾರ ಮಾಡಿದ ವಸ್ತುಗಳ ಪೋಟೋಗಳನ್ನು ವೈರಲ್ ಮಾಡಿದ್ದಾರೆ. ಈ ಬಗ್ಗೆ ಪತ್ರಿಕೆ ವಿಚಾರಿಸಿದಾಗ ಸೋಂಕಿನಿಂದ ಮೃತಪಟ್ಟವರ …
Read More » -
18 ಆಗಷ್ಟ್
ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಳೆಯಿಂದಾಗಿ ನೆರೆಯ ಭೀತಿ ಅನುಭವಿಸುತ್ತಿರುವ ಘಟಪ್ರಭಾ ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮಂಗಳವಾರದಂದು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರಾಶ್ರಿತ ಕುಟುಂಬಗಳಿಗೆ ಗಂಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಿರುವುದಾಗಿ ಹೇಳಿದ್ದಾರೆ. ಅಡಿಬಟ್ಟಿ, ಮೆಳವಂಕಿ, ಉದಗಟ್ಟಿ, ಬಳೋಬಾಳ, ಬೀರನಗಡ್ಡಿ, ಮಸಗುಪ್ಪಿ, ವಡೇರಹಟ್ಟಿ, ಹುಣಶ್ಯಾಳ ಪಿಜಿ, ಪಟಗುಂದಿ, …
Read More » -
17 ಆಗಷ್ಟ್
ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಉಪಾಧ್ಯಕ್ಷರಾಗಿ ಶ್ರೀನಿವಾಸ ಆಯ್ಕೆ..!
ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಉಪಾಧ್ಯಕ್ಷರಾಗಿ ಶ್ರೀನಿವಾಸ ಆಯ್ಕೆ..! ಬೆಳಗಾವಿ: ನಗರದ ಜನತಾದಳ ಪಕ್ಷದ ಕಾರ್ಯಾಲಯದಲ್ಲಿ ಇಂದು ಪಕ್ಷದ ಹಿರಿಯರು ಹಾಗೂ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಮತ್ತು ಕಾರ್ಯಕರ್ತರ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ಲಮಾಣಿಯವರನ್ನು ಆಯ್ಕೆ ಮಾಡಿ ಆದೇಶ ನೀಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಜನತಾದಳದ ರಾಜ್ಯಾದ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆದೇಶದ ಮೇರೆಗೆ ಬೆಳಗಾವಿ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಪಕ್ಷದ ಕಾರ್ಯಕರ್ತರ …
Read More »
IN MUDALGI Latest Kannada News