Breaking News

TimeLine Layout

ಆಗಷ್ಟ್, 2020

  • 4 ಆಗಷ್ಟ್

    ಇಂದು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮಕ್ಕೆ ಕೊರೋನಾ ಪ್ರವೇಶ, ಮೊದಲ ಬಲಿ ಪಡೆದ ಮಹಾಮಾರಿ.

    ಇಂದು ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮಕ್ಕೆ ಕೊರೋನಾ ಪ್ರವೇಶ, ಮೊದಲ ಬಲಿ ಪಡೆದ ಮಹಾಮಾರಿ. ಮೂಡಲಗಿ : ಇಂದು ಹಳ್ಳೂರ ಗ್ರಾಮದ ಗಾಂಧಿನಗರ ತೋಟದ 33 ವಯಸ್ಸಿನ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಆದರೆ ಆ ವ್ಯಕ್ತಿ ನಿನ್ನೆ ತಾನೆ ಮೃತಪಟ್ಟಿದ್ದಾನೆ, ಹಾಗೆ ನೀನೆ ತಾನೇ ಆ ವ್ಯಕ್ತಿಯ ಅಂತ್ಯಸಂಸ್ಕಾರವು ಕೂಡಾ ನಡೆದು ಹೋಗಿದೆ. ಕೆಲವು ದಿನಗಳ ಅನಾರೋಗ್ಯ ಹಿನ್ನೆಲೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು, ಮೊದಲ ನೆಗೆಟಿವ್ ವರದಿ …

    Read More »
  • 4 ಆಗಷ್ಟ್

    ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಮಂಗಳವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

    ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಮಂಗಳವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಗೋಕಾಕ ನಗರದಲ್ಲಿ 49 ಜನರಿಗೆ ಮತ್ತು ಮೂಡಲಗಿ 02, ಢವಳೇಶ್ವರ. 02 ಶಿಂದಿಕುರಬೇಟ, 01 ಘಟಪ್ರಭಾ, 01 ಕೌಜಲಗಿ, 01 ಕೋಣ್ಣೂರ, 02 ಬೂದಿಹಾಳ 03 ನಾಗನೂರ. 01 ನಲ್ಲಾನಟ್ಟಿ. 01 ಕರಗುಪ್ಪಿ 01 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು …

    Read More »
  • 4 ಆಗಷ್ಟ್

    ಪತ್ರಕರ್ತರು ಎಂದರೆ ಯಾರು..? ಪತ್ರಕರ್ತರ ನಡೆ ಹೇಗಿರುತ್ತೆ ಗೊತ್ತಾ…!

    ಪತ್ರಕರ್ತರು ಎಂದರೆ ಯಾರು..? ಪತ್ರಕರ್ತರ ನಡೆ ಹೇಗಿರುತ್ತೆ ಗೊತ್ತಾ…! *ಮೂಡಲಗಿ :* ಪತ್ರಕರ್ತರು ಆಧುನಿಕ ಸಮಾಜದ ಕನ್ನಡಿಯೆಂದೇ ಹೇಳಬಹುದು. ಅಂತಹ ಅದ್ಭುತ ಶಕ್ತಿ ಪತ್ರಕರ್ತರಲ್ಲಿ ಇದೆ. ಪತ್ರಕರ್ತನು ತಾನು ಇರುವ ಸ್ಥಳಿಯ ಮತ್ತು ಹೊರನಾಡಿನ ನಡೆಯುವ ಪ್ರಸ್ತುತ ಸುದ್ದಿ-ಸನ್ನಿವೇಶಗಳನ್ನು ಸಮಾಜದ ಮುಂದೆ ಪತ್ರಿಕೋದ್ಯಮದ ಮೂಲಕ ವಿವರಿಸುತ್ತ ಹೋಗುತ್ತಾನೆ. ಅದೇ ರೀತಿ ರಾಜಕೀಯ ವ್ಯವಸ್ಥೆ,ಭೂಗತ ಜಗತ್ತಿನ ಷಡ್ಯಂತ್ರಗಳು ಇವೇ ಮೊದಲಾದ ವಿಷಯಗಳ ಬಗ್ಗೆ ಕಾಲಕಾಲಕ್ಕೆ ಜನತೆಗೆ ವರದಿ ಮಾಡುವದರ ಜೊತೆಗೇ ಒಂದು …

    Read More »
  • 3 ಆಗಷ್ಟ್

    ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಇತ್ತೀಚೆಗೆ ಗುದ್ದಲಿ ಪೂಜೆ

    ಮೂಡಲಗಿ : ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಲ್ಲಿಗೆ ಸಮೀಪದ ಸುಣಧೋಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ನಬಾರ್ಡ ಯೋಜನೆಯಡಿ ನೂತನ ಶಾಲಾ ಕೊಠಡಿಗಳಿಗೆ 1.04 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗಾಗಿ …

    Read More »
  • 3 ಆಗಷ್ಟ್

    ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

    ಮೂಡಲಗಿ: ನಮ್ಮದು ಕೃಷಿ ಪ್ರಧಾನವಾದ ದೇಶ. ಹೊಸ ಹೊಸ ಆವಿಸ್ಕಾರದ ತಂತ್ರಜ್ಞಾನವನ್ನು ಕೃಷಿ ಚಟುವಟಿಗಳಲ್ಲಿ ರೈತರು ಅಳವಡಿಸಿಕೊಂಡು ಹೆಚ್ಚು ವಾರ್ಷಿಕ ಆದಾಯ ಪಡೆದುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಗೊಂಡ ಪ್ರಯುಕ್ತ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜಾಗೃತ ಹನುಮಂತ ದೇವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿ ದರ್ಶನಾರ್ಶೀವಾದ ಪಡೆದ ಬಳಿಕ ಸ್ಥಳೀಯ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, …

    Read More »
  • 2 ಆಗಷ್ಟ್

    ಶರಣರ ಕಾಲಘಟ್ಟ ಮನುಜಕುಲದ ಅರಿವಿನ ಕಾಲ : ಶ್ರೀ ಬಸವರಾಜ ಹಿರೇಮಠ

    ಶರಣರ ಕಾಲಘಟ್ಟ ಮನುಜಕುಲದ ಅರಿವಿನ ಕಾಲ : ಶ್ರೀ ಬಸವರಾಜ ಹಿರೇಮಠ ಜಗದ ಉದಯದೊಂದಿಗೆ ಜೀವರಾಶಿಗಳ ಉತ್ಪತ್ತಿಯಾಗಿದೆ. ಹನ್ನೆರಡನೆಯ ಶತಮಾನದ ಶಿವಶರಣರ ಕಾಲಘಟ್ಟ ಮನುಷ್ಯನ ಅರುಹಿನ ಕಾಲವಾಗಿದೆ ಎಂದು ಬೆಳಗಾವಿ ಮಹಾನಗರ ಮಾಲಿಕೆ ನಗರ ಯೋಜನಾ ವಿಭಾಗದ ಉಪನಿರ್ದೇಶಕ ಶ್ರೀ ಬಸವರಾಜ ಹಿರೇಮಠ ಹೇಳಿದರು . ಅವರು ಗೋಕಾವಿ ಗೆಳೆಯರ ಬಳಗ ಹಮ್ಮಿಕೊಂಡ ಕೋವಿಡ್ -19 ಲಾಕ್ ಡೌನ್ ನಿಮಿತ್ಯ ಗೂಗಲ್ ಮೀಟ್ ಸೆಮಿನಾರ್ ಅಲ್ಲ ವೇಬಿನಾರ್ ವಿಶೇಷ ಉಪನ್ಯಾಸ …

    Read More »
  • 2 ಆಗಷ್ಟ್

    ಸಿಂಡಿಕೇಟ್ ಬ್ಯಾಂಕಿನ ವ್ಯವಸ್ಥಾಪಕ ಆರ್.ಅಶೋಕರಡ್ಡಿ ಸೇವಾ ನಿವೃತ್ತಿ

    ಸೇವಾ ನಿವೃತ್ತಿ ಹೊಂದಿದ ಅಶೋಕ ರಡ್ಡಿಗೆ ಬಿಳ್ಕೋಡಿಗೆ ಮೂಡಲಗಿ: ಇಲ್ಲಿಯ ಸಿಂಡಿಕೇಟ್ ಬ್ಯಾಂಕಿನ ಶಾಖೆಯ ಮುಖ್ಯ ವ್ಯವಸ್ಥಾಪಕ ಆರ್.ಅಶೋಕರಡ್ಡಿ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಬ್ಯಾಂಕಿನ ಸಿಬ್ಬಂದಿ ವರ್ಗದವರು ಬ್ಯಾಂಕಿನಲ್ಲಿ ಸತ್ಕರಿಸಿ ಬಿಳ್ಕೋಟ್ಟರು. ಸಮಾರಂಭದ ಮುಖ್ಯ ಅತಿಥಿಗಳಾಗಿದ ಸಿಂಡಿಕೇಟ್ ಬ್ಯಾಂಕಿನ ಚಿಕ್ಕೋಡಿ ವಿಭಾಗಿ ವ್ಯವಸ್ಥಾಪಕ ಪಿ.ಶ್ರೀನಿವಾಸರಾವ್ ಮಾತನಾಡಿ, ಸೇವಾ ನಿವೃತ್ತಿ ಹೊಂದಿದ ಆರ್.ಅಶೋಕರಡ್ಡಿ ಅವರು ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆಯಿಂದ ತಮ್ಮ 35 ವರ್ಷಗಳ ಸುರ್ಧೀಗ ಸೇವೆಯಲ್ಲಿ ಯಾವದೇ …

    Read More »
  • 2 ಆಗಷ್ಟ್

    ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ಮಹಾಮಾರಿ ಕರೋನಾ ಸೋಂಕಿತರ ಸಂಖ್ಯೆ ಕುಸಿತ

    ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಮಹಾಮಾರಿ ಕರೋನಾ ನಡೆಸಿದ್ದ ಆರ್ಭಟ ಇಂದು ಸ್ವಲ್ಪ ತಗ್ಗಿದೆ. ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಕುಸಿತ ಖಂಡಿದ್ದು, ಗೋಕಾಕ ತಾಲೂಕಿನಲ್ಲಿ ೨ ಸೋಂಕು ಮಾತ್ರ ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಹೇಳಿದರು. ಗೋಕಾಕ ತಾಲ್ಲೂಕಿನ ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರಿಗೆ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ …

    Read More »
  • 2 ಆಗಷ್ಟ್

    ಜಿಎಲ್‍ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ

    ಮೂಡಲಗಿ: ಇಂದು ಬೆಳವಣಿಗೆ ಹೊಂದುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುವುದು ಅಗತ್ಯವಾಗಿದೆ. ನೇಗಿಲಯೋಗಿ ದೇಶದ ಬೆನ್ನಲುಬು, ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ನೀರಾವರಿ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬೆಳಗಾವಿ ಕರ್ನಾಟಕ ನೀರಾವರಿ ನಿಗಮ ವಿಭಾಗದ ಸಹಯೋಗದ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರ ಆ.2ರಂದು ನಡೆದ ಜಿಎಲ್‍ಬಿಸಿ ಕಾಲುವೆ ನಿರ್ಮಾಣ ಕಾಮಗಾರಿ ಭೂಮಿ …

    Read More »
  • 2 ಆಗಷ್ಟ್

    ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ರೋಗಿಗಳ ಆರೈಕೆ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳಿಂದ ಪ್ರಗತಿ ಪರಿಶೀಲನಾ ಸಭೆ

    ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಹೆಚ್ಚುತ್ತಿರುವ ಕೊರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳ ಕುರಿತು ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ರೋಗಿಗಳ ಆರೈಕೆ ಕುರಿತು ತಾಲೂಕಾ ಮಟ್ಟದ ಅಧಿಕಾರಿಗಳಿಂದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಆರೋಗ್ಯಾಧಿಕಾರಿಗಳು, …

    Read More »