ಮೂಡಲಗಿ: ಕೋವಿಡ್ 19 ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರದಲ್ಲಿ ಬಳಸಿದ ಪಿಪಿಇ ಕಿಟ್, ಹ್ಯಾಂಡಗ್ಲೌಜ ಮತ್ತು ಶವಕ್ಕೆ ಪ್ಯಾಕ್ ಮಾಡಿದ ಪ್ಲಾಸ್ಟಿಕ್ಗಳು ಸ್ಮಶಾನದಲ್ಲಿ ಕಂಡು ಬಂದಿವೆ ಎಂದು ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ತಿಳಿಸಿದ್ದಾರೆ. ಸ್ಮಶಾನದಲ್ಲಿ ಗಿಡಗಳನ್ನು ಹಚ್ಚಿ ಪೋಷಣೆ ಮಾಡುತ್ತಿರುವ ಈರಪ್ಪ ಢವಳೇಶ್ವರ ಪ್ರತಿದಿನದಂತೆ ನೆಟ್ಟ ಗಿಡಗಳ ವೀಕ್ಷಣೆಗೆ ಹೋದಾಗ ಶವಸಂಸ್ಕಾರ ಮಾಡಿದ ವಸ್ತುಗಳ ಪೋಟೋಗಳನ್ನು ವೈರಲ್ ಮಾಡಿದ್ದಾರೆ. ಈ ಬಗ್ಗೆ ಪತ್ರಿಕೆ ವಿಚಾರಿಸಿದಾಗ ಸೋಂಕಿನಿಂದ ಮೃತಪಟ್ಟವರ …
Read More »TimeLine Layout
ಆಗಷ್ಟ್, 2020
-
18 ಆಗಷ್ಟ್
ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಳೆಯಿಂದಾಗಿ ನೆರೆಯ ಭೀತಿ ಅನುಭವಿಸುತ್ತಿರುವ ಘಟಪ್ರಭಾ ನದಿ ತೀರದ ಗ್ರಾಮಗಳ ನಿರಾಶ್ರಿತ ಕುಟುಂಬಗಳಿಗೆ ಈಗಾಗಲೇ ಗಂಜಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮಂಗಳವಾರದಂದು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರಾಶ್ರಿತ ಕುಟುಂಬಗಳಿಗೆ ಗಂಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ಮಾಡಿರುವುದಾಗಿ ಹೇಳಿದ್ದಾರೆ. ಅಡಿಬಟ್ಟಿ, ಮೆಳವಂಕಿ, ಉದಗಟ್ಟಿ, ಬಳೋಬಾಳ, ಬೀರನಗಡ್ಡಿ, ಮಸಗುಪ್ಪಿ, ವಡೇರಹಟ್ಟಿ, ಹುಣಶ್ಯಾಳ ಪಿಜಿ, ಪಟಗುಂದಿ, …
Read More » -
17 ಆಗಷ್ಟ್
ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಉಪಾಧ್ಯಕ್ಷರಾಗಿ ಶ್ರೀನಿವಾಸ ಆಯ್ಕೆ..!
ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಉಪಾಧ್ಯಕ್ಷರಾಗಿ ಶ್ರೀನಿವಾಸ ಆಯ್ಕೆ..! ಬೆಳಗಾವಿ: ನಗರದ ಜನತಾದಳ ಪಕ್ಷದ ಕಾರ್ಯಾಲಯದಲ್ಲಿ ಇಂದು ಪಕ್ಷದ ಹಿರಿಯರು ಹಾಗೂ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಮತ್ತು ಕಾರ್ಯಕರ್ತರ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ಲಮಾಣಿಯವರನ್ನು ಆಯ್ಕೆ ಮಾಡಿ ಆದೇಶ ನೀಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಜನತಾದಳದ ರಾಜ್ಯಾದ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆದೇಶದ ಮೇರೆಗೆ ಬೆಳಗಾವಿ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಪಕ್ಷದ ಕಾರ್ಯಕರ್ತರ …
Read More » -
17 ಆಗಷ್ಟ್
ರಾಯಣ್ಣ ಅಭಿಮಾನಿಗಳಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು – ಪ್ರಕಾಶ ಮಾದರ
ಮೂಡಲಗಿ: ಬ್ರಿಟೀಷರ ವಿರುದ್ಧ ಅಪ್ರತಿಮವಾಗಿ ಹೋರಾಡಿ ದೇಶಕ್ಕಾಗಿ ತನ್ನ ಅಮೂಲ್ಯ ಪ್ರಾಣವನ್ನೇ ಬಲಿಕೊಟ್ಟ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ನ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸರು ಅನುಮತಿ ನೀಡದೇ ಇದ್ದದ್ದು ಅಕ್ಷಮ್ಯ. ತಕ್ಷಣವೇ ಪೊಲೀಸರು ಮೂರ್ತಿ ಪ್ರತಿಷ್ಠಾಪನೆಗೆ ಕೊಡದಿದ್ದರೆ ಕನ್ನಡ ಪರ ಸಂಘಟನೆಗಳು ಹಾಗೂ ರಾಯಣ್ಣ ಅಭಿಮಾನಿಗಳಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಮುಖಂಡ ಪ್ರಕಾಶ ಮಾದರ ಹೇಳಿದರು. ಬೆಳಗಾವಿ ಸಮೀಪ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆಗೆ …
Read More » -
17 ಆಗಷ್ಟ್
ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ – ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಿಡಕಲ್ ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಈಗಾಗಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಿದ್ದರಿಂದ ನದಿ ತೀರದ ಗ್ರಾಮಗಳ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸಂಜೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ …
Read More » -
17 ಆಗಷ್ಟ್
ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಅವಮಾನ ಮಾಡಿದ ಜೀಲ್ಲಾಡಳಿತ ಕ್ರಮಕ್ಕೆ ಖಂಡನೆ
ಮೂಡಲಗಿ : ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಮೊದಲು ನಾಡಿನ ಸ್ವಾಂತಂತ್ರ್ಯಕ್ಕಾಗಿ ಕಿತ್ತೂರು ಚನ್ನಮ್ಮನ ಬಲಗೈ ಬಂಟನಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಸೇನಾನಿ ಕೆಚ್ಚೇದೆಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಅವಮಾನ ಮಾಡಿದ ಜೀಲ್ಲಾಡಳಿತ ಕ್ರಮ ಖಂಡಿಸಿ ಹೋರಾಟದ ಮಾರ್ಗ ಹೀಡಿಯಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ಸುರೇಶ ನಾಯ್ಕ ಸರಕಾರವನ್ನು ಒತ್ತಾಯಿಸಿದ್ದಾರೆ. ಅಗಸ್ಟ 15 ರಂದು ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಿದ ಸಂಗೋಳ್ಳಿ ರಾಯಣ್ಣನ ಪ್ರತಿಮೆಗೆ …
Read More » -
15 ಆಗಷ್ಟ್
ಗೋಕಾಕ ಹಾಗೂ ಮೂಡಲಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ.
ಸಚಿವ ರಮೇಶ ಜಾರಕಿಹೊಳಿ, ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಗೋಕಾಕ ಹಾಗೂ ಮೂಡಲಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ. ಘಟಪ್ರಭಾ: ಕೋರೋನಾದಂತಹ ಮಾರಕ ಕಾಯಿಲೆಗಳ ಮಧ್ಯ ಬಳಲುತ್ತಿರುವ ಕೊರೋನಾ ಸೊಂಕಿತರ ಆರೈಕೆ ಮತ್ತು ಸುರಕ್ಷತೆಗಾಗಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಾಡುತ್ತಿರುವ ಮಾನವೀಯ ಮೌಲ್ಯಗಳು ಮಾದರಿಯಾಗಿದೆ. ರಾಜ್ಯ ಹಾಗೂ ರಾಷ್ಟ್ರದಲ್ಲಿಯೇ ಅವರ ಸೇವೆ ಅನುಪಮವಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ …
Read More » -
14 ಆಗಷ್ಟ್
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಯನ್ನು ಖಂಡಿಸಿ, ಪತ್ರಕರ್ತರಿಂದ ತಹಶೀಲ್ದಾರ್ ರವರಿಗೆ ಮನವಿ
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಯನ್ನು ಖಂಡಿಸಿ ಕಿತ್ತೂರು ತಾಲ್ಲೂಕಿನ ಸಮಸ್ತ ಪತ್ರಕರ್ತರ ಬಳಗದ ವತಿಯಿಂದ ತಹಶೀಲ್ದಾರ್ ರವರಿಗೆ ಮನವಿ ಕಿತ್ತೂರು : ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ದೊಂಬಿ ಗಲಾಟೆಯ ಸಂದರ್ಭದಲ್ಲಿ ವರದಿಮಾಡಲು ತೆರಳಿದ ಸುದ್ದಿ ಮಾಧ್ಯಮಗಳ ಪ್ರತಿನಿಧಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದು ಕಿತ್ತೂರು ತಾಲ್ಲೂಕಿನ ಎಲ್ಲಾ ಪತ್ರಕರ್ತರ ವತಿಯಿಂದ ಇಂದು ಕಿತ್ತೂರು ತಹಸೀಲ್ದಾರ್ ರವರ ಮೂಲಕ …
Read More » -
14 ಆಗಷ್ಟ್
ರೇವಣಸಿದೇಶ್ವರ ಪ್ರೌಢ ಶಾಲೆಯ ಉತ್ತಮ ಫಲಿತಾಂಶ
ಹೊಸಕೋಟಿ: ರಾಮದುರ್ಗ ತಾಲೂಕಿನ ಹೊಸಕೋಟಿಯ ಶ್ರೀ ರೇವಣಸಿದ್ದೇಶ್ವರ ವಿದ್ಯಾವರ್ದಕ ಸಂಘದ ಶ್ರೀ ರೇವಣಸಿದ್ಧೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢ ಶಾಲಾ ವಿಭಾಗದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶವನ್ನು ಹೊಂದಿದೆ ಎಂದು ಶಾಲೆಯ ಮುಖ್ಯೋಪಾಧ್ಯಯ ಬಿ.ಪಿ.ಕಟ್ಟಿಮನಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಶಾಲೆಗೆ ಯಶೋಧಾ ಆರ್.ಹಂಪಿಹೊಳಿ ಶೇ.90.72(ಪ್ರಥಮ), ಕಾವ್ಯಾ ಎಲ್.ಸಣ್ಣತಮ್ಮಪ್ಪಗೋಳ ಶೇ.90.40 (ದ್ವಿತೀಯ), ಅನೀತಾ ವ್ಹಿ.ಮಾದರ ಶೇ.87.84(ತೃತೀಯ) ಸ್ಥಾನ ಪಡೆದುಕೊಂಡಿರುವರು. ಪರೀಕ್ಷೆಯಲ್ಲಿ 4ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್, 55 ವಿದ್ಯಾರ್ಥಿಗಳು ಪ್ರಥಮ ಧರ್ಜೆಯಲ್ಲಿ ಮತ್ತು …
Read More » -
13 ಆಗಷ್ಟ್
ಸತತ ಪರಿಶ್ರಮ, ನಿರಂತರ ಅದ್ಯಯನ ಯಶಸ್ಸಿನ ದಾರಿ- ಶೃತಿ.
ತುಕ್ಕಾನಟ್ಟಿ: ಸತತ ಪರಿಶ್ರಮ, ನಿರಂತರ ಅದ್ಯಯನ ಯಶಸ್ಸಿನ ದಾರಿ- ಶೃತಿ. ಮೂಡಲಗಿ: ಸತತ ಪರಿಶೃಮ ನಿರಂತರ ಅಧ್ಯಯನ ಮಾಡಿದಾಗ ಯಶಸ್ಸು ತಾನಾಗಿಯೇ ಬರುತ್ತದೆ. ಜೊತೆಗೆ ಗುರುವಿನ ಮಾರ್ಗದರ್ಶನದಿಂದ ಉತ್ತಮ ಗುರಿ ಮುಟ್ಟಲು ಸಾದ್ಯ ಎಂದು ಎಸ್.ಎಸ್.ಎಲ್.ಸಿ ರ್ಯಾಂಕ ವಿಜೇತೆ ಕುಮಾರಿ ಶೃತಿ ಪಾಟೀಲ ಅಭಿಪ್ರಾಯ ಪಟ್ಟರು. ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾದ್ಯಮದಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ …
Read More »
IN MUDALGI Latest Kannada News