ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಗ್ರಪ್ಸ್ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು ನಡೆದ 79ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ತಾಪಂ ಮಾಜಿ ಸದಸ್ಯ ಈರಪ್ಪ ದೇಯಣ್ಣವರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದು ಪ್ರತಿಯೊಬ್ಬರೂ ತಮ್ಮಲ್ಲಿ ದೇಶಾಭಿಮಾನ ಬೆಳಸಿಕೊಳ್ಳಬೇಕು ಎಂದರು. …
Read More »TimeLine Layout
ಆಗಷ್ಟ್, 2025
-
16 ಆಗಷ್ಟ್
‘ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ರೂ.4.15 ಕೊಟಿ ಲಾಭ’
ಮೂಡಲಗಿ: ‘ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಆರ್ಥಿಕ ವರ್ಷದ ಕೊನೆಯಲ್ಲಿ ರೂ.4.15 ಕೋಟಿ ನಿವ್ವಳ ಲಾಭವನ್ನು ಪಡೆದು ಪ್ರಗತಿಯಲ್ಲಿ ಸಾಗಿದೆ’ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಅವರು ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ಸಭಾಭವನದಲ್ಲಿ 34ನೇ ವರ್ಷದ ಸರ್ವಸಾಧಾರಣಾ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಸದ್ಯ ಶೇರು ಬಂಡವಾಳ ರೂ. 78.96 ಲಕ್ಷ, ಠೇವುಗಳು ರೂ.78.84 ಕೋಟಿ, ನಿಧಿಗಳು …
Read More » -
15 ಆಗಷ್ಟ್
*ನಾಗನೂರ ಪಟ್ಟಣದಲ್ಲಿ ರಾತ್ರಿ ೧೨ ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ:-ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ರಾತ್ರಿ ೧೨.೦೦ ಗಂಟೆಯ ಸಮಯದಲ್ಲಿ ನಾಗನೂರ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸುವ ಅವಕಾಶ ದೊರೆತಿರುವುದು ನನ್ನ ಅದೃಷ್ಟವೆಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ನಾಗನೂರ ಪಟ್ಟಣದ ಮಾಧವಾನಂದ ಆಶ್ರಮದ ಬಳಿ ೭೯ ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು. ಮೂಡಲಗಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಬರುವ ಸಂದರ್ಭದಲ್ಲಿ ನಾಗನೂರ ಪಟ್ಟಣದ ಪ್ರಮುಖರು ಸೇರಿಕೊಂಡು ಇಲ್ಲಿಯೇ ಧ್ವಜಾರೋಹಣ ನೆರವೇರಿಸಿಕೊಂಡು ಹೋಗಿರಿ …
Read More » -
14 ಆಗಷ್ಟ್
*ಮೂಡಲಗಿಯಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ: ಅಸಂಘಟಿತ ಕಾರ್ಮಿಕರು, ಬಡ ಜನರಿಗೆ ಇಂದಿರಾ ಕ್ಯಾಂಟಿನ್ ವರದಾನವಾಗಿದ್ದು, ಕಡಿಮೆ ದರದಲ್ಲಿ ಉಪಹಾರ ಮತ್ತು ಊಟದ ಸೌಲಭ್ಯಗಳನ್ನು ಹೊಂದಿರುವ ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಕರೆ ನೀಡಿದರು. ಗುರುವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತೆರೆಯಲಾದ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು, ಬಡ ಬಗ್ಗರಿಗೆ ಇದು ಉಪಯುಕ್ತವಾಗಿದೆ ಎಂದು ತಿಳಿಸಿದರು. ಕಡಿಮೆ ದರದಲ್ಲಿ ಬೆಳಗಿನ ಉಪಹಾರ ಮತ್ತು …
Read More » -
13 ಆಗಷ್ಟ್
ಎಸ್.ಎಸ್. ಢವಣ, ರಾಮದುರ್ಗ ಕ್ಷೇತ್ರದ ಬಿಡಿಸಿಸಿ ಬ್ಯಾಂಕ್ ಚುನಾವಣೆಯ ಅಭ್ಯರ್ಥಿ
ಬೆಳಗಾವಿ: ಅಕ್ಟೋಬರ್ ತಿಂಗಳಲ್ಲಿ ಜರುಗುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಫೆನಲ್ ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರದಂದು ಜರುಗಿದ ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯವರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, …
Read More » -
13 ಆಗಷ್ಟ್
ಆರ್.ಡಿ.ಎಸ್. ಕಾಲೇಜಿನಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕಾರ
ಮೂಡಲಗಿ : ಮಾದಕ ವಸ್ತು ಸೇವೆನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವದಲ್ಲದೆ ದೈಹಿಕ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಇಂದಿನ ಯುವಕರು ಡ್ರಗ್ಸ್ ತಂಬಾಕು ಗಾಂಜಾ ಹಾಗೂ ಮಧ್ಯಪಾನಗಳ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಅವುಗಳನ್ನು ಸೇವನೆ ಮಾಡುವದರಿಂದ ದೂರ ಇರುವ ಯುವ ಸಮುದಾಯ ಸೃಷ್ಟಿಯಾಗುವುದು ಅವಶ್ಯಕವಿದೆ ಎಂದು ಆರ್.ಡಿ.ಎಸ್. ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಂತೋಷ ಪಾರ್ಶಿ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯ ಹಾಗೂ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯಗಳ …
Read More » -
11 ಆಗಷ್ಟ್
ಚಂದ್ರಪ್ಪ ರುದ್ರಪ್ಪ ಸಿದ್ನಾಳ ನಿಧನ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ ಚಂದ್ರಪ್ಪ ರುದ್ರಪ್ಪ ಸಿದ್ನಾಳ(60)ಇವರು ಸೋಮವಾರ ಆ.11ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂಧು-ಬಳಗವನ್ನಗಲಿದ್ದಾರೆ. ಸಂತಾಪ:ಬೆಟಗೇರಿ ಗ್ರಾಮದ ನಿವಾಸಿ ಚಂದ್ರಪ್ಪ ರುದ್ರಪ್ಪ ಸಿದ್ನಾಳ ಅವರ ನಿಧನಕ್ಕೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಗಣ್ಯರು, ರಾಜಕೀಯ ಮುಖಂಡರು, ಸ್ಥಳೀಯರು ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.
Read More » -
11 ಆಗಷ್ಟ್
90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ
ಮೂಡಲಗಿ : ಪ್ರತಿ ವರ್ಷದಂತೆ ಈ ವರ್ಷವು ಸಹ ನಮ್ಮ ಸಂಸ್ಥೆಯ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿ.ಯು.ಸಿ. ಯಲ್ಲಿ 90% ಹಾಗೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಇದೆ ಆಗಷ್ಟ 17 ರಂದು ಬೆಳಿಗ್ಗೆ 9.00 ಗಂಟೆಗೆ ರವಿವಾರ ಗೋಕಾಕ ನಗರದ ಬ್ಯಾಳಿಕಾಟಾ ಹತ್ತಿರ ಇರುವ ಶೂನ್ಯ ಸಂಪಾನಮಠದ ಸಿದ್ದಲಿಂಗೇಶ್ವರ ಬಿ.ಸಿ.ಎ. ಕಾಲೇಜು …
Read More » -
11 ಆಗಷ್ಟ್
ಕುರಿಗಾಯಿ ಜನರ ಹಿತರಕ್ಷಣೆ ಕಾಯ್ದೆ ಜಾರಿಗಾಗಿ ಒತ್ತಾಯ: ಆ.19ರಂದು ಬೆಂಗಳೂರಿನಲ್ಲಿ ಕುರಿಗಾಹಿಗಳ ಬೃಹತ್ ಪ್ರತಿಭಟನೆ- ಮಾರುತಿ ಮರ್ಡಿ
ಮೂಡಲಗಿ: ರಾಜ್ಯದಲ್ಲಿರುವ ಕುರಿಗಾರರ ಮೇಲೆ ಆಗುತ್ತಿರುವ ದೌರ್ಜನ್ಯಗಳ ತಡೆಗಾಗಿ ಸಾಂಪ್ರದಾಯಿಕ ಕುರಿಗಾಯಿಗಳ ಹಿತರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸುವ ಸಲುವಾಗಿ ಇದೇ ಆ. 19ರಂದು ಬೆಂಗಳೂರಿನ ಫ್ರೀಡಂ ಪಾರ್ಕದಲ್ಲಿ ರಾಜ್ಯದ ಎಲ್ಲ ಕುರಿಗಾಹಿಗಳ ಬೃಹತ್ ಪ್ರತಿಭಟನೆ ಮಾಡುವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ತಾಲೂಕಿನ ಕಲ್ಲೋಳಿಯ ಮಾರುತಿ ಮರ್ಡಿ ತಿಳಿಸಿದ್ದಾರೆ. ರಾಜ್ಯದಲ್ಲಿರುವ ಕುರಿಗಾರ ಮೇಲೆ ನಿರಂತವಾಗಿ ನಡೆಯುತ್ತಿರುವ ದೌರ್ಜನ್ಯಗಳು, ಹಲ್ಲೆ, ಜೀವ ಬೇದರಿಕೆ, …
Read More » -
11 ಆಗಷ್ಟ್
ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ
ಮೂಡಲಗಿ: ಭಾರತದ ಧಾರ್ಮಿಕ ಪರಂಪರೆಯಲ್ಲಿ ಶ್ರೀ ರಾಘವೇಂದ್ರತೀರ್ಥರು ಅಜರಾಮರು, ರಾಯರು ತಪೆÇೀಶಕ್ತಿ, ಭಕ್ತಿ, ಶ್ರದ್ಧಾ, ಮತ್ತು ಮಾನವೀಯ ಮೌಲ್ಯಗಳ ಪ್ರತೀಕ. ಆರಾಧನಾ ದಿನವು ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ, ಅದು ಶ್ರದ್ಧೆ, ಶಾಂತಿಮತ್ತು ಧರ್ಮದ ಬೆಳಕನ್ನು ಹರಡುವ ಪವಿತ್ರ ದಿನವಾಗಿದೆ ಸದ್ಬಕ್ತರು ರಾಯರ ತತ್ವಾದರ್ಶಗಳನ್ನು ಅನುಸರಿಸಿ ಬೇಕೆಂದು ಪಟ್ಟಣದ ಸಂಸ್ಕø ತ ವಿದ್ವಾನ್ ಪಂಡಿತ್ ರಾಘವೇಂದ್ರ ಆಚಾರ್ಯ ತೆಗ್ಗಿ ಹೇಳಿದರು. ಸೋಮವಾರದಂದು ಪಟ್ಟಣದ ಲಕ್ಷ್ಮೀನಗರದ ಶ್ರೀ ಹನುಮಂತ ದೇವಸ್ಥಾನದಲ್ಲಿ ಜರುಗಿದ …
Read More »
IN MUDALGI Latest Kannada News