ಮೂಡಲಗಿ ಪಟ್ಟಣದ ಢವಳೇಶ್ವರ ಕಾಲನಿಯಲ್ಲಿಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಅರ್ಚಕ ರಾಘವೇಂದ್ರ ತೆಗ್ಗಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ದ ಮಾತೃಶಕ್ತಿ ವತಿಯಿಂದ ಗುರುಪುಷ್ಯಾಮೃತ ದಿನ ಗುರುವಾರದಂದು ನಡೆದ ಕುಂಕುಮಾರ್ಚನೆಯಲ್ಲಿ ಭಾಗವಹಿಸಿದ ಮಹಿಳೆಯರು.
Read More »TimeLine Layout
ಆಗಷ್ಟ್, 2025
-
22 ಆಗಷ್ಟ್
ಆ.24ರಿಂದ ಬೆಟಗೇರಿಯಲ್ಲಿ 41ನೇ ಸತ್ಸಂಗ ಸಮ್ಮೇಳನ *ಐದು ದಿನ ಸಂಜೆ 7:30ಗಂಟೆಗೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 41ನೇ ಸತ್ಸಂಗ ಸಮ್ಮೇಳನ ಆ.24ರಿಂದ ಆ.28ತನಕ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಆ.24ರಂದು ಸ್ಥಳೀಯ ಶ್ರೀ ಗಜಾನನ ವೇದಿಕೆ ಮೇಲೆ ಸಾಯಂಕಾಲ 7:30ಗಂಟೆಗೆ ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ, ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಇಟ್ನಾಳದ ಸಿದ್ದೇಶ್ವರ ಸ್ವಾಮಿಜಿ, ಬಿಲಕುಂದಿ …
Read More » -
21 ಆಗಷ್ಟ್
ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ – ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಗುರುವಾರದಂದು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದವರು ತಿಳಿಸಿದ್ದಾರೆ. ಮೂಡಲಗಿ ಪಟ್ಟಣದ ಈಗಿರುವ ತಹಶೀಲ್ದಾರ ಕಛೇರಿಉ ಮುಂಭಾಗದಲ್ಲಿ ಸುಮಾರು 2 …
Read More » -
19 ಆಗಷ್ಟ್
ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ
ಮೂಡಲಗಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ ಬುಧವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.
Read More » -
19 ಆಗಷ್ಟ್
ಬೆಟಗೇರಿ ಸುತ್ತಮುತ್ತ ಸುರಿದ ಮಳೆ, ಬೆಳೆ ನಾಶವಾಗುವ ಆತಂಕದಲ್ಲಿ ರೈತರು.!
ಬೆಟಗೇರಿ ಸುತ್ತಮುತ್ತ ಸುರಿದ ಮಳೆ, ಬೆಳೆ ನಾಶವಾಗುವ ಆತಂಕದಲ್ಲಿ ರೈತರು.! *ಅಡಿವೇಶ ಮುಧೋಳ.ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಹಲವು ದಿನಗಳಿಂದ ಹಗಲು-ರಾತ್ರಿ ಆಗಾಗ ಮಳೆ ಸುರಿದು, ಇಲ್ಲಿಯ ಭೂಮಿಯನ್ನು ತಂಪಾಗಿಸಿದೆ. ಒಂದಡೆ ಇಲ್ಲಿಯ ರೈತರಿಗೆ ಮಾಳೆಯಾಗಿ ಸಂತಸವಾದರೆ ಇನ್ನೂಂದಡೆ ಭೂಮಿಯಲ್ಲಿರುವ ಕೆಲವು ಬೆಳೆ ಹಾಳಾಗುವ ಆತಂಕ ಎದುರಾಗಿದೆ. ಈಗ ಮತ್ತೇ ನಾಲ್ಕೈದು ದಿನಗಳಿಂದ ಬೆಟಗೇರಿ ಗ್ರಾಮದ ಸುತ್ತ-ಮುತ್ತ ಹಗಲಿರುಳು ಆಗಾಗ ಮಳೆ ಧರೆಗಿಳಿಯುತ್ತಿದೆ. …
Read More » -
19 ಆಗಷ್ಟ್
ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ
ಗೋಕಾಕ- ಮಹಾರಾಷ್ಟ್ರ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಕೂಡಲೇ ಅಧಿಕಾರಿಗಳು ಸಂತ್ರಸ್ತರಿಗೆ ಯಾವುದೇ ಸಮಸ್ಯೆಗಳು ಬಾರದಂತೆ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಸಂಜೆ ನಗರದ ನಾಕಾ ಬಳಿ ಇರುವ ಪ್ರವಾಸಿ ಮಂದಿರದಲ್ಲಿ ಗೋಕಾಕ ಮತ್ತು ಮೂಡಲಗಿ …
Read More » -
19 ಆಗಷ್ಟ್
ಬಸ್ ಚಾಲಕನ ಮೊಬೈಲ್ ಗೀಳು! ಪ್ರಯಾಣಿಕರ ಜೀವಕ್ಕೆ ಹೊಣೆ ಯಾರು…?
ಬಸ್ ಚಾಲಕನ ಮೊಬೈಲ್ ಗೀಳು! ಪ್ರಯಾಣಿಕರ ಜೀವಕ್ಕೆ ಹೊಣೆ ಯಾರು…? ಮೂಡಲಗಿ : ಕರ್ನಾಟಕರಸ್ತೆ ಸಾರಿಗೆ ಸಂಸ್ಥೆಯ ಗೋಕಾಕ ಘಟಕದ ಚಾಲಕರೊಬ್ಬರು ಮೊಬೈಲ್ ಬಳಕೆ ಮಾಡುತ್ತ ಚಾಲನೆ ಮಾಡಿದ್ದು, ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.ದಿನೇ ದಿನೇ ಅಪಘಾತ ಹೆಚ್ಚುತ್ತಿದು ಕಾರಣ ಮೊಬೈಲ್ ಬಳಕೆ ಒಂದು ಪ್ರಮುಖ ಕಾರಣವಾಗಿದೆ ಎನ್ನುತ್ತಾರೆ ಪ್ರಯಾಣಿಕರು. ಗೋಕಾಕ ಘಟಕದ ಚಾಲಕರೊಬ್ಬರು(ಅ, 18)ಚಾಲನಾ ಸಮಯದಲ್ಲಿ ಮೊಬೈಲ್ ಬಳಕೆ ಮಾಡಿದ್ದು ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಶ್ರಾವಣ ಮಾಸದ …
Read More » -
19 ಆಗಷ್ಟ್
ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ
ಮೂಡಲಗಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಮೂಡಲಗಿ ತಾಲೂಕಾ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮೂಡಲಗಿ ಶೈಕ್ಷಣಿಕ ತಾಲ್ಲೂಕು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ಮಂಗಳವಾರ ರಜೆ ಇರಲಿದೆ ಎಂದು ತಹಸೀಲ್ದಾರ್ ಅವರು ಆದೇಶಿಸಿದ್ದಾರೆ.
Read More » -
18 ಆಗಷ್ಟ್
ಬೆಟಗೇರಿ ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮನ್ನಿಕೇರಿ ಹಾದಿಗೆ ಹೊಂದಿಕೊಂಡಿರುವ ಬೆಟಗೇರಿ ತೋಟದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ, ಟಗರಿನ ಕಾಳಗ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆ.23ರಿಂದ ಆ.24ರವರೆಗೆ ಜರುಗಲಿವೆ. ಆ.23ರಂದು ಮುಂಜಾನೆ 6 ಗಂಟೆಗೆ ಮಡ್ಡಿ ಬೀರಸಿದ್ಧೇಶ್ವರ ದೇವರ ದೇವಸ್ಥಾನದ ಗದ್ಗುಗೆ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 6 ಗಂಟೆಗೆ ಪುರ ದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು, ಅದೇ ದಿನ ಪರಸ್ಥಳದಿಂದ ವಾಲಗ ಕೂಡುವುದು. ರಾತ್ರಿ …
Read More » -
18 ಆಗಷ್ಟ್
ಬೆಟಗೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ಕೃಷ್ಣ ಜನ್ನಾಷ್ಟಮಿಯನ್ನು ಶನಿವಾರ ಆ.16 ರಂದು ಸಂಭ್ರಮದಿಂದ ಆಚರಿಸಲಾಯಿತು. ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ಗದ್ಗುಗೆ ಮಹಾಪೂಜೆ, ನೈವೇದ್ಯ ಸಮರ್ಪಿಸಿದ ಬಳಿಕ ಸ್ಥಳೀಯ ಪುಟ್ಟ ಮಕ್ಕಳು ಕೃಷ್ಣ-ರಾಧೆಯರ ವೇಷ ಧರಿಸಿ ಎಲ್ಲರ ಗಮನ ಸೆಳೆದರು. ತೊಟ್ಟಿಲಲ್ಲಿ ಶ್ರೀಕೃಷ್ಣನ ಭಾವಚಿತ್ರದ ಮೂರ್ತಿ ಇಟ್ಟು ತೊಟ್ಟಿಲು ತೂಗುವ ಕಾರ್ಯಕ್ರಮ ಸಡಗರದಿಂದ ನಡೆಯಿತು. ಕೊಳಲು ಹಿಡಿದು ತಲೆಯ ಮೇಲೆ …
Read More »
IN MUDALGI Latest Kannada News