ಮೂಡಲಗಿ : ಮಲೇಷಿಯಾದಲ್ಲಿ ಏಷಿಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯಿನಷಿಪ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಡಿರುವ ಕು. ಲಕ್ಷ್ಮೀ ಮಲ್ಲಪ್ಪ ರಡರಟ್ಟಿ ಅವರಿಗೆ ಮೂಡಲಗಿ ಗೆಳೆಯರ ಬಳಗದಿಂದ ಸತ್ಕರಿಸಿ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಪತ್ರಕರ್ತ ಈಶ್ವರ ಢವಳೇಶ್ವರ, ಮಂಜುನಾಥ ರೇಳೆಕರ, ಅಜ್ಜಪ್ಪ ಅಂಗಡಿ, ಮಲ್ಲಿಕಾರ್ಜುನ ನಿಡಸೋಸಿ, ಮಲೀಕ ಪಾಶ್ಛಾಪೂರ, ಅನೀಲ ಮುಧೋಳ ಹಾಗೂ ಲಕ್ಷ್ಮೀ ಪಾಲಕರು ಇದ್ದರು.
Read More »TimeLine Layout
ಆಗಷ್ಟ್, 2025
-
9 ಆಗಷ್ಟ್
ಪದಕ ಪಡೆದ ಲಕ್ಷ್ಮೀ ರಡರಟ್ಟಿ ಹಾಗೂ ಬಾಗಲಕೋಟೆ ಜಿಲ್ಲೆಗೆ ಡಿಡಿಪಿಐ ಆಗಿ ಬಡ್ತಿಯಾದ ಅಜೀತ ಮನ್ನಿಕೇರಿ ಅವರಿಗೆ ಸತ್ಕಾರ
ಮೂಡಲಗಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಎಜ್ಯುಕೇಶನ್ ಮತ್ತು ಸೋಶಿಯಲ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ಏಷಿಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯನ್ಷಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಲಕ್ಷ್ಮೀ ರಡರಟ್ಟಿ ಹಾಗೂ ಮೂಡಲಗಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಪಾರವಾದ ಸೇವೆ ಸಲ್ಲಿಸಿ ಬಾಗಲಕೋಟೆ ಜಿಲ್ಲೆಗೆ ಡಿಡಿಪಿಐ ಆಗಿ ಬಡ್ತಿ ಹೊಂದಿ ವರ್ಗಾವಣೆ ಆಗಿರುವ ಅಜೀತ ಮನ್ನಿಕೇರಿ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಕಮಿಟಿ ಅಧ್ಯಕ್ಷ ಮಲೀಕ ಹುಣಶಾಳ ಅವರು ಮಾತನಾಡಿ, ಈ …
Read More » -
9 ಆಗಷ್ಟ್
ಉದ್ಯೋಗ ಅವಕಾಶಗಳನ್ನು ಪದವಿ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು- ರವಿ ಕಟಗೇರಿ
ಮೂಡಲಗಿ : ಪದವಿ ಹಂತದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಅವಕಾಶಗಳು ಹೆಮ್ಮರವಾಗಿದ್ದು ಅನೇಕ ಇಲಾಖೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳುತ್ತಿದ್ದು ಸರಿಯಾದ ಮಾರ್ಗದರ್ಶನ ಪಡೆದುಕೊಂಡು ವಿವಿಧ ಇಲಾಖೆಗೆ ಸೇರಿಕೊಳ್ಳಲು ಪೂರ್ವ ತಯಾರಿಯನ್ನು ಪದವಿ ಹಂತದ ಅಧ್ಯಯನದ ಜೊತೆಗೆ ಪ್ರಯತ್ನಿಸಬೇಕೆಂದು ಮೂಡಲಗಿಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರವಿ ಕಟಗೇರಿ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ & ವಿಜ್ಞಾನ ಪದವಿ …
Read More » -
9 ಆಗಷ್ಟ್
ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೂಡಲಗಿ: ಪಟ್ಟಣದ ಎಪಿಎಂಸಿ ರಸ್ತೆಯಲ್ಲಿರು ವೆಂಕಟೇಶ ಕ್ಲಿನಿಕ್ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದ ನಿಮಿತ್ಯ ಶನಿವಾರ ಆ.9 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮುಂಜಾನೆ 11 ರಿಂದ ಸಂಜೆ 4 ಗಂಟೆವರಿಗೆ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಎಸ್.ಎಸ್.ದಂಡಪ್ಪನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಆ.9 ರಂದು ಮುಂಜಾನೆ 10 ಗಂಟೆಗೆ ಶ್ರೀ ಮಹಾಲಕ್ಷ್ಮೀ ಶ್ರೀ ಮಹಾಸರಸ್ವತಿ ಹಾಗೂ ಧನ್ವಂತರಿ ಪೂಜೆಯೊಂದಿಗೆ ನೆರವೇರುವುದು. ದಿವ್ಯ ಸಾನ್ನಿಧ್ಯವನ್ನು ಶ್ರೀ ದತ್ತಾತ್ರೆಯಬೋಧ ಸ್ವಾಮೀಜಿ ವಹಿಸುವರು, ಜಮಖಂಡಿಯ ಚಿಕ್ಕಮಕ್ಕಳ …
Read More » -
8 ಆಗಷ್ಟ್
ಮಲೇಷಿಯಾದಲ್ಲಿ ಏಷಿಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯಿನಷಿಪ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಡಿರುವ ಕು. ಲಕ್ಷ್ಮೀ ಮಲ್ಲಪ್ಪ ರಡರಟ್ಟಿ ಇತಳಿಗೆ ಸತ್ಕಾರ
ಮೂಡಲಗಿ : ಮಲೇಷಿಯಾದಲ್ಲಿ ಏಷಿಯನ್ ಪ್ಯಾರಾ ಟೇಕ್ವಾಂಡೋ ಚಾಂಪಿಯಿನಷಿಪ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದುಕೊಡಿರುವ ಕು. ಲಕ್ಷ್ಮೀ ಮಲ್ಲಪ್ಪ ರಡರಟ್ಟಿ ಇತಳನ್ನು ಪಟ್ಟಣದ ಕಾಶೀಮಲಿ ಅರ್ಬನ್ ಸೊಸೈಟಿಯಿಂದ ಸತ್ಕರಿಸಿದರು. ಪುರಸಭೆ ಅಧ್ಯಕ್ಷೆ ಖುರ್ಷಾದ ನದಾಫ ಹಾಗೂ ಸೊಸೈಟಿ ಅಧ್ಯಕ್ಷ ಅನ್ವರ ನದಾಫ, ಇಸಾಕ ನದಾಫ. ಎಮ್.ಎ.ನದಾಫ, ಮಲೀಕಜಾನ ನದಾಫ, ಮಹ್ಮದಇರ್ಪಾನ್ ನದಾಫ, ರಾಜೇಂದ್ರ ಸಣ್ಣಕ್ಕಿ, ಮಲ್ಲಪ್ಪ ರಡರಟ್ಟಿ ಮೀರಾಸಾಬ ನದಾಫ ಉಪಸ್ಥಿತರಿದ್ದರು.
Read More » -
8 ಆಗಷ್ಟ್
ಖಂಡ್ರಟ್ಟಿ, ತುಕ್ಕಾನಟ್ಟಿ ಮತ್ತು ಹಳ್ಳೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು 8 ನೇ ವರ್ಗದಿಂದ 9 ನೇ ವರ್ಗದವರೆಗೆ ಪ್ರೌಢಶಾಲೆಗಳನ್ನಾಗಿ ಉನ್ನತೀಕರಣಗೊಳಿಸಿ ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ – ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಖಂಡ್ರಟ್ಟಿ, ತುಕ್ಕಾನಟ್ಟಿ ಮತ್ತು ಹಳ್ಳೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು 8 ನೇ ವರ್ಗದಿಂದ 9 ನೇ ವರ್ಗದವರೆಗೆ ಪ್ರೌಢಶಾಲೆಗಳನ್ನಾಗಿ ಉನ್ನತೀಕರಣಗೊಳಿಸಿ ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ ಎಂದು ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ಈ ಮೂರು ಶಾಲೆಗಳು ಪ್ರೌಢಶಾಲೆಗಳಾಗಿ ಪರಿವರ್ತನೆಗೊಂಡಿವೆ ಎಂದವರು ಹೇಳಿದರು. ಪ್ರಾಥಮಿಕ ಶಾಲೆಗಳಿಂದ ಪ್ರೌಢಶಾಲೆಗಳಾಗಿ ಮೇಲ್ದರ್ಜೆಗೆರಿರುವ ಖಂಡ್ರಟ್ಟಿ, ತುಕ್ಕಾನಟ್ಟಿ, ಹಳ್ಳೂರ ಶಾಲೆಗಳ ಮೂರು ವರ್ಷಗಳ …
Read More » -
7 ಆಗಷ್ಟ್
ವಿವೇಕಾನಂದ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯು ಕಡಿಮೆ ಅವಧಿಯಲ್ಲಿ ರೈತರಿಗೆ ಅನೂಕೂಲಕ್ಕಾಗಿ ಸ್ವಂತ ಕಟ್ಟಡ ಹೊಂದಿ ಪ್ರಗತಿ ಪಥದತ್ತ ಸಾಗಿರುವುದು ಶ್ಲಾಘನಿಯವಾದದ್ದು – ಯುವ ನಾಯಕ ಸರ್ವೋತ್ತಮ ಜಾರಕಿಹೋಳಿ
ಮೂಡಲಗಿ: ವಿವೇಕಾನಂದ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯು ಕಡಿಮೆ ಅವಧಿಯಲ್ಲಿ ರೈತರಿಗೆ ಅನೂಕೂಲಕ್ಕಾಗಿ ಸ್ವಂತ ಕಟ್ಟಡ ಹೊಂದಿ ಪ್ರಗತಿ ಪಥದತ್ತ ಸಾಗಿರುವುದು ಶ್ಲಾಘನಿಯವಾದದ್ದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೋಳಿ ಹೇಳಿದರು. ಅವರು ತಾಲೂಕಿನ ರಾಜಾಪೂರ ಗ್ರಾಮದಲ್ಲಿನ ವಿವೇಕಾನಂದ ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಯ 8ನೇ ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ನೂನತ ಕಟ್ಟಡ ಉದ್ಘಾಟಿಸಿ ಮಾತನಾಡಿ, ಈ ಸಂಸ್ಥೆಯಿಂದ ರೀಯಾಯಿತ್ತಿಯಲ್ಲಿ ಸಿಗುವ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು. …
Read More » -
7 ಆಗಷ್ಟ್
ಬೆಟಗೇರಿಯಲ್ಲಿ 8 ಮತ್ತು 9ರಂದು ಸುಗಮ ಸಂಗೀತ ಕಾರ್ಯಕ್ರಮ
ಬೆಟಗೇರಿ: ಗ್ರಾಮದಲ್ಲಿ ನಡೆಯಲಿರುವ ಸುಗಮ ಸಂಗೀತ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸುತ್ತಿರುವ ಶ್ರೀಗಳು ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯ ಆವರಣದಲ್ಲಿ ಆಗಷ್ಟ 8 ರಂದು ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ ಉದ್ಘಾಟನೆ …
Read More » -
7 ಆಗಷ್ಟ್
ನಿಪ್ಪಾಣಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ
ನಿಪ್ಪಾಣಿ: ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ರಗತಿ ಕಾಣಬೇಕಾದರೆ ಅಣ್ಣಾ ಸಾಹೇಬ ಜೊಲ್ಲೆಯವರಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾದರೆ ಭವಿಷ್ಯದಲ್ಲಿ ಬಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ದೊಡ್ಡದಾಗಿ ಬೆಳೆಯುವದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ನಿಪ್ಪಾಣಿ ತಾಲ್ಲೂಕಿನ ಅಪ್ಪಾಚವಾಡಿ ಹಾಲಸಿದ್ಧನಾಥ ಸಭಾ ಭವನದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣಾ ಪ್ರಚಾರದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಪ್ರಾಥಮಿಕ ಕೃಷಿ …
Read More » -
6 ಆಗಷ್ಟ್
ಬ್ಯಾಂಕಿನ ಅಭಿವೃದ್ಧಿ ಜತೆಗೆ ರೈತರ ಏಳ್ಗೆಯೇ ನಮಗೆ ಮುಖ್ಯ. ಯಾವುದೇ ಸ್ವಾರ್ಥವಿಲ್ಲ- ಶಾಸಕ ಬಾಲಚಂದ್ರ ಜಾರಕಿಹೊಳಿ
ಬೈಲಹೊಂಗಲ್: ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡುವ ಉದ್ದೇಶ ಇದೇಯಾದರೂ ಕೆಲವು ಕಡೆಗಳಲ್ಲಿ ಒಮ್ಮತದ ಆಯ್ಕೆ ಮೂಡುತ್ತಿಲ್ಲ. ಆದರೂ ಅವಿರೋಧ ಆಯ್ಕೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಚಿಕ್ಕ ಬಾಗೇವಾಡಿ ಹತ್ತಿರ ಗತ್ತಿ ಕರೆನಕೊಪ್ಪ ಕ್ರಾಸ್ ನ ಬಿ.ಎಸ್.ಯಡಿಯೂರಪ್ಪ ಕಲ್ಯಾಣ ಮಂಟಪದಲ್ಲಿ ಬುಧವಾರದಂದು ಜರುಗಿದ ಬೈಲಹೊಂಗಲ ಮತ್ತು …
Read More »
IN MUDALGI Latest Kannada News