ಮೂಡಲಗಿ ಪಟ್ಟಣದ ಶ್ರೀ ಸಾಯಿ ಮಂದಿರದಲ್ಲಿ ಮೂಡಲಗಿ ತಾಲೂಕಾ ದಸ್ತಾವೇಜು ಬರಹಗಾರರ ಸಂಘದ ಉಪಾಧ್ಯಕ್ಷ ಎಲ್.ಸಿ.ಗಾಡವಿ ಹಾಗೂ ಆಹಾರ ನಿಗಮದ ರಾಜ್ಯ ಸಲಹಾ ಸಮಿತಿ ನಾಮ ನಿರ್ದೇಶಕ ಬಸವರಾಜ ಗಾಡವಿ ಅವರನ್ನು ಶ್ರೀ ಸಾಯಿ ಸದಸ್ಯರು ಮತ್ತು ಗೆಳೆಯರ ಬಳಗದಿಂದ ಸನ್ಮಾನಿಸಿದರು. ಕೆ.ಬಿ.ನಾವಳ್ಳಿ, ಹನುಮಂತ ಸೊರಗಾವಿ, ಈರಣ್ಣ ಕೊಣ್ಣೂರ, ಶಿವೂ ಗಾಡವಿ, ಸಂತೋಷ ಅಂಗಡಿ, ಬಾಳಯ್ಯಾ ಹಿರೇಮಠ, ಕೆ.ಆರ್.ಕೊತ್ತಲ ಮತ್ತಿತರರು ಇದ್ದರು.
Read More »TimeLine Layout
ಜನವರಿ, 2026
-
31 ಜನವರಿ
ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ
ಮೂಡಲಗಿ: ಸುರಕ್ಷಾ ಪ್ಯಾರಾ ಮೆಡಿಕಲ್ ಇನ್ಸ್ಟಿಟ್ಯೂಟ್, 2006ರಲ್ಲಿ ತಾಲೂಕಿನಲ್ಲೇ ಪ್ರಪ್ರಥಮವಾಗಿ ಪ್ರಾರಂಭವಾದ ಡಿ.ಎಮ್.ಎಲ್.ಟಿ ಕಾಲೇಜು ಎಂಬ ಹೆಗ್ಗಳಿಕೆ ಪಡೆಯುವುದರೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಅನೇಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಮೂಡಲಗಿಯ ಸುರಕ್ಷಾ ಪ್ಯಾರಾ ಮೆಡಿಕಲ್ ಇನ್ಸ್ಟಿಟ್ಯೂಟ್ ಅಧ್ಯಕ್ಷರಾದ ಡಾ.ಎಸ್.ಎಸ್.ಪಾಟೀಲ್ ಹೇಳಿದರು. ಶನಿವಾರದಂದು ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಈಗಾಗಲೇ …
Read More » -
31 ಜನವರಿ
ಫೇ.1 ರಂದು ಮೂಡಲಗಿ ತಾಲೂಕಾ ದ್ವಿ-ಚಕ್ರ ವಾಹನಗಳ ದುರಸ್ತಿಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ
ಮೂಡಲಗಿ: ಪಟ್ಟಣದಲ್ಲಿ ನೂತನವಾಗಿ ಆಸ್ತಿತ್ವಕ್ಕೆ ಬಂದ ಮೂಡಲಗಿ ತಾಲೂಕಾ ದ್ವಿ-ಚಕ್ರ ವಾಹನಗಳ ದುರಸ್ತಿಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನಾ ರವಿವಾರ ಫೇ.1 ರಂದು ಬೆಳಗ್ಗೆ 9 ಗಂಟೆಗೆ ಗುರ್ಲಾಪುರ ರಸ್ತೆಯ ಅತ್ತಾರ ಮಂಗಲ ಕಾರ್ಯಲಯದಲ್ಲಿ ಜರುಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀ ದತ್ತಾತ್ರಯಬೋಧ ಸ್ವಾಮೀಜಿ, ಶ್ರೀ ಶ್ರೀಧರಬೋಧ ಸ್ವಾಮೀಜ ಮತ್ತು ಸಾನಿಧ್ಯವನ್ನು ಶ್ರೀ ಮೌಲಾನಾ ಕೌಸರ ರಜಾ ವಹಿಸುವರು ಶಾಸಕ …
Read More » -
31 ಜನವರಿ
*ಡೊಳ್ಳಿನ ಪದಗಳು ಜಾನಪದ ಸಂಸ್ಕೃತಿಯಲ್ಲಿ ಮೂಲ ಕಲೆ: ಪೂಜ್ಯಶ್ರೀ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಅಭಿಮತ*
ಮೂಡಲಗಿ : ಡೊಳ್ಳಿನ ಪದಗಳು ಮೂಲ ಸಂಸ್ಕೃತಿಯಲ್ಲಿ ಉತ್ತಮ ಕಲೆಯಾಗಿತ್ತು. ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಜಾನಪದ ಸಂಸ್ಕೃತಿ ಅಗತ್ಯ ಎಂದು ಸಿದ್ಧಶ್ರೀ ಸಿದ್ಧಾಶ್ರಮ ಕವಲಗುಡ್ಡ – ಹಣಮಾಪುರ ಮಠದ ಶ್ರೀ ಸಿದ್ಧಿಯೋಗಿ ಅಮರೇಶ್ವರ ಮಹಾರಾಜರು ಹೇಳಿದರು. ಅವರು ಇತಿಚಿಗೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಶ್ರೀ ಇಟ್ಟಪ್ಪ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಶ್ರೀ …
Read More » -
30 ಜನವರಿ
ಸತೀಶ ಶುಗರ್ಸ್ ಕಾರ್ಖಾನೆಯಿಂದ ಪ್ರಗತಿ ರೈತರಿಗೆ ಸತ್ಕಾರ
ಸತೀಶ ಶುಗರ್ಸ್ ಕಾರ್ಖಾನೆಯಿಂದ ಪ್ರಗತಿ ರೈತರಿಗೆ ಸತ್ಕಾರ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ77 ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಗತಿ ಪರ ರೈತಗೆ ಸತ್ಕಾರ ಸಮಾರಂಭ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸತೀಶ ಸಮೂಹ ಸಂಸ್ಥೆಗಳ ಚೇರಮನ್ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ಮಾತನಾಡಿ, ಸ್ವಾತಂತ್ರ್ಯದ ನಂತರ ದೇಶದ ಸುಭದ್ರ ಆಡಳಿತ ಮತ್ತು ಅಭ್ಯುದಯಕ್ಕಾಗಿ ಜಗತ್ತಿನ ಹಲವಾರು ರಾಷ್ಟ್ರಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಡಾ.ಬಿ.ಆರ್.ಅಂಬೇಡ್ಕರರವರ ಅಧ್ಯಕ್ಷತೆಯಲ್ಲಿ …
Read More » -
30 ಜನವರಿ
*ಕವಿ ಮನೆಯೊಳ್ ಕಾವ್ಯಾವಲೋಕನ*
ಮೂಡಲಗಿ: ಚುಟುಕು ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ “ಕವಿ ಮನೆಯೊಳ್ ಕಾವ್ಯಾವಲೋಕನ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಶನಿವಾರ ದಿವಸ ಸಾಯಂಕಾಲ 6 ಗಂಟೆಗೆ ಡಾ. ಮಹದೇವ ಜಿಡ್ಡಿಮನಿ ಇವರ ಸ್ನೇಹ ಸಂಕುಲ ನಿಲಯ ಲಕ್ಷ್ಮಿ ನಗರ ಮೂಡಲಗಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರೇಶ ಲಂಕೆಪ್ಪನವರ ವಹಿಸಿಕೊಳ್ಳಲಿದ್ದಾರೆ. ದುರ್ಗಪ್ಪ ದಾಸನ್ನವರ ಮಿತ್ರ ಸಂಮಿತ ಪುಸ್ತಕದ ಕಾವ್ಯಾವಲೋಕನ ಮಾಡಲಿದ್ದಾರೆ. ಹಾಗೂ ಮಹಾವೀರ ಸಲ್ಲಾಗೋಳ ಕವಿ ಪರಿಚಯವನ್ನು ಮಾಡಲಿದ್ದು ಕವಿಗಳಾದ …
Read More » -
29 ಜನವರಿ
ರಾಜ್ಯದ 31 ಜಿಲ್ಲೆಯ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಸಸ್ತಿ ಪ್ರಧಾನ
ಮೂಡಲಗಿ : ಕರ್ನಾಟಕ ರಾಜ್ಯದ 31 ಜಿಲ್ಲೆಯ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಸಸ್ತಿ ಪ್ರಧಾನ ಕಾರ್ಯಕ್ರಮ ಯುವ ಜನತೆಗೆ ಸ್ಪೂರ್ತಿದಾಯಕವಾಗಿದೆ. ಜಾನಪದ ಸಾಹಿತ್ಯದಲ್ಲಿ ಮನುಷ್ಯನ ಬದುಕಿನ ಪಾಠ ಅಡಗಿದೆ ಎಂದು ಹುಲಜಂತಿ ಪಟ್ಟದ ಪೂಜ್ಯರಾದ ಮಾಳಿಂಗರಾಯ ಮಹಾರಾಜರು ಅಭಿಪ್ರಾಯ ಪಟ್ಟರು. ಅವರು ಇತ್ತೀಚೆಗೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ .ಜಿಲ್ಲಾ ಘಟಕ ಬೆಳಗಾವಿ ಹಾಗೂ ಶ್ರೀ …
Read More » -
28 ಜನವರಿ
‘ಭಾರತ ದೇಶವು ಅನಂತ ಕೋಟಿ ದೇವಸ್ಥಾನಗಳ ನೆಲೆಸಿದ್ದ ಪುಣ್ಯ ಭೂಮಿಯಾಗಿದೆ- ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು
ಮೂಡಲಗಿ: ‘ಭಾರತ ದೇಶವು ಅನಂತ ಕೋಟಿ ದೇವಸ್ಥಾನಗಳು, ಮಠಮಾನ್ಯಗಳು, ಸಾಧು, ಸತ್ಪುರುಷರು ನೆಲೆಸಿದ್ದ ಪುಣ್ಯ ಭೂಮಿಯಾಗಿದೆ’ ಎಂದು ಶ್ರೀಶೈಲ್ ಮಹಾಪೀಠದ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು. ಇಲ್ಲಿಯ ಬಸವ ರಂಗಮಂಟಪದಲ್ಲಿ ಮಂಗಳವಾರ ಜರುಗಿದ ಭದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ಪಲ್ಲಕ್ಕಿ ಆಗಮನ ಹಾಗೂ 32ನೇ ಜಾತ್ರಾ ಮಹೋತ್ಸವದ ಧರ್ಮ ಸಭೆಯ ದಿವ್ಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಭಾರತೀಯರ ದೈವ ಭಕ್ತಿಯೂ ಅನನ್ಯವಾಗಿದೆ. ಧಾರ್ಮಿಕ ಆಚರಣೆಗಳ ಮೂಲಕ ಧರ್ಮವನ್ನು ಉಳಿಸಬೇಕು …
Read More » -
27 ಜನವರಿ
ಹಿರೇಮಠರಿಗೆ ಪಿಎಚ್ಡಿ ಪದವಿ
ಹಿರೇಮಠರಿಗೆ ಪಿಎಚ್ಡಿ ಪದವಿ ಮೂಡಲಗಿ: ಇಲ್ಲಿನ ಶ್ರೀನಿವಾಸ ಸಿಬಿಎಸ್ಸಿ ಶಾಲೆಯ ಹಿಂದಿ ಶಿಕ್ಷಕ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥ ಶಿದ್ರಾಮಯ್ಯ ಹಿರೇಮಠ ಅವರಿಗೆ ಮದ್ರಾಸ್ನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದಿಂದ ಹಿಂದಿ ವಿಷಯದಲ್ಲಿ ಪಿಎಚ್ಡಿ (ಡಾಕ್ಟರೇಟ್) ಪದವಿ ಲಭಿಸಿದೆ. ‘ರಂಗೇಯ ರಾಘವ ಅವರ ಕಾದಂಬರಿಗಳಲ್ಲಿ ನಾರಿ’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು …
Read More » -
27 ಜನವರಿ
ಸರಕಾರಿ ಶಾಲೆಗೆ 51ಸಾವಿರ ಸೌಂಡ ಸಿಸ್ಟಮ್ ಕಾಣಿಕೆ
ಸರಕಾರಿ ಶಾಲೆಗೆ 51ಸಾವಿರ ಸೌಂಡ ಸಿಸ್ಟಮ್ ಕಾಣಿಕೆ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ರೂ.51,000/ ಬೆಲೆಯ ಸೌಂಡ್ ಸಿಸ್ಟಮ್, ಮೈಕ್, ಸೌಂಡ ಬಾಕ್ಸನ್ನು ಗ್ರಾಮದ ಗುತ್ತಿಗೆದಾರ ಮಂಜುನಾಥ ಯಲ್ಲಪ್ಪ ಗಂಗರಡ್ಡಿ ಬಸವರಾಜ ಗಂಗರಡ್ಡಿ ಇವರು ಕಾಣಿಕೆಯಾಗಿ ನೀಡಿದ್ದಾರೆ. ಮುಖ್ಯೋಪಾಧ್ಯಯ ಬಿ.ಬಿ.ತಟ್ಟಿ, ಎಸ್ಡಿಎಮ್ಸಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಶಾಲೆಯ ಶಿಕ್ಷಕರು ಇದ್ದರು.
Read More »
IN MUDALGI Latest Kannada News