ಲಕ್ಷ್ಮೀನಗರದ ಬಿಇಒ ಕಚೇರಿ ಬಳಿಯ ಅಂಗನವಾಡಿ ಕೇಂದ್ರಕ್ಕೆ ನಿಸರ್ಗ ಫೌಂಡೇಶನದಿಂದ ಮಕ್ಕಳ ಆಟಿಕೆ, ಖುರ್ಚಿಗಳನ್ನು ನೀಡಿದರು. ತಹಶೀಲ್ದಾರ ಶಿವಾನಂದ ಬಬಲಿ ಹಾಗೂ ತಾಲ್ಲೂಕು ಆಡಳಿತಾಧಿಕಾರಿಗಳು ಚಿತ್ರದಲ್ಲಿರುವರು. ‘ಮಕ್ಕಳು ದೇಶದ ಭವಿಷ್ಯದ ರೂವಾರಿಗಳು’-ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ ಮೂಡಲಗಿ: ‘ಮಕ್ಕಳ ದೈಹಿಕ, ಮಾನಸಿಕ ಹಾಗೂ ಭಾವನಾತ್ಮ ಬೆಳವಣಿಗೆಯಲ್ಲಿ ಆರು ವರ್ಷಗಳ ಪೂರ್ವದ ಅವಧಿಯು ಮಹತ್ವದಾಗಿದೆ’ ಎಂದು ಮೂಡಲಗಿ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ ಹೇಳಿದರು. ಇಲ್ಲಿಯ ಲಕ್ಷ್ಮೀನಗರದ …
Read More »TimeLine Layout
ಮಾರ್ಚ್, 2025
-
2 ಮಾರ್ಚ್
ಧಾರ್ಮಿಕ, ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ದಾಸೋಹ ಚಕ್ರವರ್ತಿ ಬಂಡಿಗಣಿ ದಾನೇಶ್ವರ ಶ್ರೀಗಳ ಕಾರ್ಯವು ಶ್ಲಾಘನೀಯವಾದುದ್ದು – ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಧಾರ್ಮಿಕ, ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ದಾಸೋಹ ಚಕ್ರವರ್ತಿ ಬಂಡಿಗಣಿ ದಾನೇಶ್ವರ ಶ್ರೀಗಳ ಕಾರ್ಯವು ಶ್ಲಾಘನೀಯವಾದುದ್ದು ಎಂದು ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಇತ್ತಿಚೆಗೆ ತಾಲ್ಲೂಕಿನ ಅರಭಾವಿ ಪಟ್ಟಣ ವ್ಯಾಪ್ತಿಯ ಸತ್ತಿಗೇರಿ ತೋಟದ ಬಸವಗೋಪಾಲ ಶಿಕ್ಷಣ ಸಂಸ್ಥೆಯ ಅಡಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಶಾಲೆಯ ಪ್ರಗತಿ ಕಾರ್ಯಕ್ಕೆ ತಮ್ಮ …
Read More » -
2 ಮಾರ್ಚ್
ನಗುವ ನಕ್ಷತ್ರಗಳು ಚುಟುಕು ಕವನ ಸಂಕಲನ ಲೋಕಾರ್ಪಣೆ
ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ಘಟಕ ಹಾಗೂ ಸಾಗರ ಪ್ರಕಾಶನ ಆಶ್ರಯದಲ್ಲಿ ಸಾಹಿತಿ ವೈ. ಬಿ. ಕಳ್ಳಿಗುದ್ದಿಯವರ *ನಗುವ ನಕ್ಷತ್ರಗಳು* ಚುಟುಕು ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂಡಲಗಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಆರ್. ಪಿ. ಸೋನವಾಲ್ಕರ ರವರು ಸಾಹಿತ್ಯ ಕಾರ್ಯಕ್ರಮಗಳಿಗೆ ತಾವು ಸದಾ ಕಾಲ ರಾಜಾಶ್ರಯ ನೀಡಲು …
Read More » -
1 ಮಾರ್ಚ್
*ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು. ಶನಿವಾರದಂದು ಇಲ್ಲಿಯ ಎನ್ಎಸ್ಎಫ್ …
Read More »
ಫೆಬ್ರವರಿ, 2025
-
28 ಫೆಬ್ರವರಿ
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಮುದಾಯದ ಪಾತ್ರ ಅವಶ್ಯ:ಮನೋಜ ಬಂಡ್ರೊಳಿ
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಮುದಾಯದ ಪಾತ್ರ ಅವಶ್ಯ:ಮನೋಜ ಬಂಡ್ರೊಳಿ ಮೂಡಲಗಿ 28: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಹಾಗೂ ಭೌತಿಕವಾಗಿ ಅಭಿವೃದ್ಧಿ ಆಗಬೇಕಾದರೆ ಸಮುದಾಯದ ಹಾಗೂ ಜನಪ್ರತಿನಿಧಿಗಳ ಪಾತ್ರ ಬಹಳ ಅವಶÀ್ಯ ಎಂದು ಬೆಳಗಾವ ಜಿಲ್ಲಾ ಪಂಚಾಯತ ಸಾಮಾಜಿಕ ಲೆಕ್ಕ ಪರಿಶೋಧನೆಯ ಜಿಲ್ಲಾ ವ್ಯವಸ್ಥಾಪಕ ಮನೋಜ ಬಂಡ್ರೊಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋದನಾ ಕಾರ್ಯಕ್ರಮದ ಕೊನೆಯ …
Read More » -
28 ಫೆಬ್ರವರಿ
ಎಮ್.ಎಸ್,ಸ್ಸಿ ನರ್ಸಿಂಗ್ದಲ್ಲಿ ಅಶ್ವಿನಿಗೆ ಚಿನ್ನದ ಪದಕ
ಎಮ್.ಎಸ್,ಸ್ಸಿ ನರ್ಸಿಂಗ್ದಲ್ಲಿ ಅಶ್ವಿನಿಗೆ ಚಿನ್ನದ ಪದಕ ಮೂಡಲಗಿ: ಪಟ್ಟಣದ ಅಶ್ವಿನಿ ಮಾರುತಿ ಬಿರಡಿ ಇತಳು ರಾಜೀವಗಾಂಧಿ ವಿಶ್ವವಿದ್ಯಾಲಯದ ಬಾಗಲಕೋಟೆಯ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಎಮ್.ಎಸ್,ಸ್ಸಿ ನರ್ಸಿಂಗ್ ಓಬಿಜಿ ವಿಭಾಗದ ಪರೀಕ್ಷೆಯಲ್ಲಿ 83.74% ರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾಳೆ ಎಂದು ಪ್ರಾಚಾರ್ಯ ಡಾ. ದೀಲಿಪ ಎಸ್.ನಾಟೇಕರ ತಿಳಿಸಿದ್ದಾರೆ.
Read More » -
28 ಫೆಬ್ರವರಿ
ರಾಜ್ಯಸಭಾ ಸಂಸದರ ಅನುದಾನದಲ್ಲಿ ಬಸ್ ತಂಗುದಾನ,ಬಯಲು ರಂಗ ಮಂದಿರ ಉದ್ಘಾಟನೆ
ರಾಜ್ಯಸಭಾ ಸಂಸದರ ಅನುದಾನದಲ್ಲಿ ಬಸ್ ತಂಗುದಾನ,ಬಯಲು ರಂಗ ಮಂದಿರ ಉದ್ಘಾಟನೆ ಕೌಜಲಗಿ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ನಾಳೆ ಶನಿವಾರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದಲ್ಲಿ ಗೋಕಾಕ ತಾಲೂಕಿನ ಕೌಜಲಗಿ, ರಡೇರಟ್ಟಿ, ಮನ್ನಿಕೇರಿ, ಮೆಳವಂಕಿ ಗ್ರಾಮಗಳಲ್ಲಿ ನಿರ್ಮಾಣವಾದ ಬಸ್ ತಂಗುದಾನ ಮತ್ತು ಬಯಲು ರಂಗ ಮಂದಿರದ ಕಟ್ಟಡ ಉದ್ಘಾಟನೆ ನೇರವೇರಿಸಲಿದ್ದಾರೆ. ಮೆಳವಂಕಿ-ಬೆಳಿಗ್ಗೆ 11-00, ಕೌಜಲಗಿ-ಮಧ್ಯಾಹ್ನ 3-00,ರಡ್ಡೇರಟ್ಡಿ-ಸಂಜೆ 4-00,ಮನ್ನಿಕೇರಿ- 5-00 ಗಂಟೆಗೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ …
Read More » -
28 ಫೆಬ್ರವರಿ
ಗೋಕಾಕ್- ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗೀನಿಂದಲೇ ಅಗತ್ಯ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಶುಕ್ರವಾರದಂದು ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಳೆಯ ಮಾರ್ಚ ತಿಂಗಳಿನಿ೦ದ ಬೇಸಿಗೆಯು ಆರಂಭವಾಗಲಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ …
Read More » -
28 ಫೆಬ್ರವರಿ
‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು’- ಸಾಹಿತಿ ಬಾಲಶೇಖರ ಬಂದಿ.
ಮೂಡಲಗಿ ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 33ನೇ ವಾರ್ಷಿಕೋತ್ಸವ ಹಾಗೂ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಶಿವಯ್ಯ ಸ್ವಾಮೀಜಿ ಉದ್ಘಾಟಿಸಿದರು. ‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು’ ಮೂಡಲಗಿ: ‘ಶಾಲಾ ಮಕ್ಕಳಿಗೆ ಕೇವಲ ಅಕ್ಷರ ಕಲಿಸಿದರೆ ಸಾಲದು ಅದರೊಂದಿಗೆ ಸಂಸ್ಕಾರವು ಅವಶ್ಯವಿದೆ’ ಎಂದು ಸಾಹಿತಿ ಹಾಗೂ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಅರಭಾವಿಯ ಆಂಜನೇಯ …
Read More » -
27 ಫೆಬ್ರವರಿ
ಶಿವನಾಮಸ್ಮರಣೆಯಿಂದ ಮನುಷ್ಯನ ಬದುಕಿಗೆ ನೆಮ್ಮದಿ: ಬಸವರಾಜ ಪಣದಿ
ಶಿವನಾಮಸ್ಮರಣೆಯಿಂದ ಮನುಷ್ಯನ ಬದುಕಿಗೆ ನೆಮ್ಮದಿ: ಬಸವರಾಜ ಪಣದಿ ಬೆಟಗೇರಿ:ಮಹಾಶಿವರಾತ್ರಿ ದಿನದಂದು ಪ್ರತಿಯೊಬ್ಬರೂ ಶಿವನ ಧ್ಯಾನ ಮಾಡಿ, ಶಿವನ ಚೈತನ್ಯ ಶಕ್ತಿಯಿಂದ ವಿಶ್ವ ಸಮೃದ್ಧವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಿವಶರಣ, ಆಧ್ಯಾತ್ಮ ಕಾರ್ಯಕ್ರಮಗಳ ಆಯೋಜಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಬುಧವಾರದಂದು ಹಮ್ಮಿಕೊಂಡಿದ್ದ ಶಿವ ಜಾಗರಣೆ ಮತ್ತು ಮಹಾಪೂಜಾ ಕಾರ್ಯಕ್ರಕ್ಕೆ ಚಾಲನೆ ನೀಡಿ ಮಾತನಾಡಿ, ಶಿವನಾಮಸ್ಮರಣೆ ಮಾಡುವ ಮನುಷ್ಯನ …
Read More »
IN MUDALGI Latest Kannada News