ಮೂಡಲಗಿ: ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶ್ರೀನಿವಾಸ ರಾಮಾನುಜನ ಗಣಿತ ಪ್ರಯೋಗಾಲಯದ ಕುರಿತು ಮೆಚ್ಚುಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಸರ್ಕಾರಿ ಶಾಲೆಯ ಶಿಕ್ಷಕರು …
Read More »TimeLine Layout
ಜನವರಿ, 2025
-
20 ಜನವರಿ
*ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ*
*ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ* ಮೂಡಲಗಿ: ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ 13 ಜನ ನಿರ್ದೇಶಕರ ಆಯ್ಕೆಗೆ ಜ.25 ರಂದು ನಡೆಯಬೇಕಿದ್ದ ಚುನಾವಣೆಯಲ್ಲಿ ಜ.19 ರಂದು ಅಭ್ಯರ್ಥಿಗಳ ನಾಮ ಪತ್ರ ವಾಪಸ ಪಡೆಯುವ ಕಡೆಯ ದಿನದಂದು 30 ಅಭ್ಯರ್ಥಿಗಳಲ್ಲಿ 17 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ ಪಡೆದಿದರಿಂದ 13 ನಿರ್ದೇಶಕರು …
Read More » -
19 ಜನವರಿ
ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ 4 ಗುಂಟೆ ನಿವೇಶನ ಮಂಜೂರು – ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಂಬಿಗರ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಗೋಕಾಕ ನಗರದಲ್ಲಿ 4 ಗುಂಟೆ ನಿವೇಶನವನ್ನು ನಗರಸಭೆಯಿಂದ ಮಂಜೂರು ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ರವಿವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದ ಅವರು, ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ ಕಲ್ಯಾಣ ಮಂಟಪ ಅಥವಾ ಸಮುದಾಯ ಭವನವನ್ನು ನಿರ್ಮಿಸಿಕೊಡುವುದಾಗಿ …
Read More » -
17 ಜನವರಿ
ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ
ಬೆಳಗಾವಿ: ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ ಸೇರಿದಂತೆ ಎಲ್ಲ ಸಹಕಾರಿ ರಂಗದ ಅಧಿಕಾರ ಚುಕ್ಕಾಣಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈಗ ಮತ್ತೊಂದು ಕೃಷಿಕ ಸಮಾಜದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಅಯ್ಕೆ ಮಾಡುವ ಮೂಲಕ ಜಿಲ್ಲಾ ಸಹಕಾರ ವಲಯಕ್ಕೆ ಸಾರಥಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಕೈ ಹಾಕಿರುವ ಎಲ್ಲ …
Read More » -
16 ಜನವರಿ
ನಾಡಿನ ಹಬ್ಬಗಳು ಸಂಸ್ಕøತಿಯ ಪ್ರತೀಕವಾಗಿವೆ
ಮೂಡಲಗಿ: ನಾಡಿನ ಹಬ್ಬಗಳು ಸಂಸ್ಕøತಿಯ ಪ್ರತೀಕವಾಗಿವೆ, ನಾಡಿನ ಪ್ರತಿಯೊಂದು ಹಬ್ಬ ಹರಿದಿನಗಳಲ್ಲಿ ಆಚಾರ ವಿಚಾರಗಳು ಆಹಾರ ವಿಹಾರಗಳು ಸಂಸ್ಕಾರ, ಸಂಸ್ಕøತಿ ಮತ್ತು ಆರೋಗ್ಯದ ಬಗ್ಗೆ ಕಾಳಜಿ ಮತ್ತು ಮನುಷ್ಯನ ನಡೆ ನುಡಿಯ ಬಗ್ಗೆ ಒಳ್ಳೆಯ ವಿಚಾರಗಳನ್ನು ಪ್ರತಿಬಿಂಬಿಸುತ್ತವೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಮಕರ ಸಂಕ್ರಾಂತಿ ನಿಮಿತ್ಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ …
Read More » -
16 ಜನವರಿ
ಕೂಸಿನ ಮನೆ ಆರೈಕೆದಾರರು ತರಬೇತಿ
ಮೂಡಲಗಿ: ಕೂಸಿನ ಮನೆ ಆರೈಕೆದಾರರು ತರಬೇತಿ ಪಡೆದುಕೊಂಡು ಕೂಸಿನ ಮನೆಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳ ತಿಳಿಸಿದ ವಿಷಯಗಳನ್ನು ಸರಿ ಅರ್ಥಸಿಕೊಂಡು ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಹೊಗಲು ಇಂತಹ ತರಬೇತಿಗಳು ಕೂಸಿನ ಮನೆಗಳ ನಿರ್ವಹಣೆಗೆ ಅವಶ್ಯಕವಾಗಿವೆ ಎಂದು ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನವರ ಹೇಳಿದರು. ಅವರು ಪಟ್ಟದ ಕೃಷ್ಣಪ್ಪ ಎಚ್.ಸೋವಾಲಕರ ಸರಕಾರಿ ಪ್ರೌಢ ಶಾಲೆಯ ಸಭಾ ಭವನದಲ್ಲಿ ಜರುಗಿದ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ …
Read More » -
16 ಜನವರಿ
ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕ ಬಸವರಾಜ ಭೂತಾಳಿ ಅವರಿಗೆ ಸತ್ಕಾರ
ಮೂಡಲಗಿ: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಅವರನ್ನು ಪಾವಗಡದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.
Read More » -
16 ಜನವರಿ
ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ
ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ ಮೂಡಲಗಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಘಟಪ್ರಭಾ ರೈಲ್ವೆ ಸ್ಟೇಶನ್ದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಐವರನ್ನು ಬೆಳಗಾವಿಯ ಸಂಸದಜಗದೀಶ ಶೆಟ್ಟರ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾಸ್ಸು ಮೇರಿಗೆ ಸದಸ್ಯರನ್ನಾಗಿ ನೇಮಕ ಮಾಡಿದ ಬಗ್ಗೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಿ. ಪರಂದಮಾನಆದೇಶ ಹೊರಡಿಸಿದ್ದಾರೆ. ಅರಭಾವಿ ಬೆಜೆಪಿ ಮಂಡಲದ ಕಾರ್ಯಕರ್ತರಾದ ಕೇದಾರಿ ಭಸ್ಮೆ(ಮೂಡಲಗಿ), ಮುತ್ತೆಪ್ಪ …
Read More » -
15 ಜನವರಿ
ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರು ಆಯ್ಕೆ
ಮೂಡಲಗಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರು ಆಯ್ಕೆಯಾಗಿದ್ದಾರೆ. ಅವರು ಕಳೆದ 12 ವರ್ಷಗಳಿಂದ ಕ್ರೀಡೆ, ಕಲೆ, ಸಾಹಿತ್ಯ, ಪರಿಸರ ಸಂರಕ್ಷಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಿರಂತರ ಯುವ ಸಂಘಟನೆ, ಜನ ಜಾಗೃತಿಯಂತಹ ಸಮಾಜ ಸೇವಾ ಕಾರ್ಯವನ್ನು ಪರಿಗಣಿಸಿ 2024 – 25ನೇ …
Read More » -
15 ಜನವರಿ
ಸುಣಧೋಳಿ ಕಾಲೇಜುದಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡಲಗಿ ತಾಲ್ಲೂಕಿನ ಸುಣಧೋಳಿಯ ಜಡಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಸಂಕ್ರಮಣದ ಸುಗ್ಗಿ ಹಬ್ಬವನ್ನು ಶಿವಾನಂದ ಸ್ವಾಮಿಗಳು ಉದ್ಘಾಟಿಸಿದರು. ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಮತ್ತು ಸಿಬ್ಬಂದಿಯವರು ಚಿತ್ರದಲ್ಲಿರುವರು. ಮೂಡಲಗಿ: ‘ಹಳ್ಳಿಯ ಬದುಕಿನಲ್ಲಿ ವೈಶಿಷ್ಟ್ಯವಾಗಿರುವ ಬುತ್ತಿ ಊಟದಂತೆ ವಿದ್ಯಾರ್ಥಿಗಳು ಕಲಿಕಾ ಅವಧಿಯಲ್ಲಿ ಜ್ಞಾನದ ಬುತ್ತಿ ಕಟ್ಟಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಸುಣಧೋಳಿಯ ಜಡಿಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲಿ ಏರ್ಪಡಿಸಿದ್ದ ಸಂಕ್ರಮಣದ …
Read More »
IN MUDALGI Latest Kannada News