Breaking News
Home / Recent Posts / ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

Spread the love

 

ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ ಅನುಕೂಲವಾಗಲಿದೆ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಗೃಹ, ಜಲಸಂಪನ್ಮೂಲ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಗಳ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಉತ್ತಮ ಸಂಸದೀಯ ಪಟು ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.


Spread the love

About inmudalgi

Check Also

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ