Breaking News
Home / Recent Posts / ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

Spread the love

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವ್ಹೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ ತಾಲೂಕಿಗೆ ಉಪ ನೋಂದಣಿ ಕಛೇರಿ ಮಂಜೂರು ಮಾಡುವ ಸ್ಪಷ್ಟ ಭರವಸೆ ನೀಡಿದ್ದಾರೆಂದು ಹೇಳಿದರು.
ಸಾರ್ವಜನಿಕರ ಬೇಡಿಕೆಯನುಸಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮೂಡಲಗಿಗೆ ಅಗತ್ಯವಿರುವ ಉಪ ನೋಂದಣಿ ಕಛೇರಿ ಮಂಜೂರಾತಿಗೆ ಮನವಿ ಮಾಡಿಕೊಳ್ಳಲಾಗಿದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಬೊಮ್ಮಾಯಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಡತ ಮಂಡಿಸಲು ಸೂಚಿಸಿದ್ದು, ಬರುವ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.


Spread the love

About inmudalgi

Check Also

19ನೇ ಶಿವಾನುಭವ ಗೋಷ್ಠಿ, ‘ಶುದ್ಧ ಕಾಯಕದಿಂದ ಜೀವನದಲ್ಲಿ ಸಂತೃಪ್ತಿ’

Spread the loveಮೂಡಲಗಿ: ‘ಪ್ರಾಮಾಣಿಕತೆ ಮತ್ತು ಶುದ್ಧ ಕಾಯಕದಿಂದ ಜೀವನದಲ್ಲಿ ಆನಂದ ಮತ್ತು ಸಂತೃಪ್ತಿ ದೊರೆಯುತ್ತದೆ” ಎಂದು ಅರಭಾವಿ ಮಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ