Breaking News
Home / ತಾಲ್ಲೂಕು / ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ

ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ

Spread the love

ಮೂಡಲಗಿ: ‘ಜಾಗತಿಕ ಪಿಡುಗು ಆಗಿರುವ ಭಯೋತ್ಪಾದನೆಯ ನಿರ್ಮೂಲನೆಗೆ ಒಗ್ಗಟ್ಟು ಮತ್ತು ದೇಶಾಭಿಮಾನದ ಬದ್ಧತೆ ಬೇಕು’ ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಶಿವಕುಮಾರ ಶಾಸ್ತ್ರೀಮಠ ಹೇಳಿದರು.
ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಭಯೋತ್ಪಾದನೆಯಿಂದ ದೇಶದ ಪ್ರಗತಿಗೆ ಮಾರಕವಾಗುತ್ತದೆ ಎಂದರು.
ಅತಿಥಿಯಾಗಿದ್ದ ವಿಜಯಪುರದ ಮಲ್ಲಿಕಾರ್ಜುನ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ ಮುಳವಾಡ ಮಾತನಾಡಿ ದೇಶದಲ್ಲಿ ಶಾಂತಿ, ನೆಮ್ಮದಿ ಇರಬೇಕಾದರೆ ಭಯೋತ್ಪಾದನೆ ಇರಬಾರದು ಎಂದರು.
ಅಧ್ಯಕ್ಷತೆವಹಿಸಿದ್ದ ಪ್ರಾಚಾರ್ಯ ಡಾ.ಆರ್.ಎ. ಶಾಸ್ತ್ರೀಮಠ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ವೇದಿಕೆಯಲ್ಲಿ ನ್ಯಾಕ್ ಸಂಯೋಜಕ ಡಾ.ವಿ.ಆರ್. ದೇವರಡ್ಡಿ ಇದ್ದರು.
ಪ್ರೊ. ಎ.ಪಿ. ರಡ್ಡಿ ನಿರೂಪಿಸಿ, ವಂದಿಸಿದರು.


Spread the love

About inmudalgi

Check Also

 ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ

Spread the love ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ