Breaking News
Home / Recent Posts / ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ

ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ

Spread the love

ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ

ಮೂಡಲಗಿ: ಜೂ.27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾದ ಹಾವೇರಿ ಜಿಲ್ಲೆಯ ಸಿಗ್ಗಾವಿ ಪಟ್ಟಣದಲ್ಲಿರುವ ಅವರ ನಿವಾಸದ ಮುಂದೆ ಲಿಂಗಾಯತ ಪಂಚಮಸಾಲಿ 2A ಮೀಸಲಾತಿ ಗೋಸ್ಕರ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾದ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಬೆಳಗಾವಿ ನಗರದ ಸಂಕಮ ಹೋಟೆಲ್ ಸಭಾಂಗಣದಲ್ಲಿ ಜೂ.10 ಬೆಳಗ್ಗೆ 11ಗಂಟೆಗೆ ಸಭೆಯನ್ನು ಕರೆಯಲಾಗಿದೆ ಎಂದು ಪಂಚಮಸಾಲಿ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಮೂಡಲಗಿಯ ನಿಂಗಪ್ಪ ಪಿರೋಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪ್ರಥಮ ಜಗದ್ಗುರುಗಳಾದ *ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಮಾಜಿ ಸಚಿವ ಹಾಗೂ ಸಮಾಜದ ಹಿರಿಯರಾದ
ಎ. ಬಿ.ಪಾಟೀಲ, ಹೋರಾಟ ಸಮಿತಿಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ, ಶಾಸಕರಾದ ಅರವಿಂದ ಬೆಲ್ಲದ,ಮಾಜಿ ಸಚಿವ ವಿನಯ್ ಕುಲಕರ್ಣಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ದಾಸೋಹ ರತ್ನ ಮಾಜಿ ಶಾಸಕರ ಎಚ್. ಎಸ್ ಶಿವಶಂಕರ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ,ಜಿಲ್ಲಾ ಗೌರವಾಧ್ಯಕ್ಷ ರಾಜಶೇಖರ ಪಾಟೀಲ, ಜಿಲ್ಲಾ ಅಧ್ಯಕ್ಷ ಪಂಚನಾಗೌಡ ದ್ಯಾಮನಗೌಡ್ರು ಜಿಲ್ಲಾ ಸೇರಿದಂತೆ ಅನೇಕ ಮುಖಂಡರು ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಿನ ಅಧ್ಯಕ್ಷರು ಹಾಗೂ ವಿವಿಧ ಘಟಕದ ಪದಾಧಿಕಾರಿಗಳು ಭಾಗವಹಿಸುವರು ಕಾರಣ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಾಗೂ ಅಧಿಕ ಮಾಹಿತಿಗಾಗಿ
ಮೊ-ಪಾಟೀಲ -9845409530, ಪಂಚನಗೌಡ ದ್ಯಾಮನಗೌಡ್ -9902469204,ನಿಂಗಪ್ಪ ಪೀರೋಜಿ -9620130959, ದರೆಪ್ಪ ತಕ್ಕಣ್ಣವರ -9902579939 ಅವರನ್ನು ಸಂಪರ್ಕಿಸಲು ನಿಂಗಪ್ಪ ಪಿರೋಜಿ ಕೋರಿದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ