Breaking News
Home / Recent Posts / ಚೈತನ್ಯ. ಶಾಲೆಯಲ್ಲಿ “ಅಟಲ್ ಟಿಂಕರಿಂಗ್ ಪ್ರಯೋಗಾಲಯದ ಉದ್ಘಾಟನೆ

ಚೈತನ್ಯ. ಶಾಲೆಯಲ್ಲಿ “ಅಟಲ್ ಟಿಂಕರಿಂಗ್ ಪ್ರಯೋಗಾಲಯದ ಉದ್ಘಾಟನೆ

Spread the love

“ಅಟಲ್ ಟಿಂಕರಿಂಗ್ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮ ಶನಿವಾರ ರಂದು ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಬೆಟಗೇರಿಯ ಪ್ರೌಢಶಾಲೆಯ ರಮೇಶ ಅಳಗುಂಡಿ ಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ
ಆಧುನಿಕ ಕೃಷಿ ಪದ್ದತಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನ ಬಳಸಿ ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯುವ ಕುರಿತು ಸಲಹೆ ನೀಡಿದರು.

ಗುರ್ಲಾಪೂರ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ರಾದ ಶಿವಲಿಂಗ  ಅರಗಿ  ಯವರು ಮಾತನಾಡುತ್ತಾ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿರುವ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಆ ಸಮಸ್ಯೆಗೆ ವೈಜ್ಞಾನಿಕ ಸಂಶೋದನೆಯ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತು ಮಕ್ಕಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಆಡಳಿತಾಧಿಕಾರಿಗಳಾದ ಎಸ್.ಎಮ್.ಕಮದಾಳ. ವಹಿಸಿದ್ದರು. ಕಾರ್ಯಕ್ರಮದಲ್ಲಿ  ಎ.ಎಲ್ ಶಿಂಧಿಹಟ್ಟಿ, ಚೈತನ್ಯ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀಮತಿ ಎಸ್.ಎ.ಪಾಟೀಲ ಮತ್ತು ಕುಮಾರ ಹುಬ್ಬಳ್ಳಿ ಉಪಸ್ಥಿತರಿದ್ದರು.


Spread the love

About inmudalgi

Check Also

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ  ರಾಜಸಭಾ ಸದಸ್ಯ ಕಡಾಡಿಗೆ ಕರವೇ ಮನವಿ 

Spread the love ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ  ರಾಜಸಭಾ ಸದಸ್ಯ ಕಡಾಡಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ