Breaking News
Home / Recent Posts / ಡಾ. ಪ್ರಭಾಕರ ಕೋರೆ ಅವರ 75ನೇ ಅಮೃತ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಬೇಕು- ಕಾಂಗ್ರೇಸ್ ಮುಖಂಡ ಲಕ್ಕಣ್ಣ ಸವಸುದ್ದಿ

ಡಾ. ಪ್ರಭಾಕರ ಕೋರೆ ಅವರ 75ನೇ ಅಮೃತ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಬೇಕು- ಕಾಂಗ್ರೇಸ್ ಮುಖಂಡ ಲಕ್ಕಣ್ಣ ಸವಸುದ್ದಿ

Spread the love

ಮೂಡಲಗಿ: ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಹರಿಕಾರಿ ಡಾ. ಪ್ರಭಾಕರ ಕೋರೆ ಅವರ 75ನೇ ಅಮೃತ ಮಹೋತ್ಸವ ಸಮಾರಂಭದದಲ್ಲಿ ಅರಭಾವಿ ಮತ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಬೇಕೆಂದು ಕಾಂಗ್ರೇಸ್ ಮುಖಂಡ ಕಲ್ಲೋಳಿಯ ಲಕ್ಕಣ್ಣ ಸವಸುದ್ದಿ ಹೇಳಿದರು.
ಬುಧವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ನೆಹರು ನಗರದ ಜಿಲ್ಲಾ ಕ್ರೀಡಾಂಗಣ, ಜೆಎಮ್‍ಸಿ ಆವರಣದಲ್ಲಿ ಅ.15ರಂದು ಮಧ್ಯಾಹ್ನ   ಡಾ. ಪ್ರಭಾಕರ ಕೋರೆ ಅವರು ಅಮೃತ ಮಹೋತ್ಸವ ಸಮಾರಂಭ ಪಕ್ಷಾತಿತವಾಗಿ ಜರುಗಲಿದೆ. ಕೇಂದ್ರ ಸರ್ಕಾರದ ಶಿಕ್ಷಣ,ಕೌಶಲ್ಯ ಅಭಿವೃದ್ದಿ ಹಾಗೂ ಉದ್ಯಮಶೀಲತೆ ಸಚಿವರಾದ ಧರ್ಮೆಂದ್ರ ಪ್ರಧಾನಜಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಸಚಿವರು, ಶಾಸಕರು ಆಗಮಿಸಲಿದ್ದು, ನಾವೂ ಕೂಡ ಡಾ. ಪ್ರಭಾಕರ ಕೋರೆ ಬೆಂಬಲಿಸಿ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಈಗಾಗಲೆ ಕ್ಷೇತ್ರದಲ್ಲಿ ಅಮೃತ ಮಹೋತ್ಸವ ಭಾಗವಹಿಸುವಂತೆ ಮನವಿ ಮಾಡಿಕೊಳ್ಳುತ್ತಿದೆವೆ ಎಂದರು.
ಬೆಳಗಾವಿ ಜಿಲ್ಲೆಗೆ ಡಾ.ಪ್ರಭಾಕರ ಕೋರೆ ಅವರ ಕೊಡುಗೆ ಅಪಾರವಾಗಿದ್ದು ಪಕ್ಷಾತೀತವಾಗಿ ನಡೆಯುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಯುವ ಮುಖಂಡ ಗುರು ಗಂಗನ್ನವರ ಮತ್ತಿತರು ಇದ್ದರು.


Spread the love

About inmudalgi

Check Also

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.9ರಂದು ವಿಜೃಂಭನೆಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ