Breaking News
Home / Recent Posts / ನಾಳೆ ಸಂಪಿಗೆ ಕವನ ಸಂಕಲನ ಬಿಡುಗಡೆ

ನಾಳೆ ಸಂಪಿಗೆ ಕವನ ಸಂಕಲನ ಬಿಡುಗಡೆ

Spread the love

ನಾಳೆ ಸಂಪಿಗೆ ಕವನ ಸಂಕಲನ ಬಿಡುಗಡೆ

ಮುಡಲಗಿ: ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚೈತನ್ಯ ಆಶ್ರಮ ವಸತಿ ಶಾಲೆ ಆಶ್ರಯದಲ್ಲಿ ನ.6 ರಂದು ಮುಂಜಾನೆ 10ಗಂಟೆಗೆ ಕವಿಗೋಷ್ಠಿ ಹಾಗೂ ಅಪ್ಪಣ್ಣ ಮೂಗಳಖೋಡ ಅವರು ರಚಿಸಿದ ಸಂಪಿಗೆ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಸಾಪ ತಾಲೂಕಾ ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ವಹಿಸುವರು. ಬೆಟಗೇರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಆರ್.ಎಸ್.ಅಳಗುಂಡಿ ಕಾರ್ಯಕ್ರಮ ಉದ್ಘಾಟಿಸುವರು. ಕಸಾಪ ಅಧ್ಯಕ್ಷ ಡಾ.ಸಂಜಯ ಶಿಂಧಿಹಟ್ಟಿ ಆಶಯ ನುಡಿ ಪ್ರಸ್ತುತ ಪಡಿಸುವರು. ಕವನ ಸಂಕಲನ ಬಿಡುಗಡೆ ಹಾಗೂ ಪರಿಚಯವನ್ನು ಬಿ.ಪಿ.ಬಂದಿ ನಡೆಸಿಕೊಡುವರು.
ಕಸಾಪ ನಿಕಟಪೂರ್ವ ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ, ಬಿಆರ್‍ಸಿ ವೈ.ಬಿ.ಪಾಟೀಲ, ಟಿ.ಬಿ.ಕೆಂಚರಡ್ಡಿ, ಎಸ್.ಎಮ್.ಕಮದಾಳ, ಡಿ.ಎಸ್.ಗೋಡಿಗೌಡರ, ಎಸ್.ಆರ್.ಬೆಳವಿ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಕಾರ್ಯದರ್ಶಿ ಅಣ್ಣಪ್ಪ ಒಂಟಗೋಡಿ ತಿಳಿಸಿದ್ದಾರೆ.

 


Spread the love

About inmudalgi

Check Also

ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಅದರ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ

Spread the love ಗೋಕಾಕ- ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ