Breaking News
Home / Recent Posts / ನರೇಂದ್ರ ಮೋದಿ ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ನರೇಂದ್ರ ಮೋದಿ ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

Spread the love

ಮೂಡಲಗಿ: ಕರೋನಾ ಕಾಲದಲ್ಲಿ ಬಡಜನತೆ ಆಹಾರದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಆರಂಭಿಸಿ 3 ವರ್ಷಗಳಾಗಿದ್ದು ಈ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಿ ಅವರ ಕ್ರಮವನ್ನು ಸ್ವಾಗತಿಸಿದ್ದಾರೆ.
ರವಿವಾರ ನ-05 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕೋವಿಡ್ ಸಂದರ್ಭದಲ್ಲಿ ಬಡವರಿಗೆ ಉಚಿತ ಪಡಿತರ ನೀಡಲು ಪ್ರಾರಂಭಿಸಲಾದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯು ಮುಂದಿನ 5 ವರ್ಷಗಳವೆರೆಗೆ ದೇಶದ 80 ಕೋಟಿ ಬಡ ಜನತೆಗೆ ಅನುಕೂಲವಾಗಲಿದೆ. ಈ ಯೋಜನೆಯನ್ನು ಮುಂದುವರೆಸುವುದರಿಂದ ಸುಮಾರು 2 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಇದು ಬಡವರಿಗೆ ಆಹಾರ ಭದ್ರತೆ ಒದಗಿಸುತ್ತದೆ ಎಂದರಲ್ಲದೇ ಈ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ