Breaking News
Home / ಬೆಳಗಾವಿ / ದೆಹಲಿಯಲ್ಲಿ ಆಡಳಿತ ನಡೆಸಲು ಅಲ್ಲಿನ ಮತದಾರರು ಆಶೀರ್ವಾದ ಮಾಡಿದ್ದಾರೆ.

ದೆಹಲಿಯಲ್ಲಿ ಆಡಳಿತ ನಡೆಸಲು ಅಲ್ಲಿನ ಮತದಾರರು ಆಶೀರ್ವಾದ ಮಾಡಿದ್ದಾರೆ.

Spread the love

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಹೆಣೆದ ತಂತ್ರಗಾರಿಕೆಗಳೇ ದೆಹಲಿಯಲ್ಲಿ ನಮ್ಮ ಪಕ್ಷಕ್ಕೆ ಅಧಿಕಾರ ಸಿಕ್ಕಿದೆ. ಜೊತೆಗೆ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳು ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ. ಕಳೆದ ಎರಡು ಅವಧಿಯಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಾರ್ಟಿಯ ದುರಾಡಳಿತಕ್ಕೆ ಬೇಸತ್ತು ಅಲ್ಲಿನ ಮತದಾರರು ಆಡಳಿತಾರೂಢ ಪಕ್ಷಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ೨೫ ವರ್ಷ ಬಳಿಕ ನಮ್ಮ ಪಕ್ಷವು ದೆಹಲಿಯಲ್ಲಿ ಆಡಳಿತ ನಡೆಸಲು ಅಲ್ಲಿನ ಮತದಾರರು ಆಶೀರ್ವಾದ ಮಾಡಿದ್ದಾರೆ. ಅದಕ್ಕಾಗಿ ಸಮಸ್ತ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುವೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ತರಲು ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಾಗೂ ದೆಹಲಿ ಮಟ್ಟದ ಎಲ್ಲ ನಾಯಕರುಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

-ಬಾಲಚಂದ್ರ ಜಾರಕಿಹೊಳಿ
ಶಾಸಕರು ಮತ್ತು ಅಧ್ಯಕ್ಷರು, ಬೇಮ್ಯುಲ್


Spread the love

About inmudalgi

Check Also

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

Spread the loveಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ