Breaking News
Home / ಬೆಳಗಾವಿ / *ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ*

*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ*

Spread the love

*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ*

ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು. ಯಲ್ಲಾಲಿಂಗ ವಾಳದ ಅವರು ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಾಜ ಸೇವಾ ಸಂಘವನ್ನು ಹುಟ್ಟು ಹಾಕಿ ಅದರ ಮುಕಾಂತರ ಮಾಡಿದ ಹಲವಾರು ಸಮಾಜ ಮುಖಿ ಕಾರ್ಯ ಚಟುವಟಿಕೆ ಹಾಗೂ ಸಮಾಜ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿ ಲಭಿಸಿದ ಪ್ರಯುಕ್ತ ಹಳ್ಳೂರ ರಾಜ್ಯ ಮಟ್ಟದ ಜಾನಪದ ಕಲಾ ಮೇಳದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಮುಮ್ಮೆಟ ಗುಡ್ಡದ ಅವಧುತಸಿದ್ದ ಮಹಾರಾಜರು, ಮಾಜಿ ಸೈನಿಕ ಹಾಗೂ ಸಮಾಜ ಸೇವಕರು ಶ್ರೀಶೈಲ ಭಜಂತ್ರಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ, ಕಾವ್ಯಶ್ರೀ ಅಮ್ಮನವರು, ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ವಾಸಂತಿ ತೇರದಾಳ, ಸವಿತಾ ಡಬ್ಬಣ್ಣವರ, ಮಾರುತಿ ಪ್ಯಾಟಿ, ಬಸವರಾಜ ಕೌಜಲಗಿ, ಶಿಕ್ಷಕ ಪ್ರಕಾಶ ಮೊರೆ ಹಾಗೂ ಸಂಘಟಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ನೀರನ್ನು ಹರಿಸಿದ್ದು, ಕೌಜಲಗಿ ಮತ್ತು ಯಾದವಾಡ ಭಾಗದ ರೈತರಿಗೆ ನೀರು ತಲುಪಿಸಬೇಕು – ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love ಗೋಕಾಕ್- ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ನೀರನ್ನು ಹರಿಸಿದ್ದು, ಕೌಜಲಗಿ ಮತ್ತು ಯಾದವಾಡ ಭಾಗದ ರೈತರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ