Breaking News
Home / ಬೆಳಗಾವಿ / ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು

ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು

Spread the love

ಮೂಡಲಗಿ:- ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ2025-26ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳನ್ನು ಸೆ.29ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.29ರಂದು ಬೆಳಿಗ್ಗೆ 9.00ಗಂಟೆಗೆ ಹಾಜರಿದ್ದು ವಿವಿದ ಸ್ಪರ್ದೆಯಲ್ಲಿ ಭಾಗವಹಿಸುವವರು ಕ್ಯೂ ಆರ್ ಕೋಡ್ ಅಥವಾ ವೆಬ್ ಸೈಟ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು, ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಕ್ರೀಡಾಕೂಟ ಅನುಷ್ಠಾನಾಧಿಕಾರಿ ರೋಹಿಣಿ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಗಳ ವಿವರ : ಅಥ್ಲೆಟಿಕ್ಸ್(ಪುಷರಿಗಾಗಿ): 100,200, 400, 800,1500, 5000, 10,000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್ ಜಾವಲಿನ್À, ಥ್ರೋ ಡಿಸಸ್ ಥ್ರೋ 110ಮೀ ಹರ್ಡಲ್ 4-100 ರೀಲೆ 4 -400 ರೀಲೆ
ಅಥ್ಲೆಟಿಕ್ಸ್ (ಮಹಿಳೆಯರಿಗಾಗಿ) : 100, 200, 400, 800ಮೀ, 1500ಮೀ, 3000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥೋ, 100ಮೀ ಹರ್ಡಲ್ಸ್.4-100 ರೀಲೆ 4 – 400
ಗುಂಪು ಆಟಗಳು : ವಾಲಿಬಾಲ್, ಪುಟ ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗಸ್ (ಪುರುಷ ಮತ್ತು ಮಹಿಳೆಯರಿಗಾಗಿ).
ನಿಯಮಗಳು: ದಸರಾ ಭಾಗವಹಿ ಕ್ರೀಡಾಕೂಟದಲ್ಲಿ ಸುವ ಕ್ರೀಡಾಪಟುಗಳು ಮೂಡಲಗಿ ತಾಲೂಕಿನ ರಹವಾಸಿಯಾ ಗಿರಬೇಕು. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗ ವಹಿಸಲು ಅರ್ಹರಾಗಿರುವುದಿಲ್ಲ. ಈ ಕ್ರೀಡಾಕೂಟದಲ್ಲಿ ತಾಲೂಕಿನ ಶಾಲಾ ಕಾಲೇಜು, ಯುವಕ/ತಿಸಂಘಗಳ ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಭಾಗವಹಿಸಬಹುದು. ಭಾಗವಹಿ ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತೊಂದು ತಾಲೂಕಿನಲ್ಲಿ ಭಾಗವಹಿಸತಕ್ಕದ್ದಲ್ಲ. ಒಂದು ವೇಳೆ ಭಾಗವಹಿಸಿ ದಲ್ಲಿ ಅಂತವರ ಆಯ್ಕೆಯನ್ನು ರದ್ದು ಗೊಳಿಸಲಾಗುವುದು.ಗುಂಪು ಸ್ಪರ್ಧೆಗಳಲ್ಲಿ ಸಂಪೂರ್ಣತAಡವನ್ನು ರದ್ದುಗೊಳಿಸಲಾಗುವುದು, ನಿರ್ಣಾಯಕರ ನಿರ್ಣಯವೇ ಅಂತಿಮವಾಗಿದ್ದು, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಆಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು. ಭಾಗವಹಿಸುವ ಕ್ರೀಡಾಪ ಟುಗಳಿಗೆ ಇಲಾಖೆಯ ವತಿಯಿಂದ ಯಾವುದೇ ಪ್ರಯಾಣಭತ್ಯೆ ಹಾಗೂ ದಿನಭತ್ಯೆಯನ್ನುನೀಡಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಮೋ,8618169003 ,9449927676 ಸಂಪರ್ಕಿ ಸಬಹುದಾಗಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ