Breaking News
Home / ತಾಲ್ಲೂಕು / ರಾಯಬಾಗ ತಾಲೂಕಿನ ಇಟನಾಳ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನಕಲುಕುವ ಘಟನೆ ನಡೆದಿದೆ

ರಾಯಬಾಗ ತಾಲೂಕಿನ ಇಟನಾಳ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನಕಲುಕುವ ಘಟನೆ ನಡೆದಿದೆ

Spread the love

ಇಟನಾಳ : ಗ್ರಾಮದ ಹದ್ದಿನಲ್ಲಿ ಇರುವ ಮುಗಳಖೋಡ ಕೆನಾಲ್ ಕಚೇರಿ ಹತ್ತಿರ ಇರುವ ಬಸವಣ್ಣನ ದೇವಸ್ಥಾನದಲ್ಲಿ ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಆಗತಾನೆ ಜನಿಸಿದ ಹಸಿಕಂದಮ್ಮನನ್ನು (ಗಂಡುಮಗು) ಹಾಕಿರುವ ಅಮಾನವೀಯ ಘಟನೆ ನಡೆದಿದೆ.

ಆ ದೇವಸ್ಥಾನದ ಹತ್ತಿರ ಜನರು ಕೂಡುತ್ತಿದಂತೆ ಘಟನಾ ಸ್ಥಳಕ್ಕೆ ಆಶಾಕಾಯ೯ಕರ್ತೆಯರು, ಆರೋಗ್ಯ ಕೇಂದ್ರದ ನಸ್೯, ಆರಕ್ಷಕ ಠಾಣೆ ಸಿಬ್ಬಂದಿ ಭೇಟಿ ನೀಡಿ ಆ ಕಂದಮ್ಮನ ರಕ್ಷಣೆಯಲ್ಲಿ ತೊಡಗಿದ್ದಾರೆ. ಈ ಘಟನೆಯನ್ನು ಪರಿಶೀಲಿಸಿ ಮಗುವನ್ನು ಸಂಬಂಧಿಸಿದವರಿಗೆ ಹಸ್ತಾಂತರ ಮಾಡುವ ಕೆಲಸ ಮಾಡುವದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲಿನ ಸ್ಥಳೀಯ ಜನರನ್ನು ಆ ಘಟನೆ ಬಗ್ಗೆ ಮಾಹಿತಿ ಕೇಳಿದಾಗ ಬೆಳಿಗ್ಗೆ 3:00ಗಂಟೆ ಸುಮಾರಿಗೆ ಈ ಗಂಡು ಮಗವನ್ನು ಹಾಕಿ ಹೋಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಸದ್ಯ ಈ ಕಂದಮ್ಮನ ರಕ್ಷಣೆ ಆಶಾ ಕಾರ್ಯಕರ್ತರು ಹಾಗೂ ಸ್ಟಾಪ್ ನರ್ಸ ಅವರು ರಾಯಬಾಗ ತಾಲೂಕಾ ಆಸ್ಪತ್ರೆಗೆ ಆ ಮಗುವನ್ನು ಹಸ್ತಾಂತರಿಸಲಾಯಿತು. ಈ ಘಟನೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ